AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನ ಖ್ಯಾತ ಗೀತರಚನಾಕಾರ ಜಾವೇದ್​ ಅಖ್ತರ್ ವಿರುದ್ಧ್​​ ಎಫ್​ಐಆರ್​ ದಾಖಲು

ಸುದ್ದಿ ವಾಹಿನಿಯೊಂದರ ಚರ್ಚೆಯಲ್ಲಿ ಭಾಗವಹಿಸಿದ್ದ ಜಾವೇದ್​ ಅಖ್ತರ್​ ಅವರು ಆರ್​ಎಸ್​ಎಸ್​ ಬಗ್ಗೆ ಮಾತನಾಡಿದ್ದರು. ಅವರ ಮಾತುಗಳನ್ನು ಆರ್​ಎಸ್​ಎಸ್​ ಕಾರ್ಯಕರ್ತರು ಖಂಡಿಸಿದ್ದಾರೆ

ಬಾಲಿವುಡ್​ನ ಖ್ಯಾತ ಗೀತರಚನಾಕಾರ ಜಾವೇದ್​ ಅಖ್ತರ್ ವಿರುದ್ಧ್​​ ಎಫ್​ಐಆರ್​ ದಾಖಲು
ಜಾವೇದ್ ಅಖ್ತರ್
TV9 Web
| Edited By: |

Updated on: Oct 04, 2021 | 9:44 PM

Share

ಬಾಲಿವುಡ್​ನ ಖ್ಯಾತ ಗೀತರಚನಾಕಾರ, ಕವಿ ಜಾವೇದ್​ ಅಖ್ತರ್​ ಅವರಿಗೆ ಈಗ ಸಂಕಷ್ಟ ಎದುರಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS​) ಬಗ್ಗೆ ಅವರು ನೀಡಿದ ಹೇಳಿಕೆಗಳು ಅವಹೇಳನಕಾರಿಯಾಗಿವೆ ಎಂಬ ಆರೋಪದಡಿ ದೂರು ದಾಖಲಾಗಿತ್ತು. ಈಗ ಈ ಪ್ರಕರಣದಲ್ಲಿ ಪೊಲೀಸರು ಎಫ್​ಐಆರ್​ ದಾಖಲು ಮಾಡಿದ್ದಾರೆ. 

ಸುದ್ದಿ ವಾಹಿನಿಯೊಂದರ ಚರ್ಚೆಯಲ್ಲಿ ಭಾಗವಹಿಸಿದ್ದ ಜಾವೇದ್​ ಅಖ್ತರ್​ ಅವರು ಆರ್​ಎಸ್​ಎಸ್​ ಬಗ್ಗೆ ಮಾತನಾಡಿದ್ದರು. ಅವರ ಮಾತುಗಳನ್ನು ಆರ್​ಎಸ್​ಎಸ್​ ಕಾರ್ಯಕರ್ತರು ಖಂಡಿಸಿದ್ದಾರೆ. ವಕೀಲರೂ ಆಗಿರುವ  ಆರ್​ಎಸ್​ಎಸ್​ ಕಾರ್ಯಕರ್ತ ದೃಷ್ಟಿಮಾನ್​ ಜೋಶಿ ಅವರು ಕ್ರಿಮಿನಲ್​ ದೂರು ನೀಡಿದ್ದಾರೆ. ‘ಸೆ.4ರಂದು ಜಾವೇದ್​ ಅಖ್ತರ್​ ಅವರು ಟಿವಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ ಹಿಂದೂ ಸಂಘಟನೆಗಳನ್ನು ತಾಲಿಬಾನ್​ಗೆ ಹೋಲಿಸಿದ್ದನ್ನು ನಾನು ಗಮನಿಸಿದ್ದೇನೆ. ಹಿಂದೂ ಧರ್ಮಕ್ಕಾಗಿ ಕೆಲಸ ಮಾಡುತ್ತಿರುವ ಸಂಘಟನೆಗಳ ಮಾನಹಾನಿ ಮಾಡುವ ಉದ್ದೇಶದಿಂದಲೇ ಜಾವೇದ್​ ಅಖ್ತರ್​ ಈ ರೀತಿ ಹೇಳಿಕೆಗಳನ್ನು ನೀಡಿದ್ದಾರೆ. ಆರ್​ಎಸ್​ಎಸ್ ಈ ಸಮಾಜದಲ್ಲಿ ಕ್ಯಾನ್ಸರ್​ ಇದ್ದಂತೆ ​ಅಂತ ಅವರು ಹೇಳಿದ್ದಾರೆ. ಇದು ಪೂರ್ವನಿಯೋಜಿತ ಕೆಲಸ. ಆರ್​ಎಸ್ಎಸ್​ಗೆ ಸೇರುವವರನ್ನು ದಾರಿ ತಪ್ಪಿಸಲು ಇಂಥ ಹೇಳಿಕೆ ನೀಡಲಾಗಿದೆ’ ಎಂದು ದೂರಿನಲ್ಲಿ ಜೋಶಿ ಆರೋಪಿಸಿದ್ದರು.

‘ಯಾವುದೇ ಸಾಕ್ಷಿಗಳು ಇಲ್ಲದೇ ಆರ್​ಎಸ್​ಎಸ್​ ಬಗ್ಗೆ ಜಾವೇದ್​ ಅಖ್ತರ್​ ಅವರು ಇಂಥ ಮಾತುಗಳನ್ನು ಆಡಿದ್ದಾರೆ. ಪ್ರಧಾನಮಂತ್ರಿ, ರಾಷ್ಟ್ರಪತಿ ಮತ್ತು ಕೇಂದ್ರದ ಅನೇಕ ಮಂತ್ರಿಗಳು ಆರ್​ಎಸ್​ಎಸ್​ ಬೆಂಬಲಿಗರಾಗಿದ್ದಾರೆ. ಅಂಥ ಸಂಘಟನೆ ಬಗ್ಗೆ ಜಾವೇದ್​ ಅಖ್ತರ್​ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ’ ಎಂದು ದೃಷ್ಟಿಮಾನ್​ ಜೋಶಿ ಹೇಳಿದ್ದರು. ಈಗ ನ್ಯಾಯಾಲಯ ಅವರ ವಿರುದ್ಧ ಎಫ್​ಐಆರ್​​ ದಾಖಲು ಮಾಡಿಕೊಂಡಿದೆ.

ಇದನ್ನೂ ಓದಿ: Javed Akhtar ಮುಂಬೈಯಲ್ಲಿರುವ ಜಾವೇದ್ ಅಖ್ತರ್  ಮನೆಗೆ ಬಿಗಿ ಭದ್ರತೆ; ಹೇಳಿಕೆಗೆ ಕ್ಷಮೆಯಾಚಿಸಲು ಬಿಜೆಪಿ ಒತ್ತಾಯ

RSS ಬಗ್ಗೆ ಅವಹೇಳನಕಾರಿ ಹೇಳಿಕೆ: ಜಾವೇದ್​ ಅಖ್ತರ್​ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!