AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಖಾನ್​ ಜೊತೆ ಫೋಟೋ ತೆಗೆದುಕೊಳ್ಳಲು ಬಂದು ಕಿಸ್​ ಮಾಡಿದ ಮಹಿಳೆ

ಎಲ್ಲೇ ಹೋದರೂ ಸಲ್ಮಾನ್​ ಖಾನ್​ ಅವರು ಬಹಳ ಎಚ್ಚರಿಕೆಯಿಂದ ಇರಬೇಕಾದ ಪರಿಸ್ಥಿತಿ ನಿರ್ಮಾಣ ಆಗಿದೆ. ಯಾಕೆಂದರೆ, ಅವರಿಗೆ ಜೀವ ಬೆದರಿಕೆ ಇದೆ. ಹಾಗಾಗಿ ಅವರು ಭದ್ರತೆ ಹೆಚ್ಚಿಸಿಕೊಂಡಿದ್ದಾರೆ. ಇದರ ನಡುವೆಯೂ ಅಭಿಮಾನಿಗಳು ಹತ್ತಿರಕ್ಕೆ ಬಂದಾಗ ತಾಳ್ಮೆಯಿಂದ ಫೋಟೋಗೆ ಪೋಸ್​ ನೀಡಿದ್ದನ್ನು ನೆಟ್ಟಿಗರು ಪ್ರಶಂಸಿಸಿದ್ದಾರೆ.

ಸಲ್ಮಾನ್​ ಖಾನ್​ ಜೊತೆ ಫೋಟೋ ತೆಗೆದುಕೊಳ್ಳಲು ಬಂದು ಕಿಸ್​ ಮಾಡಿದ ಮಹಿಳೆ
ಸಲ್ಮಾನ್​ ಖಾನ್​
ಮದನ್​ ಕುಮಾರ್​
|

Updated on:Dec 22, 2023 | 4:18 PM

Share

ಬಾಲಿವುಡ್​ನ ಖ್ಯಾತ ನಟ ಸಲ್ಮಾನ್​ ಖಾನ್​ (Salman Khan) ಅವರಿಗೆ ಇರುವ ಫ್ಯಾನ್​ ಫಾಲೋಯಿಂಗ್​ ದೊಡ್ಡದು. ಅವರ ಜೊತೆ ಒಂದು ಫೋಟೋ ತೆಗೆದುಕೊಳ್ಳಬೇಕು ಎಂದು ಬಯಸುವ ಕೋಟ್ಯಂತರ ಅಭಿಮಾನಿಗಳು (Salman Khan Fan) ಇದ್ದಾರೆ. ಆದರೆ ಅವಕಾಶ ಸಿಗುವುದು ಕೆಲವೇ ಕೆಲವು ಮಂದಿಗೆ ಮಾತ್ರ. ಈಗ ಮುಂಬೈನಲ್ಲಿ ಮಹಿಳೆಯೊಬ್ಬರು ಸಲ್ಮಾನ್​ ಖಾನ್​ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ಬಳಿಕ ಖುಷಿಯಿಂದ ಮುತ್ತು ನೀಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್​ (Salman Khan Viral Video) ಆಗಿದೆ. ಅದನ್ನು ನೋಡಿ ಫ್ಯಾನ್ಸ್​ ಹಲವು ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ನಿರ್ಮಾಪಕ ಆನಂದ್​ ಪಂಡಿತ್​ ಅವರ 60ನೇ ವರ್ಷದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗಿದೆ. ಈ ಪಾರ್ಟಿಗೆ ಸಲ್ಮಾನ್​ ಖಾನ್​ ಅವರು ಅತಿಥಿಯಾಗಿ ಆಗಮಿಸಿದ್ದರು. ಬೇರೆ ಸೆಲೆಬ್ರಿಟಿಗಳು ಕೂಡ ಬಂದಿದ್ದರು. ಪಾರ್ಟಿ ಮುಗಿಸಿ ವಾಪಸ್​ ಹೊರಡುವಾಗ ಅನೇಕ ಅಭಿಮಾನಿಗಳು ಸಲ್ಲು ಅವರನ್ನು ಮುತ್ತಿಕೊಂಡಿದ್ದಾರೆ. ಎಲ್ಲರೂ ಸಲ್ಮಾನ್​ ಖಾನ್​ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದಿದ್ದಾರೆ.

ಇದನ್ನೂ ಓದಿ: ವಯಸ್ಸಾದ ತಂದೆ-ತಾಯಿಯ ಕಾರಿಗೆ ಅಡ್ಡ ಬಂದವರಿಗೆ ಎಚ್ಚರಿಕೆ ನೀಡಿದ ಸಲ್ಮಾನ್​ ಖಾನ್​

ಸಲ್ಮಾನ್​ ಖಾನ್​ ಕೂಲ್​ ಆಗಿದ್ದರೆ ಖುಷಿಯಿಂದ ಫೋಟೋಗೆ ಪೋಸ್​ ನೀಡುತ್ತಾರೆ. ಆನಂದ್​ ಪಂಡಿತ್​ ಅವರ ಬರ್ತ್​ಡೇ ಪಾರ್ಟಿ ಮುಗಿಸಿ ವಾಪಸ್​ ಹೊರಡುವಾಗಲೂ ಸಲ್ಲು ತುಂಬ ಕೂಲ್​ ಆಗಿದ್ದರು. ಈ ವೇಳೆ ಫೋಟೋ ಕೇಳಿದ ಮಹಿಳೆಯ ಜೊತೆ ಅವರು ಪೋಸ್​ ನೀಡಿದ್ದಾರೆ.

ತಮ್ಮ ನೆಚ್ಚಿನ ನಟನ ಜೊತೆ ಫೋಟೋ ಸಿಕ್ಕ ಖುಷಿಗೆ ಆ ಮಹಿಳೆಯು ಸಲ್ಮಾನ್​ ಖಾನ್​ ಕೈಗೆ ಮುತ್ತು ಕೊಟ್ಟಿದ್ದಾರೆ. ಸ್ಥಳದಲ್ಲಿದ್ದ ಅನೇಕರು ಸಲ್ಲು ಜೊತೆ ಫೋಟೋ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಜೀವ ಬೆದರಿಕೆ ಬೆನ್ನಲ್ಲೇ ಸಲ್ಮಾನ್ ಖಾನ್ ಆಪ್ತನ ಮೇಲೆ ರಾಡ್​ನಿಂದ ಹಲ್ಲೆ..

ಎಲ್ಲೇ ಹೋದರೂ ಸಲ್ಮಾನ್​ ಖಾನ್​ ಅವರು ಎಚ್ಚರಿಕೆಯಿಂದ ಇರಬೇಕಾದ ಪರಿಸ್ಥಿತಿ ನಿರ್ಮಾಣ ಆಗಿದೆ. ಯಾಕೆಂದರೆ, ಅವರಿಗೆ ಜೀವ ಬೆದರಿಕೆ ಇದೆ. ಅವರನ್ನು ಕೊಲ್ಲುವುದಾಗಿ ಲಾರೆನ್ಸ್​ ಬಿಷ್ಣೋಯ್​, ಗೋಲ್ಡಿ ಬ್ರಾರ್​ ಮುಂತಾದವರು ಕೊಲೆ ಬೆದರಿಕೆ ಹಾಕಿದ್ದಾರೆ. ಹಾಗಾಗಿ ಸಲ್ಮಾನ್​ ಖಾನ್​ ಅವರು ಭದ್ರತೆ ಹೆಚ್ಚಿಸಿಕೊಂಡಿದ್ದಾರೆ. ಇದರ ನಡುವೆಯೂ ಅಭಿಮಾನಿಗಳು ಹತ್ತಿರಕ್ಕೆ ಬಂದಾಗ ತಾಳ್ಮೆಯಿಂದ ಫೋಟೋಗೆ ಪೋಸ್​ ನೀಡಿದ್ದನ್ನು ನೆಟ್ಟಿಗರು ಪ್ರಶಂಸಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:47 pm, Fri, 22 December 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು