AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವದಂತಿ ಸತ್ಯ ಆಗಲ್ಲ’; ಐಶ್ವರ್ಯಾ-ಅಭಿಷೇಕ್ ವಿಚ್ಛೇದನದ ಬಗ್ಗೆ ಕೊನೆಗೂ ಮೌನ ಮುರಿದ ಅಮಿತಾಭ್

ಅಭಿಷೇಕ್ ಬಚ್ಚನ್ ಅವರು ನಿಮ್ರಿತಾ ಕೌರ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಕಾರಣದಿಂದಲೇ ಅವರು ಐಶ್ವರ್ಯಾ ಜೊತೆ ವಿಚ್ಛೇದನ ಪಡೆದ ವದಂತಿ ಇದೆ. ಇತ್ತೀಚೆಗೆ ಅಭಿಷೇಕ್ ಬಚ್ಚನ್ ಅವರು ಬರ್ತ್​ಡೇ ದಿನ ಐಶ್ವರ್ಯಾಗೆ ವಿಶ್ ಕೂಡ ಮಾಡಿಲ್ಲ. ಈ ವಿಚಾರದಲ್ಲಿ ಅಮಿತಾಭ್ ಪ್ರತಿಕ್ರಿಯೆ ನೀಡಿದ್ದಾರೆ.

‘ವದಂತಿ ಸತ್ಯ ಆಗಲ್ಲ’; ಐಶ್ವರ್ಯಾ-ಅಭಿಷೇಕ್ ವಿಚ್ಛೇದನದ ಬಗ್ಗೆ ಕೊನೆಗೂ ಮೌನ ಮುರಿದ ಅಮಿತಾಭ್
ಐಶ್ವರ್ಯಾ-ಅಭಿಷೇಕ್ ವಿಚ್ಛೇದನದ ಬಗ್ಗೆ ಕೊನೆಗೂ ಮೌನ ಮುರಿದ ಅಮಿತಾಭ್
Follow us
ರಾಜೇಶ್ ದುಗ್ಗುಮನೆ
|

Updated on:Nov 22, 2024 | 9:07 AM

ಐಶ್ವರ್ಯಾ ರೈ ಹಾಗೂ ಅಭಿಷೇಕ್ ಬಚ್ಚನ್ ಮಧ್ಯೆ ಯಾವುದೂ ಸರಿ ಇಲ್ಲ ಎಂಬ ವಿಚಾರ ಇತ್ತೀಚೆಗೆ ಜೋರಾಗಿದೆ. ಇದಕ್ಕೆ ಕಾರಣ ಹಲವು. ಇತ್ತೀಚೆಗೆ ಐಶ್ವರ್ಯಾ ಬರ್ತ್​ಡೇ ಆಚರಿಸಿಕೊಂಡರು. ಆದರೆ, ಅಭಿಷೇಕ್ ಕಡೆಯಿಂದ ಯಾವುದೇ ವಿಶ್ ಬರಲಿಲ್ಲ. ಈ ವಿಚಾರದಲ್ಲಿ ಕುಟುಂಬದವರು ಮೌನ ವಹಿಸಿದ್ದರು. ಈಗ ಅಮಿತಾಭ್ ಬಚ್ಚನ್ ಅವರು ಈ ಬಗ್ಗೆ ಕೊನೆಗೂ ಮೌನ ಮುರಿದಿದ್ದಾರೆ. ವಿಚ್ಛೇದನ ವಿಚಾರ ಸುಳ್ಳು ಎಂದಿದ್ದಾರೆ.

ಅಮಿತಾಭ್ ಅವರಿಗೆ ಬ್ಲಾಗ್ ಬರೆಯೋ ಹವ್ಯಾಸ ಇದೆ. ಅವರು ಈಗ ಹೊಸ ಬ್ಲಾಗ್ ಬರೆದುಕೊಂಡಿದ್ದಾರೆ. ಇದರಲ್ಲಿ ಅವರು ವದಂತಿಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ‘ನಾನು ಕುಟುಂಬದ ಬಗ್ಗೆ ಮಾತನಾಡುವುದು ಕಡಿಮೆ. ಏಕೆಂದರೆ ಅದು ಖಾಸಗಿ ವಿಚಾರ. ಊಹಾಪೋಹಗಳು ಯಾವಾಗಲೂ ಊಹಾಪೋಹಗಳೇ. ಪರಿಶೀಲನೆ ಮಾಡದೇ ಇರುವ ವಿಚಾರ ಅಸತ್ಯವೇ’ ಎಂದಿದ್ದಾರೆ ಅವರು.

‘ಈ ರೀತಿಯ ಸುದ್ದಿಗಳಿಂದ ಕೆಲವರಿಗೆ ಲಾಭ ಆಗಬಹುದು. ಆದರೆ, ನನ್ನ ಗಮನ ಕುಟುಂಬದ ಮೇಲೆ ಇರುತ್ತದೆ. ಐಶ್ವರ್ಯಾ ಹಾಗೂ ಅಭಿಷೇಕ ಸಂಸಾರದಲ್ಲಿ ಸಮಸ್ಯೆ ಇದೆಯೇ ಎನ್ನುವ ವಾಕ್ಯವನ್ನು ಪ್ರಶ್ನೆ ಹಾಕಿ ಬರೆಯಲಾಗುತ್ತದೆ’ ಎಂದು ಬೇಸರ ಹೊರಹಾಕಿದ್ದಾರೆ ಅಮಿತಾಭ್.

‘ನಿಮಗೆ ಏನಿಷ್ಟವೋ ಅದನ್ನು ಬರೆದುಕೊಳ್ಳಿ. ನೀವು ಪ್ರಶ್ನಾರ್ಥಕ ಚಿಹ್ನೆ ಹಾಕಿ ಬರೆದಾಗ ನೀವು ಬರೆದಿದ್ದೂ ಪ್ರಶ್ನೆ ಆಗಬಹುದು. ಇದನ್ನು ಅವರು ನಂಬುತ್ತಾರೆ ಮತ್ತು ಅದನ್ನು ವಿಸ್ತರಿಸುತ್ತಾರೆ. ಇದರಿಂದ ನಿಮ್ಮ ಬರವಣಿಗೆಗೆ ಬೆಲೆ ಬರುತ್ತದೆ. ಅಸತ್ಯ ವಿಚಾರಗಳಿಗೆ ಓದುಗ ಪ್ರತಿಕ್ರಿಯೆ ನೀಡುತ್ತಾನೆ ಎಂದರೆ ವಿಚಾರ ಮತ್ತೂ ವಿಸ್ತಾರ ಆಗುತ್ತದೆ. ಇದು ವಿಚಾರದಲ್ಲಿರುವ ವ್ಯಕ್ತಿ ಮೇಲೆ ಪ್ರಭಾವ ಬೀರುತ್ತದೆ’ ಎಂದಿದ್ದಾರೆ.

ಇದನ್ನೂ ಓದಿ: ಗವಿಸಿದ್ದೇಶ್ವರ ಜಾತ್ರೆಗೆ ಅಮಿತಾಭ್ ಅತಿಥಿ? ಬಾಲಿವುಡ್ ನಟನಿಗೆ ಆಹ್ವಾನ

ಅಭಿಷೇಕ್ ಬಚ್ಚನ್ ಅವರು ನಿಮ್ರಿತಾ ಕೌರ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಕಾರಣದಿಂದಲೇ ಅವರು ಐಶ್ವರ್ಯಾ ಜೊತೆ ವಿಚ್ಛೇದನ ಪಡೆದ ವದಂತಿ ಇದೆ. ಇತ್ತೀಚೆಗೆ ಅಭಿಷೇಕ್ ಬಚ್ಚನ್ ಅವರು ಬರ್ತ್​ಡೇ ದಿನ ಐಶ್ವರ್ಯಾಗೆ ವಿಶ್ ಕೂಡ ಮಾಡಿಲ್ಲ. ಈ ಎಲ್ಲಾ ಕಾರಣದಿಂದ ವಿಚ್ಛೇದನ ವಿಚಾರ ಜೋರಾಗಿದೆ. ಈ ವಿಚಾರವಾಗಿ ಅಮಿತಾಭ್ ಕೊನೆಗೂ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:54 am, Fri, 22 November 24

ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ