AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾದಲ್ಲಿ ಸಲ್ಮಾನ್​ ಖಾನ್​ ಜತೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದ ಫ್ಯಾನ್ಸ್​

ಈಗ ಕೊವಿಡ್​ ಕಡಿಮೆ ಆಗಿದೆ. ಹೀಗಾಗಿ, ಬೇರೆ ದೇಶಗಳಿಗೆ ಭಾರತದ ವಿಮಾನಗಳು ತೆರಳುತ್ತಿವೆ. ಈ ಕಾರಣಕ್ಕೆ ‘ಟೈಗರ್​ 3’ ತಂಡ ರಷ್ಯಾಗೆ ಪ್ರಯಾಣ ಬೆಳೆಸಿದೆ.

ರಷ್ಯಾದಲ್ಲಿ ಸಲ್ಮಾನ್​ ಖಾನ್​ ಜತೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದ ಫ್ಯಾನ್ಸ್​
ರಷ್ಯಾದಲ್ಲಿ ಸಲ್ಮಾನ್​ ಖಾನ್​ ಜತೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದ ಫ್ಯಾನ್ಸ್​
TV9 Web
| Edited By: |

Updated on: Aug 24, 2021 | 4:20 PM

Share

‘ಏಕ್​ ಥಾ ಟೈಗರ್​’, ‘ಟೈಗರ್​ ಜಿಂದಾ ಹೈ’ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿದ್ದವು. ಈಗ ಸಲ್ಮಾನ್​ ಖಾನ್ ‘ಟೈಗರ್​ 3’ಗೆ ಸಿದ್ಧತೆ ನಡೆಸಿದ್ದಾರೆ. ಸತತ ಸೋಲಿನಿಂದ ಕಂಗೆಟ್ಟಿರುವ ಅವರಿಗೆ ಈ ಸಿನಿಮಾ ಬಹಳ ಮಹತ್ವದ್ದಾಗಿದೆ. ಈ ಕಾರಣಕ್ಕೆ ಅವರು ಈ ಚಿತ್ರದ ಬಗ್ಗೆ ಹೆಚ್ಚು ಆಸ್ತೆ ವಹಿಸಿದ್ದಾರೆ. ಈ ಸಿನಿಮಾದ ಆ್ಯಕ್ಷನ್​ ದೃಶ್ಯಗಳ ಶೂಟಿಂಗ್​ ರಷ್ಯಾದಲ್ಲಿ ನಡೆಯುತ್ತಿದ್ದು, ಸಲ್ಮಾನ್​ ಅಭಿಮಾನಿಗಳ ಜತೆ ಸೆಲ್ಫಿ ತೆಗೆಸಿಕೊಂಡಿದ್ದಾರೆ.

ಕೊವಿಡ್ ಎರಡನೇ ಅಲೆ​ ಕಾರಣದಿಂದ ಸಿನಿಮಾ ಶೂಟಿಂಗ್​ ನಿಂತಿತ್ತು. ಭಾರತದಲ್ಲಿ ಕೊರೊನಾ ವೈರಸ್​ ಹೆಚ್ಚಾದ ಕಾರಣಕ್ಕೆ ಅನೇಕ ರಾಷ್ಟ್ರಗಳು ಭಾರತದಿಂದ ಬರುವ ಪ್ರಯಾಣಿಕರಿಗೆ ನಿರ್ಬಂಧ ಹೇರಿತ್ತು. ಆದರೆ, ಈಗ ಕೊವಿಡ್​ ಕಡಿಮೆ ಆಗಿದೆ. ಹೀಗಾಗಿ, ಬೇರೆ ದೇಶಗಳಿಗೆ ಭಾರತದ ವಿಮಾನಗಳು ತೆರಳುತ್ತಿವೆ. ಈ ಕಾರಣಕ್ಕೆ ‘ಟೈಗರ್​ 3’ ತಂಡ ರಷ್ಯಾಗೆ ಪ್ರಯಾಣ ಬೆಳೆಸಿದೆ.

ಸದ್ಯ, ರಷ್ಯಾದಲ್ಲಿ ಶೂಟಿಂಗ್​ ಮಾಡಲಾಗುತ್ತಿದೆ. ಅಲ್ಲಿಯೂ ಸಲ್ಮಾನ್​ ಖಾನ್​ಗೆ ಅಭಿಮಾನಿಗಳಿದ್ದಾರೆ. ಸಲ್ಮಾನ್​ ಖಾನ್​ ಜತೆ ಅವರು ಸೆಲ್ಫಿ ತೆಗೆದುಕೊಳ್ಳುತ್ತಿರುವ ಫೋಟೋ ಹಾಗೂ ವಿಡಿಯೋಗಳು ವೈರಲ್​ ಆಗಿವೆ. ಇತ್ತೀಚೆಗೆ ‘ಟೈಗರ್​ 3’ನಲ್ಲಿ ಸಲ್ಮಾನ್​ ಖಾನ್​ ಲುಕ್​ ಲೀಕ್​ ಆಗಿತ್ತು.

‘ಟೈಗರ್​ 3’ ಮೇಲೆ ಅಭಿಮಾನಿಗಳು ಇಟ್ಟುಕೊಂಡಿರುವ ನಿರೀಕ್ಷೆಯ ಮಟ್ಟವನ್ನು ತಲುಪಲು ನಿರ್ಮಾಪಕರು ಕೋಟಿ ಕೋಟಿ ರೂ. ಹಣ ಖರ್ಚು ಮಾಡುತ್ತಿದ್ದಾರೆ. ‘ಟೈಗರ್​ 3’ ಚಿತ್ರದಲ್ಲಿ ವಿಲನ್​ ಇಂಟ್ರಡಕ್ಷನ್​ ಸೀನ್​ಗಾಗಿ ನಿರ್ಮಾಪಕರು ಬರೋಬ್ಬರಿ 10 ಕೋಟಿ ರೂ. ಖರ್ಚು ಮಾಡುತ್ತಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಹರಿದಾಡಿತ್ತು.  ‘ಏಕ್​ ಥಾ ಟೈಗರ್​’, ‘ಟೈಗರ್​ ಜಿಂದಾ ಹೈ’ ಬಳಿಕ ಟೈಗರ್​ ಸರಣಿಯಲ್ಲಿ ಮೂಡಿಬರುತ್ತಿರುವ ಮೂರನೇ ಸಿನಿಮಾ ಇದಾಗಿದ್ದು, ಈ ಬಾರಿಯೂ ಸಲ್ಮಾನ್​ ಖಾನ್​ಗೆ ಜೋಡಿಯಾಗಿ ಕತ್ರಿನಾ ಕೈಫ್​ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಶಾರುಖ್​ ಖಾನ್​ ಕೂಡ ಒಂದು ಅತಿಥಿ ಪಾತ್ರ ಮಾಡಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಈ ಬಗ್ಗೆ ಚಿತ್ರತಂಡದ ಕಡೆಯಿಂದ ಇನ್ನಷ್ಟೇ ಅಧಿಕೃತ ಮಾಹಿತಿ ಸಿಗಬೇಕಿದೆ.

ಇದನ್ನೂ ಓದಿ: ಏರ್​ಪೋರ್ಟ್​​ನಲ್ಲಿ ಸಲ್ಮಾನ್​ ಖಾನ್ ಅವರನ್ನು ತಡೆದಿದ್ದ ಸಿಐ​ಎಸ್ಎಫ್​ ಅಧಿಕಾರಿಗೆ ಈಗ ಸಂಕಷ್ಟ; ಕಾರಣ ಏನು? 

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ