AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಹಿದ್ ಕಪೂರ್ ಬಟ್ಟೆ ಹರಿದು, ರಶ್ಮಿಕಾ ಮೇಲೆ ಮುಗಿಬಿದ್ದ ಫ್ಯಾನ್ಸ್; ವಿಡಿಯೋ ವೈರಲ್

‘ಕಾಕ್‌ಟೇಲ್ 2’ ಸಿನಿಮಾ ಜೂನ್ 19ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಶಾಹಿದ್ ಕಪೂರ್, ರಶ್ಮಿಕಾ ಮಂದಣ್ಣ, ಕೃತಿ ಸನನ್ ಅವರು ಈ ಚಿತ್ರದ ಪ್ರಚಾರಕ್ಕಾಗಿ ತೆರಳಿದ್ದ ವೇಳೆ ಅಭಿಮಾನಿಗಳನ್ನು ನಿಯಂತ್ರಿಸುವುದೇ ಕಷ್ಟವಾಗಿದೆ. ಪರಿಸ್ಥಿತಿ ಕೈ ಮೀರುವ ಹಂತಕ್ಕೆ ಹೋಗಿದೆ. ವಿಡಿಯೋಗಳು ವೈರಲ್ ಆಗಿವೆ.

ಶಾಹಿದ್ ಕಪೂರ್ ಬಟ್ಟೆ ಹರಿದು, ರಶ್ಮಿಕಾ ಮೇಲೆ ಮುಗಿಬಿದ್ದ ಫ್ಯಾನ್ಸ್; ವಿಡಿಯೋ ವೈರಲ್
Cocktail 2 Pune Event
ಮದನ್​ ಕುಮಾರ್​
|

Updated on: Jun 14, 2026 | 9:05 AM

Share

ಬಾಲಿವುಡ್‌ನ ಬಹುನಿರೀಕ್ಷಿತ ‘ಕಾಕ್‌ಟೇಲ್ 2’ (Cocktail 2) ಚಿತ್ರದ ಪ್ರಚಾರದ ವೇಳೆ ಭಾರಿ ನೂಕುನುಗ್ಗಲು ಉಂಟಾಗಿದೆ. ಈ ಚಿತ್ರದಲ್ಲಿ ನಟಿಸಿರುವ ಶಾಹಿದ್ ಕಪೂರ್, ಕೃತಿ ಸನನ್ ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ಅವರು ಚಿತ್ರದ ಪ್ರಚಾರಕ್ಕಾಗಿ ಪುಣೆಯ ಮಾಲ್ ಒಂದರಲ್ಲಿ ಆಯೋಜಿಸಲಾಗಿದ್ದ ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ನೆರೆದಿದ್ದ ಅಭಿಮಾನಿಗಳು ಮಿತಿ ಮೀರಿ ವರ್ತಿಸಿದ್ದಾರೆ. ಜನರು ಸೆಕ್ಯೂರಿಟಿ ಬ್ಯಾರಿಕೇಡ್‌ಗಳನ್ನು ಮುರಿದು ನಟ-ನಟಿಯರತ್ತ ನುಗ್ಗಿದ್ದಾರೆ. ಪರಿಸ್ಥಿತಿ ಕೈಮೀರಿದ ಹಿನ್ನೆಲೆಯಲ್ಲಿ ರಶ್ಮಿಕಾ, ಶಾಹಿದ್ ಕಪೂರ್ ಮತ್ತು ಕೃತಿ ಸನನ್ (Kriti Sanon) ಅವರು ಅರ್ಧದಲ್ಲೇ ಕಾರ್ಯಕ್ರಮ ಮೊಟಕುಗೊಳಿಸಿ ಹೊರನಡೆದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋಗಳಲ್ಲಿ, ಅಭಿಮಾನಿಗಳು ನೆಚ್ಚಿನ ತಾರೆಯರೊಂದಿಗೆ ಫೋಟೋ ತೆಗೆದುಕೊಳ್ಳಲು ಮುಗಿಬಿದ್ದಿರುವುದು ಕಂಡುಬಂದಿದೆ. ಜನಜಂಗುಳಿಯ ಮಧ್ಯೆ ಸಿಲುಕಿದ ಶಾಹಿದ್ ಕಪೂರ್ ಅವರ ಬಟ್ಟೆಯನ್ನು ಎಳೆಯುವಷ್ಟರ ಮಟ್ಟಿಗೆ ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು, ತೀವ್ರ ಆಕ್ರೋಶಗೊಂಡ ಶಾಹಿದ್ ಅವರು ಜನರನ್ನು ತಳ್ಳುತ್ತಾ ಮುಂದೆ ಸಾಗಿದ್ದಾರೆ.

ಅತಿಯಾದ ಜನದಟ್ಟಣೆ ಮತ್ತು ತಳ್ಳಾಟದ ಮಧ್ಯೆ, ಕೃತಿ ಸನನ್ ಅವರು ಸಹನಟಿ ರಶ್ಮಿಕಾ ಮಂದಣ್ಣ ಅವರನ್ನು ಭದ್ರವಾಗಿ ಹಿಡಿದುಕೊಂಡು ರಕ್ಷಿಸುತ್ತಾ ಮುನ್ನಡೆದಿದ್ದಾರೆ. ಜನಸಮೂಹದಿಂದ ರಶ್ಮಿಕಾಗೆ ಯಾವುದೇ ತೊಂದರೆಯಾಗದಂತೆ ಕೃತಿ ತುಂಬಾ ಜಾಗರೂಕತೆಯಿಂದ ಅವರನ್ನು ಮುನ್ನಡೆಸಿದ್ದು, ಇಬ್ಬರು ನಟಿಯರು ಒಬ್ಬರಿಗೊಬ್ಬರು ರಕ್ಷಣೆ ನೀಡುತ್ತಾ ಭದ್ರತಾ ಸಿಬ್ಬಂದಿಯ ನೆರವಿನಿಂದ ಮಾಲ್‌ನಿಂದ ಹೊರಬಂದಿದ್ದಾರೆ.

ವೈರಲ್ ವಿಡಿಯೋ:

ಕೃತಿ ಸನೂನ್ ಅವರ ಈ ಸಮಯಪ್ರಜ್ಞೆ ಮತ್ತು ರಶ್ಮಿಕಾ ಮೇಲಿನ ಕಾಳಜಿಗೆ ಇಂಟರ್ನೆಟ್‌ನಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ‘ತಂಗಿಯನ್ನು ರಕ್ಷಿಸಿದ ರೀತಿಯಲ್ಲಿ ಕೃತಿ ಸನನ್ ಅವರು ರಶ್ಮಿಕಾ ಮಂದಣ್ಣ ಮೇಲೆ ಕಾಳಜಿ ತೋರಿಸಿದ್ದಾರೆ’ ಎಂಬ ಕಮೆಂಟ್​ಗಳು ಬಂದಿವೆ. ಮತ್ತೊಂದೆಡೆ, ಮಾಲ್‌ನಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಮಾಡದ ಆಯೋಜಕರ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ‘ಕಾಕ್‌ಟೇಲ್ 2’ ಚಿತ್ರದಲ್ಲಿ ಸಲಿಂಗಿಗಳ ಪಾತ್ರ ಮಾಡಿದ್ದಾರಾ ರಶ್ಮಿಕಾ ಮಂದಣ್ಣ, ಕೃತಿ ಸನನ್?

ಈ ಗದ್ದಲದ ಬೆನ್ನಲ್ಲೇ ಚಿತ್ರತಂಡವು ಸಿನಿಮಾದ ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭವಾಗಿರುವುದಾಗಿ ಘೋಷಿಸಿದೆ. ಈ ಚಿತ್ರವು 2012ರಲ್ಲಿ ಬಿಡುಗಡೆಯಾಗಿದ್ದ ಸೂಪರ್ ಹಿಟ್ ‘ಕಾಕ್‌ಟೇಲ್’ ಚಿತ್ರದ ಮುಂದುವರಿದ ಭಾಗವಲ್ಲ, ಬದಲಿಗೆ ಇದೊಂದು ಸಂಪೂರ್ಣ ಹೊಸ ಕಥೆಯನ್ನೊಳಗೊಂಡ ‘ಸ್ಪಿರಿಚುಯಲ್ ಸೀಕ್ವೆಲ್’ ಆಗಿದೆ. ಹೋಮಿ ಅದಾಜಾನಿಯಾ ಅವರು ನಿರ್ದೇಶನದ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ?
ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ?
ಇಂದು ಈ ರಾಶಿಯವರು ಕೆಲಸಗಳಲ್ಲಿ ಅವಸರ ಮಾಡಬೇಡಿ
ಇಂದು ಈ ರಾಶಿಯವರು ಕೆಲಸಗಳಲ್ಲಿ ಅವಸರ ಮಾಡಬೇಡಿ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮರು ಅರ್ಜಿ: ಸಿಎಂ ಡಿಕೆಶಿ ಮಾಹಿತಿ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮರು ಅರ್ಜಿ: ಸಿಎಂ ಡಿಕೆಶಿ ಮಾಹಿತಿ
ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​ ನೀಡಿದ ಸಿಎಂ ಡಿಕೆ ಶಿವಕುಮಾರ್​
ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​ ನೀಡಿದ ಸಿಎಂ ಡಿಕೆ ಶಿವಕುಮಾರ್​
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!