AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Abhishek Bachchan: ‘ಪತ್ನಿಗೆ ಹೆಚ್ಚು ಸಿನಿಮಾ ಮಾಡಲು ಬಿಡಿ, ಮಗಳನ್ನು ನೀವು ನೋಡಿಕೊಳ್ಳಿ’ ಎಂದ ಅಭಿಮಾನಿ; ಅಭಿಷೇಕ್​ ಉತ್ತರ ಏನು?

Ponniyin Selvan 2: ಅಭಿಷೇಕ್​ ಬಚ್ಚನ್​ ಅವರಿಗೆ ಟ್ವಿಟರ್​ನಲ್ಲಿ ಟ್ರೋಲ್​ ಕಾಟ ಹೊಸದೇನೂ ಅಲ್ಲ. ಅನೇಕ ಕಟು ಟೀಕೆಗಳಿಗೆ ಅವರು ಸೂಕ್ತ ಉತ್ತರ ನೀಡಿದ್ದುಂಟು.

Abhishek Bachchan: ‘ಪತ್ನಿಗೆ ಹೆಚ್ಚು ಸಿನಿಮಾ ಮಾಡಲು ಬಿಡಿ, ಮಗಳನ್ನು ನೀವು ನೋಡಿಕೊಳ್ಳಿ’ ಎಂದ ಅಭಿಮಾನಿ; ಅಭಿಷೇಕ್​ ಉತ್ತರ ಏನು?
ಅಭಿಷೇಕ್ ಬಚ್ಚನ್, ಐಶ್ವರ್ಯಾ ರೈ
ಮದನ್​ ಕುಮಾರ್​
|

Updated on:Apr 30, 2023 | 7:31 AM

Share

ನಟ ಅಭಿಷೇಕ್​ ಬಚ್ಚನ್​ ಅವರು ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಅವರ ಪತ್ನಿ ಐಶ್ವರ್ಯಾ ರೈ ಬಚ್ಚನ್​ (Aishwarya Rai Bachchan) ಕೂಡ ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಆರಂಭದ ದಿನಗಳಿಗೆ ಹೋಲಿಕೆ ಮಾಡಿದರೆ ಈಗ ಐಶ್ವರ್ಯಾ ಅವರು ಸಿನಿಮಾ ವಿಚಾರದಲ್ಲಿ ಸಖತ್​ ಚ್ಯೂಸಿ ಆಗಿದ್ದಾರೆ. ಅಲ್ಲೊಂದು ಇಲ್ಲೊಂದು ಸಿನಿಮಾಗಳನ್ನು ಮಾತ್ರ ಅವರು ಒಪ್ಪಿಕೊಳ್ಳುತ್ತಾರೆ. ಇತ್ತೀಚೆಗೆ ಅವರು ನಟಿಸಿದ ‘ಪೊನ್ನಿಯಿನ್​ ಸೆಲ್ವನ್​ 2’ (Ponniyin Selvan 2) ಸಿನಿಮಾ ಬಿಡುಗಡೆಯಾಗಿ ಭರ್ಜರಿ ಕಮಾಯಿ ಮಾಡಿದೆ. ಈ ಸಿನಿಮಾದಲ್ಲಿನ ಐಶ್ವರ್ಯಾ ರೈ ಅವರ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಅವರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಎಂಬುದು ಫ್ಯಾನ್ಸ್​ ಆಸೆ. ಈ ವಿಷಯದಲ್ಲಿ ನೆಟ್ಟಿಗರೊಬ್ಬರು ಅಭಿಷೇಕ್​ ಬಚ್ಚನ್​ಗೆ ಸಲಹೆ ನೀಡಿದ್ದಾರೆ. ಅದಕ್ಕೆ ಅಭಿಷೇಕ್​ ಬಚ್ಚನ್​ (Abhishek Bachchan) ಕಡೆಯಿಂದ ನೇರ ಉತ್ತರ ಸಿಕ್ಕಿದೆ.

ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಸೆಲೆಬ್ರಿಟಿಗಳು ಸೋಶಿಯಲ್​ ಮೀಡಿಯಾ ಬಳಸುತ್ತಾರೆ. ಅದೇ ರೀತಿ ಅಭಿಷೇಕ್​ ಬಚ್ಚನ್​ ಕೂಡ ಟ್ವಿಟರ್​ನಲ್ಲಿ ಸಕ್ರಿಯರಾಗಿದ್ದಾರೆ. ಕೆಲವೊಮ್ಮೆ ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ನೇರವಾದ ಪ್ರಶ್ನೆಗಳನ್ನು ಕೇಳುತ್ತಾರೆ. ಈಗ ಅಭಿಷೇಕ್​ ಬಚ್ಚನ್​ ಅವರಿಗೆ ಹಾಗೆಯೇ ಆಗಿದೆ. ‘ಐಶ್ವರ್ಯಾ ರೈ ಅವರಿಗೆ ಹೆಚ್ಚು ಸಿನಿಮಾ ಒಪ್ಪಿಕೊಳ್ಳಲು ಬಿಡಿ. ಮಗಳು ಆರಾಧ್ಯಾಳನ್ನು ನೀವು ನೋಡಿಕೊಳ್ಳಿ’ ಎಂದು ಅಭಿಮಾನಿಯೊಬ್ಬರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ
Image
Aishwarya Rai Birthday: ಐಶ್ವರ್ಯಾ ರೈ ಜನ್ಮದಿನ: ಹಳೆಯ ಫೋಟೋಗಳು ವೈರಲ್
Image
Aishwarya Rai Birthday: 1500 ರೂ. ಸಂಭಾವನೆ ಪಡೆಯುತ್ತಿದ್ದ ನಟಿ ಐಶ್ವರ್ಯಾ ರೈ 10 ಕೋಟಿ ರೂ. ಪಡೆಯುವಂತಾಗಿದ್ದು ಹೇಗೆ?
Image
Aishwarya Rai: ವೇದಿಕೆ ಮೇಲೆ ಗುರು ಮಣಿರತ್ನಂ ಕಾಲಿಗೆ ನಮಸ್ಕಾರ ಮಾಡಿದ ಐಶ್ವರ್ಯಾ ರೈ​; ವಿಡಿಯೋ ವೈರಲ್​
Image
ಐಶ್ವರ್ಯಾ ರೈ ರೀತಿಯಲ್ಲೇ ಕಾಣುವ ಈ ಸೋಶಿಯಲ್ ಮೀಡಿಯಾ ಸ್ಟಾರ್ ಯಾರು?

ಇದನ್ನೂ ಓದಿ: ಮಣಿರತ್ನಂ ಕಾಲಿಗೆ ನಮಸ್ಕರಿಸಿದ ಐಶ್ವರ್ಯಾ ರೈ; ನಿರ್ದೇಶಕನ ಬಗ್ಗೆ ನಟಿಗೆ ಇದೆ ವಿಶೇಷ ಗೌರವ

ಅಭಿಷೇಕ್​ ಬಚ್ಚನ್​ ಅವರಿಗೆ ಟ್ವಿಟರ್​ನಲ್ಲಿ ಟ್ರೋಲ್​ ಕಾಟ ಹೊಸದೇನೂ ಅಲ್ಲ. ಅನೇಕ ಕಟು ಟೀಕೆಗಳಿಗೆ ಅವರು ಸೂಕ್ತ ಉತ್ತರ ನೀಡಿದ್ದುಂಟು. ಅಭಿಮಾನಿಗಳ ಸಲಹೆಯನ್ನು ಅವರು ಪಾಸಿಟಿವ್​ ಆಗಿ ಸ್ವೀಕರಿಸುತ್ತಾರೆ. ‘ಐಶ್ವರ್ಯಾಗೆ ಹೆಚ್ಚು ಸಿನಿಮಾ ಒಪ್ಪಿಕೊಳ್ಳಲು ಬಿಡಬೇಕಾ? ಸರ್.. ಯಾವುದಕ್ಕೂ ಅವರು ನನ್ನ ಅನುಮತಿ ಪಡೆಯುವ ಅಗತ್ಯವಿಲ್ಲ. ಅದರಲ್ಲೂ ಅವರು ಇಷ್ಟಪಡುವ ವಿಚಾರದಲ್ಲಿ ನನ್ನ ಅನುಮತಿಯ ಅವಶ್ಯಕತೆ ಇಲ್ಲ’ ಎಂದು ಅಭಿಷೇಕ್​ ಬಚ್ಚನ್​ ಹೇಳಿದ್ದಾರೆ.

‘ಪೊನ್ನಿಯಿನ್​ ಸೆಲ್ವನ್​ 2’ ಸಿನಿಮಾದಲ್ಲಿ ಐಶ್ವರ್ಯಾ ರೈ ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಅಭಿಷೇಕ್​ ಬಚ್ಚನ್​ ಕೂಡ ಟ್ವಿಟರ್ ಮೂಲಕ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅವರ ಟ್ವೀಟ್​ಗೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. 2007ರಲ್ಲಿ ಅಭಿಷೇಕ್​ ಬಚ್ಚನ್​ ಮತ್ತು ಐಶ್ವರ್ಯಾ ರೈ ಮದುವೆ ಆಯಿತು. 2011ರಲ್ಲಿ ಆರಾಧ್ಯಾ ಜನಿಸಿದಳು. ‘ಗುರು’, ‘ಧೂಮ್​ 2’, ‘ರಾವಣ್​’, ‘ಕುಚ್​​ ನಾ ಕಹೋ’ ಮುಂತಾದ ಸಿನಿಮಾಗಳಲ್ಲಿ ಅಭಿಷೇಕ್​ ಮತ್ತು ಐಶ್ವರ್ಯಾ ಜೋಡಿಯಾಗಿ ನಟಿಸಿದ್ದಾರೆ. ಇಬ್ಬರೂ ಒಂದಾಗಿ ಇನ್ನಷ್ಟು ಸಿನಿಮಾಗಳಲ್ಲಿ ಕಾಣಿಸಿಕೊಳ್ಳಲಿ ಎಂಬ ಆಸೆಯನ್ನೂ ಅಭಿಮಾನಿಗಳು ವ್ಯಕ್ತಪಡಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:31 am, Sun, 30 April 23

ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ