AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Farhan Akhtar: ದೀಪಾವಳಿ ಆಚರಿಸಿದ ಫರ್ಹಾನ್​ ಅಖ್ತರ್​ ವಿರುದ್ಧ ದ್ವೇಷ ಕಾರುತ್ತಿರುವ ಒಂದು ವರ್ಗದ ನೆಟ್ಟಿಗರು

Deepavali 2021: ಸ್ನೇಹಿತರ ಜೊತೆ ಸೇರಿ ದೀಪಾವಳಿ ಹಬ್ಬ ಆಚರಿಸಿದ ಫೋಟೋಗಳನ್ನು ಫರ್ಹಾನ್​ ಅಖ್ತರ್​ ಹಂಚಿಕೊಂಡಿದ್ದಾರೆ. ಆ ಫೋಟೋಗಳಿಗೆ ಕಮೆಂಟ್​ ಮಾಡುತ್ತಿರುವ ಒಂದು ವರ್ಗದ ನೆಟ್ಟಿಗರು ದ್ವೇಷ ಕಾರುತ್ತಿದ್ದಾರೆ.

Farhan Akhtar: ದೀಪಾವಳಿ ಆಚರಿಸಿದ ಫರ್ಹಾನ್​ ಅಖ್ತರ್​ ವಿರುದ್ಧ ದ್ವೇಷ ಕಾರುತ್ತಿರುವ ಒಂದು ವರ್ಗದ ನೆಟ್ಟಿಗರು
ಫರ್ಹಾನ್​ ಅಖ್ತರ್
Follow us
TV9 Web
| Updated By: ಮದನ್​ ಕುಮಾರ್​

Updated on:Nov 05, 2021 | 10:23 AM

ಬಾಲಿವುಡ್​ನ ಖ್ಯಾತ ನಟ ಫರ್ಹಾನ್​ ಅಖ್ತರ್​ ಅವರು ಹಲವು ಕಾರಣಗಳಿಗಾಗಿ ಸುದ್ದಿ ಆಗುತ್ತಿರುತ್ತಾರೆ. ಈಗ ಅವರು ದೀಪಾವಳಿ ಆಚರಿಸಿ ಕೆಲವರ ಕೆಂಗಣ್ಣಿಗೆ ಗುರಿ ಆಗಿದ್ದಾರೆ. ಮುಸ್ಲಿಂ ಧರ್ಮದವರಾದ ಫರ್ಹಾನ್​ ಅಖ್ತರ್​ ಅವರು ದೀಪಾವಳಿ ಹಬ್ಬ ಆಚರಿಸಿದ್ದು ಸರಿಯಲ್ಲ ಎಂಬುದು ಒಂದು ವರ್ಗದ ನೆಟ್ಟಿಗರ ವಾದ. ಹಾಗಾಗಿ ಅವರನ್ನು ಸೋಶಿಯಲ್​ ಮೀಡಿಯಾದಲ್ಲಿ ಹಿಗ್ಗಾಮುಗ್ಗಾ ಟ್ರೋಲ್​ ಮಾಡಲಾಗುತ್ತಿದೆ.

ತಮ್ಮ ನೇರ ನಡೆ-ನುಡಿಗಳಿಂದ ಗುರುತಿಸಿಕೊಂಡವರು ಫರ್ಹಾನ್​ ಅಖ್ತರ್​. ತಮಗೆ ಸರಿ ಎನಿಸಿದ್ದನ್ನು ಅವರು ಮಾಡುತ್ತಾರೆ. ಆ ಕಾರಣಕ್ಕಾಗಿ ಪದೇಪದೇ ಅವರು ಟ್ರೋಲಿಗರಿಗೆ ಆಹಾರ ಆಗುತ್ತಾರೆ. ದೇಶದೆಲ್ಲೆಡೆ ದೀಪಾವಳಿ ಹಬ್ಬವನ್ನು ಸೆಲೆಬ್ರೇಟ್​ ಮಾಡಲಾಗುತ್ತಿದೆ. ಅದೇ ರೀತಿ ಫರ್ಹಾನ್​ ಅಖ್ತರ್​ ಕೂಡ ತಮ್ಮ ‘ಎಕ್ಸೆಲ್​ ಎಂಟರ್​ಟೇ ನ್​ಮೆಂಟ್​’ ಕಚೇರಿಯಲ್ಲಿ ಬೆಳಕಿನ ಹಬ್ಬವನ್ನು ಆಚರಿಸಿದ್ದಾರೆ. ಪ್ರೇಯಸಿ ಶಿಬಾನಿ ದಂಡೇಕರ್​, ಬ್ಯುಸಿನೆಸ್​ ಪಾರ್ಟ್ನರ್​ ರಿತೇಶ್​​ ಸಿದ್ವಾನಿ, ರಿತೇಶ್ ಪತ್ನಿ ಡಾಲಿ ಸಿದ್ವಾನಿ ಮುಂತಾದವರು ಹಬ್ಬದ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಹಿಂದುಗಳ ಹಬ್ಬವನ್ನು ಫರ್ಹಾನ್​ ಅಖ್ತರ್​ ಆಚರಿಸಿರುವುದಕ್ಕೆ ಕೆಲವರು ಕಿಡಿಕಾರುತ್ತಿದ್ದಾರೆ.

ಕಮೆಂಟ್​ಗಳ ಮೂಲಕ ಫರ್ಹಾನ್​ ಅಖ್ತರ್​ ಅವರನ್ನು ಟ್ರೋಲ್​ ಮಾಡಲಾಗುತ್ತಿದೆ. ‘ಇವರ ಅಪ್ಪ (ಜಾವೇದ್​ ಅಖ್ತರ್​) ಯಾವ ಧರ್ಮವನ್ನೂ ನಂಬುವುದಿಲ್ಲ. ಆದರೆ ಇಲ್ಲಿ ಇವನು ಡ್ರಾಮಾ ಮಾಡುತ್ತಿದ್ದಾನೆ’ ಎಂದು ನೆಟ್ಟಿಗರೊಬ್ಬರು ವ್ಯಂಗ್ಯವಾಡಿದ್ದಾರೆ. ‘ಒಬ್ಬ ಮುಸ್ಲಿಂ ಆಗಿ ನೀನು ಮಾಡುತ್ತಿರುವುದೇನು?’ ಎಂದು ಹಲವು ಮಂದಿ ಪ್ರಶ್ನೆ ಮಾಡಿದ್ದಾರೆ. ‘ಈತ ಹೆಸರಿಗೆ ಮಾತ್ರ ಮುಸ್ಲಿಂ’ ಎಂದು ಕುಹಕಿಸಿ ಕೆಲವರು ಕಮೆಂಟ್​ ಮಾಡಿದ್ದಾರೆ.

ಈ ರೀತಿ ಟ್ರೋಲ್​ಗೆ ಒಳಗಾಗಿರುವುದು ಫರ್ಹಾನ್​ ಅಖ್ತರ್​ ಮಾತ್ರವಲ್ಲ. ಈ ಹಿಂದೆ ಅನೇಕ ಸೆಲೆಬ್ರಿಟಿಗಳನ್ನು ಇದೇ ಕಾರಣಕ್ಕಾಗಿ ಟ್ರೋಲ್​ ಮಾಡಲಾಗಿತ್ತು. ಶಾರುಖ್​ ಖಾನ್​ ಮನೆಯಲ್ಲಿ ದೀಪಾವಳಿ ಆಚರಿಸಿದಾಗಲೂ ಇದೇ ರೀತಿಯ ಕಮೆಂಟ್​ಗಳು ಬರುತ್ತವೆ. ಸೈಫ್​ ಅಲಿ ಖಾನ್​ ಅವರು ಈ ವರ್ಷ ಗಣಪತಿ ಹಬ್ಬ ಆಚರಿಸಿದ್ದರು. ಗಣಪತಿ ವಿಗ್ರಹಕ್ಕೆ ಅವರು ಕೈ ಮುಗಿಯುತ್ತಿರುವ ಫೋಟೋವನ್ನು ಕರೀನಾ ಕಪೂರ್​ ಶೇರ್​ ಮಾಡಿಕೊಂಡಿದ್ದರು. ಅದಕ್ಕೆ ಕಮೆಂಟ್​ ಮಾಡಿದ್ದ ಅನೇಕರು ಖಾರದ ಮಾತುಗಳಿಂದ ನಿಂದಿಸಿದ್ದರು.

ಇದನ್ನೂ ಓದಿ: 

ಅಭಿಮಾನಿಗಳಿಗೆ ರಶ್ಮಿಕಾ ದೀಪಾವಳಿ ವಿಶ್ ಮಾಡಿದ್ದು ಹೇಗೆ?

ಮೇಘನಾ ಸರ್ಜಾ ಮಗ ರಾಯನ್ ದೀಪಾವಳಿ ವಿಶ್

Published On - 9:59 am, Fri, 5 November 21

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?