AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್ ಮನೆ ಮುಂದೆ ಇನ್ನೂ ಯಾರೂ ನಿಲ್ಲಂಗಿಲ್ಲ; ಪೊಲೀಸ್ ಇಲಾಖೆಯಿಂದ ಆದೇಶ

ಸಲ್ಮಾನ್ ಖಾನ್​ರ ಆತ್ಮೀಯ ಗೆಳೆಯ ಹಾಗೂ ಮ್ಯಾನೇಜರ್ ಆಗಿರುವ ಪ್ರಶಾಂತ್ ಗುಂಜಲ್ಕರ್ ಅವರಿಗೆ ಬೆದರಿಕೆ ಇ-ಮೇಲ್ ಬಂದಿದೆ. ಹೀಗಾಗಿ ಭದ್ರತೆ ಹೆಚ್ಚಿಸಲಾಗಿದೆ.

ಸಲ್ಮಾನ್ ಖಾನ್ ಮನೆ ಮುಂದೆ ಇನ್ನೂ ಯಾರೂ ನಿಲ್ಲಂಗಿಲ್ಲ; ಪೊಲೀಸ್ ಇಲಾಖೆಯಿಂದ ಆದೇಶ
ಸಲ್ಮಾನ್ ಖಾನ್
ರಾಜೇಶ್ ದುಗ್ಗುಮನೆ
|

Updated on: Mar 22, 2023 | 6:30 AM

Share

ಮುಖ್ಯಾಂಶಗಳು

  • ಸಲ್ಮಾನ್ ಖಾನ್​ಗೆ ಬರುತ್ತಿದೆ ಬೆದರಿಕೆ ಮೇಲೆ ಬೆದರಿಕೆ
  • ಇ-ಮೇಲ್ ಮೂಲಕ ಇತ್ತೀಚೆಗೆ ಬಂದಿತ್ತು ಹೊಸ ಬೆದರಿಕೆ
  • ಮನೆ ಬಳಿ ಅಭಿಮಾನಿಗಳು ಬರದಂತೆ ಸೂಚನೆ ಕೊಟ್ಟ ಪೊಲೀಸ್

ಸ್ಟಾರ್ ನಟರ ಮನೆ ಎದುರು ಫ್ಯಾನ್ಸ್ ನಿಲ್ಲೋದು ಕಾಮನ್. ಅದರಲ್ಲೂ ಶಾರುಖ್ ಖಾನ್ (Shah Rukh Khan) , ಸಲ್ಮಾನ್ ಖಾನ್ ಅವರಂತಹ ಸ್ಟಾರ್ ನಟರ ಮನೆ ಎದುರು ನಿತ್ಯವೂ ಅಭಿಮಾನಿಗಳು ಬಂದು ನಿಲ್ಲುತ್ತಾರೆ. ಕೆಲವೊಮ್ಮೆ ಸ್ಟಾರ್​ಗಳು ಬಂದು ಅಭಿಮಾನಿಗಳಿಗೆ ದರ್ಶನ ನೀಡುತ್ತಾರೆ. ಆದರೆ, ಈಗ ಸಲ್ಲು ಮನೆ ಎದುರು ಅಭಿಮಾನಿಗಳು ನಿಲ್ಲಂಗಿಲ್ಲ. ಈ ಬಗ್ಗೆ ಪೊಲೀಸರಿಂದಲೇ ಅಧಿಕೃತ ಆದೇಶ ಬಂದಿದೆ. ಸಲ್ಮಾನ್ ಖಾನ್​ (Shah Rukh Khan) ಮ್ಯಾನೇಜರ್​​ಗೆ ಇ-ಮೇಲ್ ಮೂಲಕ ಬೆದರಿಕೆ ಬಂದಿದೆ. ಈ ಕಾರಣಕ್ಕೆ ಪೊಲೀಸರು ಈ ಆದೇಶ ನೀಡಿದ್ದಾರೆ.

ಸಲ್ಮಾನ್ ಖಾನ್​ರ ಆತ್ಮೀಯ ಗೆಳೆಯ ಹಾಗೂ ಮ್ಯಾನೇಜರ್ ಆಗಿರುವ ಪ್ರಶಾಂತ್ ಗುಂಜಲ್ಕರ್ ಅವರಿಗೆ ಬೆದರಿಕೆ ಇ-ಮೇಲ್ ಬಂದಿದೆ. ‘ನಿಮ್ಮ ಬಾಸ್ ಜೊತೆ (ಸಲ್ಮಾನ್ ಖಾನ್) ಗೋಲ್ಡಿ ಅಣ್ಣ ಮಾತನಾಡಬೇಕು. ಲಾರೆನ್ಸ್​ ಸಂದರ್ಶನ ನೋಡಿದ್ದಾನಾ ಅವನು? ಸಂದರ್ಶನ ನೋಡದಿದ್ದರೆ ತೋರಿಸು. ಈ ಪ್ರಕರಣ ಮುಗಿಯಬೇಕು ಎಂದರೆ ನಿಮ್ಮ ಬಾಸ್ ಜೊತೆ ಮಾತನಾಡೋಕೆ ಹೇಳಿ’ ಎಂದು ಇ-ಮೇಲ್​ನಲ್ಲಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ: Salman Khan: ಸಲ್ಮಾನ್ ಖಾನ್​ಗೆ ಮತ್ತೆ ಬೆದರಿಕೆ, ಅದೇ ಗ್ಯಾಂಗ್​ ಆದರೆ ವಿಧಾನ ಬೇರೆ

‘ಇಬ್ಬರು ಸಹಾಯಕ ಪೊಲೀಸರು ಹಾಗೂ 8 ಕಾನ್ಸ್​ಟೇಬಲ್​ಗಳು ಸಲ್ಮಾನ್ ಖಾನ್ ಮನೆ ಬಳಿ ಇರುತ್ತಾರೆ. 24 ಗಂಟೆಯೂ ಅವರು ಡ್ಯೂಟಿ ಮಾಡಲಿದ್ದಾರೆ. ಅಭಿಮಾನಿಗಳು ಇಲ್ಲಿ ನೆರೆಯುವಂತಿಲ್ಲ. ಇದರಿಂದ ಅವರ ಅಭಿಮಾನಿಗಳಿಗೆ ಬೇಸರ ಆಗಿದೆ. ಕೆಲವರು ಭದ್ರತೆ ದೃಷ್ಟಿಯಿಂದ ಇದು ಒಳ್ಳೆಯ ನಿರ್ಧಾರ ಎಂದಿದ್ದಾರೆ.

ಲಾರೆನ್ಸ್ ಬಿಷ್ಣೋಯ್ ಸಂದರ್ಶನದಲ್ಲಿ ಹೇಳಿದ್ದೇನು?

‘ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಅವರು ಬಿಕಾನೇರ್‌ನಲ್ಲಿರುವ ನಮ್ಮ ದೇವಸ್ಥಾನಕ್ಕೆ ಹೋಗಿಯೇ ತಪ್ಪಾಯಿತು ಎಂದು ಹೇಳಬೇಕು. ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ನನ್ನ ಜೀವನದ ಗುರಿ. ಸಲ್ಮಾನ್ ಖಾನ್ ಅವರ ಭದ್ರತೆಯನ್ನು ತೆಗೆದುಹಾಕಿದರೆ ನಾನು ಅವರನ್ನು ಕೊಲ್ಲುತ್ತೇನೆ’ ಎಂದು ಬಿಷ್ಣೋಯ್ ಎಬಿಪಿ ನ್ಯೂಸ್​ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದ.

ಇದನ್ನೂ ಓದಿ: ಸಲ್ಮಾನ್ ಖಾನ್ ಒಟ್ಟೂ ಆಸ್ತಿ ಮೊತ್ತ ಇಷ್ಟೊಂದಾ? ಸ್ಟಾರ್ ನಟನ ಪ್ರಾಪರ್ಟಿ ಬಗ್ಗೆ ಇಲ್ಲಿದೆ ಮಾಹಿತಿ

‘ಸಲ್ಮಾನ್ ಖಾನ್ ಕ್ಷಮೆಯಾಚಿಸಿದರೆ ಅಲ್ಲಿಗೆ ವಿಷಯ ಕೊನೆಗೊಳ್ಳುತ್ತದೆ. ಸಲ್ಮಾನ್ ಅಹಂಕಾರಿ. ಮೂಸೆ ವಾಲಾ ಕೂಡ ಹಾಗೇ ಇದ್ದರು. ಸಲ್ಮಾನ್ ಖಾನ್‌ನ ಅಹಂ ರಾವಣನಿಗಿಂತ ದೊಡ್ಡದಾಗಿದೆ’ ಎಂದಿದ್ದ ಲಾರೆನ್ಸ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು