AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ಫಿಲ್ಮ್​ಫೇರ್​ನಲ್ಲಿ ಹತ್ತು ಪ್ರಶಸ್ತಿ ಬಾಚಿದ ಆಲಿಯಾ ಭಟ್ ನಟನೆಯ ‘ಗಂಗೂಬಾಯಿ ಕಾಠಿಯಾವಾಡಿ’

ಆಲಿಯಾ ಭಟ್ ನಟನೆ ಹಾಗೂ ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನ ಎಲ್ಲರ ಗಮನ ಸೆಳೆಯಿತು. ಈ ಚಿತ್ರಕ್ಕೆ ಫಿಲ್ಮ್​​ಫೇರ್ ಅವಾರ್ಡ್​ನಲ್ಲೂ ಮನ್ನಣೆ ಸಿಕ್ಕಿದೆ. ಈ ಚಿತ್ರಕ್ಕೆ ಬರೋಬ್ಬರಿ ಹತ್ತು ಪ್ರಶಸ್ತಿಗಳು ಸಿಕ್ಕಿವೆ.

Alia Bhatt: ಫಿಲ್ಮ್​ಫೇರ್​ನಲ್ಲಿ ಹತ್ತು ಪ್ರಶಸ್ತಿ ಬಾಚಿದ ಆಲಿಯಾ ಭಟ್ ನಟನೆಯ ‘ಗಂಗೂಬಾಯಿ ಕಾಠಿಯಾವಾಡಿ’
ಆಲಿಯಾ ಭಟ್
ರಾಜೇಶ್ ದುಗ್ಗುಮನೆ
|

Updated on: Apr 28, 2023 | 7:28 AM

Share

2023ನೇ ಸಾಲಿನ ಫಿಲ್ಮ್​ಫೇರ್​ ಅವಾರ್ಡ್ಸ್ (FilmFare Awards) ಕಾರ್ಯಕ್ರಮ ಏಪ್ರಿಲ್ 27ರಂದು ಅದ್ದೂರಿಯಾಗಿ ನೆರವೇರಿದೆ. ಬಹುತೇಕ ಎಲ್ಲಾ ಸೆಲೆಬ್ರಿಟಿಗಳು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ರೆಡ್ ಕಾರ್ಪೆಟ್​ನಲ್ಲಿ ಹೆಜ್ಜೆ ಹಾಕಿ ಸೆಲೆಬ್ರಿಟಿಗಳು ಎಲ್ಲರ ಗಮನ ಸೆಳೆದರು. ಅನೇಕರು ಅವಾರ್ಡ್ ಗೆದ್ದು ಸಂಭ್ರಮಿಸಿದರು. ಆಲಿಯಾ ಭಟ್ ನಟನೆಯ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಹಲವು ಪ್ರಶಸ್ತಿಗಳನ್ನು ಗೆದ್ದು ಬೀಗಿದೆ. ಆಲಿಯಾ ಭಟ್ (Alia Bhatt) ಅವರು ಅತ್ಯುತ್ತಮ ನಟಿ ಅವಾರ್ಡ್ ಗೆಲ್ಲುವ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ. ಸ್ಟಾರ್ ಕಿಡ್ ಎನ್ನುವ ಕಾರಣಕ್ಕೆ ಅನೇಕರು ಅವರನ್ನು ಟೀಕೆ ಮಾಡಿದ್ದಿದೆ. ಇದಕ್ಕೆ ತಮ್ಮ ಕೆಲಸದ ಮೂಲಕ ಆಲಿಯಾ ಉತ್ತರ ನೀಡಿದ್ದಾರೆ.

ಫೆಬ್ರವರಿ 25ರಂದು ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 100+ ಕೋಟಿ ರೂಪಾಯಿ ಬಾಚಿಕೊಂಡಿತು. ಆಲಿಯಾ ಭಟ್ ನಟನೆ ಹಾಗೂ ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನ ಎಲ್ಲರ ಗಮನ ಸೆಳೆಯಿತು. ಈ ಚಿತ್ರಕ್ಕೆ ಫಿಲ್ಮ್​​ಫೇರ್ ಅವಾರ್ಡ್​ನಲ್ಲೂ ಮನ್ನಣೆ ಸಿಕ್ಕಿದೆ. ಈ ಚಿತ್ರಕ್ಕೆ ಬರೋಬ್ಬರಿ ಹತ್ತು ಪ್ರಶಸ್ತಿಗಳು ಸಿಕ್ಕಿವೆ.

ಇದನ್ನೂ ಓದಿ: Filmfare 2023: 68ನೇ ಫಿಲ್ಮ್​ಫೇರ್ ಪ್ರಶಸ್ತಿ ಗೆದ್ದವರ ಪಟ್ಟಿ ಇಲ್ಲಿದೆ

ಪ್ರಮುಖ ಎನಿಸಿಕೊಂಡಿರುವ ಅತ್ಯುತ್ತಮ ಸಿನಿಮಾ ಪ್ರಶಸ್ತಿ ‘ಗಂಗೂಬಾಯಿ ಕಾಠಿಯಾವಾಡಿ’ಗೆ ಸಿಕ್ಕಿದೆ. ಈ ಚಿತ್ರದಲ್ಲಿ ಆಲಿಯಾ ಭಟ್ ನಟನೆಗೆ ಅತ್ಯುತ್ತಮ ನಟಿ ಅವಾರ್ಡ್​ ದೊರೆತಿದೆ. ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಸಂಜಯ್ ಲೀಲಾ ಬನ್ಸಾಲಿ ಪಾಲಾಗಿದೆ. ಇನ್ನು ಈ ಚಿತ್ರದ ಡೈಲಾಗ್​ಗಳು ಖಡಕ್ ಆಗಿತ್ತು. ಹೀಗಾಗಿ, ಈ ಚಿತ್ರಕ್ಕೆ ಸಂಭಾಷಣೆ ಬರೆದ ಪ್ರಕಾಶ್ ಕಪಾಡಿಯಾ ಹಾಗೂ ಉತ್ಕರ್ಷಿಣಿ ವಸಿಷ್ಠಗೆ ಅತ್ಯುತ್ತಮ ಸಂಭಾಷಣೆ ಪ್ರಶಸ್ತಿ ಸಿಕ್ಕಿದೆ.

ಇದನ್ನೂ ಓದಿ: ‘ಫಿಲ್ಮ್​ಫೇರ್’​ ಪ್ರಶಸ್ತಿ ತಿರಸ್ಕರಿಸಿದ ವಿವೇಕ್​ ಅಗ್ನಿಹೋತ್ರಿ; ಈ ನಿರ್ಧಾರದ ಹಿಂದಿದೆ ಪ್ರಮುಖ ಕಾರಣ 

‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರಕ್ಕೆ ಹಿನ್ನೆಲೆ ಸಂಗೀತ ಸಂಯೋಜನೆ ಮಾಡಿದ ಸಂಚಿತ್ ಬಲ್ಹಾರಾ, ಅಂಕಿತ್ ಬಲ್ಹಾರಾ​ಗೆ ‘ಅತ್ಯುತ್ತಮ ಹಿನ್ನೆಲೆ ಸಂಗೀತ’ ಪ್ರಶಸ್ರಿ ಸಿಕ್ಕಿದೆ. ಇಷ್ಟೇ ಅಲ್ಲದೆ ಬೆಸ್ಟ್ ಪ್ರೊಡಕ್ಷನ್ ಡಿಸೈನ್(ಸುಬ್ರತಾ, ಅಮಿತ್​), ಅತ್ಯುತ್ತಮ ವಸ್ತ್ರವಿನ್ಯಾಸ (ಶೀಥಲ್ ಇಕ್ಬಾಲ್ ಶರ್ಮಾ), ಅತ್ಯುತ್ತಮ ಕೊರಿಯೋಗ್ರಫಿ (ಕೃತಿ ಮಹೇಶ್), ಅತ್ಯುತ್ತಮ ಸಿನಿಮಾಟೊಗ್ರಫಿ (ಸುದೀಪ್ ಚಟರ್ಜಿ), ಅಪ್​ಕಮಿಂಗ್ ಮ್ಯೂಸಿಕ್ ಟ್ಯಾಲೆಂಟ್​ (ಗಾಯಕಿ ಶ್ರೀಮಂಕರ್​) ಅವಾರ್ಡ್ ಕೂಡ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರಕ್ಕೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?