ಸಲ್ಮಾನ್ ಖಾನ್ ಮನೆ ಮುಂದೆ ಇನ್ನೂ ಯಾರೂ ನಿಲ್ಲಂಗಿಲ್ಲ; ಪೊಲೀಸ್ ಇಲಾಖೆಯಿಂದ ಆದೇಶ

ಸಲ್ಮಾನ್ ಖಾನ್​ರ ಆತ್ಮೀಯ ಗೆಳೆಯ ಹಾಗೂ ಮ್ಯಾನೇಜರ್ ಆಗಿರುವ ಪ್ರಶಾಂತ್ ಗುಂಜಲ್ಕರ್ ಅವರಿಗೆ ಬೆದರಿಕೆ ಇ-ಮೇಲ್ ಬಂದಿದೆ. ಹೀಗಾಗಿ ಭದ್ರತೆ ಹೆಚ್ಚಿಸಲಾಗಿದೆ.

ಸಲ್ಮಾನ್ ಖಾನ್ ಮನೆ ಮುಂದೆ ಇನ್ನೂ ಯಾರೂ ನಿಲ್ಲಂಗಿಲ್ಲ; ಪೊಲೀಸ್ ಇಲಾಖೆಯಿಂದ ಆದೇಶ
ಸಲ್ಮಾನ್ ಖಾನ್
Follow us
|

Updated on: Mar 22, 2023 | 6:30 AM

ಸ್ಟಾರ್ ನಟರ ಮನೆ ಎದುರು ಫ್ಯಾನ್ಸ್ ನಿಲ್ಲೋದು ಕಾಮನ್. ಅದರಲ್ಲೂ ಶಾರುಖ್ ಖಾನ್ (Shah Rukh Khan) , ಸಲ್ಮಾನ್ ಖಾನ್ ಅವರಂತಹ ಸ್ಟಾರ್ ನಟರ ಮನೆ ಎದುರು ನಿತ್ಯವೂ ಅಭಿಮಾನಿಗಳು ಬಂದು ನಿಲ್ಲುತ್ತಾರೆ. ಕೆಲವೊಮ್ಮೆ ಸ್ಟಾರ್​ಗಳು ಬಂದು ಅಭಿಮಾನಿಗಳಿಗೆ ದರ್ಶನ ನೀಡುತ್ತಾರೆ. ಆದರೆ, ಈಗ ಸಲ್ಲು ಮನೆ ಎದುರು ಅಭಿಮಾನಿಗಳು ನಿಲ್ಲಂಗಿಲ್ಲ. ಈ ಬಗ್ಗೆ ಪೊಲೀಸರಿಂದಲೇ ಅಧಿಕೃತ ಆದೇಶ ಬಂದಿದೆ. ಸಲ್ಮಾನ್ ಖಾನ್​ (Shah Rukh Khan) ಮ್ಯಾನೇಜರ್​​ಗೆ ಇ-ಮೇಲ್ ಮೂಲಕ ಬೆದರಿಕೆ ಬಂದಿದೆ. ಈ ಕಾರಣಕ್ಕೆ ಪೊಲೀಸರು ಈ ಆದೇಶ ನೀಡಿದ್ದಾರೆ.

ಸಲ್ಮಾನ್ ಖಾನ್​ರ ಆತ್ಮೀಯ ಗೆಳೆಯ ಹಾಗೂ ಮ್ಯಾನೇಜರ್ ಆಗಿರುವ ಪ್ರಶಾಂತ್ ಗುಂಜಲ್ಕರ್ ಅವರಿಗೆ ಬೆದರಿಕೆ ಇ-ಮೇಲ್ ಬಂದಿದೆ. ‘ನಿಮ್ಮ ಬಾಸ್ ಜೊತೆ (ಸಲ್ಮಾನ್ ಖಾನ್) ಗೋಲ್ಡಿ ಅಣ್ಣ ಮಾತನಾಡಬೇಕು. ಲಾರೆನ್ಸ್​ ಸಂದರ್ಶನ ನೋಡಿದ್ದಾನಾ ಅವನು? ಸಂದರ್ಶನ ನೋಡದಿದ್ದರೆ ತೋರಿಸು. ಈ ಪ್ರಕರಣ ಮುಗಿಯಬೇಕು ಎಂದರೆ ನಿಮ್ಮ ಬಾಸ್ ಜೊತೆ ಮಾತನಾಡೋಕೆ ಹೇಳಿ’ ಎಂದು ಇ-ಮೇಲ್​ನಲ್ಲಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ: Salman Khan: ಸಲ್ಮಾನ್ ಖಾನ್​ಗೆ ಮತ್ತೆ ಬೆದರಿಕೆ, ಅದೇ ಗ್ಯಾಂಗ್​ ಆದರೆ ವಿಧಾನ ಬೇರೆ

‘ಇಬ್ಬರು ಸಹಾಯಕ ಪೊಲೀಸರು ಹಾಗೂ 8 ಕಾನ್ಸ್​ಟೇಬಲ್​ಗಳು ಸಲ್ಮಾನ್ ಖಾನ್ ಮನೆ ಬಳಿ ಇರುತ್ತಾರೆ. 24 ಗಂಟೆಯೂ ಅವರು ಡ್ಯೂಟಿ ಮಾಡಲಿದ್ದಾರೆ. ಅಭಿಮಾನಿಗಳು ಇಲ್ಲಿ ನೆರೆಯುವಂತಿಲ್ಲ. ಇದರಿಂದ ಅವರ ಅಭಿಮಾನಿಗಳಿಗೆ ಬೇಸರ ಆಗಿದೆ. ಕೆಲವರು ಭದ್ರತೆ ದೃಷ್ಟಿಯಿಂದ ಇದು ಒಳ್ಳೆಯ ನಿರ್ಧಾರ ಎಂದಿದ್ದಾರೆ.

ಲಾರೆನ್ಸ್ ಬಿಷ್ಣೋಯ್ ಸಂದರ್ಶನದಲ್ಲಿ ಹೇಳಿದ್ದೇನು?

‘ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಅವರು ಬಿಕಾನೇರ್‌ನಲ್ಲಿರುವ ನಮ್ಮ ದೇವಸ್ಥಾನಕ್ಕೆ ಹೋಗಿಯೇ ತಪ್ಪಾಯಿತು ಎಂದು ಹೇಳಬೇಕು. ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ನನ್ನ ಜೀವನದ ಗುರಿ. ಸಲ್ಮಾನ್ ಖಾನ್ ಅವರ ಭದ್ರತೆಯನ್ನು ತೆಗೆದುಹಾಕಿದರೆ ನಾನು ಅವರನ್ನು ಕೊಲ್ಲುತ್ತೇನೆ’ ಎಂದು ಬಿಷ್ಣೋಯ್ ಎಬಿಪಿ ನ್ಯೂಸ್​ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದ.

ಇದನ್ನೂ ಓದಿ: ಸಲ್ಮಾನ್ ಖಾನ್ ಒಟ್ಟೂ ಆಸ್ತಿ ಮೊತ್ತ ಇಷ್ಟೊಂದಾ? ಸ್ಟಾರ್ ನಟನ ಪ್ರಾಪರ್ಟಿ ಬಗ್ಗೆ ಇಲ್ಲಿದೆ ಮಾಹಿತಿ

‘ಸಲ್ಮಾನ್ ಖಾನ್ ಕ್ಷಮೆಯಾಚಿಸಿದರೆ ಅಲ್ಲಿಗೆ ವಿಷಯ ಕೊನೆಗೊಳ್ಳುತ್ತದೆ. ಸಲ್ಮಾನ್ ಅಹಂಕಾರಿ. ಮೂಸೆ ವಾಲಾ ಕೂಡ ಹಾಗೇ ಇದ್ದರು. ಸಲ್ಮಾನ್ ಖಾನ್‌ನ ಅಹಂ ರಾವಣನಿಗಿಂತ ದೊಡ್ಡದಾಗಿದೆ’ ಎಂದಿದ್ದ ಲಾರೆನ್ಸ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ