AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಕ್ಕಳಿಗೆ ಒಳ್ಳೆಯದನ್ನು ಕಲಿಸಿ’; ಮಗ ಮಾಡಿದ ತಪ್ಪಿಗೆ ಕರೀನಾಗೆ ಕ್ಲಾಸ್

ಕಳೆದ ಕೆಲವು ವರ್ಷಗಳಲ್ಲಿ ಪಾಪರಾಜಿ ಸಂಸ್ಕೃತಿ ಸಾಕಷ್ಟು ಬೆಳೆದು ನಿಂತಿದೆ. ಜಿಮ್, ರೆಸ್ಟೋರೆಂಟ್ ಮುಂತಾದ ಸ್ಥಳಗಳಲ್ಲಿ ಸೆಲೆಬ್ರಿಟಿಗಳನ್ನು ಪಾಪರಾಜಿಗಳು ಅನುಸರಿಸುತ್ತಾರೆ. ಇದರಿಂದ ಅವರಿಗೆ ಕಿರಿಕಿರಿ ಆದ ಉದಾಹರಣೆ ಇದೆ. ಈಗ ಇದಕ್ಕೆ ಹೊಸ ಉದಾಹರಣೆ ಕರೀನಾ ಕಪೂರ್. ಮಗ ಮಾಡಿದ ತಪ್ಪಿಗೆ ಅವರಿಗೆ ಕ್ಲಾಸ್ ತೆಗೆದುಕೊಳ್ಳಲಾಗಿದೆ.

‘ಮಕ್ಕಳಿಗೆ ಒಳ್ಳೆಯದನ್ನು ಕಲಿಸಿ’; ಮಗ ಮಾಡಿದ ತಪ್ಪಿಗೆ ಕರೀನಾಗೆ ಕ್ಲಾಸ್
ಕರೀನಾ
 ಶ್ರೀಲಕ್ಷ್ಮೀ ಎಚ್
| Edited By: |

Updated on:Jan 31, 2024 | 12:15 PM

Share

ಕಳೆದ ಕೆಲವು ವರ್ಷಗಳಲ್ಲಿ ಪಾಪರಾಜಿ ಸಂಸ್ಕೃತಿ ಸಾಕಷ್ಟು ಬೆಳೆದಿದೆ. ಇದರಿಂದ ಸೆಲೆಬ್ರಿಟಿಗಳು ಹಾಗೂ ಅವರ ಮಕ್ಕಳು ಎಲ್ಲೇ ಹೋದರೂ ಕ್ಯಾಮೆರಾ ಕಣ್ಣಿಗೆ ಬೀಳುತ್ತಾರೆ. ಜಿಮ್, ಮಾರ್ಕೆಟ್, ರೆಸ್ಟೋರೆಂಟ್ ಮುಂತಾದ ಸ್ಥಳಗಳಲ್ಲಿ ಸೆಲೆಬ್ರಿಟಿಗಳನ್ನು ಪಾಪರಾಜಿಗಳು ಅನುಸರಿಸುತ್ತಾರೆ. ಅವರ ವೀಡಿಯೊಗಳು ಹಾಗೂ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡುತ್ತಾರೆ. ಇದರಿಂದ ಅನೇಕ ಸೆಲೆಬ್ರಿಟಿಗಳು ಟ್ರೋಲ್​ಗೆ ಒಳಗಾಗಿದ್ದಿದೆ. ನಟಿ ಕರೀನಾ ಕಪೂರ್ ವಿಷಯದಲ್ಲೂ ಇದೇ ರೀತಿಯ ಘಟನೆ ನಡೆದಿದೆ. ಕರೀನಾ (Kareena Kapoor) ಇತ್ತೀಚೆಗೆ ತನ್ನ ಇಬ್ಬರು ಮಕ್ಕಳೊಂದಿಗೆ ಕಾಣಿಸಿಕೊಂಡಿದ್ದಾರೆ. ಆದರೆ ಈ ಬಾರಿ ನೆಟ್ಟಿಗರು ಅವರ ಪುಟ್ಟ ಮಗ ಜೆಹ್‌ನ ವರ್ತನೆಯನ್ನು ಇಷ್ಟಪಡಲಿಲ್ಲ. ಹೀಗಾಗಿ ಕರೀನಾ ಅವರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.

ಪಾಪರಾಜಿ ಪೋಸ್ಟ್ ಮಾಡಿದ ಈ ವಿಡಿಯೋದಲ್ಲಿ ಕರೀನಾ ತನ್ನ ಇಬ್ಬರು ಮಕ್ಕಳೊಂದಿಗೆ ಕಾರಿನಿಂದ ಇಳಿಯುತ್ತಿರುವುದು ಕಾಣಿಸಿದೆ. ಒಂದು ಕಡೆ ಜೆಹ್ ಇದ್ದರೆ ಆತನ ಹಿಂದಿನಿಂದ ತೈಮೂರ್ ಹೋಗುತ್ತಿದ್ದಾನೆ. ಈ ವೇಳೆ ಜೆಹ್ ಕೋಪಗೊಂಡಿದ್ದಾನೆ. ಸಿಟ್ಟಿನಿಂದ ತನ್ನ ಕೈಯಲ್ಲಿದ್ದ ಕಾಗದದ ಮುದ್ದೆಯನ್ನು ನೆಲದ ಮೇಲೆ ಎಸೆದಿದ್ದಾನೆ. ನಂತರ ಅದನ್ನು ಅಲ್ಲಿಯೇ ಬಿಟ್ಟು ಒಳಗೆ ಹೋಗಿದ್ದಾನೆ. ಅವನ ಹಿಂದೆ ನಿಂತ ಕರೀನಾ ಇದನ್ನು ನೋಡುತ್ತಾರೆ, ಆದರೆ ಮಗನಿಗೆ ಏನನ್ನೂ ಹೇಳಲಿಲ್ಲ. ಇವರ ಜೊತೆ ಬಂದ ಸಹಾಯಕಿ ಕಾಗದದ ಬಂಡಲ್ ಅನ್ನು ಎತ್ತಿಕೊಳ್ಳುತ್ತಾರೆ. ಆಗಲೂ ಕರೀನಾ ಏನನ್ನೂ ಹೇಳುವುದಿಲ್ಲ. ಹೀಗಾಗಿ ಮಕ್ಕಳಿಗೆ ಶಿಸ್ತು ಕಲಿಸಲು ನೆಟ್ಟಿಗರು ಕ್ಲಾಸ್ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಕರೀನಾ ಕಪೂರ್ ತಮ್ಮ ಕೂದಲ ಆರೈಕೆಗೆ ಏನು ಬಳಸುತ್ತಾರೆ ಗೊತ್ತಾ?

‘ಇವಳು ಯಾವ ತಾಯಿ? ಮಕ್ಕಳಿಗೆ ಒಳ್ಳೆಯ ಅಭ್ಯಾಸಗಳನ್ನು ಕಲಿಸುವುದಿಲ್ಲ. ಆ ಪೇಪರ್ ಎತ್ತಲು ಮಗನಿಗೆ ಹೇಳಬೇಕಿತ್ತು’ ಎಂದು ಒಬ್ಬರು ಬರೆದಿದ್ದಾರೆ. ‘ನಡವಳಿಕೆಗಳು ದೈನಂದಿನ ಅಭ್ಯಾಸಗಳ ಭಾಗವಾಗಿರಬೇಕು ಮತ್ತು ಮಕ್ಕಳಿಗೆ ಕಲಿಸಬೇಕು. ಈ ಶಿಷ್ಟಾಚಾರ ಗೊತ್ತಿಲ್ಲದ ಮೂವರನ್ನು ಈ ವಿಡಿಯೋದಲ್ಲಿ ನೋಡುತ್ತಿದ್ದೇನೆ’ ಎಂದು ಮತ್ತೊಬ್ಬ ಹೇಳಿದ್ದಾರೆ. ಇದರಲ್ಲಿ ಕೆಲವರು ಜೆಹ್ ಅವರ ಪರ ನಿಂತಿದ್ದಾರೆ. ‘ಮಕ್ಕಳ ಮನಸ್ಥಿತಿ ನಿರಂತರವಾಗಿ ಬದಲಾಗುತ್ತಿರುತ್ತದೆ. ಅವನು ಬೆಳೆದಂತೆ, ಅವನು ಕಲಿಯುತ್ತಾನೆ. ಚಿಕ್ಕ ಮಕ್ಕಳ ಬಗ್ಗೆ ಇಂತಹ ಅಭಿಪ್ರಾಯಗಳನ್ನು ಹೇಳಬೇಡಿ’ ಎಂದು ಕೆಲವರು ಹೇಳಿದ್ದಾರೆ.

View this post on Instagram

A post shared by Voompla (@voompla)

ಕರೀನಾ ಮತ್ತು ಸೈಫ್ ಮದುವೆಯಾಗಿ ದಶಕಗಳ ಮೇಲಾಗಿದೆ. ಅವರಿಬ್ಬರೂ 16 ಅಕ್ಟೋಬರ್ 2012ರಂದು ವಿವಾಹವಾದರು. ನಂತರ 2016ರಲ್ಲಿ ಕರೀನಾ ತೈಮೂರ್‌ಗೆ ಜನ್ಮ ನೀಡಿದ್ದರು. ಫೆಬ್ರವರಿ 2021ರಲ್ಲಿ, ಕರೀನಾ ಎರಡನೇ ಬಾರಿಗೆ ತಾಯಿಯಾದರು. ಅವರ ಪುಟ್ಟ ಮಗನ ಹೆಸರು ಜೆಹ್. ಈ ದಂಪತಿ ಮಕ್ಕಳ ಜೊತೆ ಆಗಾಗ ವಿದೇಶಕ್ಕೆ ತೆರಳುತ್ತಾರೆ. ಸಿನಿಮಾ ವಿಚಾರಕ್ಕೆ ಬರೋದಾದರೆ ಕರೀನಾ ಸಖತ್ ಚ್ಯೂಸಿ ಆಗಿದ್ದಾರೆ. ಅವರು ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾಗೆ ನಾಯಕಿ ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಅಧಿಕೃತ ಘೋಷಣೆ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:09 pm, Wed, 31 January 24

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್