AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನ ಖ್ಯಾತ ಗೀತರಚನಾಕಾರ ಜಾವೇದ್​ ಅಖ್ತರ್ ವಿರುದ್ಧ್​​ ಎಫ್​ಐಆರ್​ ದಾಖಲು

ಸುದ್ದಿ ವಾಹಿನಿಯೊಂದರ ಚರ್ಚೆಯಲ್ಲಿ ಭಾಗವಹಿಸಿದ್ದ ಜಾವೇದ್​ ಅಖ್ತರ್​ ಅವರು ಆರ್​ಎಸ್​ಎಸ್​ ಬಗ್ಗೆ ಮಾತನಾಡಿದ್ದರು. ಅವರ ಮಾತುಗಳನ್ನು ಆರ್​ಎಸ್​ಎಸ್​ ಕಾರ್ಯಕರ್ತರು ಖಂಡಿಸಿದ್ದಾರೆ

ಬಾಲಿವುಡ್​ನ ಖ್ಯಾತ ಗೀತರಚನಾಕಾರ ಜಾವೇದ್​ ಅಖ್ತರ್ ವಿರುದ್ಧ್​​ ಎಫ್​ಐಆರ್​ ದಾಖಲು
ಜಾವೇದ್ ಅಖ್ತರ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 04, 2021 | 9:44 PM

Share

ಬಾಲಿವುಡ್​ನ ಖ್ಯಾತ ಗೀತರಚನಾಕಾರ, ಕವಿ ಜಾವೇದ್​ ಅಖ್ತರ್​ ಅವರಿಗೆ ಈಗ ಸಂಕಷ್ಟ ಎದುರಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS​) ಬಗ್ಗೆ ಅವರು ನೀಡಿದ ಹೇಳಿಕೆಗಳು ಅವಹೇಳನಕಾರಿಯಾಗಿವೆ ಎಂಬ ಆರೋಪದಡಿ ದೂರು ದಾಖಲಾಗಿತ್ತು. ಈಗ ಈ ಪ್ರಕರಣದಲ್ಲಿ ಪೊಲೀಸರು ಎಫ್​ಐಆರ್​ ದಾಖಲು ಮಾಡಿದ್ದಾರೆ. 

ಸುದ್ದಿ ವಾಹಿನಿಯೊಂದರ ಚರ್ಚೆಯಲ್ಲಿ ಭಾಗವಹಿಸಿದ್ದ ಜಾವೇದ್​ ಅಖ್ತರ್​ ಅವರು ಆರ್​ಎಸ್​ಎಸ್​ ಬಗ್ಗೆ ಮಾತನಾಡಿದ್ದರು. ಅವರ ಮಾತುಗಳನ್ನು ಆರ್​ಎಸ್​ಎಸ್​ ಕಾರ್ಯಕರ್ತರು ಖಂಡಿಸಿದ್ದಾರೆ. ವಕೀಲರೂ ಆಗಿರುವ  ಆರ್​ಎಸ್​ಎಸ್​ ಕಾರ್ಯಕರ್ತ ದೃಷ್ಟಿಮಾನ್​ ಜೋಶಿ ಅವರು ಕ್ರಿಮಿನಲ್​ ದೂರು ನೀಡಿದ್ದಾರೆ. ‘ಸೆ.4ರಂದು ಜಾವೇದ್​ ಅಖ್ತರ್​ ಅವರು ಟಿವಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ ಹಿಂದೂ ಸಂಘಟನೆಗಳನ್ನು ತಾಲಿಬಾನ್​ಗೆ ಹೋಲಿಸಿದ್ದನ್ನು ನಾನು ಗಮನಿಸಿದ್ದೇನೆ. ಹಿಂದೂ ಧರ್ಮಕ್ಕಾಗಿ ಕೆಲಸ ಮಾಡುತ್ತಿರುವ ಸಂಘಟನೆಗಳ ಮಾನಹಾನಿ ಮಾಡುವ ಉದ್ದೇಶದಿಂದಲೇ ಜಾವೇದ್​ ಅಖ್ತರ್​ ಈ ರೀತಿ ಹೇಳಿಕೆಗಳನ್ನು ನೀಡಿದ್ದಾರೆ. ಆರ್​ಎಸ್​ಎಸ್ ಈ ಸಮಾಜದಲ್ಲಿ ಕ್ಯಾನ್ಸರ್​ ಇದ್ದಂತೆ ​ಅಂತ ಅವರು ಹೇಳಿದ್ದಾರೆ. ಇದು ಪೂರ್ವನಿಯೋಜಿತ ಕೆಲಸ. ಆರ್​ಎಸ್ಎಸ್​ಗೆ ಸೇರುವವರನ್ನು ದಾರಿ ತಪ್ಪಿಸಲು ಇಂಥ ಹೇಳಿಕೆ ನೀಡಲಾಗಿದೆ’ ಎಂದು ದೂರಿನಲ್ಲಿ ಜೋಶಿ ಆರೋಪಿಸಿದ್ದರು.

‘ಯಾವುದೇ ಸಾಕ್ಷಿಗಳು ಇಲ್ಲದೇ ಆರ್​ಎಸ್​ಎಸ್​ ಬಗ್ಗೆ ಜಾವೇದ್​ ಅಖ್ತರ್​ ಅವರು ಇಂಥ ಮಾತುಗಳನ್ನು ಆಡಿದ್ದಾರೆ. ಪ್ರಧಾನಮಂತ್ರಿ, ರಾಷ್ಟ್ರಪತಿ ಮತ್ತು ಕೇಂದ್ರದ ಅನೇಕ ಮಂತ್ರಿಗಳು ಆರ್​ಎಸ್​ಎಸ್​ ಬೆಂಬಲಿಗರಾಗಿದ್ದಾರೆ. ಅಂಥ ಸಂಘಟನೆ ಬಗ್ಗೆ ಜಾವೇದ್​ ಅಖ್ತರ್​ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ’ ಎಂದು ದೃಷ್ಟಿಮಾನ್​ ಜೋಶಿ ಹೇಳಿದ್ದರು. ಈಗ ನ್ಯಾಯಾಲಯ ಅವರ ವಿರುದ್ಧ ಎಫ್​ಐಆರ್​​ ದಾಖಲು ಮಾಡಿಕೊಂಡಿದೆ.

ಇದನ್ನೂ ಓದಿ: Javed Akhtar ಮುಂಬೈಯಲ್ಲಿರುವ ಜಾವೇದ್ ಅಖ್ತರ್  ಮನೆಗೆ ಬಿಗಿ ಭದ್ರತೆ; ಹೇಳಿಕೆಗೆ ಕ್ಷಮೆಯಾಚಿಸಲು ಬಿಜೆಪಿ ಒತ್ತಾಯ

RSS ಬಗ್ಗೆ ಅವಹೇಳನಕಾರಿ ಹೇಳಿಕೆ: ಜಾವೇದ್​ ಅಖ್ತರ್​ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್