AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್​ಗೆ ಬಲಿಯಾದ ಜನಪ್ರಿಯ ಹಾಸ್ಯ ನಟ ಅತುಲ್​ ಪರ್ಚುರೆ; ಚಿತ್ರರಂಗದ ಸಂತಾಪ

ಹಲವು ಸಿನಿಮಾಗಳಲ್ಲಿ ನಟಿಸಿ ಜನಪ್ರಿಯತೆ ಪಡೆದಿದ್ದ ಹಿರಿಯ ನಟ ಅತುಲ್​ ಪರ್ಚುರೆ ಅವರು ನಿಧನರಾಗಿದ್ದಾರೆ. ಅವರ ಸಾವಿನ ಸುದ್ದಿ ತಿಳಿದು ಚಿತ್ರರಂಗಕ್ಕೆ ಆಘಾತ ಆಗಿದೆ. 57 ವರ್ಷದ ಅತುಲ್​ ಪರ್ಚುರೆ ಅವರು ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಇಂದು (ಅಕ್ಟೋಬರ್​ 14) ಅವರು ಕೊನೆಯುಸಿರು ಎಳೆದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸೆಲೆಬ್ರಿಟಿಗಳು, ಅಭಿಮಾನಿಗಳು ಪ್ರಾರ್ಥಿಸಿದ್ದಾರೆ.

ಕ್ಯಾನ್ಸರ್​ಗೆ ಬಲಿಯಾದ ಜನಪ್ರಿಯ ಹಾಸ್ಯ ನಟ ಅತುಲ್​ ಪರ್ಚುರೆ; ಚಿತ್ರರಂಗದ ಸಂತಾಪ
ಅತುಲ್​ ಪರ್ಚುರೆ
ಮದನ್​ ಕುಮಾರ್​
|

Updated on: Oct 14, 2024 | 9:45 PM

Share

ಹಿಂದಿ ಮತ್ತು ಮರಾಠಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಅತುಲ್​ ಪರ್ಚುರೆ ಅವರು ಇನ್ನಿಲ್ಲ ಎಂಬ ಶಾಕಿಂಗ್​ ಸುದ್ದಿ ಕೇಳಿಬಂದಿದೆ. ಅತುಲ್​ ಪರ್ಚುರೆ ಅವರಿಗೆ 57 ವರ್ಷ ವಯಸ್ಸಾಗಿತ್ತು. ಕೆಲವು ವರ್ಷಗಳಿಂದ ಅವರು ಲಿವರ್ ಕ್ಯಾನ್ಸರ್​ಗೆ ಒಳಗಾಗಿದ್ದರು. ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತರಾಗಿದ್ದಾರೆ. ತಾಯಿ, ಪತ್ನಿ ಮತ್ತು ಮಗಳನ್ನು ಅತುಲ್​ ಅವರು ಅಗಲಿದ್ದಾರೆ. ಕಾಮಿಡಿ ಪಾತ್ರಗಳ ಮೂಲಕ ಅತುಲ್​ ಅವರು ಖ್ಯಾತಿ ಗಳಿಸಿದ್ದರು. ಅವರ ಜೊತೆ ಕೆಲಸ ಮಾಡಿದ ಅನೇಕ ಸೆಲೆಬ್ರಿಟಿಗಳು ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ.

ಮರಾಠಿ ಚಿತ್ರರಂಗ ಮತ್ತು ರಂಗಭೂಮಿಯಲ್ಲಿ ಅತುಲ್​ ಪರ್ಚುರೆ ಅವರು ತಮ್ಮದೇ ಛಾಪು ಮೂಡಿಸಿದ್ದರು. ಅವರ ಪ್ರತಿಭೆಯಿಂದ ಬಾಲಿವುಡ್​ ಸಿನಿಮಾಗಳಲ್ಲೂ ಅವಕಾಶ ಪಡೆದರು. ‘ಕಲ್​ಯುಗ್​​’, ‘ಗೋಲ್​ಮಾಲ್​’, ‘ಪಾರ್ಟ್ನರ್​’, ‘ಬಿಲ್ಲು ಬಾರ್ಬರ್​’, ‘ಆಲ್​ ದಿ ಬೆಸ್ಟ್​’, ‘ಆವಾರಪನ್​’, ‘ಬುಡ್ಡ ಹೋಗ ತೇರಾ ಬಾಪ್’ ಮುಂತಾದ ಹಿಂದಿ ಸಿನಿಮಾಗಳಲ್ಲಿ ಅತುಲ್​ ಪರ್ಚುರೆ ಅವರು ಅಭಿನಯಿಸಿದ್ದರು.

ಲಿವರ್​ ಕ್ಯಾನ್ಸರ್​ ಇರುವುದು ಗೊತ್ತಾಗ ಬಳಿಕ ಅತುಲ್ ಪರ್ಚುರೆ ಅವರ ವೃತ್ತಿಬದುಕಿಗೆ ಅಲ್ಪವಿರಾಮ ಬಿದ್ದಿತ್ತು. ಆದರೆ ಚಿಕಿತ್ಸೆ ಪಡೆದು ಅವರು ಮತ್ತೆ ನಟನೆಯಲ್ಲಿ ತೊಡಗಿಕೊಂಡಿದ್ದರು. ಸಿನಿಮಾಗಳ ಜೊತೆ ರಂಗಭೂಮಿ ಮತ್ತು ಕಿರುತೆರೆಯಲ್ಲಿ ಅವರು ಹೆಸರು ಮಾಡಿದ್ದರು. ಶಾರುಖ್​ ಖಾನ್​, ಅಜಯ್ ದೇವಗನ್ ಮುಂತಾದ ಹಿಂದಿ ಚಿತ್ರರಂಗ ಸ್ಟಾರ್ ಕಲಾವಿದರ ಜೊತೆ ಅಭಿನಯಿಸಿ ಅತುಲ್​ ಅವರು ಸೈ ಎನಿಸಿಕೊಂಡಿದ್ದರು.

ಇದನ್ನೂ ಓದಿ: ಪ್ರತಿ ವರ್ಷ ಮಕ್ಕಳ ಕ್ಯಾನ್ಸರ್ ಪ್ರಕರಣ ಹೆಚ್ಚಳ: ಕಿದ್ವಾಯಿ ಆಸ್ಪತ್ರೆಯಿಂದ ಆತಂಕಕಾರಿ ವರದಿ..!

ಕಪಿಲ್ ಶರ್ಮಾ ನಡೆಸಿಕೊಟ್ಟ ‘ಕಾಮಿಡಿ ನೈಟ್ಸ್​ ವಿಥ್​ ಕಪಿಲ್​’ ಕಾರ್ಯಕ್ರಮದಲ್ಲಿ ಹಲವು ಪಾತ್ರಗಳನ್ನು ಮಾಡುವ ಮೂಲಕ ಅತುಲ್​ ಪರ್ಚುರೆ ಅವರು ಅಭಿಮಾನಿಗಳನ್ನು ರಂಜಿಸಿದ್ದರು. ಆರೋಗ್ಯ ಸಮಸ್ಯೆ ಉಲ್ಬಣಿಸಿದ್ದರಿಂದ ಅವರ ವೃತ್ತಿ ಜೀವನಕ್ಕೆ ಪೆಟ್ಟು ಬಿದ್ದಿತ್ತು. ಆರಂಭದಲ್ಲಿ ಅವರಿಗೆ ಕ್ಯಾನ್ಸರ್​ ಚಿಕಿತ್ಸೆ ಆರಂಭಿಸಿದ್ದಾಗ ವೈದ್ಯರಿಂದ ಎಡವಟ್ಟು ಆಗಿತ್ತು. ಇರುವ ಸಮಸ್ಯೆ ಇನ್ನಷ್ಟು ಜಾಸ್ತಿ ಆಗಿತ್ತು. ವೈದ್ಯರನ್ನು ಬದಲಿಸಿದ ಬಳಿಕ ಅವರು ಕೊಂಚ ಚೇತರಿಸಿಕೊಂಡಿದ್ದರು. ಆದರೆ ಈಗ ಅವರು ಮೃತಪಟ್ಟಿದ್ದಾರೆ. ಈ ವಿಷಯ ತಿಳಿದು ಚಿತ್ರರಂಗದ ಹಲವರು ಮತ್ತು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!