AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ನಿಲ್ದಾಣದಲ್ಲಿ ಕಾರ್ತಿಕ್​ ಆರ್ಯನ್​ಗೆ​ ದುಂಬಾಲುಬಿದ್ದ ಲೇಡಿ ಫ್ಯಾನ್ಸ್​; ವೈರಲ್​ ಆಯ್ತು ವಿಡಿಯೋ

ಯುವತಿಯೊಬ್ಬಳು ಒಂದು ದೊಡ್ಡ ಹೂಗುಚ್ಚ ಹಿಡಿದು ಕಾರ್ತಿಕ್​ಗೆ ನೀಡೋಕೆ ಬಂದಿದ್ದಾಳೆ. ಆದರೆ, ಕಾರ್ತಿಕ್​ ಇದನ್ನು ಸ್ವೀಕರಿಸಿಲ್ಲ. ಬದಲಿಗೆ ಧನ್ಯವಾದ ಹೇಳಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಕಾರ್ತಿಕ್​ ಆರ್ಯನ್​ಗೆ​ ದುಂಬಾಲುಬಿದ್ದ ಲೇಡಿ ಫ್ಯಾನ್ಸ್​; ವೈರಲ್​ ಆಯ್ತು ವಿಡಿಯೋ
ಕಾರ್ತಿಕ್​ ಆರ್ಯನ್
TV9 Web
| Edited By: |

Updated on:Mar 22, 2022 | 2:37 PM

Share

ಸೆಲೆಬ್ರಿಟಿಗಳು ಸಾರ್ವಜನಿಕವಾಗಿ ಕಾಣಿಸಿಕೊಂಡರೆ ಸಾಕು, ಅವರನ್ನು ನೋಡೋಕೆ ಅಭಿಮಾನಿಗಳು ಮುತ್ತಿಕೊಳ್ಳುತ್ತಾರೆ. ಇದು ಎಲ್ಲ ಸೆಲೆಬ್ರಿಟಿಗಳಿಗೂ ಇಷ್ಟ ಆಗುವುದಿಲ್ಲ. ಕೆಲವರು ಫ್ಯಾನ್ಸ್ ಕಣ್ಣಿಗೆ ಬೀಳದೆ ತೆರಳೋಕೆ ಪ್ರಯತ್ನ ಮಾಡುತ್ತಾರೆ. ಇನ್ನೂ ಕೆಲವರು ಫ್ಯಾನ್ಸ್​ ಕಂಡು ಖುಷಿಪಡುತ್ತಾರೆ. ಈಗ ಬಾಲಿವುಡ್​ ನಟ ಕಾರ್ತಿಕ್​ ಆರ್ಯನ್​ಗೆ (Karthik Aryan) ವಿಮಾನ ನಿಲ್ದಾಣದಲ್ಲಿ (Airport) ಲೇಡಿ ಫ್ಯಾನ್ಸ್​ ಬೆಂಬಿಡದೆ ಕಾಡಿದ್ದಾರೆ. ರೋಸ್​ ನೀಡಿ ತಮ್ಮ ಎಗ್ಸೈಟ್​ಮೆಂಟ್​ ಹೊರಹಾಕಿದ್ದಾರೆ. ಅವರಿಂದ ಎಷ್ಟೇ ತಪ್ಪಿಸಿಕೊಂಡರೂ ಸಾಧ್ಯವಾಗಿಲ್ಲ. ಈ ವಿಡಿಯೋ ಸಖತ್​ ವೈರಲ್​ ಆಗುತ್ತಿದೆ.

ಕಾರ್ತಿಕ್​ ಆರ್ಯನ್​ ಅವರು ಮಂಗಳವಾರ (ಮಾರ್ಚ್​ 22) ಮುಂಬೈ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಅವರು ಪಿಂಕ್​ ಕಲರ್ ಸ್ವೆಟರ್​ ಹಾಕಿಕೊಂಡಿದ್ದರು. ಮುಖಕ್ಕೆ ಮಾಸ್ಕ್​ ಧರಿಸಿದ್ದರು. ಗುರುತು ಕಾಣಿಸಿದ ರೀತಿಯಲ್ಲಿ ಕಾರ್ತಿಕ್ ರೆಡಿ ಆಗಿದ್ದರು. ಆದಾಗ್ಯೂ ಕೆಲ ಫ್ಯಾನ್ಸ್ ಅವರನ್ನು ಪತ್ತೆ ಹಚ್ಚಿದ್ದಾರೆ. ಏರ್​ಪೋರ್ಟ್​ನಿಂದ ಕಾರ್ತಿಕ್​ ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ಕಾರ್ತಿಕ್​ಗೆ ಗುಲಾಬಿ ಹೂವು ನೀಡಿದ್ದಾರೆ. ಈ ವೇಳೆ ಅಲ್ಲಿಯೇ ಇದ್ದ ಪಾಪರಾಜಿಗಳು ಗುಲಾಬಿ ಹೂವು ಕೊಟ್ಟ ಲೇಡಿ ಫ್ಯಾನ್ಸ್​ಗೆ ಪ್ರಪೋಸ್​ ಮಾಡುವಂತೆ ಕೋರಿದ್ದಾರೆ.

ಇಷ್ಟಕ್ಕೆ ಮುಗಿದಿಲ್ಲ. ಯುವತಿಯೊಬ್ಬಳು ಒಂದು ದೊಡ್ಡ ಹೂಗುಚ್ಚ ಹಿಡಿದು ಕಾರ್ತಿಕ್​ಗೆ ನೀಡೋಕೆ ಬಂದಿದ್ದಾಳೆ. ಆದರೆ, ಕಾರ್ತಿಕ್​ ಇದನ್ನು ಸ್ವೀಕರಿಸಿಲ್ಲ. ಬದಲಿಗೆ ಧನ್ಯವಾದ ಹೇಳಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್​ ವೈರಲ್​ ಆಗುತ್ತಿದೆ.

‘ನನ್ನ ಹೆಸರಿಗೆ ಹಲವು ಬಿರುದು ನೀಡಿರುವುದು ಖುಷಿಯ ವಿಚಾರ. ಕೆಲವೊಮ್ಮೆ ನಾನು ನೀಡಿದ ಪೋಸ್ ಕೂಡ ಟ್ರೆಂಡಿಂಗ್ ಆಗುತ್ತವೆ. ಜನರಿಂದ ತುಂಬಾ ಪ್ರೀತಿ ಸಿಗುತ್ತಿದೆ. ಇದಕ್ಕೆ ಖುಷಿ ಇದೆ. ನಾನು ತುಂಬಾನೇ ಲಕ್ಕಿ. ನನ್ನ ಹೆಸರಿಗೆ ಇನ್ನಷ್ಟು ಬಿರುದುಗಳು ಸಿಗಲಿ ಎಂದು ಆಶಿಸುತ್ತೇನೆ. ನಾನು ಅಭಿಮಾನಿಗಳ ನಿರೀಕ್ಷೆಗಳಿಗೆ ತಕ್ಕಂತೆ ಬದುಕುತ್ತೇನೆ’ ಎಂದು ಇತ್ತೀಚೆಗೆ ಕಾರ್ತಿಕ್​ ಆರ್ಯನ್ ಹೇಳಿದ್ದರು.

‘ಶೆಹಜಾದ’ ಸಿನಿಮಾದಲ್ಲಿ ಕಾರ್ತಿಕ್​ ನಟಿಸುತ್ತಿದ್ದಾರೆ. ಈ ಚಿತ್ರದ ಕೆಲಸಗಳು ಪೂರ್ಣಗೊಂಡಿವೆ. ಅಲ್ಲು ಅರ್ಜುನ್ ಹಾಗೂ ಪೂಜಾ ಹೆಗ್ಡೆ ನಟಿಸಿದ್ದ ‘ಅಲಾ ವೈಕುಂಟಪುರಮುಲೋ’ ಚಿತ್ರದ ರಿಮೇಕ್ ಇದಾಗಿದೆ. . ಈ ಚಿತ್ರ ನವೆಂಬರ್ 4ರಂದು ತೆರೆಗೆ ಬರುತ್ತಿದೆ. ಇದಲ್ಲದೆ, ‘ಭೂಲ್​ ಭುಲಯ್ಯ 2’, ‘ಫ್ರೆಡ್ಡಿ’ ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ.

ಇದನ್ನೂ ಓದಿ: ಕಾರ್ತಿಕ್​ ಆರ್ಯನ್​ಗೆ ಬರುತ್ತಿಲ್ಲ ಸಿನಿಮಾ ಆಫರ್​; ಕರಣ್​ ಜೋಹರ್​ ಜತೆಗಿನ ವೈಷಮ್ಯವೇ ಮುಳುವಾಯ್ತಾ?

Kartik Aaryan: ಲ್ಯಾಂಬೋರ್ಗಿನಿಯಲ್ಲಿ ತೆರಳಿ ರಸ್ತೆ ಬದಿ ತಿಂಡಿ ಸವಿದ ಕಾರ್ತಿಕ್ ಆರ್ಯನ್

Published On - 2:37 pm, Tue, 22 March 22

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ