ಕ್ಷಣಾರ್ಧದಲ್ಲಿ ನೆಲಕ್ಕುರುಳಿತು ಬೃಹತ್​ ವೇದಿಕೆ: ಫರ್ಹಾನ್​ ಅಖ್ತರ್​ ಸಂಗೀತ ಕಾರ್ಯಕ್ರಮ ರದ್ದು

ಬನ್ಸಾಲ್​ ಗ್ರೂಪ್​ ಆಫ್​ ಇನ್​ಸ್ಟಿಟ್ಯೂಟ್ಸ್​ ಸಲುವಾಗಿ ಫರ್ಹಾನ್​ ಅಖ್ತರ್​ ಅವರು ಸಂಗೀತ ಕಾರ್ಯಕ್ರಮ ನೀಡಬೇಕಿತ್ತು. ಆದರೆ ಬಿರುಗಾಳಿಯ ಕಾರಣದಿಂದ ಕಾರ್ಯಕ್ರಮ ರದ್ದಾಗಿದೆ.

ಕ್ಷಣಾರ್ಧದಲ್ಲಿ ನೆಲಕ್ಕುರುಳಿತು ಬೃಹತ್​ ವೇದಿಕೆ: ಫರ್ಹಾನ್​ ಅಖ್ತರ್​ ಸಂಗೀತ ಕಾರ್ಯಕ್ರಮ ರದ್ದು
ಫರ್ಹಾನ್ ಅಖ್ತರ್
Follow us
|

Updated on: Apr 06, 2023 | 4:49 PM

ಬಾಲಿವುಡ್​ ನಟ ಫರ್ಹಾನ್​ ಅಖ್ತರ್ (Farhan Akhtar)​ ಅವರು ಗಾಯಕನಾಗಿಯೂ ಫೇಮಸ್​ ಆಗಿದ್ದಾರೆ. ಅವರ ಹಾಡಿಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ನಟನೆ, ನಿರ್ದೇಶನದ ಜೊತೆಗೆ ಅವರು ವಿವಿಧ ನಗರಗಳಿಗೆ ತೆರಳಿ ಸಂಗೀತ ಕಾರ್ಯಕ್ರಮಗಳನ್ನು (Music Concert) ನೀಡುತ್ತಾರೆ. ಬುಧವಾರ (ಏಪ್ರಿಲ್​ 5) ಇಂಧೋರ್​ನಲ್ಲಿ ಫರ್ಹಾನ್​ ಅಖ್ತರ್ ಅವರು ಕಾರ್ಯಕ್ರಮ ಮಾಡಬೇಕಿತ್ತು. ಅದಕ್ಕಾಗಿ ಸಕಲ ತಯಾರಿ ಮಾಡಿಕೊಳ್ಳಲಾಗಿತ್ತು. ಆದರೆ ಜೋರಾಗಿ ಬೀಸಿದ ಬಿರುಗಾಳಿಯ (Dust Storm) ಕಾರಣದಿಂದ ಬೃಹತ್​ ವೇದಿಕೆಯೇ ನೆಲಕ್ಕುರುಳಿದೆ. ಸಂಗೀತ ಕಾರ್ಯಕ್ರಮಕ್ಕೆ ತರಲಾಗಿದ್ದ ಸ್ಪೀಕರ್​, ಲೈಟ್ಸ್​ ಮುಂತಾದ ಪರಿಕರಗಳಿಗೆ ಹಾನಿ ಆಗಿದೆ. ಬಿರುಗಾಳಿಗೆ ವೇದಿಕೆ ಛಿದ್ರವಾಗುತ್ತಿರುವ ವಿಡಿಯೋ ವೈರಲ್​ ಆಗಿದೆ.

ಬನ್ಸಾಲ್​ ಗ್ರೂಪ್​ ಆಫ್​ ಇನ್​ಸ್ಟಿಟ್ಯೂಟ್ಸ್​ ಸಲುವಾಗಿ ಫರ್ಹಾನ್​ ಅಖ್ತರ್​ ಅವರು ಸಂಗೀತ ಕಾರ್ಯಕ್ರಮ ನೀಡಬೇಕಿತ್ತು. ಆದರೆ ಬಿರುಗಾಳಿಯ ಕಾರಣದಿಂದ ಕಾರ್ಯಕ್ರಮ ರದ್ದಾಗಿದೆ. ವಾತಾವರಣ ತಿಳಿಗೊಂಡ ಬಳಿಕ ಏಪ್ರಿಲ್​ 7ರಂದು ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ. ವೇದಿಕೆ ಕುಸಿದು ಬಿದ್ದಿದ್ದರಿಂದ ಯಾರಿಗೂ ಪ್ರಾಣಹಾನಿ ಅಥವಾ ಗಾಯಗಳು ಆಗಿಲ್ಲ ಎಂಬುದು ಸಮಾಧಾನಕರ ಸಂಗತಿ.

ಇದನ್ನೂ ಓದಿ
Image
ಬಾಲಿವುಡ್​ನವರೂ ಕೆಟ್ಟ ಸಿನಿಮಾ ಮಾಡ್ತಾರೆ, ನಾವ್ಯಾಕೆ ಅವರಿಗೆ ರೇಂಜ್​ ಕೊಡಬೇಕು? ಸುದೀಪ್ ನೇರ ಪ್ರಶ್ನೆ
Image
ಬಾಲಿವುಡ್​ಗಿತ್ತು ಅಂಡರ್​​ವರ್ಲ್ಡ್​​ ಸಂಪರ್ಕ; ಕರಾಳ ಸತ್ಯ ಬಿಚ್ಚಿಟ್ಟ ಖ್ಯಾತ ನಟಿ
Image
ಬಾಲಿವುಡ್​ vs ಸೌತ್ ಎಂದರೆ ನನಗೆ ಸಿಟ್ಟೇ ಬರುತ್ತದೆ; ಅಕ್ಷಯ್ ಕುಮಾರ್ ನೇರ ನುಡಿ
Image
ಸೌತ್​ ಚಿತ್ರಗಳ ಎದುರು ಬಾಲಿವುಡ್​ ಎಡವಿದ್ದು ಎಲ್ಲಿ? ಉತ್ತರ ಹುಡುಕಿದ ‘ಕೆಜಿಎಫ್​ 2’ ಅಧೀರ ಸಂಜಯ್​ ದತ್​

ಏಪ್ರಿಲ್​ 7ರಂದು ಬನ್ಸಾಲ್​ ಗ್ರೂಪ್​ ಆಫ್​ ಇನ್​ಸ್ಟಿಟ್ಯೂಟ್ಸ್​ ಸಲುವಾಗಿ ಕಾರ್ಯಕ್ರಮ ಮುಗಿಸಿಕೊಟ್ಟ ನಂತರ ಫರ್ಹಾನ್​ ಅಖ್ತರ್​ ಅವರು ಹೈದರಾಬಾದ್​, ಬೆಂಗಳೂರು, ಕೊಲ್ಕತ್ತಾ, ಜೈಪುರ ಮುಂತಾದೆಡೆ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಅವರ ‘ಎಕೋಸ್​’ ಆಲ್ಬಂನಲ್ಲಿ ಇರುವ ಒರಿಜಿನಲ್​ ಹಾಡುಗಳನ್ನು ಈ ವೇದಿಕೆಯಲ್ಲಿ ಫರ್ಹಾನ್​ ಅಖ್ತರ್​ ಹಾಡಲಿದ್ದಾರೆ.

ಇದನ್ನೂ ಓದಿ: ಎರಡನೇ ಮದುವೆ ಮಾಡಿಕೊಂಡ ಫರ್ಹಾನ್​ ಅಖ್ತರ್​; ಪ್ರೇಯಸಿ ಶಿಬಾನಿ​ ಜತೆ ಸಿಂಪಲ್​ ವಿವಾಹ

ಸಿನಿಮಾ ನಿರ್ದೇಶನದಲ್ಲೂ ಫರ್ಜಾನ್​ ಅಖ್ತರ್​ ಅವರು ಬ್ಯುಸಿ ಆಗಿದ್ದಾರೆ. ಒಂದೆಡೆ ಸಂಗೀತ ಕಾರ್ಯಕ್ರಮಗಳನ್ನು ಮಾಡುತ್ತಾ, ಇನ್ನೊಂದು ಕಡೆ ಸಿನಿಮಾ ನಿರ್ದೇಶನಕ್ಕೂ ಅವರು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಅವರ ನಿರ್ದೇಶನದಲ್ಲಿ ‘ಜೀ ಲೇ ಝರಾ’ ಸಿನಿಮಾ ಸಿದ್ಧವಾಗಲಿದೆ. ಈ ಚಿತ್ರದ ಶೂಟಿಂಗ್​ಗೆ ಸಿದ್ಧತೆ ನಡೆಯುತ್ತಿದೆ. ಪ್ರಿಯಾಂಕಾ ಚೋಪ್ರಾ, ಕತ್ರಿನಾ ಕೈಫ್​, ಆಲಿಯಾ ಭಟ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಚಿತ್ರದ ರಿಲೀಸ್​ ದಿನಾಂಕದ ಬಗ್ಗೆ ಯಾವುದೇ ಅಪ್​ಡೇಟ್​ ಸಿಕ್ಕಿಲ್ಲ. 2023ರ ಕೊನೆಯಲ್ಲಿ ‘ಜೀ ಲೇ ಝರಾ’ ಚಿತ್ರಕ್ಕೆ ಶೂಟಿಂಗ್​ ಶುರುವಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: Farhan Akhtar: ದೀಪಾವಳಿ ಆಚರಿಸಿದ ಫರ್ಹಾನ್​ ಅಖ್ತರ್​ ವಿರುದ್ಧ ದ್ವೇಷ ಕಾರುತ್ತಿರುವ ಒಂದು ವರ್ಗದ ನೆಟ್ಟಿಗರು

2001ರಿಂದಲೂ ಫರ್ಹಾನ್​ ಅಖ್ತರ್​ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ‘ದಿಲ್​ ಚಾಹ್ತಾ ಹೈ’, ‘ಲಕ್ಷ್ಯ’, ‘ಡಾನ್​’, ‘ಡಾನ್​ 2’ ಮುಂತಾದ ಸಿನಿಮಾಗಳನ್ನು ನಿರ್ದೇಶಿಸಿ ಅವರು ಸೈ ಎನಿಸಿಕೊಂಡಿದ್ದಾರೆ. ‘ಜಿಂದಗಿ ನಾ ಮಿಲೇಗಿ ದೋಬಾರಾ’, ‘ಭಾಗ್​ ಮಿಲ್ಕಾ ಭಾಗ್​’ ಮುಂತಾದ ಗಮನಾರ್ಹ ಚಿತ್ರಗಳಲ್ಲಿ ಅವರು ನಟಿಸುವ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ