AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

​Gadar 2: ಗುರುದ್ವಾರದಲ್ಲಿ ಸನ್ನಿ ಡಿಯೋಲ್​, ಅಮೀಷಾ ಪಟೇಲ್​ ರೊಮ್ಯಾನ್ಸ್​; ಸಿಖ್​ ಸಮುದಾಯದವರಿಂದ ವಿರೋಧ

Sunny Deol: ‘ಗದರ್ 2’ ಸಿನಿಮಾದ ಚಿತ್ರೀಕರಣದ ವೇಳೆ ಒಂದು ವಿಡಿಯೋ ಲೀಕ್​ ಆಗಿದೆ. ಗುರುದ್ವಾರದಲ್ಲಿ ಚಿತ್ರೀಕರಿಸಲಾದ ಈ ವಿಡಿಯೋದಲ್ಲಿ ಸನ್ನಿ ಡಿಯೋಲ್​ ಮತ್ತು ಅಮೀಷಾ ಪಟೇಲ್​ ಅವರು ರೊಮ್ಯಾಂಟಿಕ್​​ ಆಗಿ ಕಾಣಿಸಿಕೊಂಡಿದ್ದಾರೆ.

​Gadar 2: ಗುರುದ್ವಾರದಲ್ಲಿ ಸನ್ನಿ ಡಿಯೋಲ್​, ಅಮೀಷಾ ಪಟೇಲ್​ ರೊಮ್ಯಾನ್ಸ್​; ಸಿಖ್​ ಸಮುದಾಯದವರಿಂದ ವಿರೋಧ
ಅಮೀಷಾ ಪಟೇಲ್​, ಸನ್ನಿ ಡಿಯೋಲ್​
ಮದನ್​ ಕುಮಾರ್​
|

Updated on: Jun 08, 2023 | 4:53 PM

Share

ಸಿನಿಮಾದವರು ಏನೇ ಮಾಡಿದರು ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತದೆ. ಅದರಲ್ಲೂ ಧಾರ್ಮಿಕ ಸ್ಥಳಗಳಲ್ಲಿ ಸೆಲೆಬ್ರಿಟಿಗಳು ಹೇಗೆ ನಡೆದುಕೊಳ್ಳುತ್ತಾರೆ ಎಂಬುದನ್ನು ನೆಟ್ಟಿಗರು ಬಹಳ ಸೂಕ್ಷ್ಮವಾಗಿ ಗಮನಿಸುತ್ತಾರೆ. ಇತ್ತೀಚೆಗಷ್ಟೇ ‘ಆದಿಪುರುಷ್​’ ಸಿನಿಮಾದ ನಿರ್ದೇಶಕ ಓಂ ರಾವತ್​ ಹಾಗೂ ನಟಿ ಕೃತಿ ಸನೋನ್​ ಅವರು ತಿರುಪತಿ ದೇವಾಲಯದಲ್ಲಿ ಪರಸ್ಪರ ಕಿಸ್​ ಮಾಡಿದ್ದು ಅನೇಕರ ವಿರೋಧಕ್ಕೆ ಕಾರಣ ಆಗಿತ್ತು. ಈಗ ಸಿಖ್​ (​Sikhs) ಸಮುದಾಯವರ ಆಕ್ರೋಶಕ್ಕೆ ಕಾರಣ ಆಗುವಂತಹ ಒಂದು ಘಟನೆ ನಡೆದಿದೆ. ‘ಗದರ್​​ 2’ (​Gadar 2) ಸಿನಿಮಾದ ಒಂದು ರೊಮ್ಯಾಂಟಿಕ್​ ದೃಶ್ಯವನ್ನು ಸಿಖ್ಖರ ಪವಿತ್ರ ಸ್ಥಳವಾದ ಗುರುದ್ವಾರದಲ್ಲಿ ಚಿತ್ರೀಕರಿಸಲಾಗಿದೆ. ಅದನ್ನು ಖಂಡಿಸಿ ಸಿಖ್​ ಮುಖಂಡರು ಧ್ವನಿ ಎತ್ತಿದ್ದಾರೆ. ಇದರಿಂದ ‘ಗದರ್ 2’ ಚಿತ್ರತಂಡ ವಿವಾದದಲ್ಲಿ ಸಿಲುಕಿಕೊಳ್ಳುವಂತೆ ಆಗಿದೆ.

‘ಗದರ್ 2’ ಸಿನಿಮಾದ ಚಿತ್ರೀಕರಣದ ವೇಳೆ ಒಂದು ವಿಡಿಯೋ ಲೀಕ್​ ಆಗಿದೆ. ಗುರುದ್ವಾರದಲ್ಲಿ ಚಿತ್ರೀಕರಿಸಲಾದ ಈ ವಿಡಿಯೋದಲ್ಲಿ ಸನ್ನಿ ಡಿಯೋಲ್​ ಮತ್ತು ಅಮೀಷಾ ಪಟೇಲ್​ ಅವರು ರೊಮ್ಯಾಂಟಿಕ್​​ ಆಗಿ ಕಾಣಿಸಿಕೊಂಡಿದ್ದಾರೆ. ಹಿನ್ನೆಲೆಯಲ್ಲಿ ಡೋಲು ಬಾರಿಸುತ್ತಿರುವ ಶಬ್ದವಿದೆ. ಈ ವಿಡಿಯೋ ನೋಡುತ್ತಿದ್ದಂತೆಯೇ ಸಿಖ್​ ಸಮುದಾಯದವರಿಗೆ ಕೋಪ ಬಂದಿದೆ. ‘ಗದರ್ 2’ ಚಿತ್ರತಂಡದ ಈ ನಡೆಯನ್ನು ಖಂಡಿಸಲಾಗಿದೆ. ‘ಶಿರೋಮಣಿ ಗುರುದ್ವಾರ ಪರಬಂಧಕ್​ ಸಮಿತಿ’ ಟ್ವಿಟರ್​ ಖಾತೆಯಲ್ಲಿ ಒಂದು ಎಚ್ಚರಿಕೆ ಸಂದೇಶವನ್ನು ಹಂಚಿಕೊಳ್ಳಲಾಗಿದೆ.

ಈ ಘಟನೆ ಕುರಿತು ತನಿಖೆ ಆಗಬೇಕು ಮತ್ತು ಚಿತ್ರತಂಡದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ. ‘ಗುರುದ್ವಾರ ಸಾಹಿಬ್​ನಲ್ಲಿ ‘ಗದರ್​ 2’ ಸಿನಿಮಾದ ಆಕ್ಷೇಪಾರ್ಹ ದೃಶ್ಯ ಚಿತ್ರೀಕರಿಸಿದ್ದನ್ನು ನಾವು ಖಂಡಿಸುತ್ತೇವೆ. ಇದು ಒಂದು ಅಧ್ಯಾತ್ಮದ ಸ್ಥಳ. ಇಂಥ ಜಾಗದಲ್ಲಿ ಈ ರೀತಿ ದೃಶ್ಯಗಳನ್ನು ಚಿತ್ರಿಸಬಾರದು’ ಎಂದು ‘ಶಿರೋಮಣಿ ಗುರುದ್ವಾರ ಪರಬಂಧಕ್​ ಸಮಿತಿ’ ಮುಖಂಡರಾದ ಗುರುಚರಣ್​ ಸಿಂಗ್​ ಗ್ರೇವಾಲ್​ ಅವರು ಹೇಳಿದ್ದೇರೆ. ಈ ಘಟನೆ ಕುರಿತಂತೆ ‘ಗದರ್​ 2’ ಸಿನಿಮಾ ತಂಡದಿಂದ ಇನ್ನಷ್ಟೇ ಸ್ಪಷ್ಟನೆ ಬರಬೇಕಿದೆ.

ಇದನ್ನೂ ಓದಿ: Sara Ali Khan: ಹಿಂದೂಗಳ ದೇವಸ್ಥಾನಕ್ಕೆ ತೆರಳಿದ್ದಕ್ಕೆ ಟ್ರೋಲ್​ ಮಾಡಿದವರಿಗೆ ಖಡಕ್​ ತಿರುಗೇಟು ನೀಡಿದ ಸಾರಾ ಅಲಿ ಖಾನ್​

ಕೃತಿ ಸನೋನ್​-ಓಂ ರಾವತ್​ ವಿವಾದ ಏನು?

ನಿರ್ದೇಶಕ ಓಂ ರಾವತ್ ಅವರ ನಿರ್ದೇಶನದ ‘ಆದಿಪುರುಷ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ನಿರ್ದೇಶಕ ಓಂ ರಾವತ್ ಹಾಗೂ ಸೀತೆ ಪಾತ್ರ ಮಾಡಿದ ನಟಿ ಕೃತಿ ಸನೋನ್ ತಿರುಪತಿ ದೇವಸ್ಥಾನಕ್ಕೆ ತೆರಳಿದ್ದರು. ದೇವಸ್ಥಾನದಿಂದ ಮರಳುವಾಗ ಇಬ್ಬರೂ ಕಿಸ್ ಮಾಡಿಕೊಂಡಿದ್ದಾರೆ. ಈ ವಿಡಿಯೋ ನೋಡಿದ ಅನೇಕರು ಟೀಕೆ ಮಾಡಿದ್ದಾರೆ. ದೇವಸ್ಥಾನದಲ್ಲಿ ಈ ರೀತಿಯ ನಡುವಳಿಕೆ ತಪ್ಪು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು