ಹನುಮಂತನ ಪಾತ್ರ ಮಾಡ್ತಾರಾ ಸನ್ನಿ ಡಿಯೋಲ್​? ‘ರಾಮಾಯಣ’ ಚಿತ್ರದ ಬಗ್ಗೆ ಬಿಗ್​ ನ್ಯೂಸ್​

ಹಲವು ಪಾರ್ಟ್​ಗಳಲ್ಲಿ ‘ರಾಮಾಯಣ’ ಸಿನಿಮಾ ಮೂಡಿಬರಲಿದೆ. ಮೊದಲ ಪಾರ್ಟ್​ನಲ್ಲಿ ಆಂಜನೇಯನ ಪಾತ್ರ ಕೆಲವೇ ದೃಶ್ಯಗಳಲ್ಲಿ ಮಾತ್ರ ಕಾಣಿಸಿಕೊಳ್ಳಲಿದೆ. ಎರಡು ಮತ್ತು ಮೂರನೇ ಪಾರ್ಟ್​​ನಲ್ಲಿ ಆ ಪಾತ್ರಕ್ಕೆ ಹೆಚ್ಚು ಸ್ಕ್ರೀನ್​ ಸ್ಪೇಸ್​ ಸಿಗಲಿದೆ. ಈ ರೀತಿಯಾಗಿ ನಿರ್ದೇಶಕ ನಿತೇಶ್​ ತಿವಾರಿ ಅವರು ಸ್ಕ್ರೀನ್​ಪ್ಲೇ ಸಿದ್ಧಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಹನುಮಂತನ ಪಾತ್ರ ಮಾಡ್ತಾರಾ ಸನ್ನಿ ಡಿಯೋಲ್​? ‘ರಾಮಾಯಣ’ ಚಿತ್ರದ ಬಗ್ಗೆ ಬಿಗ್​ ನ್ಯೂಸ್​
ಸನ್ನಿ ಡಿಯೋಲ್​
Follow us
|

Updated on: Jan 28, 2024 | 4:02 PM

ನಟ ಸನ್ನಿ ಡಿಯೋಲ್​ (Sunny Deol) ಅವರು ಈಗ ಗೆಲುವಿನ ಟ್ರ್ಯಾಕ್​ಗೆ ಮರಳಿದ್ದಾರೆ. 2023ರಲ್ಲಿ ತೆರೆಕಂಡ ‘ಗದರ್​ 2’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ 500 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿತು. ಆ ಬಳಿಕ ಸನ್ನಿ ಡಿಯೋಲ್​ ಅವರ ಡಿಮ್ಯಾಂಡ್​ ಹೆಚ್ಚಿತು. ಈಗ ಅವರನ್ನು ಹುಡುಕಿಕೊಂಡು ದೊಡ್ಡ ದೊಡ್ಡ ಆಫರ್​ಗಳು ಬರುತ್ತಿವೆ. ನಿತೇಶ್​ ತಿವಾರಿ ನಿರ್ದೇಶನ ಮಾಡಲಿರುವ ರಾಮಾಯಣ’ (Ramayan) ಸಿನಿಮಾದಲ್ಲಿ ಸನ್ನಿ ಡಿಯೋಲ್​ ಅವರು ಹನುಮಂತನ (Lord Hanuman) ಪಾತ್ರ ಮಾಡಲು ಒಪ್ಪಿಕೊಂಡಿದ್ದಾರೆ ಎಂದು ‘ಪಿಂಕ್​ವಿಲ್ಲಾ’ ವರದಿ ಮಾಡಿದೆ. ಈ ಬಗ್ಗೆ ಚಿತ್ರತಂಡದವರು ಇನ್ನಷ್ಟೇ ಅಧಿಕೃತ ಮಾಹಿತಿ ಹಂಚಿಕೊಳ್ಳಬೇಕಿದೆ. ಈ ಸಿನಿಮಾದ ಬಗ್ಗೆ ​ಪ್ರೇಕ್ಷಕರ ವಲಯದಲ್ಲಿ ಭಾರಿ ಹೈಪ್​ ಸೃಷ್ಟಿ ಆಗಿದೆ.

ಹಲವು ಪಾರ್ಟ್​ಗಳಲ್ಲಿ ‘ರಾಮಾಯಣ’ ಸಿನಿಮಾ ಮೂಡಿಬರಲಿದೆ. ರಾಮನಾಗಿ ರಣಬೀರ್​ ಕಪೂರ್​, ಸೀತೆಯಾಗಿ ಸಾಯಿ ಪಲ್ಲವಿ, ರಾವಣನಾಗಿ ಯಶ್​ ಅವರು ಈ ಸಿನಿಮಾದಲ್ಲಿ ನಟಿಸುತ್ತಾರೆ ಎಂದು ಸುದ್ದಿ ಆಗಿದೆ. ಪಾತ್ರವರ್ಗದ ಪಟ್ಟಿಯಲ್ಲಿ ಈಗ ಸನ್ನಿ ಡಿಯೋಲ್​ ಅವರ ಹೆಸರು ಕೂಡ ಕೇಳಿಬಂದಿದೆ. ಹಲವು ಸುತ್ತಿನ ಮಾತುಕಥೆ ಮಾಡಿದ ಬಳಿಕ ಅವರು ಈ ಪಾತ್ರವನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಸಲ್ಮಾನ್ ಖಾನ್ ಜೊತೆ ಹೊಸ ಸಿನಿಮಾ ಮಾಡ್ತಾರೆ ಸನ್ನಿ ಡಿಯೋಲ್?

ರಾಮಾಯಣದಲ್ಲಿ ಆಂಜನೇಯನ ಪಾತ್ರ ಬಹಳ ಮುಖ್ಯವಾದದ್ದು. ಅದಕ್ಕೆ ಸೂಕ್ತ ನಟರನ್ನೇ ಆಯ್ಕೆ ಮಾಡಿಕೊಳ್ಳಬೇಕು. ಹಾಗಾಗಿ ಚಿತ್ರತಂಡದವರು ಈ ಬಗ್ಗೆ ಸಾಕಷ್ಟು ಕಾಳಜಿ ವಹಿಸಿದ್ದಾರೆ. ಇನ್ನು, ವಿಭೀಷಣನ ಪಾತ್ರಕ್ಕೆ ದಕ್ಷಿಣ ಭಾರತದ ಖ್ಯಾತ ನಟ ವಿಜಯ್​ ಸೇತುಪತಿ ಜೊತೆ ಮಾತುಕಥೆ ಮಾಡಲಾಗುತ್ತಿದೆ ಎಂದು ವರದಿ ಆಗಿದೆ. ಸದ್ಯಕ್ಕಂತೂ ಈ ಎಲ್ಲ ವಿಚಾರಗಳು ಅಂತೆ-ಕಂತೆಯ ಹಂತದಲ್ಲೇ ಇವೆ.

ಇದನ್ನೂ ಓದಿ: ‘ಅನಿಮಲ್ ಸಿನಿಮಾದ ಕೆಲ ದೃಶ್ಯಗಳು ನನಗೆ ಇಷ್ಟ ಆಗಿಲ್ಲ’; ನೇರವಾಗಿ ಹೇಳಿದ ಸನ್ನಿ ಡಿಯೋಲ್

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸಿದ್ಧವಾಗಲಿರುವ ‘ರಾಮಾಯಣ’ ಸಿನಿಮಾದ ಮೊದಲ ಪಾರ್ಟ್​ನಲ್ಲಿ ಆಂಜನೇಯನ ಪಾತ್ರ ಕೆಲವೇ ದೃಶ್ಯಗಳಲ್ಲಿ ಮಾತ್ರ ಬರಲಿದೆ. ಎರಡು ಮತ್ತು ಮೂರನೇ ಪಾರ್ಟ್​​ನಲ್ಲಿ ಆ ಪಾತ್ರಕ್ಕೆ ಹೆಚ್ಚು ಸ್ಕ್ರೀನ್​ ಸ್ಪೇಸ್​ ಸಿಗಲಿದೆ. ಈ ರೀತಿಯಾಗಿ ನಿರ್ದೇಶಕ ನಿತೇಶ್​ ತಿವಾರಿ ಅವರು ಸ್ಕ್ರೀನ್​ಪ್ಲೇ ಸಿದ್ಧಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪಾತ್ರವರ್ಗದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಇನ್ನು, ಕೆಲವೇ ತಿಂಗಳಲ್ಲಿ ಈ ಸಿನಿಮಾದ ಶೂಟಿಂಗ್ ಆರಂಭಿಸಬೇಕು ಎಂಬ ಗುರಿ ಇಟ್ಟುಕೊಳ್ಳಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ