AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾನೇಜರ್​ ವರ್ತನೆಯಿಂದ ದೊಡ್ಡ ಸಿನಿಮಾಗಳ ಆಫರ್​ ಕಳೆದುಕೊಂಡಿದ್ದ ‘ಗದರ್​ 2’ ನಟಿ ಅಮೀಷಾ ಪಟೇಲ್​

‘ಆ ಮ್ಯಾನೇಜರ್​ ಕಾರಣದಿಂದ ನಾವು ನಿಮ್ಮನ್ನು ಭೇಟಿಯಾಗಲು ಭಯಪಡುತ್ತಿದ್ದೆವು’ ಎಂದು ಅನೇಕರು ಅಮೀಷಾ ಪಟೇಲ್​ಗೆ ಹೇಳಿದ್ದುಂಟು. ಇದೆಲ್ಲವೂ ಹಣೆಬರಹದಿಂದಲೇ ಆಗಿದೆ ಎಂದು ಅವರೀಗ ನಂಬಿದ್ದಾರೆ. ಆದರೆ ಈಗ ‘ಗದರ್​ 2’ ಸಿನಿಮಾ ಮೂಲಕ ಅಮೀಷಾ ಪಟೇಲ್​ ಅವರ ಮೈಲೇಜ್​ ಹೆಚ್ಚಿದೆ. ತಮ್ಮ ಹಳೇ ದಿನಗಳ ಬಗ್ಗೆ ಅವರು ಮಾತನಾಡಿದ್ದಾರೆ.

ಮ್ಯಾನೇಜರ್​ ವರ್ತನೆಯಿಂದ ದೊಡ್ಡ ಸಿನಿಮಾಗಳ ಆಫರ್​ ಕಳೆದುಕೊಂಡಿದ್ದ ‘ಗದರ್​ 2’ ನಟಿ ಅಮೀಷಾ ಪಟೇಲ್​
ಅಮೀಷಾ ಪಟೇಲ್​
ಮದನ್​ ಕುಮಾರ್​
|

Updated on: Sep 06, 2023 | 5:06 PM

Share

ಬಾಲಿವುಡ್​ನ ‘ಗದರ್​ 2’ ಸಿನಿಮಾ (Gadar 2) ಸೂಪರ್​ ಹಿಟ್​ ಆಗಿದೆ. ಈ ಚಿತ್ರದಲ್ಲಿ ನಟಿಸಿದ ಎಲ್ಲರಿಗೂ ದೊಡ್ಡ ಯಶಸ್ಸು ಸಿಕ್ಕಿದೆ. ಅದೇ ರೀತಿ ಈ ಸಿನಿಮಾದ ನಾಯಕಿ ಅಮೀಷಾ ಪಟೇಲ್​ (Ameesha Patel) ಕೂಡ ಸಖತ್​ ಆಗಿ ಮಿಂಚುತ್ತಿದ್ದಾರೆ. ಈ ಗೆಲುವಿಗಾಗಿ ಅವರು ಬಹಳ ವರ್ಷಗಳಿಂದ ಕಾದಿದ್ದರು. ಅವರಿಗೆ ಈ ಮೊದಲೇ ಸಿಗಬೇಕಿದ್ದ ಅನೇಕ ಪ್ರಾಜೆಕ್ಟ್​ಗಳು ತಪ್ಪಿ ಹೋಗಿದ್ದವು ಎಂಬುದು ಈಗ ಬಹಿರಂಗ ಆಗಿದೆ. ಆ ರೀತಿ ಆಗಲು ತಮ್ಮ ಮ್ಯಾನೇಜರ್​ ಕಾರಣ ಎಂದು ಅಮೀಷಾ ಪಟೇಲ್​ ಅವರು ಹೇಳಿದ್ದಾರೆ. ಸಂಜಯ್​ ಲೀಲಾ ಬನ್ಸಾಲಿ (Sanjay Leela Bhansali), ಶಾರುಖ್​ ಖಾನ್​ ಮುಂತಾದ ಘಟಾನುಘಟಿಗಳ ಜೊತೆ ಸಿನಿಮಾ ಮಾಡುವ ಅವಕಾಶವನ್ನು ಅಮೀಷಾ ಪಟೇಲ್​ ಕಳೆದುಕೊಂಡಿದ್ದರು ಎಂಬುದು ಅಚ್ಚರಿಯ ವಿಚಾರ.

ಸೆಲೆಬ್ರಿಟಿಗಳು ಹಲವು ಕೆಲಸಕ್ಕೆ ಮ್ಯಾನೇಜರ್​ಗಳನ್ನು ನೇಮಿಸಿಕೊಂಡಿರುತ್ತಾರೆ. ಸಂಭಾವನೆ, ಡೇಟ್ಸ್​, ಅಗ್ರಿಮೆಂಟ್​ ಇತ್ಯಾದಿ ವಿಚಾರಗಳ ಉಸ್ತುವಾರಿಯನ್ನು ಮ್ಯಾನೇಜರ್​ಗಳೇ ನೋಡಿಕೊಳ್ಳುತ್ತಾರೆ. ಒಳ್ಳೆಯ ಮ್ಯಾನೇಜರ್​ ಸಿಕ್ಕರೆ ಸೆಲೆಬ್ರಿಟಿಗಳ ಕೆಲಸ ಸುಲಭ ಆಗುತ್ತದೆ. ಆದರೆ ಅಮೀಷಾ ಪಟೇಲ್​ ಅವರು ಮ್ಯಾನೇಜರ್​ ಮಾಡಿದ ತಪ್ಪಿನಿಂದಾಗಿ ಅನೇಕ ಅವಕಾಶಗಳನ್ನು ಕಳೆದುಕೊಂಡಿದ್ದರು. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಚಾರ ಕುರಿತು ಮಾತನಾಡಿದ್ದಾರೆ.

ಇದನ್ನೂ ಓದಿ: ‘ಗದರ್​ 2’ ಸಿನಿಮಾದ ಗೆಲುವಿನ ಖುಷಿಯಲ್ಲಿ ನಟಿ ಅಮೀಷಾ ಪಟೇಲ್​

‘ಅನೇಕ ಒಳ್ಳೆಯ ಸಿನಿಮಾಗಳಿಗಾಗಿ ಮಾತುಕಥೆ ನಡೆದಿತ್ತು. ಈಗ ಅವುಗಳ ಹೆಸರು ಹೇಳುವುದು ಬೇಡ. ಯಾಕೆಂದರೆ ಆ ಸಿನಿಮಾಗಳು ಈಗಾಗಲೇ ಬಂದುಹೋಗಿವೆ. ದುರಾದೃಷ್ಟವಶಾತ್​ ಆ ಸಮಯದಲ್ಲಿ ನನ್ನ ಮ್ಯಾನೇಜರ್​ ಮತ್ತು ಸಂಜಯ್​ ಲೀಲಾ ಬನ್ಸಾಲಿ ನಡುವೆ ಮನಸ್ತಾಪ ಆಗಿತ್ತು. ಆ ಮ್ಯಾನೇಜರ್​ನಿಂದ ನಾನು ದೂರ ಆದ ಬಳಿಕವೇ ಈ ಎಲ್ಲ ಸಂಗತಿಗಳು ನನಗೆ ಗೊತ್ತಾದವು’ ಎಂದು ಅಮಿಷಾ ಪಟೇಲ್​ ಹೇಳಿದ್ದಾರೆ. ಸಂಜಯ್​ ಲೀಲಾ ಬನ್ಸಾಲಿ ಮಾತ್ರವಲ್ಲದೇ ಯಶ್​ ರಾಜ್​ ಫಿಲ್ಮ್, ಸಾಜಿದ್​ ನಾಡಿಯದ್ವಾಲಾ, ಶಾರುಖ್​ ಖಾನ್​ ಮುಂತಾದವರ ಜೊತೆಗೂ ಕೆಲಸ ಮಾಡುವ ಅವಕಾಶವನ್ನು ಮಿಸ್​ ಮಾಡಿಕೊಂಡ ಬಗ್ಗೆ ಅಮೀಷಾ ಪಟೇಲ್​ ಮಾತನಾಡಿದ್ದಾರೆ.

ಇದನ್ನೂ ಓದಿ: 500 ಕೋಟಿ ರೂಪಾಯಿ ಬಾಚಿಕೊಂಡ ‘ಗದರ್​ 2’ ಸಿನಿಮಾ; ಅದ್ದೂರಿಯಾಗಿ ನಡೆಯಿತು ಪಾರ್ಟಿ

‘ಆ ಮ್ಯಾನೇಜರ್​ ಕಾರಣದಿಂದ ನಾವು ನಿಮ್ಮನ್ನು ಭೇಟಿಯಾಗಲು ಭಯಪಡುತ್ತಿದ್ದೆವು’ ಎಂದು ಅನೇಕರು ಅಮೀಷಾ ಪಟೇಲ್​ಗೆ ಹೇಳಿದ್ದುಂಟು. ಇದೆಲ್ಲವೂ ಹಣೆಬರಹದಿಂದಲೇ ಆಗಿದೆ ಎಂದು ಅವರೀಗ ನಂಬಿದ್ದಾರೆ. ‘ಗದರ್​ 2’ ಸಿನಿಮಾದಲ್ಲಿ ಸನ್ನಿ ಡಿಯೋಲ್​ಗೆ ಜೋಡಿಯಾಗಿ ಅಮೀಷಾ ನಟಿಸಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರಕ್ಕೆ 500 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಆಗಿದೆ. ಈ ಗೆಲುವಿನಿಂದ ಅವರ ಮುಖದಲ್ಲಿ ನಗು ಮೂಡಿದೆ. ಅವರಿಗೆ ಇದ್ದ ಜನಪ್ರಿಯತೆ ಹೆಚ್ಚಾಗಿದೆ. ಅಮೀಷಾ ಪಟೇಲ್​ ನಟಿಸಲಿರುವ ಮುಂಬರುವ ಸಿನಿಮಾಗಳ ಬಗ್ಗೆ ಕೌತುಕ ಹೆಚ್ಚಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್