AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ಸಲ್ಲುನ ಓಡಿ ಬಂದು ತಬ್ಬಿದ ಅಭಿಮಾನಿ; ನಟನ ರಿಯಾಕ್ಷನ್ ಹೇಗಿತ್ತು?

ಸಲ್ಮಾನ್ ಖಾನ್ ಅವರಿಗೆ ಭದ್ರತೆ ಹೆಚ್ಚಿಸಲಾಗಿದೆ. ಅವರನ್ನು ಕೊಲ್ಲುವುದಾಗಿ ನಿರಂತರವಾಗಿ ಬೆದರಿಕೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ಹೋದಲ್ಲಿ ಬಂದಲ್ಲಿ ಪೊಲೀಸರು ರಕ್ಷಣೆ ನೀಡುತ್ತಿದ್ದಾರೆ.

Salman Khan: ಸಲ್ಲುನ ಓಡಿ ಬಂದು ತಬ್ಬಿದ ಅಭಿಮಾನಿ; ನಟನ ರಿಯಾಕ್ಷನ್ ಹೇಗಿತ್ತು?
ಸಲ್ಮಾನ್ ಖಾನ್
ರಾಜೇಶ್ ದುಗ್ಗುಮನೆ
|

Updated on: May 25, 2023 | 11:29 AM

Share

ನಟ ಸಲ್ಮಾನ್ ಖಾನ್​ಗೆ (Salman Khan) ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಇದರ ಮಧ್ಯೆಯೂ ಬಾಲಕನೋರ್ವ ಬಂದು ಸಲ್ಮಾನ್ ಖಾನ್ ಅವರನ್ನು ತಬ್ಬಿಕೊಂಡ ಘಟನೆ ಮುಂಬೈ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಒಳ್ಳೆಯ ಮೂಡ್​ನಲ್ಲಿದ್ದ ಸಲ್ಮಾನ್ ಖಾನ್ ಅವರು ಬಾಲಕನಿಗೆ ಹಗ್ ಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಸಲ್ಮಾನ್ ಖಾನ್ ಭದ್ರತಾ ಸಿಬ್ಬಂದಿಗಳು ಕೊಂಚ ಚಿಂತೆಗೆ ಒಳಗಾದಂತೆ ಕಂಡು ಬಂತು. ಸಲ್ಲುನ ತಬ್ಬಿಕೊಂಡ ಅಭಿಮಾನಿ ಸಾಕಷ್ಟು ಖುಷಿಪಟ್ಟಿದ್ದಾನೆ. ಈ ವಿಡಿಯೋಗೆ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಈ ಮೊದಲು ಕೂಡ ಈ ರೀತಿ ಅನೇಕರು ಸೆಲ್ಫಿ ತೆಗೆದುಕೊಳ್ಳಲು ಬಂದಿದ್ದರು. ರಂಜಾನ್ ಆಚರಿಸಲು ಸಲ್ಮಾನ್ ಖಾನ್ ಅವರು ದುಬೈಗೆ ತೆರಳಿದ್ದರು. ಅಲ್ಲಿನ ಅಭಿಮಾನಿಗಳ ಜೊತೆ ಸಲ್ಲು ಹಬ್ಬ ಆಚರಿಸಿದ್ದರುಈ ಹಬ್ಬ ಪೂರ್ಣಗೊಂಡ ಬಳಿಕ ಅವರು ಮುಂಬೈಗೆ ಮರಳಿದ್ದರು. ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಅವರ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅನೇಕರು ಮುಗಿಬಿದ್ದಿದ್ದರು.

ಸಲ್ಮಾನ್ ಖಾನ್ ಅವರು ನಡೆದು ಬರುತ್ತಿದ್ದರು. ಭದ್ರತಾ ಸಿಬ್ಬಂದಿ ಅವರನ್ನು ಸುತ್ತುವರಿದಿದ್ದರಿಂದ ಯಾರಿಗೂ ಸಲ್ಲುನ ಟಚ್ ಮಾಡೋಕೆ ಸಾಧ್ಯ ಆಗುತ್ತಿರಲಿಲ್ಲ. ಆಗ ಅಭಿಮಾನಿಯೋರ್ವ ಕೈ ಚಾಚಿದ್ದ. ಹ್ಯಾಂಡ್​ಶೇಕ್ ಮಾಡುವಂತೆ ಕೋರಿದ್ದ. ಹಿಂದಕ್ಕೆ ಹೋಗುವಂತೆ ಸಲ್ಮಾನ್ ಖಾನ್ ಸೂಚಿಸಿದರೂ ಅಭಿಮಾನಿ ಪ್ರಯತ್ನ ನಿಲ್ಲಿಸಿಲ್ಲ. ಆಗ ಸಲ್ಮಾನ್ ಖಾನ್ ಬಾಡಿ ಗಾರ್ಡ್ ಶೇರಾ ಅವರು ಅಭಿಮಾನಿಯನ್ನು ಹಿಂದಕ್ಕೆ ತಳ್ಳಿದ್ದ.

ಸಲ್ಮಾನ್ ಖಾನ್ ಅವರಿಗೆ ಭದ್ರತೆ ಹೆಚ್ಚಿಸಲಾಗಿದೆ. ಅವರನ್ನು ಕೊಲ್ಲುವುದಾಗಿ ನಿರಂತರವಾಗಿ ಬೆದರಿಕೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ಹೋದಲ್ಲಿ ಬಂದಲ್ಲಿ ಪೊಲೀಸರು ರಕ್ಷಣೆ ನೀಡುತ್ತಿದ್ದಾರೆ. ಅವರು ಬುಲೆಟ್​ಪ್ರೂಫ್ ಕಾರನ್ನು ಕೂಡ ಖರೀದಿಸಿದ್ದಾರೆ. ಹೀಗಿರುವಾಗಲೇ ಅವರ ಅಭಿಮಾನಿ ಬಂದು ಶೇಕ್​​ಹ್ಯಾಂಡ್ ಮಾಡಿದ್ದಾನೆ.

ಇದನ್ನೂ ಓದಿ: 19 ಅಂತಸ್ತಿನ ಐಷಾರಾಮಿ ಹೋಟೆಲ್ ನಿರ್ಮಿಸಲಿದ್ದಾರೆ ಸಲ್ಮಾನ್ ಖಾನ್? ಇಲ್ಲಿದೆ ಸಂಪೂರ್ಣ ವಿವರ

ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ಈದ್ ಪ್ರಯಕ್ತ ಏಪ್ರಿಲ್ 21ರಂದು ರಿಲೀಸ್ ಆಗಿದೆ. ಈ ಸಿನಿಮಾದ ಕಲೆಕ್ಷನ್ 100 ಕೋಟಿ ರೂಪಾಯಿ ಗಳಿಸಿದೆ. ಈ ಚಿತ್ರ ಶೀಘ್ರವೇ ಒಟಿಟಿಗೆ ಕಾಲಿಡುವ ಸೂಚನೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!