AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bollywood: ಶಿಲ್ಪಾ ಶೆಟ್ಟಿ, ಬಚ್ಚನ್, ಧೋನಿ ಹೆಸರು ಬಳಸಿ ಲಕ್ಷಾಂತರ ಹಣ ವಂಚನೆ

ಬಾಲಿವುಡ್ ಸಿನಿಮಾ ನಟ-ನಟಿಯರ ಹೆಸರು ಬಳಸಿ ಕೆಲವು ಯುವಕರು ಲಕ್ಷಾಂತರ ಹಣ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ವಂಚನೆ ಮಾಡಿದ್ದು ಹೇಗೆ? ಯಾರಿಗೆ?

Bollywood: ಶಿಲ್ಪಾ ಶೆಟ್ಟಿ, ಬಚ್ಚನ್, ಧೋನಿ ಹೆಸರು ಬಳಸಿ ಲಕ್ಷಾಂತರ ಹಣ ವಂಚನೆ
ನಟ-ನಟಿಯರ ಹೆಸರಲ್ಲಿ ವಂಚನೆ
ಮಂಜುನಾಥ ಸಿ.
|

Updated on: Mar 04, 2023 | 2:14 PM

Share

ಬಾಲಿವುಡ್ ನಟ-ನಟಿಯರ ಹೆಸರುಗಳನ್ನು, ಚಿತ್ರಗಳನ್ನು ಜಾಹೀರಾತುಗಳಿಗೆ ಬಳಸುವುದು ಸಾಮಾನ್ಯ, ಆದರೆ ದೆಹಲಿಯ ಐನಾತಿ ಸೈಬರ್ ಕಳ್ಳರು ಬಾಲಿವುಡ್ (Bollywood) ನಟ-ನಟಿಯರ ಹೆಸರು, ಕೆಲವು ದಾಖಲಾತಿಗಳನ್ನು ಬಳಸಿ ಲಕ್ಷಾಂತರ ರುಪಾಯಿ ಹಣ ವಂಚನೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು (Delhi Police) ಕೆಲವರನ್ನು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.

ನಟಿ ಶಿಲ್ಪಾ ಶೆಟ್ಟಿ, ನಟ ಅಭಿಷೇಕ್ ಬಚ್ಚನ್, ಇಮ್ರಾನ್ ಹಶ್ಮಿ, ಮಾಧುರಿ ದೀಕ್ಷಿತ್, ಕ್ರಿಕೆಟಿಗ ಎಂಎಸ್ ಧೋನಿ ಇನ್ನೂ ಕೆಲವರ ಹೆಸರು ಅವರ ಪ್ಯಾನ್ ಕಾರ್ಡ್​ ಹಾಗೂ ಇತರೆ ಕೆಲವು ದಾಖಲೆಗಳನ್ನು ಬಳಸಿ ಸಂಸ್ಥೆಯೊಂದರಿಂದ ಕ್ರೆಡಿಟ್ ಕಾರ್ಡ್ ಪಡೆದು ಲಕ್ಷಾಂತರ ಹಣ ವಂಚನೆ ಮಾಡಲಾಗಿದೆ.

ದೆಹಲಿಯ ಐವರು ಯುವಕರು ಈ ಜಾಲ ಹೆಣೆದಿದ್ದು, ಆನ್​ಲೈನ್​ನಲ್ಲಿ ಸಿಗುವ ಕ್ರಿಕೆಟಿಗರ ಹಾಗೂ ನಟ-ನಟಿಯರ ಪ್ಯಾನ್ ಕಾರ್ಡ್ ಸಂಖ್ಯೆ, ಜಿಎಸ್​ಟಿ ದಾಖಲೆ ಹಾಗೂ ಮನೆ ವಿಳಾಸ ಇನ್ನಿತರೆಗಳನ್ನು ತೆಗೆದುಕೊಂಡು ಅದನ್ನು ಬಳಸಿ ಒನ್ ಕಾರ್ಡ್ ಹೆಸರಿನ ಆನ್​ಲೈಸ್ ಕ್ರೆಡಿಟ್ ಕಾರ್ಡ್ ಸಂಸ್ಥೆಯ ಕ್ರೆಡಿಟ್ ಕಾರ್ಡ್ ಪಡೆದುಕೊಂಡಿದ್ದರು. ಆ ಕಾರ್ಡ್​ಗಳನ್ನು ಬಳಸಿ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಖರೀದಿಸಿದ್ದರು.

ಸುಮಾರು 21.32 ಲಕ್ಷ ಮೌಲ್ಯದ ವಸ್ತುಗಳನ್ನು ಈ ಯುವಕರು ಖರೀದಿಸಿದ್ದರು ಎನ್ನಲಾಗಿದ್ದು. ಕ್ರೆಡಿಟ್ ಕಾರ್ಡ್ ಹಣ ಮರಳಿಸದೇ ಇದ್ದಾಗ ಪರಿಶೀಲನೆ ನಡೆಸಿದ ಸಂಸ್ಥೆಗೆ ಈ ಯುವಕರು ಸೆಲೆಬ್ರಿಟಿಗಳ ದಾಖಲೆ ನೀಡಿರುವುದು ಅರಿವಿಗೆ ಬಂದಿದೆ. ಕೂಡಲೇ ಪೊಲೀಸ್ ದೂರು ದಾಖಲಿಸಿದ್ದು, ತನಿಖೆ ನಡೆಸಿದ ದೆಹಲಿ ಪೊಲೀಸರು ಐವರು ಯುವಕರನ್ನು ಬಂಧಿಸಿದ್ದಾರೆ.

ಕ್ರೆಡಿಟ್ ಕಾರ್ಡ್ ಮಾರಾಟಕ್ಕೆ ಬ್ಯಾಂಕ್​ಗಳು ಹಾಗೂ ಆನ್​ಲೈನ್ ಫೈನ್ಯಾನ್ಸ್ ಸಂಸ್ಥೆಗಳ ನಡುವೆ ಪೈಪೋಟಿ ಇದ್ದು, ಒದ್ದಕ್ಕಿಂತಲೂ ಒಂದು ಸುಲಭವಾಗಿ, ಸರಳವಾಗಿ ಕನಿಷ್ಟ ಗ್ರಾಹಕರ ಮಾಹಿತಿ ಆಧರಿಸಿ ಕ್ರೆಡಿಟ್ ಕಾರ್ಡ್ ನೀಡುತ್ತಿವೆ. ಇದರ ಲಾಭ ಪಡೆದುಕೊಂಡ ಈ ಯುವಕರು ಸೆಲೆಬ್ರಿಟಿಗಳ ಹೆಸರಿನಲ್ಲಿ ಕ್ರೆಡಿಟ್ ಕಾರ್ಡ್ ಪಡೆದು ಲಂಕ್ಷಾಂತರ ಹಣ ವಂಚಿಸಿದ್ದರು.

ಸಿನಿಮಾ ಸ್ಟಾರ್​ಗಳ ಹೆಸರು ವಂಚನೆಗೆ ಬಳಕೆಯಾಗುತ್ತಿರುವುದು ಇದು ಮೊದಲೇನೂ ಅಲ್ಲ. ಈ ಹಿಂದೆ ನರೇಗಾ ಸ್ಕ್ರೀಂನಲ್ಲಿ ಕತ್ರಿನಾ ಕೈಫ್, ಕರೀನಾ ಕಪೂರ್, ಸನ್ನಿ ಲಿಯೋನ್ ಹೆಸರಲ್ಲಿ ಜಾಬ್ ಕಾರ್ಡ್ ಮಾಡಿ ಸರ್ಕಾರದಿಂದ ಹಣ ಪಡೆದ ಘಟನೆಗಳು ಮಧ್ಯ ಪ್ರದೇಶ, ಉತ್ತರ ಪ್ರದೇಶ ಇನ್ನಿತರೆಗಳಲ್ಲಿ ಬೆಳಕಿಗೆ ಬಂದಿದ್ದವು.

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ