AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್ ಮನೆ ಮುಂದೆ ಇನ್ನೂ ಯಾರೂ ನಿಲ್ಲಂಗಿಲ್ಲ; ಪೊಲೀಸ್ ಇಲಾಖೆಯಿಂದ ಆದೇಶ

ಸಲ್ಮಾನ್ ಖಾನ್​ರ ಆತ್ಮೀಯ ಗೆಳೆಯ ಹಾಗೂ ಮ್ಯಾನೇಜರ್ ಆಗಿರುವ ಪ್ರಶಾಂತ್ ಗುಂಜಲ್ಕರ್ ಅವರಿಗೆ ಬೆದರಿಕೆ ಇ-ಮೇಲ್ ಬಂದಿದೆ. ಹೀಗಾಗಿ ಭದ್ರತೆ ಹೆಚ್ಚಿಸಲಾಗಿದೆ.

ಸಲ್ಮಾನ್ ಖಾನ್ ಮನೆ ಮುಂದೆ ಇನ್ನೂ ಯಾರೂ ನಿಲ್ಲಂಗಿಲ್ಲ; ಪೊಲೀಸ್ ಇಲಾಖೆಯಿಂದ ಆದೇಶ
ಸಲ್ಮಾನ್ ಖಾನ್
ರಾಜೇಶ್ ದುಗ್ಗುಮನೆ
|

Updated on: Mar 22, 2023 | 6:30 AM

Share

ಸ್ಟಾರ್ ನಟರ ಮನೆ ಎದುರು ಫ್ಯಾನ್ಸ್ ನಿಲ್ಲೋದು ಕಾಮನ್. ಅದರಲ್ಲೂ ಶಾರುಖ್ ಖಾನ್ (Shah Rukh Khan) , ಸಲ್ಮಾನ್ ಖಾನ್ ಅವರಂತಹ ಸ್ಟಾರ್ ನಟರ ಮನೆ ಎದುರು ನಿತ್ಯವೂ ಅಭಿಮಾನಿಗಳು ಬಂದು ನಿಲ್ಲುತ್ತಾರೆ. ಕೆಲವೊಮ್ಮೆ ಸ್ಟಾರ್​ಗಳು ಬಂದು ಅಭಿಮಾನಿಗಳಿಗೆ ದರ್ಶನ ನೀಡುತ್ತಾರೆ. ಆದರೆ, ಈಗ ಸಲ್ಲು ಮನೆ ಎದುರು ಅಭಿಮಾನಿಗಳು ನಿಲ್ಲಂಗಿಲ್ಲ. ಈ ಬಗ್ಗೆ ಪೊಲೀಸರಿಂದಲೇ ಅಧಿಕೃತ ಆದೇಶ ಬಂದಿದೆ. ಸಲ್ಮಾನ್ ಖಾನ್​ (Shah Rukh Khan) ಮ್ಯಾನೇಜರ್​​ಗೆ ಇ-ಮೇಲ್ ಮೂಲಕ ಬೆದರಿಕೆ ಬಂದಿದೆ. ಈ ಕಾರಣಕ್ಕೆ ಪೊಲೀಸರು ಈ ಆದೇಶ ನೀಡಿದ್ದಾರೆ.

ಸಲ್ಮಾನ್ ಖಾನ್​ರ ಆತ್ಮೀಯ ಗೆಳೆಯ ಹಾಗೂ ಮ್ಯಾನೇಜರ್ ಆಗಿರುವ ಪ್ರಶಾಂತ್ ಗುಂಜಲ್ಕರ್ ಅವರಿಗೆ ಬೆದರಿಕೆ ಇ-ಮೇಲ್ ಬಂದಿದೆ. ‘ನಿಮ್ಮ ಬಾಸ್ ಜೊತೆ (ಸಲ್ಮಾನ್ ಖಾನ್) ಗೋಲ್ಡಿ ಅಣ್ಣ ಮಾತನಾಡಬೇಕು. ಲಾರೆನ್ಸ್​ ಸಂದರ್ಶನ ನೋಡಿದ್ದಾನಾ ಅವನು? ಸಂದರ್ಶನ ನೋಡದಿದ್ದರೆ ತೋರಿಸು. ಈ ಪ್ರಕರಣ ಮುಗಿಯಬೇಕು ಎಂದರೆ ನಿಮ್ಮ ಬಾಸ್ ಜೊತೆ ಮಾತನಾಡೋಕೆ ಹೇಳಿ’ ಎಂದು ಇ-ಮೇಲ್​ನಲ್ಲಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ: Salman Khan: ಸಲ್ಮಾನ್ ಖಾನ್​ಗೆ ಮತ್ತೆ ಬೆದರಿಕೆ, ಅದೇ ಗ್ಯಾಂಗ್​ ಆದರೆ ವಿಧಾನ ಬೇರೆ

‘ಇಬ್ಬರು ಸಹಾಯಕ ಪೊಲೀಸರು ಹಾಗೂ 8 ಕಾನ್ಸ್​ಟೇಬಲ್​ಗಳು ಸಲ್ಮಾನ್ ಖಾನ್ ಮನೆ ಬಳಿ ಇರುತ್ತಾರೆ. 24 ಗಂಟೆಯೂ ಅವರು ಡ್ಯೂಟಿ ಮಾಡಲಿದ್ದಾರೆ. ಅಭಿಮಾನಿಗಳು ಇಲ್ಲಿ ನೆರೆಯುವಂತಿಲ್ಲ. ಇದರಿಂದ ಅವರ ಅಭಿಮಾನಿಗಳಿಗೆ ಬೇಸರ ಆಗಿದೆ. ಕೆಲವರು ಭದ್ರತೆ ದೃಷ್ಟಿಯಿಂದ ಇದು ಒಳ್ಳೆಯ ನಿರ್ಧಾರ ಎಂದಿದ್ದಾರೆ.

ಲಾರೆನ್ಸ್ ಬಿಷ್ಣೋಯ್ ಸಂದರ್ಶನದಲ್ಲಿ ಹೇಳಿದ್ದೇನು?

‘ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಅವರು ಬಿಕಾನೇರ್‌ನಲ್ಲಿರುವ ನಮ್ಮ ದೇವಸ್ಥಾನಕ್ಕೆ ಹೋಗಿಯೇ ತಪ್ಪಾಯಿತು ಎಂದು ಹೇಳಬೇಕು. ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ನನ್ನ ಜೀವನದ ಗುರಿ. ಸಲ್ಮಾನ್ ಖಾನ್ ಅವರ ಭದ್ರತೆಯನ್ನು ತೆಗೆದುಹಾಕಿದರೆ ನಾನು ಅವರನ್ನು ಕೊಲ್ಲುತ್ತೇನೆ’ ಎಂದು ಬಿಷ್ಣೋಯ್ ಎಬಿಪಿ ನ್ಯೂಸ್​ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದ.

ಇದನ್ನೂ ಓದಿ: ಸಲ್ಮಾನ್ ಖಾನ್ ಒಟ್ಟೂ ಆಸ್ತಿ ಮೊತ್ತ ಇಷ್ಟೊಂದಾ? ಸ್ಟಾರ್ ನಟನ ಪ್ರಾಪರ್ಟಿ ಬಗ್ಗೆ ಇಲ್ಲಿದೆ ಮಾಹಿತಿ

‘ಸಲ್ಮಾನ್ ಖಾನ್ ಕ್ಷಮೆಯಾಚಿಸಿದರೆ ಅಲ್ಲಿಗೆ ವಿಷಯ ಕೊನೆಗೊಳ್ಳುತ್ತದೆ. ಸಲ್ಮಾನ್ ಅಹಂಕಾರಿ. ಮೂಸೆ ವಾಲಾ ಕೂಡ ಹಾಗೇ ಇದ್ದರು. ಸಲ್ಮಾನ್ ಖಾನ್‌ನ ಅಹಂ ರಾವಣನಿಗಿಂತ ದೊಡ್ಡದಾಗಿದೆ’ ಎಂದಿದ್ದ ಲಾರೆನ್ಸ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್