AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Abhishek Bachchan: ‘ಪತ್ನಿಗೆ ಹೆಚ್ಚು ಸಿನಿಮಾ ಮಾಡಲು ಬಿಡಿ, ಮಗಳನ್ನು ನೀವು ನೋಡಿಕೊಳ್ಳಿ’ ಎಂದ ಅಭಿಮಾನಿ; ಅಭಿಷೇಕ್​ ಉತ್ತರ ಏನು?

Ponniyin Selvan 2: ಅಭಿಷೇಕ್​ ಬಚ್ಚನ್​ ಅವರಿಗೆ ಟ್ವಿಟರ್​ನಲ್ಲಿ ಟ್ರೋಲ್​ ಕಾಟ ಹೊಸದೇನೂ ಅಲ್ಲ. ಅನೇಕ ಕಟು ಟೀಕೆಗಳಿಗೆ ಅವರು ಸೂಕ್ತ ಉತ್ತರ ನೀಡಿದ್ದುಂಟು.

Abhishek Bachchan: ‘ಪತ್ನಿಗೆ ಹೆಚ್ಚು ಸಿನಿಮಾ ಮಾಡಲು ಬಿಡಿ, ಮಗಳನ್ನು ನೀವು ನೋಡಿಕೊಳ್ಳಿ’ ಎಂದ ಅಭಿಮಾನಿ; ಅಭಿಷೇಕ್​ ಉತ್ತರ ಏನು?
ಅಭಿಷೇಕ್ ಬಚ್ಚನ್, ಐಶ್ವರ್ಯಾ ರೈ
ಮದನ್​ ಕುಮಾರ್​
|

Updated on:Apr 30, 2023 | 7:31 AM

Share

ನಟ ಅಭಿಷೇಕ್​ ಬಚ್ಚನ್​ ಅವರು ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಅವರ ಪತ್ನಿ ಐಶ್ವರ್ಯಾ ರೈ ಬಚ್ಚನ್​ (Aishwarya Rai Bachchan) ಕೂಡ ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಆರಂಭದ ದಿನಗಳಿಗೆ ಹೋಲಿಕೆ ಮಾಡಿದರೆ ಈಗ ಐಶ್ವರ್ಯಾ ಅವರು ಸಿನಿಮಾ ವಿಚಾರದಲ್ಲಿ ಸಖತ್​ ಚ್ಯೂಸಿ ಆಗಿದ್ದಾರೆ. ಅಲ್ಲೊಂದು ಇಲ್ಲೊಂದು ಸಿನಿಮಾಗಳನ್ನು ಮಾತ್ರ ಅವರು ಒಪ್ಪಿಕೊಳ್ಳುತ್ತಾರೆ. ಇತ್ತೀಚೆಗೆ ಅವರು ನಟಿಸಿದ ‘ಪೊನ್ನಿಯಿನ್​ ಸೆಲ್ವನ್​ 2’ (Ponniyin Selvan 2) ಸಿನಿಮಾ ಬಿಡುಗಡೆಯಾಗಿ ಭರ್ಜರಿ ಕಮಾಯಿ ಮಾಡಿದೆ. ಈ ಸಿನಿಮಾದಲ್ಲಿನ ಐಶ್ವರ್ಯಾ ರೈ ಅವರ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಅವರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಎಂಬುದು ಫ್ಯಾನ್ಸ್​ ಆಸೆ. ಈ ವಿಷಯದಲ್ಲಿ ನೆಟ್ಟಿಗರೊಬ್ಬರು ಅಭಿಷೇಕ್​ ಬಚ್ಚನ್​ಗೆ ಸಲಹೆ ನೀಡಿದ್ದಾರೆ. ಅದಕ್ಕೆ ಅಭಿಷೇಕ್​ ಬಚ್ಚನ್​ (Abhishek Bachchan) ಕಡೆಯಿಂದ ನೇರ ಉತ್ತರ ಸಿಕ್ಕಿದೆ.

ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಸೆಲೆಬ್ರಿಟಿಗಳು ಸೋಶಿಯಲ್​ ಮೀಡಿಯಾ ಬಳಸುತ್ತಾರೆ. ಅದೇ ರೀತಿ ಅಭಿಷೇಕ್​ ಬಚ್ಚನ್​ ಕೂಡ ಟ್ವಿಟರ್​ನಲ್ಲಿ ಸಕ್ರಿಯರಾಗಿದ್ದಾರೆ. ಕೆಲವೊಮ್ಮೆ ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ನೇರವಾದ ಪ್ರಶ್ನೆಗಳನ್ನು ಕೇಳುತ್ತಾರೆ. ಈಗ ಅಭಿಷೇಕ್​ ಬಚ್ಚನ್​ ಅವರಿಗೆ ಹಾಗೆಯೇ ಆಗಿದೆ. ‘ಐಶ್ವರ್ಯಾ ರೈ ಅವರಿಗೆ ಹೆಚ್ಚು ಸಿನಿಮಾ ಒಪ್ಪಿಕೊಳ್ಳಲು ಬಿಡಿ. ಮಗಳು ಆರಾಧ್ಯಾಳನ್ನು ನೀವು ನೋಡಿಕೊಳ್ಳಿ’ ಎಂದು ಅಭಿಮಾನಿಯೊಬ್ಬರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ
Image
Aishwarya Rai Birthday: ಐಶ್ವರ್ಯಾ ರೈ ಜನ್ಮದಿನ: ಹಳೆಯ ಫೋಟೋಗಳು ವೈರಲ್
Image
Aishwarya Rai Birthday: 1500 ರೂ. ಸಂಭಾವನೆ ಪಡೆಯುತ್ತಿದ್ದ ನಟಿ ಐಶ್ವರ್ಯಾ ರೈ 10 ಕೋಟಿ ರೂ. ಪಡೆಯುವಂತಾಗಿದ್ದು ಹೇಗೆ?
Image
Aishwarya Rai: ವೇದಿಕೆ ಮೇಲೆ ಗುರು ಮಣಿರತ್ನಂ ಕಾಲಿಗೆ ನಮಸ್ಕಾರ ಮಾಡಿದ ಐಶ್ವರ್ಯಾ ರೈ​; ವಿಡಿಯೋ ವೈರಲ್​
Image
ಐಶ್ವರ್ಯಾ ರೈ ರೀತಿಯಲ್ಲೇ ಕಾಣುವ ಈ ಸೋಶಿಯಲ್ ಮೀಡಿಯಾ ಸ್ಟಾರ್ ಯಾರು?

ಇದನ್ನೂ ಓದಿ: ಮಣಿರತ್ನಂ ಕಾಲಿಗೆ ನಮಸ್ಕರಿಸಿದ ಐಶ್ವರ್ಯಾ ರೈ; ನಿರ್ದೇಶಕನ ಬಗ್ಗೆ ನಟಿಗೆ ಇದೆ ವಿಶೇಷ ಗೌರವ

ಅಭಿಷೇಕ್​ ಬಚ್ಚನ್​ ಅವರಿಗೆ ಟ್ವಿಟರ್​ನಲ್ಲಿ ಟ್ರೋಲ್​ ಕಾಟ ಹೊಸದೇನೂ ಅಲ್ಲ. ಅನೇಕ ಕಟು ಟೀಕೆಗಳಿಗೆ ಅವರು ಸೂಕ್ತ ಉತ್ತರ ನೀಡಿದ್ದುಂಟು. ಅಭಿಮಾನಿಗಳ ಸಲಹೆಯನ್ನು ಅವರು ಪಾಸಿಟಿವ್​ ಆಗಿ ಸ್ವೀಕರಿಸುತ್ತಾರೆ. ‘ಐಶ್ವರ್ಯಾಗೆ ಹೆಚ್ಚು ಸಿನಿಮಾ ಒಪ್ಪಿಕೊಳ್ಳಲು ಬಿಡಬೇಕಾ? ಸರ್.. ಯಾವುದಕ್ಕೂ ಅವರು ನನ್ನ ಅನುಮತಿ ಪಡೆಯುವ ಅಗತ್ಯವಿಲ್ಲ. ಅದರಲ್ಲೂ ಅವರು ಇಷ್ಟಪಡುವ ವಿಚಾರದಲ್ಲಿ ನನ್ನ ಅನುಮತಿಯ ಅವಶ್ಯಕತೆ ಇಲ್ಲ’ ಎಂದು ಅಭಿಷೇಕ್​ ಬಚ್ಚನ್​ ಹೇಳಿದ್ದಾರೆ.

‘ಪೊನ್ನಿಯಿನ್​ ಸೆಲ್ವನ್​ 2’ ಸಿನಿಮಾದಲ್ಲಿ ಐಶ್ವರ್ಯಾ ರೈ ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಅಭಿಷೇಕ್​ ಬಚ್ಚನ್​ ಕೂಡ ಟ್ವಿಟರ್ ಮೂಲಕ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅವರ ಟ್ವೀಟ್​ಗೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. 2007ರಲ್ಲಿ ಅಭಿಷೇಕ್​ ಬಚ್ಚನ್​ ಮತ್ತು ಐಶ್ವರ್ಯಾ ರೈ ಮದುವೆ ಆಯಿತು. 2011ರಲ್ಲಿ ಆರಾಧ್ಯಾ ಜನಿಸಿದಳು. ‘ಗುರು’, ‘ಧೂಮ್​ 2’, ‘ರಾವಣ್​’, ‘ಕುಚ್​​ ನಾ ಕಹೋ’ ಮುಂತಾದ ಸಿನಿಮಾಗಳಲ್ಲಿ ಅಭಿಷೇಕ್​ ಮತ್ತು ಐಶ್ವರ್ಯಾ ಜೋಡಿಯಾಗಿ ನಟಿಸಿದ್ದಾರೆ. ಇಬ್ಬರೂ ಒಂದಾಗಿ ಇನ್ನಷ್ಟು ಸಿನಿಮಾಗಳಲ್ಲಿ ಕಾಣಿಸಿಕೊಳ್ಳಲಿ ಎಂಬ ಆಸೆಯನ್ನೂ ಅಭಿಮಾನಿಗಳು ವ್ಯಕ್ತಪಡಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:31 am, Sun, 30 April 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು