AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರು ‘ಸಿಂಗಂ’ ಅಂದುಕೊಂಡಿದ್ರು; ಆದ್ರೆ ರಣಬೀರ್​ ಕಪೂರ್​ ಆಗಿದ್ದು ಕೇವಲ ‘ಚಿಂಗಂ’

ಇತ್ತೀಚೆಗೆ ರಣಬೀರ್​ ಕಪೂರ್​ ಅವರು ಪೊಲೀಸ್​ ಗೆಟಪ್​ ಧರಿಸಿ ರೋಹಿತ್​ ಶೆಟ್ಟಿ ಜೊತೆ ಕಾಣಿಸಿಕೊಂಡಿದ್ದರು. ಅದನ್ನು ಕಂಡು ಜನರು ಏನೇನೂ ಕಲ್ಪನೆ ಮಾಡಿಕೊಂಡಿದ್ದರು. ‘ಸಿಂಗಂ ಅಗೇನ್​’ ಚಿತ್ರದಲ್ಲಿ ರಣಬೀರ್​ ಕಪೂರ್​ ಕೂಡ ನಟಿಸುತ್ತಿದ್ದಾರೆ ಎಂದು ಫ್ಯಾನ್ಸ್ ಊಹಿಸಿದ್ದರು. ಆದರೆ ಅದು ನಿಜವಾಗಿಲ್ಲ.

ಜನರು ‘ಸಿಂಗಂ’ ಅಂದುಕೊಂಡಿದ್ರು; ಆದ್ರೆ ರಣಬೀರ್​ ಕಪೂರ್​ ಆಗಿದ್ದು ಕೇವಲ ‘ಚಿಂಗಂ’
Ranbir Kapoor
ಮದನ್​ ಕುಮಾರ್​
|

Updated on: Jan 05, 2024 | 4:07 PM

Share

2023ರಲ್ಲಿ ರಣಬೀರ್​ ಕಪೂರ್​ (Ranbir Kapoor) ಅವರಿಗೆ ‘ಅನಿಮಲ್​’ ಸಿನಿಮಾದ ಮೂಲಕ ಅಭೂತಪೂರ್ವ ಗೆಲುವು ಸಿಕ್ಕಿದೆ. ಆ ಸಿನಿಮಾ 500 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿ ಬೀಗಿದೆ. ಹಾಗಾಗಿ ಅವರ ಮುಂಬರುವ ಸಿನಿಮಾಗಳ ಮೇಲೆ ನಿರೀಕ್ಷೆ ಜೋರಾಗಿದೆ. ನಿರ್ದೇಶಕ ರೋಹಿತ್​ ಶೆಟ್ಟಿ (Rohit Shetty) ಜೊತೆ ಸೇರಿ ರಣಬೀರ್​ ಕಪೂರ್ ಅವರು ‘ಸಿಂಗಂ’ ಆಗುತ್ತಾರೆ ಎಂದು ಜನರು ಊಹಿಸಿದ್ದರು. ಆ ಊಹೆಗೆ ಕಾರಣ ಆಗಿದ್ದು ಕೆಲವು ಫೋಟೋಗಳು. ಆದರೆ ಜನರ ಊಹೆ ನಿಜವಾಗಿಲ್ಲ. ರಣಬೀರ್​ ಕಪೂರ್​ ‘ಸಿಂಗಂ’ ಆಗಿಲ್ಲ. ಅವರು ಬರೀ ‘ಚಿಂಗಂ’ ಆಗಿದ್ದಾರೆ!

ರೋಹಿತ್​ ಶೆಟ್ಟಿ ನಿರ್ದೇಶನದಲ್ಲಿ ‘ಸಿಂಗಂ ಅಗೇನ್​’ ಸಿನಿಮಾ ಮೂಡಿಬರುತ್ತಿದೆ. ಇದರಲ್ಲಿ ಪೊಲೀಸ್​ ಕಹಾನಿ ಇರಲಿದೆ. ದೀಪಿಕಾ ಪಡುಕೋಣೆ, ಅಕ್ಷಯ್​ ಕುಮಾರ್​, ಅಜಯ್​ ದೇವಗನ್​, ರಣವೀರ್​ ಸಿಂಗ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ರಣಬೀರ್​ ಕಪೂರ್​ ಅವರು ಪೊಲೀಸ್​ ಗೆಟಪ್​ ಧರಿಸಿ ರೋಹಿತ್​ ಶೆಟ್ಟಿ ಜೊತೆ ಕಾಣಿಸಿಕೊಂಡಿದ್ದರು. ಅದನ್ನು ಕಂಡು ಜನರು ಏನೇನೋ ಕಲ್ಪನೆ ಮಾಡಿಕೊಂಡಿದ್ದರು. ‘ಸಿಂಗಂ ಅಗೇನ್​’ ಚಿತ್ರದಲ್ಲಿ ರಣಬೀರ್​ ಕಪೂರ್​ ಕೂಡ ನಟಿಸುತ್ತಿದ್ದಾರೆ ಎಂದು ಫ್ಯಾನ್ಸ್ ಊಹಿಸಿದ್ದರು. ಆದರೆ ಅದು ನಿಜವಾಗಿಲ್ಲ.

ಇದನ್ನೂ ಓದಿ: ಹಿರಿದಾಯಿತು ‘ಸಿಂಗಂ ಅಗೇನ್’ ಸಿನಿಮಾದ ಪಾತ್ರವರ್ಗ

ರಣಬೀರ್​ ಕಪೂರ್​ ಅವರು ಪೊಲೀಸ್​ ವೇಷ ಧರಿಸಿರುವುದು ಒಂದು ಜಾಹೀರಾತಿಗಾಗಿ ಮಾತ್ರ! ಇನ್​ಶ್ಯೂರೆನ್ಸ್​ ಕಂಪನಿಯ ಜಾಹೀರಾತಿನಲ್ಲಿ ರೋಹಿತ್​ ಶೆಟ್ಟಿ ನಿರ್ದೇಶಕನಾಗಿ ಕಾಣಿಸಿಕೊಂಡಿದ್ದಾರೆ. ‘ಚಿಂಗಂ ಕೆ’ ಎಂಬ ಪೊಲೀಸ್​ ಅಧಿಕಾರಿಯ ಪಾತ್ರವನ್ನು ರಣಬೀರ್​ ಕಪೂರ್​ ಮಾಡಿದ್ದಾರೆ. ರೋಹಿತ್​ ಶೆಟ್ಟಿಯ ಸಿನಿಮಾ ಶೂಟಿಂಗ್​ ವೇಳೆ ಯಾವ ಅವಘಡ ಬೇಕಾದರೂ ಆಗಬಹುದು. ಹಾಗಾಗಿ ಇನ್​ಶ್ಯೂರೆನ್ಸ್​ ಮಾಡಿಸುವುದು ಅಗತ್ಯ ಎಂಬ ಸಂದೇಶ ನೀಡುವ ರೀತಿಯಲ್ಲಿ ಈ ಜಾಹೀರಾತು ಮೂಡಿಬಂದಿದೆ.

ಇದನ್ನೂ ಓದಿ: ‘ಸಿಂಗಂ ಅಗೇನ್​’ ಸಿನಿಮಾದಲ್ಲಿ ದೀಪಿಕಾ ಪಡುಕೋಣೆಗೆ ಶಕ್ತಿ ಶೆಟ್ಟಿ ಪಾತ್ರ

‘ಅನಿಮಲ್​’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಣಬೀರ್​ ಕಪೂರ್​ ಅವರ ಡಿಮ್ಯಾಂಡ್​ ಹೆಚ್ಚಾಗಿದೆ. ಹಲವು ಬ್ರ್ಯಾಂಡ್​ಗಳಿಗೆ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ. ಜಾಹೀರಾತುಗಳಲ್ಲಿ ನಟಿಸುವ ಅವರಿಗೆ ಕೋಟ್ಯಂತರ ರೂಪಾಯಿ ಹಣ ಸಿಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು