AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

​Gadar 2: ಗುರುದ್ವಾರದಲ್ಲಿ ಸನ್ನಿ ಡಿಯೋಲ್​, ಅಮೀಷಾ ಪಟೇಲ್​ ರೊಮ್ಯಾನ್ಸ್​; ಸಿಖ್​ ಸಮುದಾಯದವರಿಂದ ವಿರೋಧ

Sunny Deol: ‘ಗದರ್ 2’ ಸಿನಿಮಾದ ಚಿತ್ರೀಕರಣದ ವೇಳೆ ಒಂದು ವಿಡಿಯೋ ಲೀಕ್​ ಆಗಿದೆ. ಗುರುದ್ವಾರದಲ್ಲಿ ಚಿತ್ರೀಕರಿಸಲಾದ ಈ ವಿಡಿಯೋದಲ್ಲಿ ಸನ್ನಿ ಡಿಯೋಲ್​ ಮತ್ತು ಅಮೀಷಾ ಪಟೇಲ್​ ಅವರು ರೊಮ್ಯಾಂಟಿಕ್​​ ಆಗಿ ಕಾಣಿಸಿಕೊಂಡಿದ್ದಾರೆ.

​Gadar 2: ಗುರುದ್ವಾರದಲ್ಲಿ ಸನ್ನಿ ಡಿಯೋಲ್​, ಅಮೀಷಾ ಪಟೇಲ್​ ರೊಮ್ಯಾನ್ಸ್​; ಸಿಖ್​ ಸಮುದಾಯದವರಿಂದ ವಿರೋಧ
ಅಮೀಷಾ ಪಟೇಲ್​, ಸನ್ನಿ ಡಿಯೋಲ್​
ಮದನ್​ ಕುಮಾರ್​
|

Updated on: Jun 08, 2023 | 4:53 PM

Share

ಸಿನಿಮಾದವರು ಏನೇ ಮಾಡಿದರು ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತದೆ. ಅದರಲ್ಲೂ ಧಾರ್ಮಿಕ ಸ್ಥಳಗಳಲ್ಲಿ ಸೆಲೆಬ್ರಿಟಿಗಳು ಹೇಗೆ ನಡೆದುಕೊಳ್ಳುತ್ತಾರೆ ಎಂಬುದನ್ನು ನೆಟ್ಟಿಗರು ಬಹಳ ಸೂಕ್ಷ್ಮವಾಗಿ ಗಮನಿಸುತ್ತಾರೆ. ಇತ್ತೀಚೆಗಷ್ಟೇ ‘ಆದಿಪುರುಷ್​’ ಸಿನಿಮಾದ ನಿರ್ದೇಶಕ ಓಂ ರಾವತ್​ ಹಾಗೂ ನಟಿ ಕೃತಿ ಸನೋನ್​ ಅವರು ತಿರುಪತಿ ದೇವಾಲಯದಲ್ಲಿ ಪರಸ್ಪರ ಕಿಸ್​ ಮಾಡಿದ್ದು ಅನೇಕರ ವಿರೋಧಕ್ಕೆ ಕಾರಣ ಆಗಿತ್ತು. ಈಗ ಸಿಖ್​ (​Sikhs) ಸಮುದಾಯವರ ಆಕ್ರೋಶಕ್ಕೆ ಕಾರಣ ಆಗುವಂತಹ ಒಂದು ಘಟನೆ ನಡೆದಿದೆ. ‘ಗದರ್​​ 2’ (​Gadar 2) ಸಿನಿಮಾದ ಒಂದು ರೊಮ್ಯಾಂಟಿಕ್​ ದೃಶ್ಯವನ್ನು ಸಿಖ್ಖರ ಪವಿತ್ರ ಸ್ಥಳವಾದ ಗುರುದ್ವಾರದಲ್ಲಿ ಚಿತ್ರೀಕರಿಸಲಾಗಿದೆ. ಅದನ್ನು ಖಂಡಿಸಿ ಸಿಖ್​ ಮುಖಂಡರು ಧ್ವನಿ ಎತ್ತಿದ್ದಾರೆ. ಇದರಿಂದ ‘ಗದರ್ 2’ ಚಿತ್ರತಂಡ ವಿವಾದದಲ್ಲಿ ಸಿಲುಕಿಕೊಳ್ಳುವಂತೆ ಆಗಿದೆ.

‘ಗದರ್ 2’ ಸಿನಿಮಾದ ಚಿತ್ರೀಕರಣದ ವೇಳೆ ಒಂದು ವಿಡಿಯೋ ಲೀಕ್​ ಆಗಿದೆ. ಗುರುದ್ವಾರದಲ್ಲಿ ಚಿತ್ರೀಕರಿಸಲಾದ ಈ ವಿಡಿಯೋದಲ್ಲಿ ಸನ್ನಿ ಡಿಯೋಲ್​ ಮತ್ತು ಅಮೀಷಾ ಪಟೇಲ್​ ಅವರು ರೊಮ್ಯಾಂಟಿಕ್​​ ಆಗಿ ಕಾಣಿಸಿಕೊಂಡಿದ್ದಾರೆ. ಹಿನ್ನೆಲೆಯಲ್ಲಿ ಡೋಲು ಬಾರಿಸುತ್ತಿರುವ ಶಬ್ದವಿದೆ. ಈ ವಿಡಿಯೋ ನೋಡುತ್ತಿದ್ದಂತೆಯೇ ಸಿಖ್​ ಸಮುದಾಯದವರಿಗೆ ಕೋಪ ಬಂದಿದೆ. ‘ಗದರ್ 2’ ಚಿತ್ರತಂಡದ ಈ ನಡೆಯನ್ನು ಖಂಡಿಸಲಾಗಿದೆ. ‘ಶಿರೋಮಣಿ ಗುರುದ್ವಾರ ಪರಬಂಧಕ್​ ಸಮಿತಿ’ ಟ್ವಿಟರ್​ ಖಾತೆಯಲ್ಲಿ ಒಂದು ಎಚ್ಚರಿಕೆ ಸಂದೇಶವನ್ನು ಹಂಚಿಕೊಳ್ಳಲಾಗಿದೆ.

ಈ ಘಟನೆ ಕುರಿತು ತನಿಖೆ ಆಗಬೇಕು ಮತ್ತು ಚಿತ್ರತಂಡದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ. ‘ಗುರುದ್ವಾರ ಸಾಹಿಬ್​ನಲ್ಲಿ ‘ಗದರ್​ 2’ ಸಿನಿಮಾದ ಆಕ್ಷೇಪಾರ್ಹ ದೃಶ್ಯ ಚಿತ್ರೀಕರಿಸಿದ್ದನ್ನು ನಾವು ಖಂಡಿಸುತ್ತೇವೆ. ಇದು ಒಂದು ಅಧ್ಯಾತ್ಮದ ಸ್ಥಳ. ಇಂಥ ಜಾಗದಲ್ಲಿ ಈ ರೀತಿ ದೃಶ್ಯಗಳನ್ನು ಚಿತ್ರಿಸಬಾರದು’ ಎಂದು ‘ಶಿರೋಮಣಿ ಗುರುದ್ವಾರ ಪರಬಂಧಕ್​ ಸಮಿತಿ’ ಮುಖಂಡರಾದ ಗುರುಚರಣ್​ ಸಿಂಗ್​ ಗ್ರೇವಾಲ್​ ಅವರು ಹೇಳಿದ್ದೇರೆ. ಈ ಘಟನೆ ಕುರಿತಂತೆ ‘ಗದರ್​ 2’ ಸಿನಿಮಾ ತಂಡದಿಂದ ಇನ್ನಷ್ಟೇ ಸ್ಪಷ್ಟನೆ ಬರಬೇಕಿದೆ.

ಇದನ್ನೂ ಓದಿ: Sara Ali Khan: ಹಿಂದೂಗಳ ದೇವಸ್ಥಾನಕ್ಕೆ ತೆರಳಿದ್ದಕ್ಕೆ ಟ್ರೋಲ್​ ಮಾಡಿದವರಿಗೆ ಖಡಕ್​ ತಿರುಗೇಟು ನೀಡಿದ ಸಾರಾ ಅಲಿ ಖಾನ್​

ಕೃತಿ ಸನೋನ್​-ಓಂ ರಾವತ್​ ವಿವಾದ ಏನು?

ನಿರ್ದೇಶಕ ಓಂ ರಾವತ್ ಅವರ ನಿರ್ದೇಶನದ ‘ಆದಿಪುರುಷ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ನಿರ್ದೇಶಕ ಓಂ ರಾವತ್ ಹಾಗೂ ಸೀತೆ ಪಾತ್ರ ಮಾಡಿದ ನಟಿ ಕೃತಿ ಸನೋನ್ ತಿರುಪತಿ ದೇವಸ್ಥಾನಕ್ಕೆ ತೆರಳಿದ್ದರು. ದೇವಸ್ಥಾನದಿಂದ ಮರಳುವಾಗ ಇಬ್ಬರೂ ಕಿಸ್ ಮಾಡಿಕೊಂಡಿದ್ದಾರೆ. ಈ ವಿಡಿಯೋ ನೋಡಿದ ಅನೇಕರು ಟೀಕೆ ಮಾಡಿದ್ದಾರೆ. ದೇವಸ್ಥಾನದಲ್ಲಿ ಈ ರೀತಿಯ ನಡುವಳಿಕೆ ತಪ್ಪು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್