AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷಣಾರ್ಧದಲ್ಲಿ ನೆಲಕ್ಕುರುಳಿತು ಬೃಹತ್​ ವೇದಿಕೆ: ಫರ್ಹಾನ್​ ಅಖ್ತರ್​ ಸಂಗೀತ ಕಾರ್ಯಕ್ರಮ ರದ್ದು

ಬನ್ಸಾಲ್​ ಗ್ರೂಪ್​ ಆಫ್​ ಇನ್​ಸ್ಟಿಟ್ಯೂಟ್ಸ್​ ಸಲುವಾಗಿ ಫರ್ಹಾನ್​ ಅಖ್ತರ್​ ಅವರು ಸಂಗೀತ ಕಾರ್ಯಕ್ರಮ ನೀಡಬೇಕಿತ್ತು. ಆದರೆ ಬಿರುಗಾಳಿಯ ಕಾರಣದಿಂದ ಕಾರ್ಯಕ್ರಮ ರದ್ದಾಗಿದೆ.

ಕ್ಷಣಾರ್ಧದಲ್ಲಿ ನೆಲಕ್ಕುರುಳಿತು ಬೃಹತ್​ ವೇದಿಕೆ: ಫರ್ಹಾನ್​ ಅಖ್ತರ್​ ಸಂಗೀತ ಕಾರ್ಯಕ್ರಮ ರದ್ದು
ಫರ್ಹಾನ್ ಅಖ್ತರ್
ಮದನ್​ ಕುಮಾರ್​
|

Updated on: Apr 06, 2023 | 4:49 PM

Share

ಬಾಲಿವುಡ್​ ನಟ ಫರ್ಹಾನ್​ ಅಖ್ತರ್ (Farhan Akhtar)​ ಅವರು ಗಾಯಕನಾಗಿಯೂ ಫೇಮಸ್​ ಆಗಿದ್ದಾರೆ. ಅವರ ಹಾಡಿಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ನಟನೆ, ನಿರ್ದೇಶನದ ಜೊತೆಗೆ ಅವರು ವಿವಿಧ ನಗರಗಳಿಗೆ ತೆರಳಿ ಸಂಗೀತ ಕಾರ್ಯಕ್ರಮಗಳನ್ನು (Music Concert) ನೀಡುತ್ತಾರೆ. ಬುಧವಾರ (ಏಪ್ರಿಲ್​ 5) ಇಂಧೋರ್​ನಲ್ಲಿ ಫರ್ಹಾನ್​ ಅಖ್ತರ್ ಅವರು ಕಾರ್ಯಕ್ರಮ ಮಾಡಬೇಕಿತ್ತು. ಅದಕ್ಕಾಗಿ ಸಕಲ ತಯಾರಿ ಮಾಡಿಕೊಳ್ಳಲಾಗಿತ್ತು. ಆದರೆ ಜೋರಾಗಿ ಬೀಸಿದ ಬಿರುಗಾಳಿಯ (Dust Storm) ಕಾರಣದಿಂದ ಬೃಹತ್​ ವೇದಿಕೆಯೇ ನೆಲಕ್ಕುರುಳಿದೆ. ಸಂಗೀತ ಕಾರ್ಯಕ್ರಮಕ್ಕೆ ತರಲಾಗಿದ್ದ ಸ್ಪೀಕರ್​, ಲೈಟ್ಸ್​ ಮುಂತಾದ ಪರಿಕರಗಳಿಗೆ ಹಾನಿ ಆಗಿದೆ. ಬಿರುಗಾಳಿಗೆ ವೇದಿಕೆ ಛಿದ್ರವಾಗುತ್ತಿರುವ ವಿಡಿಯೋ ವೈರಲ್​ ಆಗಿದೆ.

ಬನ್ಸಾಲ್​ ಗ್ರೂಪ್​ ಆಫ್​ ಇನ್​ಸ್ಟಿಟ್ಯೂಟ್ಸ್​ ಸಲುವಾಗಿ ಫರ್ಹಾನ್​ ಅಖ್ತರ್​ ಅವರು ಸಂಗೀತ ಕಾರ್ಯಕ್ರಮ ನೀಡಬೇಕಿತ್ತು. ಆದರೆ ಬಿರುಗಾಳಿಯ ಕಾರಣದಿಂದ ಕಾರ್ಯಕ್ರಮ ರದ್ದಾಗಿದೆ. ವಾತಾವರಣ ತಿಳಿಗೊಂಡ ಬಳಿಕ ಏಪ್ರಿಲ್​ 7ರಂದು ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ. ವೇದಿಕೆ ಕುಸಿದು ಬಿದ್ದಿದ್ದರಿಂದ ಯಾರಿಗೂ ಪ್ರಾಣಹಾನಿ ಅಥವಾ ಗಾಯಗಳು ಆಗಿಲ್ಲ ಎಂಬುದು ಸಮಾಧಾನಕರ ಸಂಗತಿ.

ಇದನ್ನೂ ಓದಿ
Image
ಬಾಲಿವುಡ್​ನವರೂ ಕೆಟ್ಟ ಸಿನಿಮಾ ಮಾಡ್ತಾರೆ, ನಾವ್ಯಾಕೆ ಅವರಿಗೆ ರೇಂಜ್​ ಕೊಡಬೇಕು? ಸುದೀಪ್ ನೇರ ಪ್ರಶ್ನೆ
Image
ಬಾಲಿವುಡ್​ಗಿತ್ತು ಅಂಡರ್​​ವರ್ಲ್ಡ್​​ ಸಂಪರ್ಕ; ಕರಾಳ ಸತ್ಯ ಬಿಚ್ಚಿಟ್ಟ ಖ್ಯಾತ ನಟಿ
Image
ಬಾಲಿವುಡ್​ vs ಸೌತ್ ಎಂದರೆ ನನಗೆ ಸಿಟ್ಟೇ ಬರುತ್ತದೆ; ಅಕ್ಷಯ್ ಕುಮಾರ್ ನೇರ ನುಡಿ
Image
ಸೌತ್​ ಚಿತ್ರಗಳ ಎದುರು ಬಾಲಿವುಡ್​ ಎಡವಿದ್ದು ಎಲ್ಲಿ? ಉತ್ತರ ಹುಡುಕಿದ ‘ಕೆಜಿಎಫ್​ 2’ ಅಧೀರ ಸಂಜಯ್​ ದತ್​

ಏಪ್ರಿಲ್​ 7ರಂದು ಬನ್ಸಾಲ್​ ಗ್ರೂಪ್​ ಆಫ್​ ಇನ್​ಸ್ಟಿಟ್ಯೂಟ್ಸ್​ ಸಲುವಾಗಿ ಕಾರ್ಯಕ್ರಮ ಮುಗಿಸಿಕೊಟ್ಟ ನಂತರ ಫರ್ಹಾನ್​ ಅಖ್ತರ್​ ಅವರು ಹೈದರಾಬಾದ್​, ಬೆಂಗಳೂರು, ಕೊಲ್ಕತ್ತಾ, ಜೈಪುರ ಮುಂತಾದೆಡೆ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಅವರ ‘ಎಕೋಸ್​’ ಆಲ್ಬಂನಲ್ಲಿ ಇರುವ ಒರಿಜಿನಲ್​ ಹಾಡುಗಳನ್ನು ಈ ವೇದಿಕೆಯಲ್ಲಿ ಫರ್ಹಾನ್​ ಅಖ್ತರ್​ ಹಾಡಲಿದ್ದಾರೆ.

ಇದನ್ನೂ ಓದಿ: ಎರಡನೇ ಮದುವೆ ಮಾಡಿಕೊಂಡ ಫರ್ಹಾನ್​ ಅಖ್ತರ್​; ಪ್ರೇಯಸಿ ಶಿಬಾನಿ​ ಜತೆ ಸಿಂಪಲ್​ ವಿವಾಹ

ಸಿನಿಮಾ ನಿರ್ದೇಶನದಲ್ಲೂ ಫರ್ಜಾನ್​ ಅಖ್ತರ್​ ಅವರು ಬ್ಯುಸಿ ಆಗಿದ್ದಾರೆ. ಒಂದೆಡೆ ಸಂಗೀತ ಕಾರ್ಯಕ್ರಮಗಳನ್ನು ಮಾಡುತ್ತಾ, ಇನ್ನೊಂದು ಕಡೆ ಸಿನಿಮಾ ನಿರ್ದೇಶನಕ್ಕೂ ಅವರು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಅವರ ನಿರ್ದೇಶನದಲ್ಲಿ ‘ಜೀ ಲೇ ಝರಾ’ ಸಿನಿಮಾ ಸಿದ್ಧವಾಗಲಿದೆ. ಈ ಚಿತ್ರದ ಶೂಟಿಂಗ್​ಗೆ ಸಿದ್ಧತೆ ನಡೆಯುತ್ತಿದೆ. ಪ್ರಿಯಾಂಕಾ ಚೋಪ್ರಾ, ಕತ್ರಿನಾ ಕೈಫ್​, ಆಲಿಯಾ ಭಟ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಚಿತ್ರದ ರಿಲೀಸ್​ ದಿನಾಂಕದ ಬಗ್ಗೆ ಯಾವುದೇ ಅಪ್​ಡೇಟ್​ ಸಿಕ್ಕಿಲ್ಲ. 2023ರ ಕೊನೆಯಲ್ಲಿ ‘ಜೀ ಲೇ ಝರಾ’ ಚಿತ್ರಕ್ಕೆ ಶೂಟಿಂಗ್​ ಶುರುವಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: Farhan Akhtar: ದೀಪಾವಳಿ ಆಚರಿಸಿದ ಫರ್ಹಾನ್​ ಅಖ್ತರ್​ ವಿರುದ್ಧ ದ್ವೇಷ ಕಾರುತ್ತಿರುವ ಒಂದು ವರ್ಗದ ನೆಟ್ಟಿಗರು

2001ರಿಂದಲೂ ಫರ್ಹಾನ್​ ಅಖ್ತರ್​ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ‘ದಿಲ್​ ಚಾಹ್ತಾ ಹೈ’, ‘ಲಕ್ಷ್ಯ’, ‘ಡಾನ್​’, ‘ಡಾನ್​ 2’ ಮುಂತಾದ ಸಿನಿಮಾಗಳನ್ನು ನಿರ್ದೇಶಿಸಿ ಅವರು ಸೈ ಎನಿಸಿಕೊಂಡಿದ್ದಾರೆ. ‘ಜಿಂದಗಿ ನಾ ಮಿಲೇಗಿ ದೋಬಾರಾ’, ‘ಭಾಗ್​ ಮಿಲ್ಕಾ ಭಾಗ್​’ ಮುಂತಾದ ಗಮನಾರ್ಹ ಚಿತ್ರಗಳಲ್ಲಿ ಅವರು ನಟಿಸುವ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ