AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂನಂ ಪಾಂಡೆಗೆ ಮಧ್ಯ ರಸ್ತೆಯಲ್ಲಿ ಕಿಸ್ ಮಾಡಲು ಬಂದ ಅಭಿಮಾನಿ; ಇದು ನಾಟಕ ಎಂದ ನೆಟ್ಟಿಗರು

ಸೆಲ್ಫಿ ಕೇಳುವ ನೆಪದಲ್ಲಿ ಬಂದ ಅಭಿಮಾನಿ ಅತಿರೇಕದಿಂದ ವರ್ತಿಸಿದ್ದಾನೆ. ಪೂನಂ ಪಾಂಡೆಗೆ ಬಲವಂತದಿಂದ ಕಿಸ್ ಮಾಡಲು ಪ್ರಯತ್ನಿಸಿದ್ದಾನೆ. ಈ ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದು, ನೆಟ್ಟಿಗರು ಹಲವು ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ವಿಡಿಯೋ ನೋಡಿದ ಬಳಿಕ ಇದೆಲ್ಲ ನಾಟಕ ಎಂಬ ಅನುಮಾನ ಅನೇಕರಿಗೆ ಮೂಡಿದೆ.

ಪೂನಂ ಪಾಂಡೆಗೆ ಮಧ್ಯ ರಸ್ತೆಯಲ್ಲಿ ಕಿಸ್ ಮಾಡಲು ಬಂದ ಅಭಿಮಾನಿ; ಇದು ನಾಟಕ ಎಂದ ನೆಟ್ಟಿಗರು
Poonam Pandey
ಮದನ್​ ಕುಮಾರ್​
|

Updated on: Feb 21, 2025 | 7:30 PM

Share

ನಟಿ, ಮಾಡೆಲ್ ಪೂನಂ ಪಾಂಡೆ ಅವರು ಒಂದಲ್ಲಾ ಒಂದು ಕಾರಣಕ್ಕೆ ಸುದ್ದಿ ಆಗುತ್ತಾರೆ. ಅವರ ವಿಡಿಯೋಗಳು ಆಗಾಗ ವೈರಲ್ ಆಗುತ್ತವೆ. ಸಿಕ್ಕಾಪಟ್ಟೆ ಬೋಲ್ಡ್ ಆಗಿ ಕಾಣಿಸಿಕೊಳ್ಳುವ ಪೂನಂ ಪಾಂಡೆ ಅವರು ಕೆಲವೊಂದು ವಿವಾದ ಕೂಡ ಮಾಡಿಕೊಂಡ ಉದಾಹರಣೆಗಳು ಇವೆ. ಈಗ ಅವರ ಒಂದು ವಿಡಿಯೋ ವೈರಲ್ ಆಗುತ್ತಿದೆ. ಮುಂಬೈನ ಬೀದಿಯಲ್ಲಿ ಪೂನಂ ಪಾಂಡೆಗೆ ಅಭಿಮಾನಿಯೊಬ್ಬ ಬಲವಂತವಾಗಿ ಕಿಸ್ ಮಾಡಲು ಬಂದಿದ್ದಾನೆ. ಆಗ ಪೂನಂ ಪಾಂಡೆ ಅವರು ಹೆದರಿಕೊಂಡು ಪಕ್ಕಕ್ಕೆ ಸರಿದಿದ್ದಾರೆ. ಈ ವಿಡಿಯೋಗೆ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಪೂನಂ ಪಾಂಡೆ ಇದ್ದಲ್ಲಿ ಪಾಪರಾಜಿಗಳು ಮುಗಿಬೀಳುತ್ತಾರೆ. ಅವರ ಫೋಟೋ ಮತ್ತು ವಿಡಿಯೋ ಸಲುವಾಗಿ ಕ್ಯಾಮೆರಾ ಹಿಡಿದು ಓಡೋಡಿ ಬರುತ್ತಾರೆ. ಇನ್ನು, ಅಭಿಮಾನಿಗಳು ಕೂಡ ಸೆಲ್ಫಿಗಾಗಿ ಹಾತೊರೆಯುತ್ತಾರೆ. ಶುಕ್ರವಾರ (ಫೆಬ್ರವರಿ 21) ಮುಂಬೈನಲ್ಲಿ ಹೀಗೆಯೇ ಆಯಿತು. ಪೂನಂ ಪಾಂಡೆ ಅವರು ಪಾಪರಾಜಿಗಳಿಗೆ ಪೋಸ್ ನೀಡುತ್ತಿದ್ದರು. ಆಗ ಒಬ್ಬ ಅಭಿಮಾನಿ ಎಂಟ್ರಿ ನೀಡಿದ.

ಪಾಪರಾಜಿಗಳು ಪೂನಂ ಪಾಂಡೆಯ ಫೋಟೋ ತೆಗೆಯುತ್ತಿದ್ದಾಗ ಅಭಿಮಾನಿಯೊಬ್ಬ ಸೆಲ್ಫಿ ಕೇಳಲು ಬಂದ. ಒಂದು ಅಡಿ ಅಂತರದಿಂದ ಸೆಲ್ಫಿ ನೀಡಲು ಪೂನಂ ಪಾಂಡೆ ಕೂಡ ಒಪ್ಪಿದರು. ಆದರೆ ಅಷ್ಟಕ್ಕೇ ಆ ವ್ಯಕ್ತಿ ಸುಮ್ಮನಾಗಲಿಲ್ಲ. ಇನ್ನೂ ಹತ್ತಿರ ಹತ್ತಿರ ಬರುತ್ತಾ ಪೂನಂ ಪಾಂಡೆಯ ಮುಖಕ್ಕೆ ಕಿಸ್​ ಮಾಡಲು ಪ್ರಯತ್ನಿಸಿದ. ಆಗ ಪೂನಂ ಪಾಂಡೆ ಗಾಬರಿಯಾಗಿ ಓಡಿ ಹೋದರು.

ವೈರಲ್ ಆಗಿರುವ ಈ ವಿಡಿಯೋ ನೋಡಿದ ಅನೇಕರಿಗೆ ಅನುಮಾನ ಮೂಡಿದೆ. ಇದು ಬೇಕಂತಲೇ ಮಾಡಿರುವ ಡ್ರಾಮಾ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಮೊದಲೇ ಪ್ಲ್ಯಾನ್ ಮಾಡಿಕೊಂಡು ಈ ರೀತಿ ನಾಟಕ ಮಾಡಲಾಗಿದೆ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ. ವೈರಲ್ ಆಗಬೇಕು, ಸುದ್ದಿ ಆಗಬೇಕು ಎಂಬ ಉದ್ದೇಶದಿಂದಲೇ ಪೂನಂ ಪಾಂಡೆ ಇದನ್ನೆಲ್ಲ ಮಾಡುತ್ತಾರೆ ಎಂದು ಅನೇಕರು ಟೀಕೆ ಮಾಡಿದ್ದಾರೆ. ಈ ಬಗ್ಗೆ ಇನ್ನಷ್ಟೇ ಅವರು ಪ್ರತಿಕ್ರಿಯೆ ನೀಡಬೇಕಿದೆ. ಸದ್ಯಕ್ಕಂತೂ ಈ ವಿಡಿಯೋ ತುಂಬಾ ವೈರಲ್ ಆಗುತ್ತಿದೆ.

ಇದನ್ನೂ ಓದಿ: ಪೂನಂ ಪಾಂಡೆಗೆ ಹೆಚ್ಚಿದ ಸಂಕಷ್ಟ, 100 ಕೋಟಿ ರೂ. ಮಾನನಷ್ಟ ಮೊಕದ್ದಮೆ

ಪೂನಂ ಪಾಂಡೆ ಅವರ ಡ್ರಾಮಾ ಒಂದೆರಡಲ್ಲ. ಈ ಮೊದಲು ಅವರು ತಮ್ಮ ಸಾವಿನ ಸುಳ್ಳು ಸುದ್ದಿಯನ್ನು ಸ್ವತಃ ಹಬ್ಬಿಸಿದ್ದರು! ಬಳಿಕ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಆ ರೀತಿ ಮಾಡಿದ್ದಾಗಿ ತಿಳಿಸಿದ್ದರು. ಆಗ ಅವರನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡಲಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್