AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾದಲ್ಲಿ ಸಲ್ಮಾನ್​ ಖಾನ್​ ಜತೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದ ಫ್ಯಾನ್ಸ್​

ಈಗ ಕೊವಿಡ್​ ಕಡಿಮೆ ಆಗಿದೆ. ಹೀಗಾಗಿ, ಬೇರೆ ದೇಶಗಳಿಗೆ ಭಾರತದ ವಿಮಾನಗಳು ತೆರಳುತ್ತಿವೆ. ಈ ಕಾರಣಕ್ಕೆ ‘ಟೈಗರ್​ 3’ ತಂಡ ರಷ್ಯಾಗೆ ಪ್ರಯಾಣ ಬೆಳೆಸಿದೆ.

ರಷ್ಯಾದಲ್ಲಿ ಸಲ್ಮಾನ್​ ಖಾನ್​ ಜತೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದ ಫ್ಯಾನ್ಸ್​
ರಷ್ಯಾದಲ್ಲಿ ಸಲ್ಮಾನ್​ ಖಾನ್​ ಜತೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದ ಫ್ಯಾನ್ಸ್​
TV9 Web
| Edited By: |

Updated on: Aug 24, 2021 | 4:20 PM

Share

‘ಏಕ್​ ಥಾ ಟೈಗರ್​’, ‘ಟೈಗರ್​ ಜಿಂದಾ ಹೈ’ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿದ್ದವು. ಈಗ ಸಲ್ಮಾನ್​ ಖಾನ್ ‘ಟೈಗರ್​ 3’ಗೆ ಸಿದ್ಧತೆ ನಡೆಸಿದ್ದಾರೆ. ಸತತ ಸೋಲಿನಿಂದ ಕಂಗೆಟ್ಟಿರುವ ಅವರಿಗೆ ಈ ಸಿನಿಮಾ ಬಹಳ ಮಹತ್ವದ್ದಾಗಿದೆ. ಈ ಕಾರಣಕ್ಕೆ ಅವರು ಈ ಚಿತ್ರದ ಬಗ್ಗೆ ಹೆಚ್ಚು ಆಸ್ತೆ ವಹಿಸಿದ್ದಾರೆ. ಈ ಸಿನಿಮಾದ ಆ್ಯಕ್ಷನ್​ ದೃಶ್ಯಗಳ ಶೂಟಿಂಗ್​ ರಷ್ಯಾದಲ್ಲಿ ನಡೆಯುತ್ತಿದ್ದು, ಸಲ್ಮಾನ್​ ಅಭಿಮಾನಿಗಳ ಜತೆ ಸೆಲ್ಫಿ ತೆಗೆಸಿಕೊಂಡಿದ್ದಾರೆ.

ಕೊವಿಡ್ ಎರಡನೇ ಅಲೆ​ ಕಾರಣದಿಂದ ಸಿನಿಮಾ ಶೂಟಿಂಗ್​ ನಿಂತಿತ್ತು. ಭಾರತದಲ್ಲಿ ಕೊರೊನಾ ವೈರಸ್​ ಹೆಚ್ಚಾದ ಕಾರಣಕ್ಕೆ ಅನೇಕ ರಾಷ್ಟ್ರಗಳು ಭಾರತದಿಂದ ಬರುವ ಪ್ರಯಾಣಿಕರಿಗೆ ನಿರ್ಬಂಧ ಹೇರಿತ್ತು. ಆದರೆ, ಈಗ ಕೊವಿಡ್​ ಕಡಿಮೆ ಆಗಿದೆ. ಹೀಗಾಗಿ, ಬೇರೆ ದೇಶಗಳಿಗೆ ಭಾರತದ ವಿಮಾನಗಳು ತೆರಳುತ್ತಿವೆ. ಈ ಕಾರಣಕ್ಕೆ ‘ಟೈಗರ್​ 3’ ತಂಡ ರಷ್ಯಾಗೆ ಪ್ರಯಾಣ ಬೆಳೆಸಿದೆ.

ಸದ್ಯ, ರಷ್ಯಾದಲ್ಲಿ ಶೂಟಿಂಗ್​ ಮಾಡಲಾಗುತ್ತಿದೆ. ಅಲ್ಲಿಯೂ ಸಲ್ಮಾನ್​ ಖಾನ್​ಗೆ ಅಭಿಮಾನಿಗಳಿದ್ದಾರೆ. ಸಲ್ಮಾನ್​ ಖಾನ್​ ಜತೆ ಅವರು ಸೆಲ್ಫಿ ತೆಗೆದುಕೊಳ್ಳುತ್ತಿರುವ ಫೋಟೋ ಹಾಗೂ ವಿಡಿಯೋಗಳು ವೈರಲ್​ ಆಗಿವೆ. ಇತ್ತೀಚೆಗೆ ‘ಟೈಗರ್​ 3’ನಲ್ಲಿ ಸಲ್ಮಾನ್​ ಖಾನ್​ ಲುಕ್​ ಲೀಕ್​ ಆಗಿತ್ತು.

‘ಟೈಗರ್​ 3’ ಮೇಲೆ ಅಭಿಮಾನಿಗಳು ಇಟ್ಟುಕೊಂಡಿರುವ ನಿರೀಕ್ಷೆಯ ಮಟ್ಟವನ್ನು ತಲುಪಲು ನಿರ್ಮಾಪಕರು ಕೋಟಿ ಕೋಟಿ ರೂ. ಹಣ ಖರ್ಚು ಮಾಡುತ್ತಿದ್ದಾರೆ. ‘ಟೈಗರ್​ 3’ ಚಿತ್ರದಲ್ಲಿ ವಿಲನ್​ ಇಂಟ್ರಡಕ್ಷನ್​ ಸೀನ್​ಗಾಗಿ ನಿರ್ಮಾಪಕರು ಬರೋಬ್ಬರಿ 10 ಕೋಟಿ ರೂ. ಖರ್ಚು ಮಾಡುತ್ತಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಹರಿದಾಡಿತ್ತು.  ‘ಏಕ್​ ಥಾ ಟೈಗರ್​’, ‘ಟೈಗರ್​ ಜಿಂದಾ ಹೈ’ ಬಳಿಕ ಟೈಗರ್​ ಸರಣಿಯಲ್ಲಿ ಮೂಡಿಬರುತ್ತಿರುವ ಮೂರನೇ ಸಿನಿಮಾ ಇದಾಗಿದ್ದು, ಈ ಬಾರಿಯೂ ಸಲ್ಮಾನ್​ ಖಾನ್​ಗೆ ಜೋಡಿಯಾಗಿ ಕತ್ರಿನಾ ಕೈಫ್​ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಶಾರುಖ್​ ಖಾನ್​ ಕೂಡ ಒಂದು ಅತಿಥಿ ಪಾತ್ರ ಮಾಡಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಈ ಬಗ್ಗೆ ಚಿತ್ರತಂಡದ ಕಡೆಯಿಂದ ಇನ್ನಷ್ಟೇ ಅಧಿಕೃತ ಮಾಹಿತಿ ಸಿಗಬೇಕಿದೆ.

ಇದನ್ನೂ ಓದಿ: ಏರ್​ಪೋರ್ಟ್​​ನಲ್ಲಿ ಸಲ್ಮಾನ್​ ಖಾನ್ ಅವರನ್ನು ತಡೆದಿದ್ದ ಸಿಐ​ಎಸ್ಎಫ್​ ಅಧಿಕಾರಿಗೆ ಈಗ ಸಂಕಷ್ಟ; ಕಾರಣ ಏನು? 

Follow Us
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್