AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವದಂತಿ ಸತ್ಯ ಆಗಲ್ಲ’; ಐಶ್ವರ್ಯಾ-ಅಭಿಷೇಕ್ ವಿಚ್ಛೇದನದ ಬಗ್ಗೆ ಕೊನೆಗೂ ಮೌನ ಮುರಿದ ಅಮಿತಾಭ್

ಅಭಿಷೇಕ್ ಬಚ್ಚನ್ ಅವರು ನಿಮ್ರಿತಾ ಕೌರ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಕಾರಣದಿಂದಲೇ ಅವರು ಐಶ್ವರ್ಯಾ ಜೊತೆ ವಿಚ್ಛೇದನ ಪಡೆದ ವದಂತಿ ಇದೆ. ಇತ್ತೀಚೆಗೆ ಅಭಿಷೇಕ್ ಬಚ್ಚನ್ ಅವರು ಬರ್ತ್​ಡೇ ದಿನ ಐಶ್ವರ್ಯಾಗೆ ವಿಶ್ ಕೂಡ ಮಾಡಿಲ್ಲ. ಈ ವಿಚಾರದಲ್ಲಿ ಅಮಿತಾಭ್ ಪ್ರತಿಕ್ರಿಯೆ ನೀಡಿದ್ದಾರೆ.

‘ವದಂತಿ ಸತ್ಯ ಆಗಲ್ಲ’; ಐಶ್ವರ್ಯಾ-ಅಭಿಷೇಕ್ ವಿಚ್ಛೇದನದ ಬಗ್ಗೆ ಕೊನೆಗೂ ಮೌನ ಮುರಿದ ಅಮಿತಾಭ್
ಐಶ್ವರ್ಯಾ-ಅಭಿಷೇಕ್ ವಿಚ್ಛೇದನದ ಬಗ್ಗೆ ಕೊನೆಗೂ ಮೌನ ಮುರಿದ ಅಮಿತಾಭ್
ರಾಜೇಶ್ ದುಗ್ಗುಮನೆ
|

Updated on:Nov 22, 2024 | 9:07 AM

Share

ಐಶ್ವರ್ಯಾ ರೈ ಹಾಗೂ ಅಭಿಷೇಕ್ ಬಚ್ಚನ್ ಮಧ್ಯೆ ಯಾವುದೂ ಸರಿ ಇಲ್ಲ ಎಂಬ ವಿಚಾರ ಇತ್ತೀಚೆಗೆ ಜೋರಾಗಿದೆ. ಇದಕ್ಕೆ ಕಾರಣ ಹಲವು. ಇತ್ತೀಚೆಗೆ ಐಶ್ವರ್ಯಾ ಬರ್ತ್​ಡೇ ಆಚರಿಸಿಕೊಂಡರು. ಆದರೆ, ಅಭಿಷೇಕ್ ಕಡೆಯಿಂದ ಯಾವುದೇ ವಿಶ್ ಬರಲಿಲ್ಲ. ಈ ವಿಚಾರದಲ್ಲಿ ಕುಟುಂಬದವರು ಮೌನ ವಹಿಸಿದ್ದರು. ಈಗ ಅಮಿತಾಭ್ ಬಚ್ಚನ್ ಅವರು ಈ ಬಗ್ಗೆ ಕೊನೆಗೂ ಮೌನ ಮುರಿದಿದ್ದಾರೆ. ವಿಚ್ಛೇದನ ವಿಚಾರ ಸುಳ್ಳು ಎಂದಿದ್ದಾರೆ.

ಅಮಿತಾಭ್ ಅವರಿಗೆ ಬ್ಲಾಗ್ ಬರೆಯೋ ಹವ್ಯಾಸ ಇದೆ. ಅವರು ಈಗ ಹೊಸ ಬ್ಲಾಗ್ ಬರೆದುಕೊಂಡಿದ್ದಾರೆ. ಇದರಲ್ಲಿ ಅವರು ವದಂತಿಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ‘ನಾನು ಕುಟುಂಬದ ಬಗ್ಗೆ ಮಾತನಾಡುವುದು ಕಡಿಮೆ. ಏಕೆಂದರೆ ಅದು ಖಾಸಗಿ ವಿಚಾರ. ಊಹಾಪೋಹಗಳು ಯಾವಾಗಲೂ ಊಹಾಪೋಹಗಳೇ. ಪರಿಶೀಲನೆ ಮಾಡದೇ ಇರುವ ವಿಚಾರ ಅಸತ್ಯವೇ’ ಎಂದಿದ್ದಾರೆ ಅವರು.

‘ಈ ರೀತಿಯ ಸುದ್ದಿಗಳಿಂದ ಕೆಲವರಿಗೆ ಲಾಭ ಆಗಬಹುದು. ಆದರೆ, ನನ್ನ ಗಮನ ಕುಟುಂಬದ ಮೇಲೆ ಇರುತ್ತದೆ. ಐಶ್ವರ್ಯಾ ಹಾಗೂ ಅಭಿಷೇಕ ಸಂಸಾರದಲ್ಲಿ ಸಮಸ್ಯೆ ಇದೆಯೇ ಎನ್ನುವ ವಾಕ್ಯವನ್ನು ಪ್ರಶ್ನೆ ಹಾಕಿ ಬರೆಯಲಾಗುತ್ತದೆ’ ಎಂದು ಬೇಸರ ಹೊರಹಾಕಿದ್ದಾರೆ ಅಮಿತಾಭ್.

‘ನಿಮಗೆ ಏನಿಷ್ಟವೋ ಅದನ್ನು ಬರೆದುಕೊಳ್ಳಿ. ನೀವು ಪ್ರಶ್ನಾರ್ಥಕ ಚಿಹ್ನೆ ಹಾಕಿ ಬರೆದಾಗ ನೀವು ಬರೆದಿದ್ದೂ ಪ್ರಶ್ನೆ ಆಗಬಹುದು. ಇದನ್ನು ಅವರು ನಂಬುತ್ತಾರೆ ಮತ್ತು ಅದನ್ನು ವಿಸ್ತರಿಸುತ್ತಾರೆ. ಇದರಿಂದ ನಿಮ್ಮ ಬರವಣಿಗೆಗೆ ಬೆಲೆ ಬರುತ್ತದೆ. ಅಸತ್ಯ ವಿಚಾರಗಳಿಗೆ ಓದುಗ ಪ್ರತಿಕ್ರಿಯೆ ನೀಡುತ್ತಾನೆ ಎಂದರೆ ವಿಚಾರ ಮತ್ತೂ ವಿಸ್ತಾರ ಆಗುತ್ತದೆ. ಇದು ವಿಚಾರದಲ್ಲಿರುವ ವ್ಯಕ್ತಿ ಮೇಲೆ ಪ್ರಭಾವ ಬೀರುತ್ತದೆ’ ಎಂದಿದ್ದಾರೆ.

ಇದನ್ನೂ ಓದಿ: ಗವಿಸಿದ್ದೇಶ್ವರ ಜಾತ್ರೆಗೆ ಅಮಿತಾಭ್ ಅತಿಥಿ? ಬಾಲಿವುಡ್ ನಟನಿಗೆ ಆಹ್ವಾನ

ಅಭಿಷೇಕ್ ಬಚ್ಚನ್ ಅವರು ನಿಮ್ರಿತಾ ಕೌರ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಕಾರಣದಿಂದಲೇ ಅವರು ಐಶ್ವರ್ಯಾ ಜೊತೆ ವಿಚ್ಛೇದನ ಪಡೆದ ವದಂತಿ ಇದೆ. ಇತ್ತೀಚೆಗೆ ಅಭಿಷೇಕ್ ಬಚ್ಚನ್ ಅವರು ಬರ್ತ್​ಡೇ ದಿನ ಐಶ್ವರ್ಯಾಗೆ ವಿಶ್ ಕೂಡ ಮಾಡಿಲ್ಲ. ಈ ಎಲ್ಲಾ ಕಾರಣದಿಂದ ವಿಚ್ಛೇದನ ವಿಚಾರ ಜೋರಾಗಿದೆ. ಈ ವಿಚಾರವಾಗಿ ಅಮಿತಾಭ್ ಕೊನೆಗೂ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:54 am, Fri, 22 November 24

ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ