AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲ್ಡೀವ್ಸ್​ನಲ್ಲಿ ಚಿತ್ರೀಕರಣ ಬೇಡ, ನಿರ್ಮಾಪಕರಿಗೆ ಮನವಿ

Maldives: ಮಾಲ್ಡೀವ್ಸ್ ಹಾಗೂ ಭಾರತದ ರಾಜತಾಂತ್ರಿಕ ಸಂಬಂಧ ಬಿಗಡಾಯಿಸಿದೆ. ಮಾಲ್ಡೀವ್ಸ್​ನ ಮೂವರು ಸಚಿವರು ಭಾರತದ ಪ್ರಧಾನಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೇ ಕಾರಣಕ್ಕೆ ಭಾರತೀಯರು ಮಾಲ್ಡೀವ್ಸ್​ ಅನ್ನು ಬಹಿಷ್ಕರಿಸಬೇಕು ಎಂಬ ಕೂಗು ಜೋರಾಗಿ ಕೇಳಿ ಬರುತ್ತಿದ್ದು, ಸಿನಿಮಾ ಮಂದಿಯೂ ಇದಕ್ಕೆ ಬೆಂಬಲ ನೀಡಿದ್ದಾರೆ.

ಮಾಲ್ಡೀವ್ಸ್​ನಲ್ಲಿ ಚಿತ್ರೀಕರಣ ಬೇಡ, ನಿರ್ಮಾಪಕರಿಗೆ ಮನವಿ
ಮಂಜುನಾಥ ಸಿ.
|

Updated on: Jan 11, 2024 | 3:56 PM

Share

ಮಾಲ್ಡಿವ್ಸ್ (Maldives) ಜೊತೆಗೆ ಭಾರತದ ರಾಜತಾಂತ್ರಿಕ ಸಂಬಂಧ ಹಳಸಿದೆ. ಕೆಲ ದಿನಗಳ ಹಿಂದಷ್ಟೆ ಭಾರತದ ಪ್ರಧಾನಿಯವರ ಬಗ್ಗೆ ಮಾಲ್ಡೀವ್ಸ್​ನ ಮೂವರು ಸಚಿವರು ಅವಹೇಳನಕಾರಿ ಪೋಸ್ಟ್​ಗಳನ್ನು ಹಂಚಿಕೊಂಡಿದ್ದಾರೆ. ಮಾಲ್ಡೀವ್ಸ್​ನ ಈ ಭಾರತ ವಿರೋಧಿ ನಡೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದ್ದು, ‘ಬಾಯ್​ಕಾಟ್ ಮಾಲ್ಡೀವ್ಸ್’ ಟ್ರೆಂಡ್ ಆಗುತ್ತಿದೆ. ಭಾರತೀಯರು ಮಾಲ್ಡೀವ್ಸ್​ಗೆ ಬದಲಾಗಿ ಲಕ್ಷದ್ವೀಪವನ್ನು ಪ್ರವಾಸಿ ತಾಣವಾಗಿ ಬಳಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಬಾಲಿವುಡ್ಡಿಗರಿಗಂತೂ ಮಾಲ್ಡೀವ್ಸ್ ಅತ್ಯಂತ ಮೆಚ್ಚಿನ ತಾಣ ಶೂಟಿಂಗ್ ಆಗಲಿ ವಿಶ್ರಾಂತಿಗಾಗಲಿ ಮಾಲ್ಡೀವ್ಸ್​ಗೆ ತೆರಳುತ್ತಾರೆ. ಆದರೆ ಈಗ ಬಾಲಿವುಡ್​ ಸಹ ‘ಬಾಯ್​ಕಾಟ್ ಮಾಲ್ಡೀವ್ಸ್​’ಗೆ ಬೆಂಬಲ ಸೂಚಿಸುತ್ತಿದೆ.

ರಣ್ವೀರ್ ಸಿಂಗ್ ಸೇರಿದಂತೆ ಇನ್ನೂ ಕೆಲವು ಬಾಲಿವುಡ್​ನ ನಟ-ನಟಿಯರು ಮಾಲ್ಡೀವ್ಸ್​ ವಿರುದ್ಧ ಪೋಸ್ಟ್​ಗಳನ್ನು ಹಂಚಿಕೊಂಡಿದ್ದಾರೆ. ಇದೀಗ ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಸಿಬ್ಬಂದಿ ಸಂಸ್ಥೆಯು ನಿರ್ಮಾಣ ಸಂಸ್ಥೆಗಳಿಗೆ ಪತ್ರ ಬರೆದಿದ್ದು, ಇನ್ನು ಮುಂದೆ ಮಾಲ್ಡೀವ್ಸ್​ನಲ್ಲಿ ಯಾವುದೇ ಬಾಲಿವುಡ್ ಸಿನಿಮಾದ ಚಿತ್ರೀಕರಣ ಮಾಡದಂತೆ ಮನವಿ ಮಾಡಿದ್ದಾರೆ.

ಚಿತ್ರರಂಗದ ಹಳೆಯ ಹಾಗೂ ಬೃಹತ್ ಸಂಸ್ಥೆಯಾಗಿರುವ ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಸಿಬ್ಬಂದಿ (ಎಫ್​ಡಬ್ಲುಐಸಿಇ) ಮಾಲ್ಡಿವ್ಸ್ ಸಚಿವರು ಪ್ರಧಾನಿ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಆಡಿರುವ ಮಾತುಗಳನ್ನು ಖಂಡಿಸಿದ್ದು, ಬಾಲಿವುಡ್​ನ ನಿರ್ಮಾಪಕರು ಮಾಲ್ಡಿವ್ಸ್​ನಲ್ಲಿ ತಮ್ಮ ಸಿನಿಮಾಗಳ ಚಿತ್ರೀಕರಣ ಮಾಡುವುದನ್ನು ನಿಲ್ಲಿಸಬೇಕು, ಈಗಾಗಲೇ ಚಿತ್ರೀಕರಣ ಮಾಡಲು ಮಾಡಿಕೊಂಡಿರುವ ಬುಕಿಂಗ್​ಗಳನ್ನು ರದ್ದು ಮಾಡಬೇಕು ಎಂದು ಕೋರಿದೆ.

ಇದನ್ನೂ ಓದಿ:ನಮ್ಮಲ್ಲಿಗೆ ಹೆಚ್ಚಿನ ಪ್ರವಾಸಿಗರನ್ನು ಕಳುಹಿಸಿ: ಚೀನಾಕ್ಕೆ ಮಾಲ್ಡೀವ್ಸ್ ಅಧ್ಯಕ್ಷರ ಮನವಿ

ಮಾಲ್ಡೀವ್ಸ್‌ನಲ್ಲಿ ಯಾವುದೇ ಶೂಟಿಂಗ್ ಅಥವಾ ಉತ್ಪಾದನಾ ಚಟುವಟಿಕೆಗಳನ್ನು ಯೋಜಿಸದಂತೆ ಭಾರತ ಮತ್ತು ಪ್ರಪಂಚದಾದ್ಯಂತದ ಎಲ್ಲಾ ನಿರ್ಮಾಪಕರಿಗೆ ಈ ಮೂಲಕ ಸೂಚಿಸಲಾಗಿದೆ. ನಾವೆಲ್ಲರೂ ನಮ್ಮ ಪ್ರಧಾನಿ ಮತ್ತು ನಮ್ಮ ರಾಷ್ಟ್ರಕ್ಕೆ ಬಲವಾದ ಬೆಂಬಲವನ್ನು ನೀಡುವ ಸಲುವಾಗಿ ಈ ಗಟ್ಟಿ ನಿರ್ಣಯವನ್ನು ತೆಗೆದುಕೊಳ್ಳಬೇಕಿದೆ ಎಂದು ಪತ್ರದಲ್ಲಿ ಹೇಳಿದೆ ಎಫ್​ಡಬ್ಲುಐಸಿಇ.

ಕೆಲವು ದಿನಗಳ ಹಿಂದಷ್ಟೆ ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದರು. ಆ ಬಳಕ ಮಾಲ್ಡೀವ್ಸ್​ ಬದಲಿಗೆ ಲಕ್ಷದ್ವೀಪವನ್ನು ಪ್ರವಾಸಿ ತಾಣವಾಗಿ ಬಳಸುವಂತೆ ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳು ಹರಿದಾಡಲು ಆರಂಭವಾಗಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್