AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್ ಹತ್ಯೆ ಪ್ರಕರಣದಲ್ಲಿ ಹೊಸ ಹೆಸರು ಮುನ್ನಲೆಗೆ

ಸಲ್ಮಾನ್ ಖಾನ್ ಅನ್ನು ಕೊಲ್ಲಲು ಭೂಗತ ಜಗತ್ತಿನ ಘಟಾನುಘಟಿಗಳು ಕಾದು ನಿಂತಿದ್ದಾರೆ. ಲಾರೆನ್ಸ್ ಬಿಷ್ಣೋಯಿ, ಎಲ್​ಜಿ ಬ್ರಾರ್ ಅವರ ಹೆಸರುಗಳು ಮಾತ್ರವೇ ಮುಂಚೂಣಿಯಲ್ಲಿ ಕೇಳಿ ಬಂದಿತ್ತು. ಇದೀಗ ಹೊಸ ಭೂಗತ ಪಾತಕಿಯ ಹೆಸರು ಮುನ್ನೆಲೆಗೆ ಬಂದಿದೆ.

ಸಲ್ಮಾನ್ ಖಾನ್ ಹತ್ಯೆ ಪ್ರಕರಣದಲ್ಲಿ ಹೊಸ ಹೆಸರು ಮುನ್ನಲೆಗೆ
ಮಂಜುನಾಥ ಸಿ.
|

Updated on: May 15, 2024 | 1:00 PM

Share

ಸಲ್ಮಾನ್ ಖಾನ್ (Salman Khan) ಅನ್ನು ಕೊಲ್ಲಲು ಭೂಗತ ಜಗತ್ತಿನ ಕೆಲ ಪಾತಕಿಗಳು ಟೊಂಕ ಕಟ್ಟಿ ನಿಂತಿದ್ದಾರೆ. ಸಲ್ಮಾನ್ ಖಾನ್ ರನ್ನು ಕೊಲ್ಲುವ ಪ್ರಯತ್ನವನ್ನು ಸತತವಾಗಿ ಮಾಡುತ್ತಲೇ ಇದ್ದಾರೆ. ಈ ಹತ್ಯೆ ಪ್ರಯತ್ನದಲ್ಲಿ ಮೊದಲು ಕೇಳಿ ಬರುತ್ತಿರುವ ಹೆಸರು ಲಾರೆನ್ಸ್ ಬಿಷ್ಣೋಯಿಯದ್ದು. ಜೈಲಿನಲ್ಲಿರುವ ಈತ ದೊಡ್ಡ ಭೂಗತ ಪಾತಕಿಗಳ ಗುಂಪಿನ ನಾಯಕ ಎನ್ನಲಾಗುತ್ತಿದೆ. ಲಾರೆನ್ಸ್ ಜೊತೆಗೆ ಬ್ರಾರ್ ಬ್ರದರ್ಸ್ ಹೆಸರು ಸಹ ಕೇಳಿ ಬರುತ್ತಿದೆ. ಕೆನಡಾವನ್ನು ತಮ್ಮ ನೆಲೆ ಮಾಡಿಕೊಂಡಿರುವ ಇವರು ಸಹ ದೊಡ್ಡ ಭೂಗತ ಪಾತಕಿಗಳ ಗುಂಪೊಂದನ್ನು ನಡೆಸುತ್ತಿದ್ದು ಲಾರೆನ್ಸ್ ಜೊತೆಗೂ ಆಪ್ತ ಬಂಧ ಹೊಂದಿದ್ದಾರೆ. ಈ ಮೂವರಲ್ಲದೆ ಇದೀಗ ಮತ್ತೊಬ್ಬ ಭೂಗತ ಪಾತಕಿಯ ಹೆಸರು ಈ ಪ್ರಕರಣದಲ್ಲಿ ಮುನ್ನೆಲೆಗೆ ಬಂದಿದೆ.

ಕಳೆದ ತಿಂಗಳಷ್ಟೆ ಸಲ್ಮಾನ್ ಖಾನ್​ರ ಮನೆಯ ಮೇಲೆ ಗುಂಡಿನ ದಾಳಿಯಾಗಿತ್ತು. ಮುಂಬೈನಲ್ಲಿರುವ ಸಲ್ಮಾನ್ ಖಾನ್​ರ ಗ್ಯಾಲೆಕ್ಸಿ ಅಪಾರ್ಟ್​ಮೆಂಟ್​ನ ಕಿಟಕಿಯ ಮೇಲೆ, ಬೈಕ್​ನಲ್ಲಿ ಬಂದ ಇಬ್ಬರು ಗುಂಡು ಹಾರಿಸಿ ಪರಾರಿಯಾಗಿದ್ದರು. ಸಲ್ಮಾನ್ ಖಾನ್ ಮನೆಯ ಮೇಲೆ ಗುಂಡು ಹಾರಿಸಿದ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಬಂದೂಕನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಇದೀಗ ತನಿಖೆ ಮುಂದುರೆಸಿದಂತೆ ಮತ್ತೊಬ್ಬ ಭೂಗತ ಪಾತಕಿಯ ಹೆಸರು ಮೇಲೆ ಬಂದಿದೆ.

ಸಲ್ಮಾನ್ ಖಾನ್ ಹತ್ಯೆ ಪ್ರಯತ್ನ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬೈ ಅಪರಾಧ ತನಿಖಾ ವಿಭಾಗವು ಭೂಗತ ಪಾತಕಿ ರೋಹಿತ್ ಗೊದಾರ ವಿರುದ್ಧ ಪ್ರಕರಣ ದಾಖಲಿಸಿದೆ. ಸಲ್ಮಾನ್ ಖಾನ್ ರ ಗ್ಯಾಲೆಕ್ಸಿ ಅಪಾರ್ಟ್​ಮೆಂಟ್ ಮೇಲೆ ಗುಂಡು ಹಾರಿಸಿದ ಪ್ರಕರಣದ ರೂವಾರಿ ಇದೇ ರೋಹಿತ್ ಗೊದಾರ ಎನ್ನಲಾಗುತ್ತಿದೆ. ಆ ಪ್ರಕರಣದಲ್ಲಿ ಒಂಬತ್ತು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು ಆರು ಮಂದಿಯನ್ನು ಬಂಧಿಸಲಾಗಿದೆ ಇನ್ನುಳಿದವರಿಗಾಗಿ ತನಿಖೆ ಜಾರಿಯಲ್ಲಿದೆ.

ಇದನ್ನೂ ಓದಿ:ಸಲ್ಮಾನ್ ಖಾನ್ ಜೊತೆ ನಟಿಸಲು ಭಾರಿ ಸಂಭಾವನೆ ಪಡೆಯಲಿದ್ದಾರೆ ರಶ್ಮಿಕಾ ಮಂದಣ್ಣ

‘ಹಮ್ ಸಾಥ್ ಸಾಥ್ ಹೈ’ ಸಿನಿಮಾದ ಚಿತ್ರೀಕರಣದ ಸಂದರ್ಭದಲ್ಲಿ ಸಲ್ಮಾನ್ ಖಾನ್ ಕೃಷ್ಣಮೃಗವನ್ನು ಭೇಟಿಯಾಡಿದರೆ ಎನ್ನಲಾಗಿದ್ದು, ಪ್ರಕರಣದ ವಿಚಾರಣೆ ಇನ್ನೂ ಚಾಲ್ತಿಯಲ್ಲಿದೆ. ಕೃಷ್ಣಮೃಗವು ಬಿಷ್ಣೋಯಿ ಸಮುದಾಯಕ್ಕೆ ಪವಿತ್ರವಾಗಿದ್ದು, ಅದನ್ನು ಕೊಂದಿರುವ (ಆರೋಪ) ಸಲ್ಮಾನ್ ಖಾನ್ ಅನ್ನು ಕೊಂದು ಸೇಡು ತೀರಿಸಿಕೊಳ್ಳುವ ಗುರಿ ಲಾರೆನ್ಸ್ ಬಿಷ್ಣೋಯಿಯದ್ದು. ಹಾಗಾಗಿ ಸಲ್ಮಾನ್ ಖಾನ್ ಅನ್ನು ಕೊಲ್ಲುವ ಸತತ ಪ್ರಯತ್ನ ಮಾಡುತ್ತಲೇ ಇದ್ದಾನೆ. ಇದಕ್ಕಾಗಿ ತನ್ನ ಭೂಗತ ಪಾತಕಿ ಗೆಳೆಯರ ಸಹಾಯ ತೆಗೆದುಕೊಳ್ಳುತ್ತಿರುತ್ತಾನೆ.

ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಸಲ್ಮಾನ್ ಖಾನ್, ತನ್ನ ಪಾಡಿಗೆ ತಾನು ಸಿನಿಮಾಗಳಲ್ಲಿ ನಟಿಸುತ್ತಾ ಆರಾಮವಾಗಿದ್ದಾರೆ. ಪ್ರಸ್ತುತ ‘ಸಿಕಂಧರ್’ ಸಿನಿಮಾನಲ್ಲಿ ಸಲ್ಮಾನ್ ಖಾನ್ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿ. ತಮಿಳಿನ ಎಆರ್ ಮುರುಗದಾಸ್ ನಿರ್ದೇಶಕ. ಸಿನಿಮಾ ನಿರ್ಮಾಣ ಮಾಡುತ್ತಿರುವುದು ಸಾಜಿದ್ ನಾಡಿಯಾವಾಲಾ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್