AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್ ಹತ್ಯೆ ಪ್ರಕರಣದಲ್ಲಿ ಹೊಸ ಹೆಸರು ಮುನ್ನಲೆಗೆ

ಸಲ್ಮಾನ್ ಖಾನ್ ಅನ್ನು ಕೊಲ್ಲಲು ಭೂಗತ ಜಗತ್ತಿನ ಘಟಾನುಘಟಿಗಳು ಕಾದು ನಿಂತಿದ್ದಾರೆ. ಲಾರೆನ್ಸ್ ಬಿಷ್ಣೋಯಿ, ಎಲ್​ಜಿ ಬ್ರಾರ್ ಅವರ ಹೆಸರುಗಳು ಮಾತ್ರವೇ ಮುಂಚೂಣಿಯಲ್ಲಿ ಕೇಳಿ ಬಂದಿತ್ತು. ಇದೀಗ ಹೊಸ ಭೂಗತ ಪಾತಕಿಯ ಹೆಸರು ಮುನ್ನೆಲೆಗೆ ಬಂದಿದೆ.

ಸಲ್ಮಾನ್ ಖಾನ್ ಹತ್ಯೆ ಪ್ರಕರಣದಲ್ಲಿ ಹೊಸ ಹೆಸರು ಮುನ್ನಲೆಗೆ
ಮಂಜುನಾಥ ಸಿ.
|

Updated on: May 15, 2024 | 1:00 PM

Share

ಸಲ್ಮಾನ್ ಖಾನ್ (Salman Khan) ಅನ್ನು ಕೊಲ್ಲಲು ಭೂಗತ ಜಗತ್ತಿನ ಕೆಲ ಪಾತಕಿಗಳು ಟೊಂಕ ಕಟ್ಟಿ ನಿಂತಿದ್ದಾರೆ. ಸಲ್ಮಾನ್ ಖಾನ್ ರನ್ನು ಕೊಲ್ಲುವ ಪ್ರಯತ್ನವನ್ನು ಸತತವಾಗಿ ಮಾಡುತ್ತಲೇ ಇದ್ದಾರೆ. ಈ ಹತ್ಯೆ ಪ್ರಯತ್ನದಲ್ಲಿ ಮೊದಲು ಕೇಳಿ ಬರುತ್ತಿರುವ ಹೆಸರು ಲಾರೆನ್ಸ್ ಬಿಷ್ಣೋಯಿಯದ್ದು. ಜೈಲಿನಲ್ಲಿರುವ ಈತ ದೊಡ್ಡ ಭೂಗತ ಪಾತಕಿಗಳ ಗುಂಪಿನ ನಾಯಕ ಎನ್ನಲಾಗುತ್ತಿದೆ. ಲಾರೆನ್ಸ್ ಜೊತೆಗೆ ಬ್ರಾರ್ ಬ್ರದರ್ಸ್ ಹೆಸರು ಸಹ ಕೇಳಿ ಬರುತ್ತಿದೆ. ಕೆನಡಾವನ್ನು ತಮ್ಮ ನೆಲೆ ಮಾಡಿಕೊಂಡಿರುವ ಇವರು ಸಹ ದೊಡ್ಡ ಭೂಗತ ಪಾತಕಿಗಳ ಗುಂಪೊಂದನ್ನು ನಡೆಸುತ್ತಿದ್ದು ಲಾರೆನ್ಸ್ ಜೊತೆಗೂ ಆಪ್ತ ಬಂಧ ಹೊಂದಿದ್ದಾರೆ. ಈ ಮೂವರಲ್ಲದೆ ಇದೀಗ ಮತ್ತೊಬ್ಬ ಭೂಗತ ಪಾತಕಿಯ ಹೆಸರು ಈ ಪ್ರಕರಣದಲ್ಲಿ ಮುನ್ನೆಲೆಗೆ ಬಂದಿದೆ.

ಕಳೆದ ತಿಂಗಳಷ್ಟೆ ಸಲ್ಮಾನ್ ಖಾನ್​ರ ಮನೆಯ ಮೇಲೆ ಗುಂಡಿನ ದಾಳಿಯಾಗಿತ್ತು. ಮುಂಬೈನಲ್ಲಿರುವ ಸಲ್ಮಾನ್ ಖಾನ್​ರ ಗ್ಯಾಲೆಕ್ಸಿ ಅಪಾರ್ಟ್​ಮೆಂಟ್​ನ ಕಿಟಕಿಯ ಮೇಲೆ, ಬೈಕ್​ನಲ್ಲಿ ಬಂದ ಇಬ್ಬರು ಗುಂಡು ಹಾರಿಸಿ ಪರಾರಿಯಾಗಿದ್ದರು. ಸಲ್ಮಾನ್ ಖಾನ್ ಮನೆಯ ಮೇಲೆ ಗುಂಡು ಹಾರಿಸಿದ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಬಂದೂಕನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಇದೀಗ ತನಿಖೆ ಮುಂದುರೆಸಿದಂತೆ ಮತ್ತೊಬ್ಬ ಭೂಗತ ಪಾತಕಿಯ ಹೆಸರು ಮೇಲೆ ಬಂದಿದೆ.

ಸಲ್ಮಾನ್ ಖಾನ್ ಹತ್ಯೆ ಪ್ರಯತ್ನ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬೈ ಅಪರಾಧ ತನಿಖಾ ವಿಭಾಗವು ಭೂಗತ ಪಾತಕಿ ರೋಹಿತ್ ಗೊದಾರ ವಿರುದ್ಧ ಪ್ರಕರಣ ದಾಖಲಿಸಿದೆ. ಸಲ್ಮಾನ್ ಖಾನ್ ರ ಗ್ಯಾಲೆಕ್ಸಿ ಅಪಾರ್ಟ್​ಮೆಂಟ್ ಮೇಲೆ ಗುಂಡು ಹಾರಿಸಿದ ಪ್ರಕರಣದ ರೂವಾರಿ ಇದೇ ರೋಹಿತ್ ಗೊದಾರ ಎನ್ನಲಾಗುತ್ತಿದೆ. ಆ ಪ್ರಕರಣದಲ್ಲಿ ಒಂಬತ್ತು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು ಆರು ಮಂದಿಯನ್ನು ಬಂಧಿಸಲಾಗಿದೆ ಇನ್ನುಳಿದವರಿಗಾಗಿ ತನಿಖೆ ಜಾರಿಯಲ್ಲಿದೆ.

ಇದನ್ನೂ ಓದಿ:ಸಲ್ಮಾನ್ ಖಾನ್ ಜೊತೆ ನಟಿಸಲು ಭಾರಿ ಸಂಭಾವನೆ ಪಡೆಯಲಿದ್ದಾರೆ ರಶ್ಮಿಕಾ ಮಂದಣ್ಣ

‘ಹಮ್ ಸಾಥ್ ಸಾಥ್ ಹೈ’ ಸಿನಿಮಾದ ಚಿತ್ರೀಕರಣದ ಸಂದರ್ಭದಲ್ಲಿ ಸಲ್ಮಾನ್ ಖಾನ್ ಕೃಷ್ಣಮೃಗವನ್ನು ಭೇಟಿಯಾಡಿದರೆ ಎನ್ನಲಾಗಿದ್ದು, ಪ್ರಕರಣದ ವಿಚಾರಣೆ ಇನ್ನೂ ಚಾಲ್ತಿಯಲ್ಲಿದೆ. ಕೃಷ್ಣಮೃಗವು ಬಿಷ್ಣೋಯಿ ಸಮುದಾಯಕ್ಕೆ ಪವಿತ್ರವಾಗಿದ್ದು, ಅದನ್ನು ಕೊಂದಿರುವ (ಆರೋಪ) ಸಲ್ಮಾನ್ ಖಾನ್ ಅನ್ನು ಕೊಂದು ಸೇಡು ತೀರಿಸಿಕೊಳ್ಳುವ ಗುರಿ ಲಾರೆನ್ಸ್ ಬಿಷ್ಣೋಯಿಯದ್ದು. ಹಾಗಾಗಿ ಸಲ್ಮಾನ್ ಖಾನ್ ಅನ್ನು ಕೊಲ್ಲುವ ಸತತ ಪ್ರಯತ್ನ ಮಾಡುತ್ತಲೇ ಇದ್ದಾನೆ. ಇದಕ್ಕಾಗಿ ತನ್ನ ಭೂಗತ ಪಾತಕಿ ಗೆಳೆಯರ ಸಹಾಯ ತೆಗೆದುಕೊಳ್ಳುತ್ತಿರುತ್ತಾನೆ.

ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಸಲ್ಮಾನ್ ಖಾನ್, ತನ್ನ ಪಾಡಿಗೆ ತಾನು ಸಿನಿಮಾಗಳಲ್ಲಿ ನಟಿಸುತ್ತಾ ಆರಾಮವಾಗಿದ್ದಾರೆ. ಪ್ರಸ್ತುತ ‘ಸಿಕಂಧರ್’ ಸಿನಿಮಾನಲ್ಲಿ ಸಲ್ಮಾನ್ ಖಾನ್ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿ. ತಮಿಳಿನ ಎಆರ್ ಮುರುಗದಾಸ್ ನಿರ್ದೇಶಕ. ಸಿನಿಮಾ ನಿರ್ಮಾಣ ಮಾಡುತ್ತಿರುವುದು ಸಾಜಿದ್ ನಾಡಿಯಾವಾಲಾ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?