AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನದೇ ರಕ್ತ ಸುರಿಸಿ ‘ದಿ ಕಾಶ್ಮೀರ್​ ಫೈಲ್ಸ್​’ ಪೋಸ್ಟರ್​ ರಚಿಸಿದ ಮಹಿಳೆ; ‘ಇಂಥದ್ದೆಲ್ಲ ಮಾಡ್ಬೇಡಿ’ ಎಂದ ನಿರ್ದೇಶಕ

The Kashmir Files: ರಕ್ತದಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ಪೋಸ್ಟರ್​ ರಚಿಸಿದ ಮಹಿಳೆ ಹೆಸರು ಮಂಜೂ ಸೋನಿ. ತಮ್ಮ ದೇಹದಿಂದ 10 ಎಂಎಲ್​ ರಕ್ತವನ್ನು ತೆಗೆದುಕೊಂಡು ಅವರು ಈ ಕೆಲಸ ಮಾಡಿದ್ದಾರೆ.

ತನ್ನದೇ ರಕ್ತ ಸುರಿಸಿ ‘ದಿ ಕಾಶ್ಮೀರ್​ ಫೈಲ್ಸ್​’ ಪೋಸ್ಟರ್​ ರಚಿಸಿದ ಮಹಿಳೆ; ‘ಇಂಥದ್ದೆಲ್ಲ ಮಾಡ್ಬೇಡಿ’ ಎಂದ ನಿರ್ದೇಶಕ
ರಕ್ತದಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ಪೋಸ್ಟರ್​ ರಚಿಸಿದ ಮಹಿಳೆ
TV9 Web
| Updated By: ಮದನ್​ ಕುಮಾರ್​|

Updated on: Mar 25, 2022 | 1:29 PM

Share

ಬಾಲಿವುಡ್​ನ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ (The Kashmir Files) ಸೃಷ್ಟಿಸಿರುವ ಕ್ರೇಜ್​ ಅಷ್ಟಿಷ್ಟಲ್ಲ. ಗಲ್ಲಾಪೆಟ್ಟಿಗೆಯಲ್ಲಿ 200 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿರುವ ಈ ಸಿನಿಮಾವನ್ನು ಹಲವು ರೀತಿಯಲ್ಲಿ ವಿಶ್ಲೇಷಿಸಲಾಗುತ್ತಿದೆ. ಚಿತ್ರದಲ್ಲಿ ತೋರಿಸಲಾದ ವಿಷಯಗಳ ಬಗ್ಗೆ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಕೆಲವರಂತೂ ‘ದಿ ಕಾಶ್ಮಿರ್​ ಫೈಲ್ಸ್​’ ಸಿನಿಮಾ ನೋಡಿದ ಬಳಿಕ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Director Vivek Agnihotri) ಅವರನ್ನು ಪರಿಪರಿಯಾಗಿ ಹೊಗಳುತ್ತಿದ್ದಾರೆ. ಅಕ್ಷಯ್​ ಕುಮಾರ್​, ಕಂಗನಾ ರಣಾವತ್​, ರಾಮ್​ ಗೋಪಾಲ್​ ವರ್ಮಾ, ನರೇಂದ್ರ ಮೋದಿ, ಬಸವರಾಜ ಬೊಮ್ಮಾಯಿ ಮುಂತಾದವರು ಈ ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಜನಸಾಮಾನ್ಯರು ಕೂಡ ‘ದಿ ಕಾಶ್ಮೀರ್​ ಫೈಲ್ಸ್’ ಚಿತ್ರಕ್ಕೆ ಫುಲ್​ ಮಾರ್ಕ್ಸ್​ ನೀಡಿದ್ದಾರೆ. ಸಿನಿಮಾದ ಬಗ್ಗೆ ತಮಗೆ ಇರುವ ಅಭಿಮಾನವನ್ನು ಹಲವು ಬಗೆಯಲ್ಲಿ ವ್ಯಕ್ತಪಡಿಸಲಾಗುತ್ತಿದೆ. ಪ್ರೇಕ್ಷಕರ ಭಾವನೆಯ ಮೇಲೆ ಈ ಸಿನಿಮಾ ಪ್ರಭಾವ ಬೀರಿದೆ ಎಂಬುದಕ್ಕೆ ಹಲವು ಉದಾಹರಣೆಗಳು ಸಿಗುತ್ತಿವೆ. ಅದಕ್ಕೆ ಲೇಟೆಸ್ಟ್​ ಸಾಕ್ಷಿ ಎಂದರೆ ಮಹಿಳೆಯೊಬ್ಬರು ತಮ್ಮ ರಕ್ತದಿಂದ ಈ ಸಿನಿಮಾ ಪೋಸ್ಟರ್ (The Kashmir Files Poster) ರಚಿಸಿರುವುದು! ಸದ್ಯ ಈ ಫೋಟೋಗಳು ವೈರಲ್​ ಆಗುತ್ತಿವೆ.

ಈ ರೀತಿ ಪೋಸ್ಟರ್​ ರಚಿಸಿದ ಮಹಿಳೆ ಹೆಸರು ಮಂಜೂ ಸೋನಿ. ತಮ್ಮ ದೇಹದಿಂದ 10 ಎಂಎಲ್​ ರಕ್ತವನ್ನು ತೆಗೆದುಕೊಂಡು ಅವರು ಈ ಕೆಲಸ ಮಾಡಿದ್ದಾರೆ. ಆ ಕುರಿತು ಪತ್ರಿಕೆಗಳಲ್ಲಿ ಸುದ್ದಿ ಕೂಡ ಪ್ರಕಟ ಆಗಿದೆ. ಫೋಟೋಗಳು ವೈರಲ್​ ಆದ ಬಳಿಕ ಅದು ನಿರ್ದೇಶಕ ವಿವೇಕ್​​ ಅಗ್ನಿಹೋತ್ರಿ ಅವರ ಕಣ್ಣಿಗೂ ಬಿದ್ದಿದೆ. ಮೊದಲಿಗೆ ಈ ಪರಿ ಪ್ರೀತಿ ಕಂಡು ಅವರು ಹೊಗಳಿದ್ದಾರೆ. ‘ಓಹ್​ ಮೈ ಗಾಡ್​.. ಇದನ್ನು ನಂಬಲು ಸಾಧ್ಯವಿಲ್ಲ. ಏನು ಹೇಳಬೇಕು ಎಂಬುದೇ ತಿಳಿಯುತ್ತಿಲ್ಲ. ಮಂಜೂ ಅವರಿಗೆ ನಾನು ಹೇಗೆ ಧನ್ಯವಾದ ತಿಳಿಸಬೇಕು ಅಂತ ಗೊತ್ತಿಲ್ಲ. ಅವರಿಗೆ ನನ್ನ ಶತ ಶತ ಪ್ರಣಾಮಗಳು, ಕೃತಜ್ಞತೆಗಳು. ಅವರ ಪರಿಚಯ ನಿಮಗೆ ಯಾರಿಗಾದರೂ ಇದ್ದರೆ ನನಗೆ ಅವರ ನಂಬರ್​ ಮೆಸೇಜ್​ ಮಾಡಿ’ ಎಂದು ವಿವೇಕ್​ ಅಗ್ನಿಹೋತ್ರಿ ಟ್ವೀಟ್​ ಮಾಡಿದ್ದಾರೆ.

ಮಹಿಳೆ ಮಾಡಿರುವುದು ಸರಿಯಲ್ಲ ಎಂದು ನಂತರ ವಿವೇಕ್​ ಅಗ್ನಿಹೋತ್ರಿ ಅವರಿಗೆ ಅನಿಸಿದೆ. ಆ ಕುರಿತಾಗಿಯೂ ಅವರು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ. ‘ನಿಮ್ಮ ಭಾವನೆಗಳನ್ನು ನಾನು ಮೆಚ್ಚುತ್ತೇನೆ. ಆದರೂ ಕೂಡ ಈ ರೀತಿಯ ಯಾವುದನ್ನೂ ಪ್ರಯತ್ನಿಸಬೇಡಿ ಎಂದು ಗಂಭೀರವಾಗಿ ನಾನು ಮನವಿ ಮಾಡಿಕೊಳ್ಳುತ್ತೇನೆ. ಇದು ಒಳ್ಳೆಯದು ಅಲ್ಲವೇ ಅಲ್ಲ. ಮನೆಯಲ್ಲಿ ಇಂಥದ್ದನೆಲ್ಲ ಮಾಡಲೇಬೇಡಿ’ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

1990ರಲ್ಲಿ ನಡೆದ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿ ಈ ಸಿನಿಮಾ ಮೂಡಿಬಂದಿದೆ. ಅನುಪಮ್​ ಖೇರ್​, ದರ್ಶನ್​ ಕುಮಾರ್​, ಪುನೀತ್​ ಇಸ್ಸಾರ್​, ಪಲ್ಲವಿ ಜೋಶಿ, ಮಿಥುನ್​ ಚಕ್ರವರ್ತಿ, ಪ್ರಕಾಶ್​ ಬೆಳವಾಡಿ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲಾಗಿದೆ. ಹಲವು ಶಾಸಕರು ಮತ್ತು ಸಚಿವರು ಸಿನಿಮಾ ನೋಡಿದ ಬಳಿಕ ಚಿತ್ರಕ್ಕೆ ಪ್ರಚಾರ ಸಿಕ್ಕಿತು.

ಗಲ್ಲಾಪೆಟ್ಟಿಗೆಯಲ್ಲಿ ಈ ಸಿನಿಮಾ ಕಮಾಲ್​ ಮಾಡಿದೆ. ಸ್ಟಾರ್​ ನಟರ ಕಮರ್ಷಿಯಲ್​ ಸಿನಿಮಾಗಳನ್ನೂ ಹಿಂದಿಕ್ಕೆ ಅತ್ಯುತ್ತಮ ಕಲೆಕ್ಷನ್​ ಮಾಡಿದೆ. ಭಾರತದ ಬಾಕ್ಸ್​ ಆಫೀಸ್​ನಲ್ಲಿ ಎರಡು ವಾರಕ್ಕೆ ಬರೋಬ್ಬರಿ 207 ಕೋಟಿ ರೂಪಾಯಿ ಗಳಿಸಿದೆ. ವಿದೇಶಿ ಗಳಿಕೆಯನ್ನೂ ಸೇರಿಸಿದರೆ ಈ ಮೊತ್ತ ಇನ್ನಷ್ಟು ಹೆಚ್ಚುತ್ತದೆ. ರಿಲೀಸ್​ ಆಗಿ ಎರಡು ವಾರ ಕಳೆದ ಬಳಿಕವೂ ಅನೇಕ ಕಡೆಗಳಲ್ಲಿ ಈ ಸಿನಿಮಾ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ.

ಇದನ್ನೂ ಓದಿ:

The Kashmir Files Review: ಕಾಶ್ಮೀರದ ಭಯಾನಕ ಇತಿಹಾಸ ಮರೆಯಬಾರದು; ಮರುಕಳಿಸಲೂಬಾರದು

‘ದಿ ಕಾಶ್ಮೀರ್ ಫೈಲ್ಸ್​ ಚಿತ್ರವನ್ನು ಹೇಟ್​ ಮಾಡ್ತೀನಿ’: ತಮ್ಮದೇ ಶೈಲಿಯಲ್ಲಿ ವಿಮರ್ಶೆ ಮಾಡಿದ ಆರ್​ಜಿವಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!