AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಟ್ಲೀ-ಶಾರುಖ್​ ಖಾನ್​ ಸಿನಿಮಾದ ಬಗ್ಗೆ ಹೊಸ​ ಅಪ್​ಡೇಟ್​; ಆಗಸ್ಟ್ 15ಕ್ಕೆ ಅಭಿಮಾನಿಗಳಿಗೆ ಸಿಗುತ್ತಿದೆ ಸರ್​ಪ್ರೈಸ್

ವಿಜಯ್​ ನಟನೆಯ ‘ಬಿಗಿಲ್’​, ‘ಮೆರ್ಸಲ್’​ ಹಾಗೂ ‘ತೇರಿ’ ಸಿನಿಮಾಗಳನ್ನು ನಿರ್ದೇಶನ ಮಾಡಿದ ಖ್ಯಾತಿ ಅಟ್ಲೀ ಅವರಿಗಿದೆ. ಈ ಮೂರು ಚಿತ್ರಗಳು ಹಿಟ್​ ಚಿತ್ರಗಳು.

ಅಟ್ಲೀ-ಶಾರುಖ್​ ಖಾನ್​ ಸಿನಿಮಾದ ಬಗ್ಗೆ ಹೊಸ​ ಅಪ್​ಡೇಟ್​; ಆಗಸ್ಟ್ 15ಕ್ಕೆ ಅಭಿಮಾನಿಗಳಿಗೆ ಸಿಗುತ್ತಿದೆ ಸರ್​ಪ್ರೈಸ್
ಅಟ್ಲೀ-ಶಾರುಖ್​ ಖಾನ್​ ಸಿನಿಮಾದ ಬಗ್ಗೆ ಹೊಸ​ ಅಪ್​ಡೇಟ್​; ಆಗಸ್ಟ್ 15ಕ್ಕೆ ಅಭಿಮಾನಿಗಳಿಗೆ ಸಿಗುತ್ತಿದೆ ಸರ್​ಪ್ರೈಸ್
TV9 Web
| Edited By: |

Updated on: Aug 04, 2021 | 4:26 PM

Share

‘ಜೀರೋ’ ಚಿತ್ರ ಸೋತ ನಂತರದಲ್ಲಿ ಶಾರುಖ್​ ಒಂದು ಗ್ಯಾಪ್​ ತೆಗೆದುಕೊಂಡಿದ್ದರು. ಈಗ ಅವರ ಮುಂದಿನ ಸಿನಿಮಾ ‘ಪಠಾಣ್​’ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ​ ಸಿನಿಮಾದ ಶೂಟಿಂಗ್​ ಸದ್ಯ ಪ್ರಗತಿಯಲ್ಲಿದೆ. ಇದಲ್ಲದೆ, ಖ್ಯಾತ ನಿರ್ದೇಶಕ ಅಟ್ಲೀ ಕುಮಾರ್ ಜತೆ ಶಾರುಖ್​ ಕೈ ಜೋಡಿಸುತ್ತಿದ್ದಾರೆ ಎನ್ನುವ ಸುದ್ದಿ ಈ ಮೊದಲಿನಿಂದಲೂ ಹರಿದಾಡುತ್ತಿದೆ. ಈಗ ಈ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್​ ಒಂದು ಸಿಕ್ಕಿದೆ. ಆಗಸ್ಟ್​ 15ರಂದು ಈ ಚಿತ್ರದ ಟೀಸರ್​ ರಿಲೀಸ್​ ಆಗಲಿದೆಯಂತೆ. ಸದ್ಯ, ಈ ವಿಚಾರ ಶಾರುಖ್​ ಅಭಿಮಾನಿಗಳಿಗೆ ಖುಷಿ ನೀಡಿದೆ.

ವಿಜಯ್​ ನಟನೆಯ ‘ಬಿಗಿಲ್’​, ‘ಮೆರ್ಸಲ್’​ ಹಾಗೂ ‘ತೇರಿ’ ಸಿನಿಮಾಗಳನ್ನು ನಿರ್ದೇಶನ ಮಾಡಿದ ಖ್ಯಾತಿ ಅಟ್ಲೀ ಅವರಿಗಿದೆ. ಈ ಮೂರು ಚಿತ್ರಗಳು ಹಿಟ್​ ಚಿತ್ರಗಳು. ಈಗ ಶಾರುಖ್​ ಮುಂದಿನ ಸಿನಿಮಾಗೆ ಅಟ್ಲೀ ನಿರ್ದೇಶನ ಮಾಡಲಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ. ಆಗಸ್ಟ್​ 15ರಂದು ಅಧಿಕೃತ ಘೋಷಣೆ ಆಗಲಿದೆ.

ಇಂದು (ಆಗಸ್ಟ್4) ಅಟ್ಲೀ ಮುಂಬೈಗೆ ತೆರಳಿದ್ದಾರೆ. ಈ ವಿಶೇಷ ಟೀಸರ್​ನ ಶೂಟಿಂಗ್​ ಮುಂಬೈ ಸ್ಟುಡಿಯೋ ಒಂದರಲ್ಲಿ ನಡೆಯುತ್ತಿದೆ. ಕೆಲವು ದಿನಗಳ ಕಾಲ ಶೂಟಿಂಗ್​, ಎಡಿಟಿಂಗ್​ ನಡೆಸಿ ಆಗಸ್ಟ್​ 15ರಂದು ಟೀಸರ್​ ರಿಲೀಸ್​ ಮಾಡುವ ಆಲೋಚನೆ ಚಿತ್ರತಂಡದ್ದು.

ವಿಜಯ್​ ನಟನೆಯ ‘ಬಿಗಿಲ್’​ ಸಿನಿಮಾ ಅಟ್ಲೀ ಅವರ ಕೊನೆಯ ಚಿತ್ರ. ಈ ಸಿನಿಮಾ ತೆರೆಕಂಡ ನಂತರದಲ್ಲಿ ಅವರು ಯಾವುದೇ ಸಿನಿಮಾ ಘೋಷಣೆ ಮಾಡಿಲ್ಲ. ಈಗ ಆಗಸ್ಟ್​ 15ಕ್ಕೆ ಹೊಸ ಘೋಷಣೆ ಆಗುವ ಸಾಧ್ಯತೆ ಇದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಘೋಷಣೆ ಬಾಕಿ ಇದೆ.

ಸದ್ಯ, ಶಾರುಖ್​ ಖಾನ್​ ‘ಪಠಾಣ್​’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇದಕ್ಕಿಂತ ಮೊದಲೇ ಅಟ್ಲೀ-ಶಾರುಖ್​ ಸಿನಿಮಾ ಸೆಟ್ಟೇರಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರದ ಕೆಲಸಗಳು ಆರಂಭವಾಗೋದು ತಡವಾಗಿದೆ. ಹೀಗಾಗಿ, ಶಾರುಖ್​ ‘ಪಠಾಣ್​’ ನಂತರ ಈ ಚಿತ್ರ ಕೈಗೆತ್ತಿಕೊಂಡಿದ್ದಾರೆ.

ಇದನ್ನೂ ಓದಿ: ‘ಶಾರುಖ್​ ಖಾನ್​ರದ್ದು ಅತಿ ಕೆಟ್ಟ ಮತ್ತು ಸಹಿಸಲಾಗದ ನಟನೆ’; ಪತ್ನಿ ಗೌರಿ ಹೀಗೆ ಹೇಳಿದ್ದು ಯಾಕೆ?

ನಯನತಾರಾ-ಉದಯನಿಧಿ ಲಿವ್​ಇನ್​ನಲ್ಲಿದ್ದರೆ ನಾನೇನು ಮಾಡಲಿ?: ವಿವಾದ ಎಬ್ಬಿಸಿದ ಹೇಳಿಕೆ

Follow Us
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್