AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮಂತನ ಪಾತ್ರ ಮಾಡ್ತಾರಾ ಸನ್ನಿ ಡಿಯೋಲ್​? ‘ರಾಮಾಯಣ’ ಚಿತ್ರದ ಬಗ್ಗೆ ಬಿಗ್​ ನ್ಯೂಸ್​

ಹಲವು ಪಾರ್ಟ್​ಗಳಲ್ಲಿ ‘ರಾಮಾಯಣ’ ಸಿನಿಮಾ ಮೂಡಿಬರಲಿದೆ. ಮೊದಲ ಪಾರ್ಟ್​ನಲ್ಲಿ ಆಂಜನೇಯನ ಪಾತ್ರ ಕೆಲವೇ ದೃಶ್ಯಗಳಲ್ಲಿ ಮಾತ್ರ ಕಾಣಿಸಿಕೊಳ್ಳಲಿದೆ. ಎರಡು ಮತ್ತು ಮೂರನೇ ಪಾರ್ಟ್​​ನಲ್ಲಿ ಆ ಪಾತ್ರಕ್ಕೆ ಹೆಚ್ಚು ಸ್ಕ್ರೀನ್​ ಸ್ಪೇಸ್​ ಸಿಗಲಿದೆ. ಈ ರೀತಿಯಾಗಿ ನಿರ್ದೇಶಕ ನಿತೇಶ್​ ತಿವಾರಿ ಅವರು ಸ್ಕ್ರೀನ್​ಪ್ಲೇ ಸಿದ್ಧಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಹನುಮಂತನ ಪಾತ್ರ ಮಾಡ್ತಾರಾ ಸನ್ನಿ ಡಿಯೋಲ್​? ‘ರಾಮಾಯಣ’ ಚಿತ್ರದ ಬಗ್ಗೆ ಬಿಗ್​ ನ್ಯೂಸ್​
ಸನ್ನಿ ಡಿಯೋಲ್​
ಮದನ್​ ಕುಮಾರ್​
|

Updated on: Jan 28, 2024 | 4:02 PM

Share

ನಟ ಸನ್ನಿ ಡಿಯೋಲ್​ (Sunny Deol) ಅವರು ಈಗ ಗೆಲುವಿನ ಟ್ರ್ಯಾಕ್​ಗೆ ಮರಳಿದ್ದಾರೆ. 2023ರಲ್ಲಿ ತೆರೆಕಂಡ ‘ಗದರ್​ 2’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ 500 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿತು. ಆ ಬಳಿಕ ಸನ್ನಿ ಡಿಯೋಲ್​ ಅವರ ಡಿಮ್ಯಾಂಡ್​ ಹೆಚ್ಚಿತು. ಈಗ ಅವರನ್ನು ಹುಡುಕಿಕೊಂಡು ದೊಡ್ಡ ದೊಡ್ಡ ಆಫರ್​ಗಳು ಬರುತ್ತಿವೆ. ನಿತೇಶ್​ ತಿವಾರಿ ನಿರ್ದೇಶನ ಮಾಡಲಿರುವ ರಾಮಾಯಣ’ (Ramayan) ಸಿನಿಮಾದಲ್ಲಿ ಸನ್ನಿ ಡಿಯೋಲ್​ ಅವರು ಹನುಮಂತನ (Lord Hanuman) ಪಾತ್ರ ಮಾಡಲು ಒಪ್ಪಿಕೊಂಡಿದ್ದಾರೆ ಎಂದು ‘ಪಿಂಕ್​ವಿಲ್ಲಾ’ ವರದಿ ಮಾಡಿದೆ. ಈ ಬಗ್ಗೆ ಚಿತ್ರತಂಡದವರು ಇನ್ನಷ್ಟೇ ಅಧಿಕೃತ ಮಾಹಿತಿ ಹಂಚಿಕೊಳ್ಳಬೇಕಿದೆ. ಈ ಸಿನಿಮಾದ ಬಗ್ಗೆ ​ಪ್ರೇಕ್ಷಕರ ವಲಯದಲ್ಲಿ ಭಾರಿ ಹೈಪ್​ ಸೃಷ್ಟಿ ಆಗಿದೆ.

ಹಲವು ಪಾರ್ಟ್​ಗಳಲ್ಲಿ ‘ರಾಮಾಯಣ’ ಸಿನಿಮಾ ಮೂಡಿಬರಲಿದೆ. ರಾಮನಾಗಿ ರಣಬೀರ್​ ಕಪೂರ್​, ಸೀತೆಯಾಗಿ ಸಾಯಿ ಪಲ್ಲವಿ, ರಾವಣನಾಗಿ ಯಶ್​ ಅವರು ಈ ಸಿನಿಮಾದಲ್ಲಿ ನಟಿಸುತ್ತಾರೆ ಎಂದು ಸುದ್ದಿ ಆಗಿದೆ. ಪಾತ್ರವರ್ಗದ ಪಟ್ಟಿಯಲ್ಲಿ ಈಗ ಸನ್ನಿ ಡಿಯೋಲ್​ ಅವರ ಹೆಸರು ಕೂಡ ಕೇಳಿಬಂದಿದೆ. ಹಲವು ಸುತ್ತಿನ ಮಾತುಕಥೆ ಮಾಡಿದ ಬಳಿಕ ಅವರು ಈ ಪಾತ್ರವನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಸಲ್ಮಾನ್ ಖಾನ್ ಜೊತೆ ಹೊಸ ಸಿನಿಮಾ ಮಾಡ್ತಾರೆ ಸನ್ನಿ ಡಿಯೋಲ್?

ರಾಮಾಯಣದಲ್ಲಿ ಆಂಜನೇಯನ ಪಾತ್ರ ಬಹಳ ಮುಖ್ಯವಾದದ್ದು. ಅದಕ್ಕೆ ಸೂಕ್ತ ನಟರನ್ನೇ ಆಯ್ಕೆ ಮಾಡಿಕೊಳ್ಳಬೇಕು. ಹಾಗಾಗಿ ಚಿತ್ರತಂಡದವರು ಈ ಬಗ್ಗೆ ಸಾಕಷ್ಟು ಕಾಳಜಿ ವಹಿಸಿದ್ದಾರೆ. ಇನ್ನು, ವಿಭೀಷಣನ ಪಾತ್ರಕ್ಕೆ ದಕ್ಷಿಣ ಭಾರತದ ಖ್ಯಾತ ನಟ ವಿಜಯ್​ ಸೇತುಪತಿ ಜೊತೆ ಮಾತುಕಥೆ ಮಾಡಲಾಗುತ್ತಿದೆ ಎಂದು ವರದಿ ಆಗಿದೆ. ಸದ್ಯಕ್ಕಂತೂ ಈ ಎಲ್ಲ ವಿಚಾರಗಳು ಅಂತೆ-ಕಂತೆಯ ಹಂತದಲ್ಲೇ ಇವೆ.

ಇದನ್ನೂ ಓದಿ: ‘ಅನಿಮಲ್ ಸಿನಿಮಾದ ಕೆಲ ದೃಶ್ಯಗಳು ನನಗೆ ಇಷ್ಟ ಆಗಿಲ್ಲ’; ನೇರವಾಗಿ ಹೇಳಿದ ಸನ್ನಿ ಡಿಯೋಲ್

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸಿದ್ಧವಾಗಲಿರುವ ‘ರಾಮಾಯಣ’ ಸಿನಿಮಾದ ಮೊದಲ ಪಾರ್ಟ್​ನಲ್ಲಿ ಆಂಜನೇಯನ ಪಾತ್ರ ಕೆಲವೇ ದೃಶ್ಯಗಳಲ್ಲಿ ಮಾತ್ರ ಬರಲಿದೆ. ಎರಡು ಮತ್ತು ಮೂರನೇ ಪಾರ್ಟ್​​ನಲ್ಲಿ ಆ ಪಾತ್ರಕ್ಕೆ ಹೆಚ್ಚು ಸ್ಕ್ರೀನ್​ ಸ್ಪೇಸ್​ ಸಿಗಲಿದೆ. ಈ ರೀತಿಯಾಗಿ ನಿರ್ದೇಶಕ ನಿತೇಶ್​ ತಿವಾರಿ ಅವರು ಸ್ಕ್ರೀನ್​ಪ್ಲೇ ಸಿದ್ಧಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪಾತ್ರವರ್ಗದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಇನ್ನು, ಕೆಲವೇ ತಿಂಗಳಲ್ಲಿ ಈ ಸಿನಿಮಾದ ಶೂಟಿಂಗ್ ಆರಂಭಿಸಬೇಕು ಎಂಬ ಗುರಿ ಇಟ್ಟುಕೊಳ್ಳಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ