AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷಣಾರ್ಧದಲ್ಲಿ ನೆಲಕ್ಕುರುಳಿತು ಬೃಹತ್​ ವೇದಿಕೆ: ಫರ್ಹಾನ್​ ಅಖ್ತರ್​ ಸಂಗೀತ ಕಾರ್ಯಕ್ರಮ ರದ್ದು

ಬನ್ಸಾಲ್​ ಗ್ರೂಪ್​ ಆಫ್​ ಇನ್​ಸ್ಟಿಟ್ಯೂಟ್ಸ್​ ಸಲುವಾಗಿ ಫರ್ಹಾನ್​ ಅಖ್ತರ್​ ಅವರು ಸಂಗೀತ ಕಾರ್ಯಕ್ರಮ ನೀಡಬೇಕಿತ್ತು. ಆದರೆ ಬಿರುಗಾಳಿಯ ಕಾರಣದಿಂದ ಕಾರ್ಯಕ್ರಮ ರದ್ದಾಗಿದೆ.

ಕ್ಷಣಾರ್ಧದಲ್ಲಿ ನೆಲಕ್ಕುರುಳಿತು ಬೃಹತ್​ ವೇದಿಕೆ: ಫರ್ಹಾನ್​ ಅಖ್ತರ್​ ಸಂಗೀತ ಕಾರ್ಯಕ್ರಮ ರದ್ದು
ಫರ್ಹಾನ್ ಅಖ್ತರ್
ಮದನ್​ ಕುಮಾರ್​
|

Updated on: Apr 06, 2023 | 4:49 PM

Share

ಬಾಲಿವುಡ್​ ನಟ ಫರ್ಹಾನ್​ ಅಖ್ತರ್ (Farhan Akhtar)​ ಅವರು ಗಾಯಕನಾಗಿಯೂ ಫೇಮಸ್​ ಆಗಿದ್ದಾರೆ. ಅವರ ಹಾಡಿಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ನಟನೆ, ನಿರ್ದೇಶನದ ಜೊತೆಗೆ ಅವರು ವಿವಿಧ ನಗರಗಳಿಗೆ ತೆರಳಿ ಸಂಗೀತ ಕಾರ್ಯಕ್ರಮಗಳನ್ನು (Music Concert) ನೀಡುತ್ತಾರೆ. ಬುಧವಾರ (ಏಪ್ರಿಲ್​ 5) ಇಂಧೋರ್​ನಲ್ಲಿ ಫರ್ಹಾನ್​ ಅಖ್ತರ್ ಅವರು ಕಾರ್ಯಕ್ರಮ ಮಾಡಬೇಕಿತ್ತು. ಅದಕ್ಕಾಗಿ ಸಕಲ ತಯಾರಿ ಮಾಡಿಕೊಳ್ಳಲಾಗಿತ್ತು. ಆದರೆ ಜೋರಾಗಿ ಬೀಸಿದ ಬಿರುಗಾಳಿಯ (Dust Storm) ಕಾರಣದಿಂದ ಬೃಹತ್​ ವೇದಿಕೆಯೇ ನೆಲಕ್ಕುರುಳಿದೆ. ಸಂಗೀತ ಕಾರ್ಯಕ್ರಮಕ್ಕೆ ತರಲಾಗಿದ್ದ ಸ್ಪೀಕರ್​, ಲೈಟ್ಸ್​ ಮುಂತಾದ ಪರಿಕರಗಳಿಗೆ ಹಾನಿ ಆಗಿದೆ. ಬಿರುಗಾಳಿಗೆ ವೇದಿಕೆ ಛಿದ್ರವಾಗುತ್ತಿರುವ ವಿಡಿಯೋ ವೈರಲ್​ ಆಗಿದೆ.

ಬನ್ಸಾಲ್​ ಗ್ರೂಪ್​ ಆಫ್​ ಇನ್​ಸ್ಟಿಟ್ಯೂಟ್ಸ್​ ಸಲುವಾಗಿ ಫರ್ಹಾನ್​ ಅಖ್ತರ್​ ಅವರು ಸಂಗೀತ ಕಾರ್ಯಕ್ರಮ ನೀಡಬೇಕಿತ್ತು. ಆದರೆ ಬಿರುಗಾಳಿಯ ಕಾರಣದಿಂದ ಕಾರ್ಯಕ್ರಮ ರದ್ದಾಗಿದೆ. ವಾತಾವರಣ ತಿಳಿಗೊಂಡ ಬಳಿಕ ಏಪ್ರಿಲ್​ 7ರಂದು ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ. ವೇದಿಕೆ ಕುಸಿದು ಬಿದ್ದಿದ್ದರಿಂದ ಯಾರಿಗೂ ಪ್ರಾಣಹಾನಿ ಅಥವಾ ಗಾಯಗಳು ಆಗಿಲ್ಲ ಎಂಬುದು ಸಮಾಧಾನಕರ ಸಂಗತಿ.

ಇದನ್ನೂ ಓದಿ
Image
ಬಾಲಿವುಡ್​ನವರೂ ಕೆಟ್ಟ ಸಿನಿಮಾ ಮಾಡ್ತಾರೆ, ನಾವ್ಯಾಕೆ ಅವರಿಗೆ ರೇಂಜ್​ ಕೊಡಬೇಕು? ಸುದೀಪ್ ನೇರ ಪ್ರಶ್ನೆ
Image
ಬಾಲಿವುಡ್​ಗಿತ್ತು ಅಂಡರ್​​ವರ್ಲ್ಡ್​​ ಸಂಪರ್ಕ; ಕರಾಳ ಸತ್ಯ ಬಿಚ್ಚಿಟ್ಟ ಖ್ಯಾತ ನಟಿ
Image
ಬಾಲಿವುಡ್​ vs ಸೌತ್ ಎಂದರೆ ನನಗೆ ಸಿಟ್ಟೇ ಬರುತ್ತದೆ; ಅಕ್ಷಯ್ ಕುಮಾರ್ ನೇರ ನುಡಿ
Image
ಸೌತ್​ ಚಿತ್ರಗಳ ಎದುರು ಬಾಲಿವುಡ್​ ಎಡವಿದ್ದು ಎಲ್ಲಿ? ಉತ್ತರ ಹುಡುಕಿದ ‘ಕೆಜಿಎಫ್​ 2’ ಅಧೀರ ಸಂಜಯ್​ ದತ್​

ಏಪ್ರಿಲ್​ 7ರಂದು ಬನ್ಸಾಲ್​ ಗ್ರೂಪ್​ ಆಫ್​ ಇನ್​ಸ್ಟಿಟ್ಯೂಟ್ಸ್​ ಸಲುವಾಗಿ ಕಾರ್ಯಕ್ರಮ ಮುಗಿಸಿಕೊಟ್ಟ ನಂತರ ಫರ್ಹಾನ್​ ಅಖ್ತರ್​ ಅವರು ಹೈದರಾಬಾದ್​, ಬೆಂಗಳೂರು, ಕೊಲ್ಕತ್ತಾ, ಜೈಪುರ ಮುಂತಾದೆಡೆ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಅವರ ‘ಎಕೋಸ್​’ ಆಲ್ಬಂನಲ್ಲಿ ಇರುವ ಒರಿಜಿನಲ್​ ಹಾಡುಗಳನ್ನು ಈ ವೇದಿಕೆಯಲ್ಲಿ ಫರ್ಹಾನ್​ ಅಖ್ತರ್​ ಹಾಡಲಿದ್ದಾರೆ.

ಇದನ್ನೂ ಓದಿ: ಎರಡನೇ ಮದುವೆ ಮಾಡಿಕೊಂಡ ಫರ್ಹಾನ್​ ಅಖ್ತರ್​; ಪ್ರೇಯಸಿ ಶಿಬಾನಿ​ ಜತೆ ಸಿಂಪಲ್​ ವಿವಾಹ

ಸಿನಿಮಾ ನಿರ್ದೇಶನದಲ್ಲೂ ಫರ್ಜಾನ್​ ಅಖ್ತರ್​ ಅವರು ಬ್ಯುಸಿ ಆಗಿದ್ದಾರೆ. ಒಂದೆಡೆ ಸಂಗೀತ ಕಾರ್ಯಕ್ರಮಗಳನ್ನು ಮಾಡುತ್ತಾ, ಇನ್ನೊಂದು ಕಡೆ ಸಿನಿಮಾ ನಿರ್ದೇಶನಕ್ಕೂ ಅವರು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಅವರ ನಿರ್ದೇಶನದಲ್ಲಿ ‘ಜೀ ಲೇ ಝರಾ’ ಸಿನಿಮಾ ಸಿದ್ಧವಾಗಲಿದೆ. ಈ ಚಿತ್ರದ ಶೂಟಿಂಗ್​ಗೆ ಸಿದ್ಧತೆ ನಡೆಯುತ್ತಿದೆ. ಪ್ರಿಯಾಂಕಾ ಚೋಪ್ರಾ, ಕತ್ರಿನಾ ಕೈಫ್​, ಆಲಿಯಾ ಭಟ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಚಿತ್ರದ ರಿಲೀಸ್​ ದಿನಾಂಕದ ಬಗ್ಗೆ ಯಾವುದೇ ಅಪ್​ಡೇಟ್​ ಸಿಕ್ಕಿಲ್ಲ. 2023ರ ಕೊನೆಯಲ್ಲಿ ‘ಜೀ ಲೇ ಝರಾ’ ಚಿತ್ರಕ್ಕೆ ಶೂಟಿಂಗ್​ ಶುರುವಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: Farhan Akhtar: ದೀಪಾವಳಿ ಆಚರಿಸಿದ ಫರ್ಹಾನ್​ ಅಖ್ತರ್​ ವಿರುದ್ಧ ದ್ವೇಷ ಕಾರುತ್ತಿರುವ ಒಂದು ವರ್ಗದ ನೆಟ್ಟಿಗರು

2001ರಿಂದಲೂ ಫರ್ಹಾನ್​ ಅಖ್ತರ್​ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ‘ದಿಲ್​ ಚಾಹ್ತಾ ಹೈ’, ‘ಲಕ್ಷ್ಯ’, ‘ಡಾನ್​’, ‘ಡಾನ್​ 2’ ಮುಂತಾದ ಸಿನಿಮಾಗಳನ್ನು ನಿರ್ದೇಶಿಸಿ ಅವರು ಸೈ ಎನಿಸಿಕೊಂಡಿದ್ದಾರೆ. ‘ಜಿಂದಗಿ ನಾ ಮಿಲೇಗಿ ದೋಬಾರಾ’, ‘ಭಾಗ್​ ಮಿಲ್ಕಾ ಭಾಗ್​’ ಮುಂತಾದ ಗಮನಾರ್ಹ ಚಿತ್ರಗಳಲ್ಲಿ ಅವರು ನಟಿಸುವ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್