AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮಂತನ ಪಾತ್ರ ಮಾಡ್ತಾರಾ ಸನ್ನಿ ಡಿಯೋಲ್​? ‘ರಾಮಾಯಣ’ ಚಿತ್ರದ ಬಗ್ಗೆ ಬಿಗ್​ ನ್ಯೂಸ್​

ಹಲವು ಪಾರ್ಟ್​ಗಳಲ್ಲಿ ‘ರಾಮಾಯಣ’ ಸಿನಿಮಾ ಮೂಡಿಬರಲಿದೆ. ಮೊದಲ ಪಾರ್ಟ್​ನಲ್ಲಿ ಆಂಜನೇಯನ ಪಾತ್ರ ಕೆಲವೇ ದೃಶ್ಯಗಳಲ್ಲಿ ಮಾತ್ರ ಕಾಣಿಸಿಕೊಳ್ಳಲಿದೆ. ಎರಡು ಮತ್ತು ಮೂರನೇ ಪಾರ್ಟ್​​ನಲ್ಲಿ ಆ ಪಾತ್ರಕ್ಕೆ ಹೆಚ್ಚು ಸ್ಕ್ರೀನ್​ ಸ್ಪೇಸ್​ ಸಿಗಲಿದೆ. ಈ ರೀತಿಯಾಗಿ ನಿರ್ದೇಶಕ ನಿತೇಶ್​ ತಿವಾರಿ ಅವರು ಸ್ಕ್ರೀನ್​ಪ್ಲೇ ಸಿದ್ಧಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಹನುಮಂತನ ಪಾತ್ರ ಮಾಡ್ತಾರಾ ಸನ್ನಿ ಡಿಯೋಲ್​? ‘ರಾಮಾಯಣ’ ಚಿತ್ರದ ಬಗ್ಗೆ ಬಿಗ್​ ನ್ಯೂಸ್​
ಸನ್ನಿ ಡಿಯೋಲ್​
ಮದನ್​ ಕುಮಾರ್​
|

Updated on: Jan 28, 2024 | 4:02 PM

Share

ನಟ ಸನ್ನಿ ಡಿಯೋಲ್​ (Sunny Deol) ಅವರು ಈಗ ಗೆಲುವಿನ ಟ್ರ್ಯಾಕ್​ಗೆ ಮರಳಿದ್ದಾರೆ. 2023ರಲ್ಲಿ ತೆರೆಕಂಡ ‘ಗದರ್​ 2’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ 500 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿತು. ಆ ಬಳಿಕ ಸನ್ನಿ ಡಿಯೋಲ್​ ಅವರ ಡಿಮ್ಯಾಂಡ್​ ಹೆಚ್ಚಿತು. ಈಗ ಅವರನ್ನು ಹುಡುಕಿಕೊಂಡು ದೊಡ್ಡ ದೊಡ್ಡ ಆಫರ್​ಗಳು ಬರುತ್ತಿವೆ. ನಿತೇಶ್​ ತಿವಾರಿ ನಿರ್ದೇಶನ ಮಾಡಲಿರುವ ರಾಮಾಯಣ’ (Ramayan) ಸಿನಿಮಾದಲ್ಲಿ ಸನ್ನಿ ಡಿಯೋಲ್​ ಅವರು ಹನುಮಂತನ (Lord Hanuman) ಪಾತ್ರ ಮಾಡಲು ಒಪ್ಪಿಕೊಂಡಿದ್ದಾರೆ ಎಂದು ‘ಪಿಂಕ್​ವಿಲ್ಲಾ’ ವರದಿ ಮಾಡಿದೆ. ಈ ಬಗ್ಗೆ ಚಿತ್ರತಂಡದವರು ಇನ್ನಷ್ಟೇ ಅಧಿಕೃತ ಮಾಹಿತಿ ಹಂಚಿಕೊಳ್ಳಬೇಕಿದೆ. ಈ ಸಿನಿಮಾದ ಬಗ್ಗೆ ​ಪ್ರೇಕ್ಷಕರ ವಲಯದಲ್ಲಿ ಭಾರಿ ಹೈಪ್​ ಸೃಷ್ಟಿ ಆಗಿದೆ.

ಹಲವು ಪಾರ್ಟ್​ಗಳಲ್ಲಿ ‘ರಾಮಾಯಣ’ ಸಿನಿಮಾ ಮೂಡಿಬರಲಿದೆ. ರಾಮನಾಗಿ ರಣಬೀರ್​ ಕಪೂರ್​, ಸೀತೆಯಾಗಿ ಸಾಯಿ ಪಲ್ಲವಿ, ರಾವಣನಾಗಿ ಯಶ್​ ಅವರು ಈ ಸಿನಿಮಾದಲ್ಲಿ ನಟಿಸುತ್ತಾರೆ ಎಂದು ಸುದ್ದಿ ಆಗಿದೆ. ಪಾತ್ರವರ್ಗದ ಪಟ್ಟಿಯಲ್ಲಿ ಈಗ ಸನ್ನಿ ಡಿಯೋಲ್​ ಅವರ ಹೆಸರು ಕೂಡ ಕೇಳಿಬಂದಿದೆ. ಹಲವು ಸುತ್ತಿನ ಮಾತುಕಥೆ ಮಾಡಿದ ಬಳಿಕ ಅವರು ಈ ಪಾತ್ರವನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಸಲ್ಮಾನ್ ಖಾನ್ ಜೊತೆ ಹೊಸ ಸಿನಿಮಾ ಮಾಡ್ತಾರೆ ಸನ್ನಿ ಡಿಯೋಲ್?

ರಾಮಾಯಣದಲ್ಲಿ ಆಂಜನೇಯನ ಪಾತ್ರ ಬಹಳ ಮುಖ್ಯವಾದದ್ದು. ಅದಕ್ಕೆ ಸೂಕ್ತ ನಟರನ್ನೇ ಆಯ್ಕೆ ಮಾಡಿಕೊಳ್ಳಬೇಕು. ಹಾಗಾಗಿ ಚಿತ್ರತಂಡದವರು ಈ ಬಗ್ಗೆ ಸಾಕಷ್ಟು ಕಾಳಜಿ ವಹಿಸಿದ್ದಾರೆ. ಇನ್ನು, ವಿಭೀಷಣನ ಪಾತ್ರಕ್ಕೆ ದಕ್ಷಿಣ ಭಾರತದ ಖ್ಯಾತ ನಟ ವಿಜಯ್​ ಸೇತುಪತಿ ಜೊತೆ ಮಾತುಕಥೆ ಮಾಡಲಾಗುತ್ತಿದೆ ಎಂದು ವರದಿ ಆಗಿದೆ. ಸದ್ಯಕ್ಕಂತೂ ಈ ಎಲ್ಲ ವಿಚಾರಗಳು ಅಂತೆ-ಕಂತೆಯ ಹಂತದಲ್ಲೇ ಇವೆ.

ಇದನ್ನೂ ಓದಿ: ‘ಅನಿಮಲ್ ಸಿನಿಮಾದ ಕೆಲ ದೃಶ್ಯಗಳು ನನಗೆ ಇಷ್ಟ ಆಗಿಲ್ಲ’; ನೇರವಾಗಿ ಹೇಳಿದ ಸನ್ನಿ ಡಿಯೋಲ್

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸಿದ್ಧವಾಗಲಿರುವ ‘ರಾಮಾಯಣ’ ಸಿನಿಮಾದ ಮೊದಲ ಪಾರ್ಟ್​ನಲ್ಲಿ ಆಂಜನೇಯನ ಪಾತ್ರ ಕೆಲವೇ ದೃಶ್ಯಗಳಲ್ಲಿ ಮಾತ್ರ ಬರಲಿದೆ. ಎರಡು ಮತ್ತು ಮೂರನೇ ಪಾರ್ಟ್​​ನಲ್ಲಿ ಆ ಪಾತ್ರಕ್ಕೆ ಹೆಚ್ಚು ಸ್ಕ್ರೀನ್​ ಸ್ಪೇಸ್​ ಸಿಗಲಿದೆ. ಈ ರೀತಿಯಾಗಿ ನಿರ್ದೇಶಕ ನಿತೇಶ್​ ತಿವಾರಿ ಅವರು ಸ್ಕ್ರೀನ್​ಪ್ಲೇ ಸಿದ್ಧಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪಾತ್ರವರ್ಗದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಇನ್ನು, ಕೆಲವೇ ತಿಂಗಳಲ್ಲಿ ಈ ಸಿನಿಮಾದ ಶೂಟಿಂಗ್ ಆರಂಭಿಸಬೇಕು ಎಂಬ ಗುರಿ ಇಟ್ಟುಕೊಳ್ಳಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ