AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಹಿದ್ ಕಪೂರ್ ಬಟ್ಟೆ ಹರಿದು, ರಶ್ಮಿಕಾ ಮೇಲೆ ಮುಗಿಬಿದ್ದ ಫ್ಯಾನ್ಸ್; ವಿಡಿಯೋ ವೈರಲ್

‘ಕಾಕ್‌ಟೇಲ್ 2’ ಸಿನಿಮಾ ಜೂನ್ 19ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಶಾಹಿದ್ ಕಪೂರ್, ರಶ್ಮಿಕಾ ಮಂದಣ್ಣ, ಕೃತಿ ಸನನ್ ಅವರು ಈ ಚಿತ್ರದ ಪ್ರಚಾರಕ್ಕಾಗಿ ತೆರಳಿದ್ದ ವೇಳೆ ಅಭಿಮಾನಿಗಳನ್ನು ನಿಯಂತ್ರಿಸುವುದೇ ಕಷ್ಟವಾಗಿದೆ. ಪರಿಸ್ಥಿತಿ ಕೈ ಮೀರುವ ಹಂತಕ್ಕೆ ಹೋಗಿದೆ. ವಿಡಿಯೋಗಳು ವೈರಲ್ ಆಗಿವೆ.

ಶಾಹಿದ್ ಕಪೂರ್ ಬಟ್ಟೆ ಹರಿದು, ರಶ್ಮಿಕಾ ಮೇಲೆ ಮುಗಿಬಿದ್ದ ಫ್ಯಾನ್ಸ್; ವಿಡಿಯೋ ವೈರಲ್
Cocktail 2 Pune Event
ಮದನ್​ ಕುಮಾರ್​
|

Updated on: Jun 14, 2026 | 9:05 AM

Share

ಬಾಲಿವುಡ್‌ನ ಬಹುನಿರೀಕ್ಷಿತ ‘ಕಾಕ್‌ಟೇಲ್ 2’ (Cocktail 2) ಚಿತ್ರದ ಪ್ರಚಾರದ ವೇಳೆ ಭಾರಿ ನೂಕುನುಗ್ಗಲು ಉಂಟಾಗಿದೆ. ಈ ಚಿತ್ರದಲ್ಲಿ ನಟಿಸಿರುವ ಶಾಹಿದ್ ಕಪೂರ್, ಕೃತಿ ಸನನ್ ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ಅವರು ಚಿತ್ರದ ಪ್ರಚಾರಕ್ಕಾಗಿ ಪುಣೆಯ ಮಾಲ್ ಒಂದರಲ್ಲಿ ಆಯೋಜಿಸಲಾಗಿದ್ದ ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ನೆರೆದಿದ್ದ ಅಭಿಮಾನಿಗಳು ಮಿತಿ ಮೀರಿ ವರ್ತಿಸಿದ್ದಾರೆ. ಜನರು ಸೆಕ್ಯೂರಿಟಿ ಬ್ಯಾರಿಕೇಡ್‌ಗಳನ್ನು ಮುರಿದು ನಟ-ನಟಿಯರತ್ತ ನುಗ್ಗಿದ್ದಾರೆ. ಪರಿಸ್ಥಿತಿ ಕೈಮೀರಿದ ಹಿನ್ನೆಲೆಯಲ್ಲಿ ರಶ್ಮಿಕಾ, ಶಾಹಿದ್ ಕಪೂರ್ ಮತ್ತು ಕೃತಿ ಸನನ್ (Kriti Sanon) ಅವರು ಅರ್ಧದಲ್ಲೇ ಕಾರ್ಯಕ್ರಮ ಮೊಟಕುಗೊಳಿಸಿ ಹೊರನಡೆದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋಗಳಲ್ಲಿ, ಅಭಿಮಾನಿಗಳು ನೆಚ್ಚಿನ ತಾರೆಯರೊಂದಿಗೆ ಫೋಟೋ ತೆಗೆದುಕೊಳ್ಳಲು ಮುಗಿಬಿದ್ದಿರುವುದು ಕಂಡುಬಂದಿದೆ. ಜನಜಂಗುಳಿಯ ಮಧ್ಯೆ ಸಿಲುಕಿದ ಶಾಹಿದ್ ಕಪೂರ್ ಅವರ ಬಟ್ಟೆಯನ್ನು ಎಳೆಯುವಷ್ಟರ ಮಟ್ಟಿಗೆ ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು, ತೀವ್ರ ಆಕ್ರೋಶಗೊಂಡ ಶಾಹಿದ್ ಅವರು ಜನರನ್ನು ತಳ್ಳುತ್ತಾ ಮುಂದೆ ಸಾಗಿದ್ದಾರೆ.

ಅತಿಯಾದ ಜನದಟ್ಟಣೆ ಮತ್ತು ತಳ್ಳಾಟದ ಮಧ್ಯೆ, ಕೃತಿ ಸನನ್ ಅವರು ಸಹನಟಿ ರಶ್ಮಿಕಾ ಮಂದಣ್ಣ ಅವರನ್ನು ಭದ್ರವಾಗಿ ಹಿಡಿದುಕೊಂಡು ರಕ್ಷಿಸುತ್ತಾ ಮುನ್ನಡೆದಿದ್ದಾರೆ. ಜನಸಮೂಹದಿಂದ ರಶ್ಮಿಕಾಗೆ ಯಾವುದೇ ತೊಂದರೆಯಾಗದಂತೆ ಕೃತಿ ತುಂಬಾ ಜಾಗರೂಕತೆಯಿಂದ ಅವರನ್ನು ಮುನ್ನಡೆಸಿದ್ದು, ಇಬ್ಬರು ನಟಿಯರು ಒಬ್ಬರಿಗೊಬ್ಬರು ರಕ್ಷಣೆ ನೀಡುತ್ತಾ ಭದ್ರತಾ ಸಿಬ್ಬಂದಿಯ ನೆರವಿನಿಂದ ಮಾಲ್‌ನಿಂದ ಹೊರಬಂದಿದ್ದಾರೆ.

ವೈರಲ್ ವಿಡಿಯೋ:

ಕೃತಿ ಸನೂನ್ ಅವರ ಈ ಸಮಯಪ್ರಜ್ಞೆ ಮತ್ತು ರಶ್ಮಿಕಾ ಮೇಲಿನ ಕಾಳಜಿಗೆ ಇಂಟರ್ನೆಟ್‌ನಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ‘ತಂಗಿಯನ್ನು ರಕ್ಷಿಸಿದ ರೀತಿಯಲ್ಲಿ ಕೃತಿ ಸನನ್ ಅವರು ರಶ್ಮಿಕಾ ಮಂದಣ್ಣ ಮೇಲೆ ಕಾಳಜಿ ತೋರಿಸಿದ್ದಾರೆ’ ಎಂಬ ಕಮೆಂಟ್​ಗಳು ಬಂದಿವೆ. ಮತ್ತೊಂದೆಡೆ, ಮಾಲ್‌ನಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಮಾಡದ ಆಯೋಜಕರ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ‘ಕಾಕ್‌ಟೇಲ್ 2’ ಚಿತ್ರದಲ್ಲಿ ಸಲಿಂಗಿಗಳ ಪಾತ್ರ ಮಾಡಿದ್ದಾರಾ ರಶ್ಮಿಕಾ ಮಂದಣ್ಣ, ಕೃತಿ ಸನನ್?

ಈ ಗದ್ದಲದ ಬೆನ್ನಲ್ಲೇ ಚಿತ್ರತಂಡವು ಸಿನಿಮಾದ ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭವಾಗಿರುವುದಾಗಿ ಘೋಷಿಸಿದೆ. ಈ ಚಿತ್ರವು 2012ರಲ್ಲಿ ಬಿಡುಗಡೆಯಾಗಿದ್ದ ಸೂಪರ್ ಹಿಟ್ ‘ಕಾಕ್‌ಟೇಲ್’ ಚಿತ್ರದ ಮುಂದುವರಿದ ಭಾಗವಲ್ಲ, ಬದಲಿಗೆ ಇದೊಂದು ಸಂಪೂರ್ಣ ಹೊಸ ಕಥೆಯನ್ನೊಳಗೊಂಡ ‘ಸ್ಪಿರಿಚುಯಲ್ ಸೀಕ್ವೆಲ್’ ಆಗಿದೆ. ಹೋಮಿ ಅದಾಜಾನಿಯಾ ಅವರು ನಿರ್ದೇಶನದ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ
RSS ನೋಂದಣಿ ಆಗಿಲ್ಲ, ಆಗೋದು ಇಲ್ಲ: ಪ್ರಿಯಾಂಕ್ ಖರ್ಗೆ ಸಂತೋಷ್​​ ತಿರುಗೇಟು
RSS ನೋಂದಣಿ ಆಗಿಲ್ಲ, ಆಗೋದು ಇಲ್ಲ: ಪ್ರಿಯಾಂಕ್ ಖರ್ಗೆ ಸಂತೋಷ್​​ ತಿರುಗೇಟು
'ವಂದೇ ಮಾತರಂ' ಗೀತೆಗೆ ಅವಮಾನಿಸಿದರೇ ಸೋನಿಯಾ ಗಾಂಧಿ?
'ವಂದೇ ಮಾತರಂ' ಗೀತೆಗೆ ಅವಮಾನಿಸಿದರೇ ಸೋನಿಯಾ ಗಾಂಧಿ?
ನಾನು ಮಾತಾಡಲ್ಲ ಅಂದ್ರೆ ಸೈಲೆಂಟ್ ಆಗಿದ್ದೀನಿ ಅಂತಾ ಅರ್ಥ ಅಲ್ಲ ಎಂದ ಸಿದ್ದು
ನಾನು ಮಾತಾಡಲ್ಲ ಅಂದ್ರೆ ಸೈಲೆಂಟ್ ಆಗಿದ್ದೀನಿ ಅಂತಾ ಅರ್ಥ ಅಲ್ಲ ಎಂದ ಸಿದ್ದು
ಸ್ವಾತಂತ್ರ್ಯ ದಿನಾಚರಣೆ ವೇಳೆ ಅಸ್ವಸ್ಥಗೊಂಡ ಆಂಧ್ರ ಸಚಿವ
ಸ್ವಾತಂತ್ರ್ಯ ದಿನಾಚರಣೆ ವೇಳೆ ಅಸ್ವಸ್ಥಗೊಂಡ ಆಂಧ್ರ ಸಚಿವ
6ನೇ ತರಗತಿಯಿಂದ AI ಶಿಕ್ಷಣ, AI ವಿಶ್ವವಿದ್ಯಾಲಯ: ಸಿಎಂ ಮಹತ್ವದ ಘೋಷಣೆ
6ನೇ ತರಗತಿಯಿಂದ AI ಶಿಕ್ಷಣ, AI ವಿಶ್ವವಿದ್ಯಾಲಯ: ಸಿಎಂ ಮಹತ್ವದ ಘೋಷಣೆ
ಸರ್ಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ ಏನಂದ್ರು?
ಸರ್ಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ ಏನಂದ್ರು?
ಈದ್ಗಾ ಮೈದಾನದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಚಿವ ಜಮೀರ್ ಭಾಗಿ
ಈದ್ಗಾ ಮೈದಾನದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಚಿವ ಜಮೀರ್ ಭಾಗಿ