AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Goldy Brar: ‘ಸಲ್ಮಾನ್​ ಖಾನ್​ನನ್ನು ಖಂಡಿತಾ ಕೊಲ್ಲುತ್ತೇನೆ’: ರಾಷ್ಟ್ರೀಯ ಸುದ್ದಿ ವಾಹಿನಿಯಲ್ಲಿ ಬಹಿರಂಗವಾಗಿ ಕೊಲೆ ಬೆದರಿಕೆ

Salman Khan: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಕೊಂದಿರುವುದು ತಾನೇ ಎಂದು ಗೋಲ್ಡಿ ಬ್ರಾರ್​ ಒಪ್ಪಿಕೊಂಡಿದ್ದಾನೆ. ಈಗ ಆತನ ಮುಂದಿರುವ ಟಾರ್ಗೆಟ್​ ಎಂದರೆ ಅದು ಸಲ್ಮಾನ್​ ಖಾನ್​.

Goldy Brar: ‘ಸಲ್ಮಾನ್​ ಖಾನ್​ನನ್ನು ಖಂಡಿತಾ ಕೊಲ್ಲುತ್ತೇನೆ’: ರಾಷ್ಟ್ರೀಯ ಸುದ್ದಿ ವಾಹಿನಿಯಲ್ಲಿ ಬಹಿರಂಗವಾಗಿ ಕೊಲೆ ಬೆದರಿಕೆ
ಗೋಲ್ಡಿ ಬ್ರಾರ್​, ಸಲ್ಮಾನ್​ ಖಾನ್​
ಮದನ್​ ಕುಮಾರ್​
|

Updated on: Jun 26, 2023 | 9:44 PM

Share

ನಟ ಸಲ್ಮಾನ್​ ಖಾನ್​ (Salman Khan) ಅವರಿಗೆ ಪದೇ ಪದೇ ಕೊಲೆ ಬೆದರಿಕೆ ಹಾಕಲಾಗುತ್ತಿದೆ. ಲಾರೆನ್ಸ್​ ಬಿಷ್ಣೋಯ್​ ಕಡೆಯಿಂದ ಹಲವು ಬಾರಿ ಜೀವ ಬೆದರಿಕೆ ಬಂದಿತ್ತು. ಶಾಕಿಂಗ್​ ವಿಚಾರ ಏನೆಂದರೆ ಈಗ ರಾಷ್ಟ್ರೀಯ ಸುದ್ದಿ ವಾಹಿನಿಯ ಸಂದರ್ಶನದಲ್ಲೇ ಸಲ್ಲುಗೆ ಕೊಲೆ ಬೆದರಿಕೆ ಹಾಕಲಾಗಿದೆ. ‘ಇಂಡಿಯಾ ಟುಡೇ’ ನಡೆಸಿದ ಸಂದರ್ಶನದಲ್ಲಿ ಗ್ಯಾಂಗ್​ಸ್ಟರ್​ ಗೋಲ್ಡಿ ಬ್ರಾರ್​ (Gangster Goldy Brar) ಕೂಡ ಸಲ್ಮಾನ್​ ಖಾನ್​ರ ಹತ್ಯೆಯ ಪ್ಲ್ಯಾನ್​ ಬಗ್ಗೆ ಮಾತನಾಡಿದ್ದಾನೆ. ಹಲವು ರಾಜ್ಯ ಮತ್ತು ರಾಷ್ಟ್ರದಲ್ಲಿ ಮೋಸ್ಟ್​ ವಾಂಟೆಂಡ್​ ಕ್ರಿಮಿನಲ್​ ಆಗಿರುವ ಗೋಲ್ಡಿ ಬ್ರಾರ್​ ಜೊತೆ ಫೋನ್​ ಮೂಲಕ ಸಂದರ್ಶನ ನಡೆಸಲಾಗಿದೆ. ಈ ವೇಳೆ ಆತ ಸಲ್ಮಾನ್​ ಖಾನ್​ ಬಗ್ಗೆ ಮಾತನಾಡಿದ್ದಾನೆ. ‘ಸಲ್ಮಾನ್​ ಖಾನ್​ನನ್ನು ಖಂಡಿತಾ ಕೊಲೆ ಮಾಡುತ್ತೇವೆ’ ಎಂದು ಆತ ಶಪಥ ಮಾಡಿದ್ದಾನೆ. ಈ ಹಿಂದೆ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯ್​ ಕಡೆಯಿಂದ ಸಲ್ಮಾನ್​ ಖಾನ್​ಗೆ ಬೆದರಿಕೆ (Death Threat) ಪತ್ರಗಳು ಬಂದಿದ್ದವು. ಈಗ ಗೋಲ್ಡಿ ಬ್ರಾರ್​ ಕೂಡ ಸಲ್ಲು ಜೀವ ತೆಗೆಯುವುದಾಗಿ ಹೇಳಿದ್ದಾನೆ.

ಸಲ್ಮಾನ್​ ಖಾನ್​ ಅವರು 1998ರಲ್ಲಿ ‘ಹಮ್​ ಸಾಥ್​ ಸಾಥ್​ ಹೈ’ ಸಿನಿಮಾದ ಶೂಟಿಂಗ್​ ವೇಳೆ ಕೃಷ್ಣಮೃಗವನ್ನು ಬೇಟೆ ಆಡಿದ್ದರು. ಬಿಷ್ಣೋಯ್​ ಸಮುದಾಯದವರು ಕೃಷ್ಣಮೃಗವನ್ನು ಪವಿತ್ರವೆಂದು ನಂಬುತ್ತಾರೆ. ಹಾಗಾಗಿ ಬಿಷ್ಣೋಯ್​ ಸಮುದಾಯದ ಕೆಲವರು ಸಲ್ಲು ವಿರುದ್ಧ ಸೇಡು ತೀರಿಸಿಕೊಳ್ಳಲು ಕಾದಿದ್ದಾರೆ. ಲಾರೆನ್ಸ್​ ಬಿಷ್ಣೋಯ್​ ಬಳಿಕ ಗೋಲ್ಡಿ ಬ್ರಾರ್​ ಕೂಡ ಸಲ್ಲು ಬಗ್ಗೆ ಕಿಡಿಕಾರಿದ್ದಾನೆ. ಈ ಹಿಂದೆ ಸಲ್ಮಾನ್​ ಖಾನ್​ಗೆ ಇ-ಮೇಲ್​ ಮೂಲಕ ಕೊಲೆ ಬೆದರಿಕೆ ಹಾಕಲಾಗಿತ್ತು. ಈಗ ಸುದ್ದಿ ವಾಹಿನಿಯ ಸಂದರ್ಶನದಲ್ಲೇ ಆದ ಕೊಲೆ ಬೆದರಿಕೆ ಹಾಕಿದ್ದಾನೆ.

ಇದನ್ನೂ ಓದಿ: Salman Khan: ಸಲ್ಮಾನ್​ ಖಾನ್​ಗೆ ಬಂತು ಮದುವೆ ಪ್ರಪೋಸಲ್​; ಶಾರುಖ್​ ಖಾನ್​ ಹೆಸರು ಹೇಳಿ ತಪ್ಪಿಸಿಕೊಂಡ ನಟ

‘ಸಲ್ಮಾನ್​ ಖಾನ್​ನನ್ನು ಖಂಡಿತಾ ಕೊಲ್ಲುತ್ತೇವೆ. ಆತ ಬಿಷ್ಣೋಯ್​ ಸಮುದಾಯಕ್ಕೆ ಅವಮಾನ ಮಾಡಿದ್ದಾನೆ. ನಾವು ಪವಿತ್ರವೆಂದು ತಿಳಿಯುವ ಕೃಷ್ಣಮೃಗವನ್ನು ಆತ ಸಾಯಿಸಿದ್ದಾನೆ. ಕ್ಷಮೆ ಕೇಳಬೇಕು ಎಂದು ಒತ್ತಾಯಿಸಲಾಗಿತ್ತು. ಆದರೆ ಅವನು ಕ್ಷಮೆ ಕೇಳಿಲ್ಲ. ಸಲ್ಮಾನ್​ ಖಾನ್​ ಮಾತ್ರವಲ್ಲದೇ ನಮ್ಮ ಎಲ್ಲ ಶತ್ರುಗಳನ್ನೂ ನಾವು ಕೊಲ್ಲುತ್ತೇವೆ’ ಎಂದು ಗೋಲ್ಡಿ ಬ್ರಾರ್​ ಹೇಳಿದ್ದಾನೆ. ಈ ಹಿನ್ನೆಲೆಯಲ್ಲಿ ಸಲ್ಮಾನ್​ ಖಾನ್​ ಅವರು ಭದ್ರತೆ ಹೆಚ್ಚಿಕೊಳ್ಳುವ ಸಾಧ್ಯತೆ ಇದೆ.

ಇದನ್ನೂ ಓದಿ: ‘ಆ ವಿಚಾರ ಮಾತಾಡೋದ್ರಲ್ಲಿ ಅರ್ಥವೇ ಇಲ್ಲ’: ಸಲ್ಮಾನ್​ ಖಾನ್​ ಬಾಡಿ ಗಾರ್ಡ್​ ವರ್ತನೆ ಬಗ್ಗೆ ವಿಕ್ಕಿ ಕೌಶಲ್​ ಪ್ರತಿಕ್ರಿಯೆ

ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಕೊಂದಿರುವುದು ತಾನೇ ಎಂದು ಗೋಲ್ಡಿ ಬ್ರಾರ್​ ಒಪ್ಪಿಕೊಂಡಿದ್ದಾನೆ. ಆ ಕೊಲೆಗೆ ವೈಯಕ್ತಿಕ ವಿಚಾರವೇ ಕಾರಣ ಎಂದು ಆತ ಹೇಳಿದ್ದಾನೆ. ಈಗ ಆತನ ಟಾರ್ಗೆಟ್​ ಸಲ್ಮಾನ್​ ಖಾನ್​. ಸದ್ಯಕ್ಕೆ ಗೋಲ್ಡಿ ಬ್ರಾರ್ ಎಲ್ಲಿದ್ದಾನೆ ಎಂಬುದು ತಿಳಿದಿಲ್ಲ. ಭಾರತದಿಂದ ಎಸ್ಕೇಪ್​ ಆಗಿದ್ದ ಆತ ಕೆನಡಾದಲ್ಲಿ ತಲೆ ಮರೆಸಿಕೊಂಡಿದ್ದ. ಅಲ್ಲಿಯೂ ಮೋಸ್ಟ್​ ವಾಂಟೆಡ್​ ಕ್ರಿಮಿನಲ್​ಗಳ ಪಟ್ಟಿಯಲ್ಲಿ ಆತನ ಹೆಸರು ಸೇರ್ಪಡೆ ಆಗಿದೆ. ಹಾಗಾಗಿ ಅಲ್ಲಿಂದಲೂ ಗೋಲ್ಡಿ ಬ್ರಾರ್ ಕಾಲ್ಕಿತ್ತಿದ್ದಾನೆ ಎನ್ನಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು