ಜನರು ‘ಸಿಂಗಂ’ ಅಂದುಕೊಂಡಿದ್ರು; ಆದ್ರೆ ರಣಬೀರ್​ ಕಪೂರ್​ ಆಗಿದ್ದು ಕೇವಲ ‘ಚಿಂಗಂ’

ಇತ್ತೀಚೆಗೆ ರಣಬೀರ್​ ಕಪೂರ್​ ಅವರು ಪೊಲೀಸ್​ ಗೆಟಪ್​ ಧರಿಸಿ ರೋಹಿತ್​ ಶೆಟ್ಟಿ ಜೊತೆ ಕಾಣಿಸಿಕೊಂಡಿದ್ದರು. ಅದನ್ನು ಕಂಡು ಜನರು ಏನೇನೂ ಕಲ್ಪನೆ ಮಾಡಿಕೊಂಡಿದ್ದರು. ‘ಸಿಂಗಂ ಅಗೇನ್​’ ಚಿತ್ರದಲ್ಲಿ ರಣಬೀರ್​ ಕಪೂರ್​ ಕೂಡ ನಟಿಸುತ್ತಿದ್ದಾರೆ ಎಂದು ಫ್ಯಾನ್ಸ್ ಊಹಿಸಿದ್ದರು. ಆದರೆ ಅದು ನಿಜವಾಗಿಲ್ಲ.

ಜನರು ‘ಸಿಂಗಂ’ ಅಂದುಕೊಂಡಿದ್ರು; ಆದ್ರೆ ರಣಬೀರ್​ ಕಪೂರ್​ ಆಗಿದ್ದು ಕೇವಲ ‘ಚಿಂಗಂ’
Ranbir Kapoor
Follow us
|

Updated on: Jan 05, 2024 | 4:07 PM

2023ರಲ್ಲಿ ರಣಬೀರ್​ ಕಪೂರ್​ (Ranbir Kapoor) ಅವರಿಗೆ ‘ಅನಿಮಲ್​’ ಸಿನಿಮಾದ ಮೂಲಕ ಅಭೂತಪೂರ್ವ ಗೆಲುವು ಸಿಕ್ಕಿದೆ. ಆ ಸಿನಿಮಾ 500 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿ ಬೀಗಿದೆ. ಹಾಗಾಗಿ ಅವರ ಮುಂಬರುವ ಸಿನಿಮಾಗಳ ಮೇಲೆ ನಿರೀಕ್ಷೆ ಜೋರಾಗಿದೆ. ನಿರ್ದೇಶಕ ರೋಹಿತ್​ ಶೆಟ್ಟಿ (Rohit Shetty) ಜೊತೆ ಸೇರಿ ರಣಬೀರ್​ ಕಪೂರ್ ಅವರು ‘ಸಿಂಗಂ’ ಆಗುತ್ತಾರೆ ಎಂದು ಜನರು ಊಹಿಸಿದ್ದರು. ಆ ಊಹೆಗೆ ಕಾರಣ ಆಗಿದ್ದು ಕೆಲವು ಫೋಟೋಗಳು. ಆದರೆ ಜನರ ಊಹೆ ನಿಜವಾಗಿಲ್ಲ. ರಣಬೀರ್​ ಕಪೂರ್​ ‘ಸಿಂಗಂ’ ಆಗಿಲ್ಲ. ಅವರು ಬರೀ ‘ಚಿಂಗಂ’ ಆಗಿದ್ದಾರೆ!

ರೋಹಿತ್​ ಶೆಟ್ಟಿ ನಿರ್ದೇಶನದಲ್ಲಿ ‘ಸಿಂಗಂ ಅಗೇನ್​’ ಸಿನಿಮಾ ಮೂಡಿಬರುತ್ತಿದೆ. ಇದರಲ್ಲಿ ಪೊಲೀಸ್​ ಕಹಾನಿ ಇರಲಿದೆ. ದೀಪಿಕಾ ಪಡುಕೋಣೆ, ಅಕ್ಷಯ್​ ಕುಮಾರ್​, ಅಜಯ್​ ದೇವಗನ್​, ರಣವೀರ್​ ಸಿಂಗ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ರಣಬೀರ್​ ಕಪೂರ್​ ಅವರು ಪೊಲೀಸ್​ ಗೆಟಪ್​ ಧರಿಸಿ ರೋಹಿತ್​ ಶೆಟ್ಟಿ ಜೊತೆ ಕಾಣಿಸಿಕೊಂಡಿದ್ದರು. ಅದನ್ನು ಕಂಡು ಜನರು ಏನೇನೋ ಕಲ್ಪನೆ ಮಾಡಿಕೊಂಡಿದ್ದರು. ‘ಸಿಂಗಂ ಅಗೇನ್​’ ಚಿತ್ರದಲ್ಲಿ ರಣಬೀರ್​ ಕಪೂರ್​ ಕೂಡ ನಟಿಸುತ್ತಿದ್ದಾರೆ ಎಂದು ಫ್ಯಾನ್ಸ್ ಊಹಿಸಿದ್ದರು. ಆದರೆ ಅದು ನಿಜವಾಗಿಲ್ಲ.

ಇದನ್ನೂ ಓದಿ: ಹಿರಿದಾಯಿತು ‘ಸಿಂಗಂ ಅಗೇನ್’ ಸಿನಿಮಾದ ಪಾತ್ರವರ್ಗ

ರಣಬೀರ್​ ಕಪೂರ್​ ಅವರು ಪೊಲೀಸ್​ ವೇಷ ಧರಿಸಿರುವುದು ಒಂದು ಜಾಹೀರಾತಿಗಾಗಿ ಮಾತ್ರ! ಇನ್​ಶ್ಯೂರೆನ್ಸ್​ ಕಂಪನಿಯ ಜಾಹೀರಾತಿನಲ್ಲಿ ರೋಹಿತ್​ ಶೆಟ್ಟಿ ನಿರ್ದೇಶಕನಾಗಿ ಕಾಣಿಸಿಕೊಂಡಿದ್ದಾರೆ. ‘ಚಿಂಗಂ ಕೆ’ ಎಂಬ ಪೊಲೀಸ್​ ಅಧಿಕಾರಿಯ ಪಾತ್ರವನ್ನು ರಣಬೀರ್​ ಕಪೂರ್​ ಮಾಡಿದ್ದಾರೆ. ರೋಹಿತ್​ ಶೆಟ್ಟಿಯ ಸಿನಿಮಾ ಶೂಟಿಂಗ್​ ವೇಳೆ ಯಾವ ಅವಘಡ ಬೇಕಾದರೂ ಆಗಬಹುದು. ಹಾಗಾಗಿ ಇನ್​ಶ್ಯೂರೆನ್ಸ್​ ಮಾಡಿಸುವುದು ಅಗತ್ಯ ಎಂಬ ಸಂದೇಶ ನೀಡುವ ರೀತಿಯಲ್ಲಿ ಈ ಜಾಹೀರಾತು ಮೂಡಿಬಂದಿದೆ.

ಇದನ್ನೂ ಓದಿ: ‘ಸಿಂಗಂ ಅಗೇನ್​’ ಸಿನಿಮಾದಲ್ಲಿ ದೀಪಿಕಾ ಪಡುಕೋಣೆಗೆ ಶಕ್ತಿ ಶೆಟ್ಟಿ ಪಾತ್ರ

‘ಅನಿಮಲ್​’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಣಬೀರ್​ ಕಪೂರ್​ ಅವರ ಡಿಮ್ಯಾಂಡ್​ ಹೆಚ್ಚಾಗಿದೆ. ಹಲವು ಬ್ರ್ಯಾಂಡ್​ಗಳಿಗೆ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ. ಜಾಹೀರಾತುಗಳಲ್ಲಿ ನಟಿಸುವ ಅವರಿಗೆ ಕೋಟ್ಯಂತರ ರೂಪಾಯಿ ಹಣ ಸಿಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!