AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ಕಿರುಕುಳದ ಗಂಭೀರ ಆರೋಪ ಹೊತ್ತ ನೃತ್ಯ ನಿರ್ದೇಶಕ ಗಣೇಶ್​ ಆಚಾರ್ಯಗೆ ಜಾಮೀನು; ಏನಿದು ಕೇಸ್​?

Choreographer Ganesh Acharya: ಅಂಬೋಲಿ ಪೊಲೀಸ್​ ಠಾಣೆಯಲ್ಲಿ ಗಣೇಶ್​ ಆಚಾರ್ಯ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಆದರೆ ತಮ್ಮ ಮೇಲಿನ ಎಲ್ಲ ಆರೋಪಗಳನ್ನು ಅವರು ತಳ್ಳಿಹಾಕಿದ್ದಾರೆ.

ಲೈಂಗಿಕ ಕಿರುಕುಳದ ಗಂಭೀರ ಆರೋಪ ಹೊತ್ತ ನೃತ್ಯ ನಿರ್ದೇಶಕ ಗಣೇಶ್​ ಆಚಾರ್ಯಗೆ ಜಾಮೀನು; ಏನಿದು ಕೇಸ್​?
ಗಣೇಶ್ ಆಚಾರ್ಯ
TV9 Web
| Edited By: |

Updated on: Jun 24, 2022 | 7:39 AM

Share

ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ (Sexual Harassment) ನೀಡಿದ ಆರೋಪ ಹೊತ್ತಿರುವ ಖ್ಯಾತ ನೃತ್ಯ ನಿರ್ದೇಶಕ ಗಣೇಶ್​ ಆಚಾರ್ಯ (Ganesh Acharya) ಅವರಿಗೆ ಜಾಮೀನು ಸಿಕ್ಕಿದೆ. ಮುಂಬೈನ ಮ್ಯಾಜಿಸ್ಟ್ರೇಟ್​ ಕೋರ್ಟ್​ನಲ್ಲಿ ಅವರಿಗೆ ಜಾಮೀನು ನೀಡಲಾಗಿದೆ. ಬಾಲಿವುಡ್​ನಲ್ಲಿ ಹಲವು ವರ್ಷಗಳಿಂದ ಕೊರಿಯೋಗ್ರಾಫರ್​ (Choreographer) ಆಗಿ ಗುರುತಿಸಿಕೊಂಡಿರುವ ಗಣೇಶ್ ಆಚಾರ್ಯ ಅವರಿಗೆ ಸಖತ್​ ಬೇಡಿಕೆ ಇದೆ. ಆದರೆ ಈ ಆರೋಪದಿಂದಾಗಿ ಅವರ ವೃತ್ತಿಜೀವನದಲ್ಲಿ ಕಪ್ಪು ಚುಕ್ಕಿ ಬಿದ್ದಂತಾಗಿದೆ. ಸಹಾಯಕ ನೃತ್ಯ ನಿರ್ದೇಶಕಿಯೊಬ್ಬರು ಕೆಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಆದರೂ ಈವರೆಗೆ ಗಣೇಶ್​ ಆಚಾರ್ಯ ಬಂಧನ ಆಗಿಲ್ಲ. ಗುರುವಾರ (ಜೂನ್​ 23) ನ್ಯಾಯಾಲಯದ ಮುಂದೆ ಹಾಜರಾದ ಅವರಿಗೆ ಜಾಮೀನು ನೀಡಲಾಗಿದೆ.

ನೂರಾರು ಸೂಪರ್ ಹಿಟ್​ ಗೀತೆಗಳಿಗೆ ನೃತ್ಯ ನಿರ್ದೇಶನ ಮಾಡಿದ ಖ್ಯಾತಿ ಗಣೇಶ್​ ಆಚಾರ್ಯ ಅವರಿಗೆ ಸಲ್ಲುತ್ತದೆ. ಹಲವು ವರ್ಷಗಳಿಂದ ಅವರು ಬಾಲಿವುಡ್​ನಲ್ಲಿ ಸಕ್ರಿಯರಾಗಿದ್ದಾರೆ. ನಟನಾಗಿಯೂ ಅವರು ಗುರುತಿಸಿಕೊಂಡಿದ್ದಾರೆ. 2020ರ ಫೆಬ್ರವರಿಯಲ್ಲಿ ಸಹಾಯಕ ನೃತ್ಯ ನಿರ್ದೇಶಕಿಯ ಜೊತೆ ಅವರು ಅನುಚಿತವಾಗಿ ನಡೆದುಕೊಂಡರು ಎಂಬ ಆರೋಪ ಇದೆ.

2020ರ ಜನವರಿ 26ರಂದು ‘ಭಾರತೀಯ ಸಿನಿಮಾ ಮತ್ತು ಕಿರುತೆರೆ ನೃತ್ಯ ನಿರ್ದೇಶಕರ ಸಂಘ’ದ ಸಮಾರಂಭ ನಡೆದಾಗ ಗಣೇಶ್​ ಆಚಾರ್ಯ ಮತ್ತು ಇನ್ನಿಬ್ಬರು ಸೇರಿಕೊಂಡು ಮಹಿಳೆಗೆ ಕಿರುಕುಳು ನೀಡಿದರು. 2009 ಮತ್ತು 2010ರ ಸಮಯದಲ್ಲಿ ಆ ಮಹಿಳೆ ಗಣೇಶ್​ ಆಚಾರ್ಯ ಅವರ ಕಚೇರಿಗೆ ಭೇಟಿ ನೀಡಿದಾಗಲೆಲ್ಲ ಅಶ್ಲೀಲ ಸಿನಿಮಾ ವೀಕ್ಷಿಸುವಂತೆ ಒತ್ತಾಯಿಸುತ್ತಿದ್ದರು. ಅಸಭ್ಯ ಸಂದೇಶ ಕಳಿಸುತ್ತಿದ್ದರು. ಬೇರೆ ಮಹಿಳೆಯರಿಗೂ ಈ ರೀತಿ ಮಾಡಲಾಗಿದೆ ಎಂದು ಗಣೇಶ್​ ಆಚಾರ್ಯ ವಿರುದ್ಧ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ
Image
‘ತುಟಿಗೆ ಕಿಸ್ ಮಾಡುತ್ತಿದ್ದ, ತೊಡೆ ಸವರುತ್ತಿದ್ದ’; ಕುಬ್ರಾ ಸೇಠ್​​ಗೆ ಬೆಂಗಳೂರು ಹೋಟೆಲ್​ನಲ್ಲಾಗಿತ್ತು ಲೈಂಗಿಕ ದೌರ್ಜನ್ಯ
Image
ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಸೊಸೆ ಆರೋಪ: ಆತ್ಮಹತ್ಯೆ ಮಾಡಿಕೊಂಡ ಉತ್ತರಾಖಂಡ್​​ ಮಾಜಿ ಸಚಿವ ರಾಜೇಂದ್ರ ಬಹುಗುಣ
Image
ಬೆಳಗಾವಿ: ಲೈಂಗಿಕ ಕಿರುಕುಳ ನೀಡಿದ ಉಪನ್ಯಾಸಕನಿಗೆ ಚಪ್ಪಲಿ ಏಟು ನೀಡಿ ಬುದ್ದಿ ಕಲಿಸಿದ ಅತಿಥಿ ಉಪನ್ಯಾಸಕಿಯರು, ವಿಡಿಯೋ ವೈರಲ್
Image
ಪ್ರಜ್ಞೆ ತಪ್ಪಿಸಿ ಲೈಂಗಿಕ ಕಿರುಕುಳ ಆರೋಪ; ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಮಹಿಳೆ

ಐಪಿಸಿ ಸೆಕ್ಷನ್​ 354-ಎ, 354-ಸಿ, 354-ಡಿ, 506 ಮತ್ತು 509ರ ಅಡಿಯಲ್ಲಿ ಮುಂಬೈನ ಅಂಬೋಲಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತಮ್ಮ ಮೇಲಿನ ಎಲ್ಲ ಆರೋಪಗಳನ್ನು ಗಣೇಶ್​ ಆಚಾರ್ಯ ಅವರು ತಳ್ಳಿಹಾಕಿದ್ದಾರೆ.

ಇದನ್ನೂ ಓದಿ: ‘ಪುಷ್ಪ’ ಚಿತ್ರದಲ್ಲಿ ನಟಿ ಸಮಂತಾಗೆ ಐಟಂ ಡ್ಯಾನ್ಸ್​ ಹೇಳಿಕೊಡಲು ಬಂದ​ ಗಣೇಶ್​ ಆಚಾರ್ಯ

ಸಮಂತಾಗೆ ಡ್ಯಾನ್ಸ್​ ಸ್ಟೆಪ್​ ಹೇಳಿಕೊಟ್ಟಿದ್ದ ಖ್ಯಾತ ಕೊರಿಯೋಗ್ರಾಫರ್​ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ