AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ‘ಆಕೆಯನ್ನು ಜೈಲಿಗೆ ಹಾಕಿ’: ಶಾರುಖ್​ ಖಾನ್​ಗೆ ಅನುಮತಿ ಇಲ್ಲದೇ ಕಿಸ್​ ಮಾಡಿದ ಮಹಿಳೆ ವಿರುದ್ಧ ಅಭಿಮಾನಿಗಳ ಆಕ್ರೋಶ

Shah Rukh Khan Viral Video: ದುಬೈನಲ್ಲಿ ಮಹಿಳೆಯೊಬ್ಬರು ಶಾರುಖ್​ ಖಾನ್​ಗೆ ಕಿಸ್​ ಮಾಡಿದ ವಿಡಿಯೋ ವೈರಲ್​ ಆಗಿದೆ. ಈ ವಿಡಿಯೋ ಬಗ್ಗೆ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

Shah Rukh Khan: ‘ಆಕೆಯನ್ನು ಜೈಲಿಗೆ ಹಾಕಿ’: ಶಾರುಖ್​ ಖಾನ್​ಗೆ ಅನುಮತಿ ಇಲ್ಲದೇ ಕಿಸ್​ ಮಾಡಿದ ಮಹಿಳೆ ವಿರುದ್ಧ ಅಭಿಮಾನಿಗಳ ಆಕ್ರೋಶ
ಶಾರುಖ್​ ಖಾನ್​ಗೆ ಅನುಮತಿ ಇಲ್ಲದೇ ಕಿಸ್​ ಮಾಡಿದ ಮಹಿಳೆ
ಮದನ್​ ಕುಮಾರ್​
|

Updated on: Jun 14, 2023 | 6:06 PM

Share

ನಟ ಶಾರುಖ್​ ಖಾನ್​ (Shah Rukh Khan) ಅವರ ಜನಪ್ರಿಯತೆ ಭಾರತಕ್ಕೆ ಮಾತ್ರ ಸೀಮಿತವಲ್ಲ. ಅವರ ಹವಾ ವಿಶ್ವಾದ್ಯಂತ ಇದೆ. ಅದರಲ್ಲೂ ದುಬೈನಲ್ಲಿ ಅವರನ್ನು ಇಷ್ಟಪಡುವ ಅಭಿಮಾನಿಗಳ ಸಂಖ್ಯೆ ದೊಡ್ಡದಿದೆ. ಇತ್ತೀಚೆಗೆ ಅವರು ದುಬೈಗೆ (Dubai) ತೆರಳಿದ್ದರು. ಅಲ್ಲಿ ಸ್ನೇಹಿತರೊಬ್ಬರ ರಿಯಲ್​ ಎಸ್ಟೇಟ್​ ಕಂಪನಿಯ ಪ್ರಚಾರ ಕಾರ್ಯಕ್ರಮದಲ್ಲಿ ಶಾರುಖ್​ ಖಾನ್​ ಭಾಗಿಯಾದರು. ಆ ಇವೆಂಟ್​ನಲ್ಲಿ ಅವರು ಕೆಲವು ಅಭಿಮಾನಿಗಳನ್ನು ಭೇಟಿ ಮಾಡಿದರು. ಅಭಿಮಾನಿಗಳ (Shah Rukh Khan Fans) ಗುಂಪಿನಲ್ಲಿ ಇದ್ದ ಮಹಿಳೆಯೊಬ್ಬರು ಶಾರುಖ್​ಗೆ ಕಿಸ್​ ಮಾಡಿದ್ದಾರೆ. ನಟನ ಅನುಮತಿ ಇಲ್ಲದೇ ಸಾರ್ವಜನಿಕವಾಗಿ ಈ ರೀತಿ ನಡೆದುಕೊಂಡಿದ್ದಕ್ಕಾಗಿ ಆಕೆಯನ್ನು ಜೈಲಿಗೆ ಹಾಕಬೇಕು ಎಂದು ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ಕಮೆಂಟ್​ಗಳ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ದುಬೈನಲ್ಲಿ ಮಹಿಳೆಯೊಬ್ಬರು ಶಾರುಖ್​ ಖಾನ್​ಗೆ ಕಿಸ್​ ಮಾಡಿದ ವಿಡಿಯೋ ವೈರಲ್​ ಆಗಿದೆ. ಈ ವೇಳೆ ಶಾರುಖ್​ ಜೊತೆ ಅವರ ಮ್ಯಾನೇಜರ್​ ಪೂಜಾ ದದ್ಲಾನಿ ಮತ್ತು ಬಾಡಿ ಗಾರ್ಡ್ಸ್​ ಕೂಡ ಇದ್ದರು. ಶಾರುಖ್​ ಬಳಿ ಬಂದ ಮಹಿಳೆಯು ‘ನಿಮಗೆ ನಾನು ಕಿಸ್​ ಮಾಡಲೇ’ ಎಂದು ಕೇಳುತ್ತಾರೆ. ಶಾರುಖ್​ ಕಡೆಯಿಂದ ಉತ್ತರ ಬರುವುದಕ್ಕೂ ಮುನ್ನವೇ ಆಕೆಯು ತಮ್ಮ ನೆಚ್ಚಿನ ನಟನ ಮುಖಕ್ಕೆ ಮುತ್ತು ಕೊಟ್ಟು ಖುಷಿಪಡುತ್ತಾರೆ. ವೈರಲ್​ ಆಗಿರುವ ಈ ವಿಡಿಯೋ ಬಗ್ಗೆ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

‘ಶಾರುಖ್​ ಖಾನ್​ ಅವರ ಜಾಗದಲ್ಲಿ ಓರ್ವ ನಟಿಯನ್ನು ಕಲ್ಪಿಸಿಕೊಳ್ಳಿ. ಆ ನಟಿಯ ಜೊತೆ ಪುರುಷನೊಬ್ಬ ಇದೇ ರೀತಿ ನಡೆದುಕೊಂಡಿದ್ದರೆ ಪರಿಸ್ಥಿತಿ ಏನಾಗಿರುತ್ತಿತ್ತು’ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ. ‘ಶಾರುಖ್​ ಖಾನ್​ ಅವರ ಅನುಮತಿ ಇಲ್ಲದೇ ಕಿಸ್​ ಮಾಡಿದ ಆ ಮಹಿಳೆಯನ್ನು ಜೈಲಿಗೆ ಹಾಕಿ’ ಎಂದು ಅಭಿಮಾನಿಗಳು ಆಕ್ರೋಶದಿಂದ ಕಮೆಂಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ: Shah Rukh Khan: ತಕ್ಷಣ ನೋಡಿ ಇದು ಶಾರುಖ್​ ಖಾನ್​ ಅಂದುಕೊಳ್ಳಬೇಡಿ; ಈ ವ್ಯಕ್ತಿಯ ಕಥೆ ಬೇರೆಯೇ ಇದೆ

ಸಿನಿಮಾ ವಿಚಾರಕ್ಕೆ ಬರೋದಾದರೆ ಶಾರುಖ್​ ಖಾನ್​ ಅವರು ‘ಪಠಾಣ್​’ ಸಿನಿಮಾದ ಗೆಲುವಿನ ಬಳಿಕ ಟ್ರ್ಯಾಕ್​ಗೆ ಮರಳಿದ್ದಾರೆ. ಈಗ ಅವರು ಅಭಿನಯಿಸುತ್ತಿರುವ ‘ಜವಾನ್’ ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳು ಮನೆಮಾಡಿವೆ. ಈ ವರ್ಷದ ಅತೀ ನಿರೀಕ್ಷಿತ ಮತ್ತು ದುಬಾರಿ ಬಜೆಟ್​ನ ಸಿನಿಮಾ ಎಂಬ ಹೆಗ್ಗಳಿಕೆಗೆ ‘ಜವಾನ್​’ ಪಾತ್ರವಾಗುತ್ತಿದೆ. ಈ ಚಿತ್ರವನ್ನು ಶಾರುಖ್ ಖಾನ್ ಅವರ ‘ರೆಡ್ ಚಿಲ್ಲೀಸ್ ಎಂಟರ್​ಟೈನ್​ಮೆಂಟ್’ ಸಂಸ್ಥೆ ನಿರ್ಮಿಸುತ್ತಿದೆ. ಕಾಲಿವುಡ್​ನ ಜನಪ್ರಿಯ ನಿರ್ದೇಶಕರಾದ ಅಟ್ಲಿ ಕುಮಾರ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ಜವಾನ್’ ಚಿತ್ರದ ಮೇಲೆ ನಿರೀಕ್ಷೆಗಳು ಹೆಚ್ಚಾಗಿರುವುದರಿಂದ, ಈ ಚಿತ್ರದ ಹಕ್ಕುಗಳನ್ನು ತಮ್ಮದಾಗಿಸಿಕೊಳ್ಳುವುದಕ್ಕೆ ಹಲವು ಪ್ರತಿಷ್ಠಿತ ಸಂಸ್ಥೆಗಳು ಮುಂದಾಗಿವೆ. ದೊಡ್ಡ ಮೊತ್ತ ಕೊಟ್ಟು ಹಕ್ಕುಗಳನ್ನು ಖರೀದಿಸಿರುವ ಸುದ್ದಿ ಬಂದಿದೆ.

ಇದನ್ನೂ ಓದಿ: ಶಾರುಖ್​ ಖಾನ್​ ಪುತ್ರಿ ಸುಹಾನಾಗೆ ಸಿಕ್ಕಿದೆ ಭರಪೂರ ಮೆಚ್ಚುಗೆ

ಈ ವರ್ಷದ ಜನವರಿಯಲ್ಲಿ ಬಿಡುಗಡೆಯಾದ ಶಾರುಖ್ ಖಾನ್​ ಅಭಿನಯದ ‘ಪಠಾಣ್’ ಚಿತ್ರವು ಜಗತ್ತಿನಾದ್ಯಂತ ಸಾವಿರ ಕೋಟಿ ರೂಪಾಯಿಗಿಂತಲೂ ಅಧಿಕ ಕಲೆಕ್ಷನ್​ ಮಾಡಿ ಬ್ಲಾಕ್‌ಬಸ್ಟರ್ ಎನಿಸಿಕೊಂಡಿತ್ತು. ಈಗ ಆ ಸಿನಿಮಾದ ರೀತಿಯೇ ‘ಜವಾನ್​’ ಚಿತ್ರ ಕೂಡ ಬಿಸ್ನೆಸ್​ ಮಾಡುವ ಮುನ್ಸೂಚನೆ ಸಿಕ್ಕಿದೆ. ‘ಜವಾನ್’ ಚಿತ್ರದ ಒಟಿಟಿ, ಸ್ಯಾಟಿಲೈಟ್ ಮತ್ತು ಆಡಿಯೋ ಹಕ್ಕುಗಳಿಗೆ ಬೇರೆಬೇರೆ ಸಂಸ್ಥೆಗಳು ದೊಡ್ಡ ಆಫರ್ ನೀಡಿವೆ ಎನ್ನಲಾಗುತ್ತಿದೆ. ಭಾರಿ ಮೊತ್ತಕ್ಕೆ ಹಕ್ಕುಗಳು ಸೇಲ್​ ಆಗಿರುವ ಸುದ್ದಿ ಇದೆ. ಆದರೆ, ಎಷ್ಟು ಕೋಟಿಗೆ ಹಕ್ಕುಗಳು ಮಾರಾಟವಾಗಿವೆ ಎಂಬ ಮಾಹಿತಿಯನ್ನು ಚಿತ್ರತಂಡದವರು ಬಹಿರಂಗಗೊಳಿಸಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ