AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಟ್ಲೀ-ಶಾರುಖ್​ ಖಾನ್​ ಸಿನಿಮಾದ ಬಗ್ಗೆ ಹೊಸ​ ಅಪ್​ಡೇಟ್​; ಆಗಸ್ಟ್ 15ಕ್ಕೆ ಅಭಿಮಾನಿಗಳಿಗೆ ಸಿಗುತ್ತಿದೆ ಸರ್​ಪ್ರೈಸ್

ವಿಜಯ್​ ನಟನೆಯ ‘ಬಿಗಿಲ್’​, ‘ಮೆರ್ಸಲ್’​ ಹಾಗೂ ‘ತೇರಿ’ ಸಿನಿಮಾಗಳನ್ನು ನಿರ್ದೇಶನ ಮಾಡಿದ ಖ್ಯಾತಿ ಅಟ್ಲೀ ಅವರಿಗಿದೆ. ಈ ಮೂರು ಚಿತ್ರಗಳು ಹಿಟ್​ ಚಿತ್ರಗಳು.

ಅಟ್ಲೀ-ಶಾರುಖ್​ ಖಾನ್​ ಸಿನಿಮಾದ ಬಗ್ಗೆ ಹೊಸ​ ಅಪ್​ಡೇಟ್​; ಆಗಸ್ಟ್ 15ಕ್ಕೆ ಅಭಿಮಾನಿಗಳಿಗೆ ಸಿಗುತ್ತಿದೆ ಸರ್​ಪ್ರೈಸ್
ಅಟ್ಲೀ-ಶಾರುಖ್​ ಖಾನ್​ ಸಿನಿಮಾದ ಬಗ್ಗೆ ಹೊಸ​ ಅಪ್​ಡೇಟ್​; ಆಗಸ್ಟ್ 15ಕ್ಕೆ ಅಭಿಮಾನಿಗಳಿಗೆ ಸಿಗುತ್ತಿದೆ ಸರ್​ಪ್ರೈಸ್
TV9 Web
| Edited By: |

Updated on: Aug 04, 2021 | 4:26 PM

Share

‘ಜೀರೋ’ ಚಿತ್ರ ಸೋತ ನಂತರದಲ್ಲಿ ಶಾರುಖ್​ ಒಂದು ಗ್ಯಾಪ್​ ತೆಗೆದುಕೊಂಡಿದ್ದರು. ಈಗ ಅವರ ಮುಂದಿನ ಸಿನಿಮಾ ‘ಪಠಾಣ್​’ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ​ ಸಿನಿಮಾದ ಶೂಟಿಂಗ್​ ಸದ್ಯ ಪ್ರಗತಿಯಲ್ಲಿದೆ. ಇದಲ್ಲದೆ, ಖ್ಯಾತ ನಿರ್ದೇಶಕ ಅಟ್ಲೀ ಕುಮಾರ್ ಜತೆ ಶಾರುಖ್​ ಕೈ ಜೋಡಿಸುತ್ತಿದ್ದಾರೆ ಎನ್ನುವ ಸುದ್ದಿ ಈ ಮೊದಲಿನಿಂದಲೂ ಹರಿದಾಡುತ್ತಿದೆ. ಈಗ ಈ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್​ ಒಂದು ಸಿಕ್ಕಿದೆ. ಆಗಸ್ಟ್​ 15ರಂದು ಈ ಚಿತ್ರದ ಟೀಸರ್​ ರಿಲೀಸ್​ ಆಗಲಿದೆಯಂತೆ. ಸದ್ಯ, ಈ ವಿಚಾರ ಶಾರುಖ್​ ಅಭಿಮಾನಿಗಳಿಗೆ ಖುಷಿ ನೀಡಿದೆ.

ವಿಜಯ್​ ನಟನೆಯ ‘ಬಿಗಿಲ್’​, ‘ಮೆರ್ಸಲ್’​ ಹಾಗೂ ‘ತೇರಿ’ ಸಿನಿಮಾಗಳನ್ನು ನಿರ್ದೇಶನ ಮಾಡಿದ ಖ್ಯಾತಿ ಅಟ್ಲೀ ಅವರಿಗಿದೆ. ಈ ಮೂರು ಚಿತ್ರಗಳು ಹಿಟ್​ ಚಿತ್ರಗಳು. ಈಗ ಶಾರುಖ್​ ಮುಂದಿನ ಸಿನಿಮಾಗೆ ಅಟ್ಲೀ ನಿರ್ದೇಶನ ಮಾಡಲಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ. ಆಗಸ್ಟ್​ 15ರಂದು ಅಧಿಕೃತ ಘೋಷಣೆ ಆಗಲಿದೆ.

ಇಂದು (ಆಗಸ್ಟ್4) ಅಟ್ಲೀ ಮುಂಬೈಗೆ ತೆರಳಿದ್ದಾರೆ. ಈ ವಿಶೇಷ ಟೀಸರ್​ನ ಶೂಟಿಂಗ್​ ಮುಂಬೈ ಸ್ಟುಡಿಯೋ ಒಂದರಲ್ಲಿ ನಡೆಯುತ್ತಿದೆ. ಕೆಲವು ದಿನಗಳ ಕಾಲ ಶೂಟಿಂಗ್​, ಎಡಿಟಿಂಗ್​ ನಡೆಸಿ ಆಗಸ್ಟ್​ 15ರಂದು ಟೀಸರ್​ ರಿಲೀಸ್​ ಮಾಡುವ ಆಲೋಚನೆ ಚಿತ್ರತಂಡದ್ದು.

ವಿಜಯ್​ ನಟನೆಯ ‘ಬಿಗಿಲ್’​ ಸಿನಿಮಾ ಅಟ್ಲೀ ಅವರ ಕೊನೆಯ ಚಿತ್ರ. ಈ ಸಿನಿಮಾ ತೆರೆಕಂಡ ನಂತರದಲ್ಲಿ ಅವರು ಯಾವುದೇ ಸಿನಿಮಾ ಘೋಷಣೆ ಮಾಡಿಲ್ಲ. ಈಗ ಆಗಸ್ಟ್​ 15ಕ್ಕೆ ಹೊಸ ಘೋಷಣೆ ಆಗುವ ಸಾಧ್ಯತೆ ಇದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಘೋಷಣೆ ಬಾಕಿ ಇದೆ.

ಸದ್ಯ, ಶಾರುಖ್​ ಖಾನ್​ ‘ಪಠಾಣ್​’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇದಕ್ಕಿಂತ ಮೊದಲೇ ಅಟ್ಲೀ-ಶಾರುಖ್​ ಸಿನಿಮಾ ಸೆಟ್ಟೇರಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರದ ಕೆಲಸಗಳು ಆರಂಭವಾಗೋದು ತಡವಾಗಿದೆ. ಹೀಗಾಗಿ, ಶಾರುಖ್​ ‘ಪಠಾಣ್​’ ನಂತರ ಈ ಚಿತ್ರ ಕೈಗೆತ್ತಿಕೊಂಡಿದ್ದಾರೆ.

ಇದನ್ನೂ ಓದಿ: ‘ಶಾರುಖ್​ ಖಾನ್​ರದ್ದು ಅತಿ ಕೆಟ್ಟ ಮತ್ತು ಸಹಿಸಲಾಗದ ನಟನೆ’; ಪತ್ನಿ ಗೌರಿ ಹೀಗೆ ಹೇಳಿದ್ದು ಯಾಕೆ?

ನಯನತಾರಾ-ಉದಯನಿಧಿ ಲಿವ್​ಇನ್​ನಲ್ಲಿದ್ದರೆ ನಾನೇನು ಮಾಡಲಿ?: ವಿವಾದ ಎಬ್ಬಿಸಿದ ಹೇಳಿಕೆ

Follow Us
ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ?
ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ?
ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ
ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ
ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದ ಬಿಲ್ಡರ್​: ವಿಡಿಯೋ
ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದ ಬಿಲ್ಡರ್​: ವಿಡಿಯೋ
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ