AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌದಿಯಲ್ಲಿ ‘ಫಿರ್ ಹೇರಾ ಫೇರಿ’ ಸ್ಟೈಲ್​ನಲ್ಲಿ ನಿಂತ ಅಕ್ಷಯ್ ಕುಮಾರ್ ಅಭಿಮಾನಿ; ಅಕ್ಕಿ ರಿಯಾಕ್ಷನ್ ನೋಡಿ

ಈ ವಿಡಿಯೋ ಶೇರ್ ಮಾಡಿಕೊಂಡಿರುವ ಅಕ್ಷಯ್ ಕುಮಾರ್ ಅವರು, ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ. ಸಿನಿಮೋತ್ಸವ ಆಯೋಜನೆ ಮಾಡಿದವರಿಗೂ ಹಾಗೂ ಫ್ಯಾನ್ಸ್​ಗೆ ಅಕ್ಷಯ್ ಕುಮಾರ್ ಧನ್ಯವಾದ ಅರ್ಪಿಸಿದ್ದಾರೆ.

ಸೌದಿಯಲ್ಲಿ ‘ಫಿರ್ ಹೇರಾ ಫೇರಿ’ ಸ್ಟೈಲ್​ನಲ್ಲಿ ನಿಂತ ಅಕ್ಷಯ್ ಕುಮಾರ್ ಅಭಿಮಾನಿ; ಅಕ್ಕಿ ರಿಯಾಕ್ಷನ್ ನೋಡಿ
ಅಕ್ಷಯ್ ಕುಮಾರ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 04, 2022 | 12:52 PM

2006ರಲ್ಲಿ ತೆರೆಗೆ ಬಂದ ಅಕ್ಷಯ್ ಕುಮಾರ್ (Akshay Kumar) ನಟನೆಯ ‘ಫಿರ್​ ಹೇರಾ ಫೇರಿ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈ ಸಿನಿಮಾದ ಅನೇಕ ದೃಶ್ಯಗಳು ಐಕಾನಿಕ್ ಎನಿಸಿಕೊಂಡಿವೆ. ಅದನ್ನು ಈಗಲೂ ನೋಡಿ ಫ್ಯಾನ್ಸ್ ಎಂಜಾಯ್ ಮಾಡುತ್ತಾರೆ. ಈ ಸಿನಿಮಾ ವಿದೇಶದಲ್ಲೂ ಸಖತ್ ಫೇಮಸ್. ಅದಕ್ಕೆ ಈಗ ತಾಜಾ ಉದಾಹರಣೆ ಸಿಕ್ಕಿದೆ. ಅಕ್ಷಯ್ ಕುಮಾರ್ ಅವರು ಸೌದಿಗೆ ತೆರಳಿದ್ದರು. ಈ ವೇಳೆ ಅಭಿಮಾನಿಯೋರ್ವ ‘ಫಿರ್​ ಹೇರಾ ಫೇರಿ’ ಚಿತ್ರದ (Phir Hera Pheri) ರಾಜು (ಅಕ್ಷಯ್ ಕುಮಾರ್) ಸ್ಟೈಲ್​​ನ ಕಾಪಿ ಮಾಡಿದ್ದಾನೆ. ಇದನ್ನು ಅಕ್ಷಯ್ ಕುಮಾರ್ ಕಾರಿನಲ್ಲಿ ಕುಳಿತು ನೋಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

‘ಫಿರ್​ ಹೇರಾ ಫೇರಿ’ ಚಿತ್ರದಲ್ಲಿ ರಾಜು ಆಗಿ ಅಕ್ಷಯ್ ಕುಮಾರ್ ಮಿಂಚಿದ್ದರು. ಸುನೀಲ್ ಶೆಟ್ಟಿ, ಪರೇಶ್ ರಾವಲ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ರಾಜು ಸ್ಟೈಲ್​ಗಳು ಈಗಲೂ ಫೇಮಸ್​. ಅಕ್ಷಯ್ ಕುಮಾರ್ ಅವರು ‘ರೆಡ್ ಸೀ ಫಿಲ್ಮ್​ ಫೆಸ್ಟಿವಲ್​’ಗಾಗಿ ಸೌದಿ ಅರೇಬಿಯಾಗೆ ತೆರಳಿದ್ದಾರೆ. ಈ ವೇಳೆ ಅವರು ಕಾರಿನಿಂದ ಹೊರಡುವಾಗ ಅಕ್ಷಯ್ ಕುಮಾರ್ ಅಭಿಮಾನಿಗಳು ನೆರೆದಿದ್ದರು. ಓರ್ವ ಅಭಿಮಾನಿ ಅಕ್ಷಯ್ ಕುಮಾರ್ ಅವರ ‘ಫಿರ್ ಹೇರಾ ಫೇರಿ’ ಚಿತ್ರದ ಸ್ಟೈಲ್​ನ ಕಾಪಿ ಮಾಡಿದ್ದಾನೆ. ಇದನ್ನು ನೋಡಿ ಅಕ್ಷಯ್​ ಕುಮಾರ್​ಗೆ ಖುಷಿಯಾಗಿದೆ.

ಇದನ್ನೂ ಓದಿ
Image
Mili Twitter Review: ಜಾನ್ವಿ ಕಪೂರ್​ ಅಭಿನಯಕ್ಕೆ ಕೇಳಿಬರ್ತಿದೆ ಮೆಚ್ಚುಗೆ; ‘ಮಿಲಿ’ ನೋಡಿ ವಿಮರ್ಶೆ ತಿಳಿಸಿದ ಸಿನಿಪ್ರಿಯರು
Image
Gandhada Gudi Twitter Review: ಹೇಗಿದೆ ‘ಗಂಧದ ಗುಡಿ’?; ಪ್ರೀಮಿಯರ್​ ಶೋ ಬಳಿಕ ಟ್ವಿಟರ್​ ಮೂಲಕ ವಿಮರ್ಶೆ ತಿಳಿಸಿದ ಫ್ಯಾನ್ಸ್​
Image
Ram Setu Twitter Review: ‘ರಾಮ್​ ಸೇತು’ ಟ್ವಿಟರ್​ ವಿಮರ್ಶೆ: ಅಕ್ಷಯ್​ ಕುಮಾರ್​ ಚಿತ್ರಕ್ಕೆ ಜನರಿಂದ ಸಿಕ್ತಾ ಪ್ರಶಂಸೆ?
Image
Goodbye Twitter Review: ರಶ್ಮಿಕಾ ಮೊದಲ ಹಿಂದಿ ಚಿತ್ರ ‘ಗುಡ್​ಬೈ’ ಹೇಗಿದೆ? ಜನರು ತಿಳಿಸಿದ ಟ್ವಿಟರ್ ವಿಮರ್ಶೆ ಇಲ್ಲಿದೆ ಓದಿ..

ಈ ವಿಡಿಯೋ ಶೇರ್ ಮಾಡಿಕೊಂಡಿರುವ ಅಕ್ಷಯ್ ಕುಮಾರ್ ಅವರು, ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ. ಸಿನಿಮೋತ್ಸವ ಆಯೋಜನೆ ಮಾಡಿದವರಿಗೂ ಹಾಗೂ ಫ್ಯಾನ್ಸ್​ಗೆ ಅಕ್ಷಯ್ ಕುಮಾರ್ ಧನ್ಯವಾದ ಅರ್ಪಿಸಿದ್ದಾರೆ. ಈ ವಿಡಿಯೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಇತ್ತೀಚೆಗೆ ಅಕ್ಷಯ್ ಕುಮಾರ್ ಅಭಿಮಾನಿಗಳಿಗೆ ಬೇಸರದ ಸಂಗತಿ ಸಿಕ್ಕಿತ್ತು. ನಿರ್ಮಾಪಕ ಫಿರೋಜ್ ನಾಡಿಯಾದ್ವಾಲಾ ‘ಹೇರಾ ಫೇರಿ 3’ ಸಿನಿಮಾ ಮಾಡಲು ಆಲೋಚನೆ ಮಾಡಿದ್ದಾರೆ. ಆದರೆ, ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ನಟಿಸುತ್ತಿಲ್ಲ. ಅವರ ಬದಲಿಗೆ ಕಾರ್ತಿಕ್ ಆರ್ಯನ್ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: ‘ರಾಮ್​ ಸೇತು’ ಎದುರು ಹೆಚ್ಚಾಯ್ತು ‘ಕಾಂತಾರ’ ಶೋಗಳ ಸಂಖ್ಯೆ; ಮತ್ತೆ ಎಡವಿದ ಅಕ್ಷಯ್ ಕುಮಾರ್

‘ಹೇರಾ ಫೇರಿ’ ಸರಣಿಯಿಂದ ಹೊರ ಬಂದಿದ್ದಕ್ಕೆ ಅಕ್ಷಯ್ ಕಾರಣ ತಿಳಿಸಿದ್ದರು. ‘ನನಗೆ ಸ್ಕ್ರಿಪ್ಟ್ ಇಷ್ಟ ಆಗಿಲ್ಲ. ಹೀಗಾಗಿ ಹೊರ ಬಂದೆ’ ಎನ್ನುವ ಮಾತನ್ನು ಅವರು ಹೇಳಿದ್ದರು. ಆದರೆ, ಇದರ ಅಸಲಿಯತ್ತು ಬೇರೆ ಇದೆ ಎನ್ನಲಾಗುತ್ತಿದೆ. ಅಕ್ಷಯ್ ಕುಮಾರ್ ಅವರು ಈ ಚಿತ್ರಕ್ಕಾಗಿ ಬರೋಬ್ಬರಿ 90 ಕೋಟಿ ರೂಪಾಯಿ ಡಿಮ್ಯಾಂಡ್ ಮಾಡಿದ್ದರು. ಆದರೆ, ಇದನ್ನು ನೀಡಲು ಫಿರೋಜ್ ನಿರಾಕರಿಸಿದ್ದಾರೆ. ಈ ಕಾರಣಕ್ಕೆ ಸಿನಿಮಾದಿಂದ ಹೊರ ನಡೆದಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್