AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ಕಿರುಕುಳದ ಗಂಭೀರ ಆರೋಪ ಹೊತ್ತ ನೃತ್ಯ ನಿರ್ದೇಶಕ ಗಣೇಶ್​ ಆಚಾರ್ಯಗೆ ಜಾಮೀನು; ಏನಿದು ಕೇಸ್​?

Choreographer Ganesh Acharya: ಅಂಬೋಲಿ ಪೊಲೀಸ್​ ಠಾಣೆಯಲ್ಲಿ ಗಣೇಶ್​ ಆಚಾರ್ಯ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಆದರೆ ತಮ್ಮ ಮೇಲಿನ ಎಲ್ಲ ಆರೋಪಗಳನ್ನು ಅವರು ತಳ್ಳಿಹಾಕಿದ್ದಾರೆ.

ಲೈಂಗಿಕ ಕಿರುಕುಳದ ಗಂಭೀರ ಆರೋಪ ಹೊತ್ತ ನೃತ್ಯ ನಿರ್ದೇಶಕ ಗಣೇಶ್​ ಆಚಾರ್ಯಗೆ ಜಾಮೀನು; ಏನಿದು ಕೇಸ್​?
ಗಣೇಶ್ ಆಚಾರ್ಯ
TV9 Web
| Edited By: |

Updated on: Jun 24, 2022 | 7:39 AM

Share

ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ (Sexual Harassment) ನೀಡಿದ ಆರೋಪ ಹೊತ್ತಿರುವ ಖ್ಯಾತ ನೃತ್ಯ ನಿರ್ದೇಶಕ ಗಣೇಶ್​ ಆಚಾರ್ಯ (Ganesh Acharya) ಅವರಿಗೆ ಜಾಮೀನು ಸಿಕ್ಕಿದೆ. ಮುಂಬೈನ ಮ್ಯಾಜಿಸ್ಟ್ರೇಟ್​ ಕೋರ್ಟ್​ನಲ್ಲಿ ಅವರಿಗೆ ಜಾಮೀನು ನೀಡಲಾಗಿದೆ. ಬಾಲಿವುಡ್​ನಲ್ಲಿ ಹಲವು ವರ್ಷಗಳಿಂದ ಕೊರಿಯೋಗ್ರಾಫರ್​ (Choreographer) ಆಗಿ ಗುರುತಿಸಿಕೊಂಡಿರುವ ಗಣೇಶ್ ಆಚಾರ್ಯ ಅವರಿಗೆ ಸಖತ್​ ಬೇಡಿಕೆ ಇದೆ. ಆದರೆ ಈ ಆರೋಪದಿಂದಾಗಿ ಅವರ ವೃತ್ತಿಜೀವನದಲ್ಲಿ ಕಪ್ಪು ಚುಕ್ಕಿ ಬಿದ್ದಂತಾಗಿದೆ. ಸಹಾಯಕ ನೃತ್ಯ ನಿರ್ದೇಶಕಿಯೊಬ್ಬರು ಕೆಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಆದರೂ ಈವರೆಗೆ ಗಣೇಶ್​ ಆಚಾರ್ಯ ಬಂಧನ ಆಗಿಲ್ಲ. ಗುರುವಾರ (ಜೂನ್​ 23) ನ್ಯಾಯಾಲಯದ ಮುಂದೆ ಹಾಜರಾದ ಅವರಿಗೆ ಜಾಮೀನು ನೀಡಲಾಗಿದೆ.

ನೂರಾರು ಸೂಪರ್ ಹಿಟ್​ ಗೀತೆಗಳಿಗೆ ನೃತ್ಯ ನಿರ್ದೇಶನ ಮಾಡಿದ ಖ್ಯಾತಿ ಗಣೇಶ್​ ಆಚಾರ್ಯ ಅವರಿಗೆ ಸಲ್ಲುತ್ತದೆ. ಹಲವು ವರ್ಷಗಳಿಂದ ಅವರು ಬಾಲಿವುಡ್​ನಲ್ಲಿ ಸಕ್ರಿಯರಾಗಿದ್ದಾರೆ. ನಟನಾಗಿಯೂ ಅವರು ಗುರುತಿಸಿಕೊಂಡಿದ್ದಾರೆ. 2020ರ ಫೆಬ್ರವರಿಯಲ್ಲಿ ಸಹಾಯಕ ನೃತ್ಯ ನಿರ್ದೇಶಕಿಯ ಜೊತೆ ಅವರು ಅನುಚಿತವಾಗಿ ನಡೆದುಕೊಂಡರು ಎಂಬ ಆರೋಪ ಇದೆ.

2020ರ ಜನವರಿ 26ರಂದು ‘ಭಾರತೀಯ ಸಿನಿಮಾ ಮತ್ತು ಕಿರುತೆರೆ ನೃತ್ಯ ನಿರ್ದೇಶಕರ ಸಂಘ’ದ ಸಮಾರಂಭ ನಡೆದಾಗ ಗಣೇಶ್​ ಆಚಾರ್ಯ ಮತ್ತು ಇನ್ನಿಬ್ಬರು ಸೇರಿಕೊಂಡು ಮಹಿಳೆಗೆ ಕಿರುಕುಳು ನೀಡಿದರು. 2009 ಮತ್ತು 2010ರ ಸಮಯದಲ್ಲಿ ಆ ಮಹಿಳೆ ಗಣೇಶ್​ ಆಚಾರ್ಯ ಅವರ ಕಚೇರಿಗೆ ಭೇಟಿ ನೀಡಿದಾಗಲೆಲ್ಲ ಅಶ್ಲೀಲ ಸಿನಿಮಾ ವೀಕ್ಷಿಸುವಂತೆ ಒತ್ತಾಯಿಸುತ್ತಿದ್ದರು. ಅಸಭ್ಯ ಸಂದೇಶ ಕಳಿಸುತ್ತಿದ್ದರು. ಬೇರೆ ಮಹಿಳೆಯರಿಗೂ ಈ ರೀತಿ ಮಾಡಲಾಗಿದೆ ಎಂದು ಗಣೇಶ್​ ಆಚಾರ್ಯ ವಿರುದ್ಧ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ
Image
‘ತುಟಿಗೆ ಕಿಸ್ ಮಾಡುತ್ತಿದ್ದ, ತೊಡೆ ಸವರುತ್ತಿದ್ದ’; ಕುಬ್ರಾ ಸೇಠ್​​ಗೆ ಬೆಂಗಳೂರು ಹೋಟೆಲ್​ನಲ್ಲಾಗಿತ್ತು ಲೈಂಗಿಕ ದೌರ್ಜನ್ಯ
Image
ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಸೊಸೆ ಆರೋಪ: ಆತ್ಮಹತ್ಯೆ ಮಾಡಿಕೊಂಡ ಉತ್ತರಾಖಂಡ್​​ ಮಾಜಿ ಸಚಿವ ರಾಜೇಂದ್ರ ಬಹುಗುಣ
Image
ಬೆಳಗಾವಿ: ಲೈಂಗಿಕ ಕಿರುಕುಳ ನೀಡಿದ ಉಪನ್ಯಾಸಕನಿಗೆ ಚಪ್ಪಲಿ ಏಟು ನೀಡಿ ಬುದ್ದಿ ಕಲಿಸಿದ ಅತಿಥಿ ಉಪನ್ಯಾಸಕಿಯರು, ವಿಡಿಯೋ ವೈರಲ್
Image
ಪ್ರಜ್ಞೆ ತಪ್ಪಿಸಿ ಲೈಂಗಿಕ ಕಿರುಕುಳ ಆರೋಪ; ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಮಹಿಳೆ

ಐಪಿಸಿ ಸೆಕ್ಷನ್​ 354-ಎ, 354-ಸಿ, 354-ಡಿ, 506 ಮತ್ತು 509ರ ಅಡಿಯಲ್ಲಿ ಮುಂಬೈನ ಅಂಬೋಲಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತಮ್ಮ ಮೇಲಿನ ಎಲ್ಲ ಆರೋಪಗಳನ್ನು ಗಣೇಶ್​ ಆಚಾರ್ಯ ಅವರು ತಳ್ಳಿಹಾಕಿದ್ದಾರೆ.

ಇದನ್ನೂ ಓದಿ: ‘ಪುಷ್ಪ’ ಚಿತ್ರದಲ್ಲಿ ನಟಿ ಸಮಂತಾಗೆ ಐಟಂ ಡ್ಯಾನ್ಸ್​ ಹೇಳಿಕೊಡಲು ಬಂದ​ ಗಣೇಶ್​ ಆಚಾರ್ಯ

ಸಮಂತಾಗೆ ಡ್ಯಾನ್ಸ್​ ಸ್ಟೆಪ್​ ಹೇಳಿಕೊಟ್ಟಿದ್ದ ಖ್ಯಾತ ಕೊರಿಯೋಗ್ರಾಫರ್​ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!