AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Goldy Brar: ‘ಸಲ್ಮಾನ್​ ಖಾನ್​ನನ್ನು ಖಂಡಿತಾ ಕೊಲ್ಲುತ್ತೇನೆ’: ರಾಷ್ಟ್ರೀಯ ಸುದ್ದಿ ವಾಹಿನಿಯಲ್ಲಿ ಬಹಿರಂಗವಾಗಿ ಕೊಲೆ ಬೆದರಿಕೆ

Salman Khan: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಕೊಂದಿರುವುದು ತಾನೇ ಎಂದು ಗೋಲ್ಡಿ ಬ್ರಾರ್​ ಒಪ್ಪಿಕೊಂಡಿದ್ದಾನೆ. ಈಗ ಆತನ ಮುಂದಿರುವ ಟಾರ್ಗೆಟ್​ ಎಂದರೆ ಅದು ಸಲ್ಮಾನ್​ ಖಾನ್​.

Goldy Brar: ‘ಸಲ್ಮಾನ್​ ಖಾನ್​ನನ್ನು ಖಂಡಿತಾ ಕೊಲ್ಲುತ್ತೇನೆ’: ರಾಷ್ಟ್ರೀಯ ಸುದ್ದಿ ವಾಹಿನಿಯಲ್ಲಿ ಬಹಿರಂಗವಾಗಿ ಕೊಲೆ ಬೆದರಿಕೆ
ಗೋಲ್ಡಿ ಬ್ರಾರ್​, ಸಲ್ಮಾನ್​ ಖಾನ್​
ಮದನ್​ ಕುಮಾರ್​
|

Updated on: Jun 26, 2023 | 9:44 PM

Share

ನಟ ಸಲ್ಮಾನ್​ ಖಾನ್​ (Salman Khan) ಅವರಿಗೆ ಪದೇ ಪದೇ ಕೊಲೆ ಬೆದರಿಕೆ ಹಾಕಲಾಗುತ್ತಿದೆ. ಲಾರೆನ್ಸ್​ ಬಿಷ್ಣೋಯ್​ ಕಡೆಯಿಂದ ಹಲವು ಬಾರಿ ಜೀವ ಬೆದರಿಕೆ ಬಂದಿತ್ತು. ಶಾಕಿಂಗ್​ ವಿಚಾರ ಏನೆಂದರೆ ಈಗ ರಾಷ್ಟ್ರೀಯ ಸುದ್ದಿ ವಾಹಿನಿಯ ಸಂದರ್ಶನದಲ್ಲೇ ಸಲ್ಲುಗೆ ಕೊಲೆ ಬೆದರಿಕೆ ಹಾಕಲಾಗಿದೆ. ‘ಇಂಡಿಯಾ ಟುಡೇ’ ನಡೆಸಿದ ಸಂದರ್ಶನದಲ್ಲಿ ಗ್ಯಾಂಗ್​ಸ್ಟರ್​ ಗೋಲ್ಡಿ ಬ್ರಾರ್​ (Gangster Goldy Brar) ಕೂಡ ಸಲ್ಮಾನ್​ ಖಾನ್​ರ ಹತ್ಯೆಯ ಪ್ಲ್ಯಾನ್​ ಬಗ್ಗೆ ಮಾತನಾಡಿದ್ದಾನೆ. ಹಲವು ರಾಜ್ಯ ಮತ್ತು ರಾಷ್ಟ್ರದಲ್ಲಿ ಮೋಸ್ಟ್​ ವಾಂಟೆಂಡ್​ ಕ್ರಿಮಿನಲ್​ ಆಗಿರುವ ಗೋಲ್ಡಿ ಬ್ರಾರ್​ ಜೊತೆ ಫೋನ್​ ಮೂಲಕ ಸಂದರ್ಶನ ನಡೆಸಲಾಗಿದೆ. ಈ ವೇಳೆ ಆತ ಸಲ್ಮಾನ್​ ಖಾನ್​ ಬಗ್ಗೆ ಮಾತನಾಡಿದ್ದಾನೆ. ‘ಸಲ್ಮಾನ್​ ಖಾನ್​ನನ್ನು ಖಂಡಿತಾ ಕೊಲೆ ಮಾಡುತ್ತೇವೆ’ ಎಂದು ಆತ ಶಪಥ ಮಾಡಿದ್ದಾನೆ. ಈ ಹಿಂದೆ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯ್​ ಕಡೆಯಿಂದ ಸಲ್ಮಾನ್​ ಖಾನ್​ಗೆ ಬೆದರಿಕೆ (Death Threat) ಪತ್ರಗಳು ಬಂದಿದ್ದವು. ಈಗ ಗೋಲ್ಡಿ ಬ್ರಾರ್​ ಕೂಡ ಸಲ್ಲು ಜೀವ ತೆಗೆಯುವುದಾಗಿ ಹೇಳಿದ್ದಾನೆ.

ಸಲ್ಮಾನ್​ ಖಾನ್​ ಅವರು 1998ರಲ್ಲಿ ‘ಹಮ್​ ಸಾಥ್​ ಸಾಥ್​ ಹೈ’ ಸಿನಿಮಾದ ಶೂಟಿಂಗ್​ ವೇಳೆ ಕೃಷ್ಣಮೃಗವನ್ನು ಬೇಟೆ ಆಡಿದ್ದರು. ಬಿಷ್ಣೋಯ್​ ಸಮುದಾಯದವರು ಕೃಷ್ಣಮೃಗವನ್ನು ಪವಿತ್ರವೆಂದು ನಂಬುತ್ತಾರೆ. ಹಾಗಾಗಿ ಬಿಷ್ಣೋಯ್​ ಸಮುದಾಯದ ಕೆಲವರು ಸಲ್ಲು ವಿರುದ್ಧ ಸೇಡು ತೀರಿಸಿಕೊಳ್ಳಲು ಕಾದಿದ್ದಾರೆ. ಲಾರೆನ್ಸ್​ ಬಿಷ್ಣೋಯ್​ ಬಳಿಕ ಗೋಲ್ಡಿ ಬ್ರಾರ್​ ಕೂಡ ಸಲ್ಲು ಬಗ್ಗೆ ಕಿಡಿಕಾರಿದ್ದಾನೆ. ಈ ಹಿಂದೆ ಸಲ್ಮಾನ್​ ಖಾನ್​ಗೆ ಇ-ಮೇಲ್​ ಮೂಲಕ ಕೊಲೆ ಬೆದರಿಕೆ ಹಾಕಲಾಗಿತ್ತು. ಈಗ ಸುದ್ದಿ ವಾಹಿನಿಯ ಸಂದರ್ಶನದಲ್ಲೇ ಆದ ಕೊಲೆ ಬೆದರಿಕೆ ಹಾಕಿದ್ದಾನೆ.

ಇದನ್ನೂ ಓದಿ: Salman Khan: ಸಲ್ಮಾನ್​ ಖಾನ್​ಗೆ ಬಂತು ಮದುವೆ ಪ್ರಪೋಸಲ್​; ಶಾರುಖ್​ ಖಾನ್​ ಹೆಸರು ಹೇಳಿ ತಪ್ಪಿಸಿಕೊಂಡ ನಟ

‘ಸಲ್ಮಾನ್​ ಖಾನ್​ನನ್ನು ಖಂಡಿತಾ ಕೊಲ್ಲುತ್ತೇವೆ. ಆತ ಬಿಷ್ಣೋಯ್​ ಸಮುದಾಯಕ್ಕೆ ಅವಮಾನ ಮಾಡಿದ್ದಾನೆ. ನಾವು ಪವಿತ್ರವೆಂದು ತಿಳಿಯುವ ಕೃಷ್ಣಮೃಗವನ್ನು ಆತ ಸಾಯಿಸಿದ್ದಾನೆ. ಕ್ಷಮೆ ಕೇಳಬೇಕು ಎಂದು ಒತ್ತಾಯಿಸಲಾಗಿತ್ತು. ಆದರೆ ಅವನು ಕ್ಷಮೆ ಕೇಳಿಲ್ಲ. ಸಲ್ಮಾನ್​ ಖಾನ್​ ಮಾತ್ರವಲ್ಲದೇ ನಮ್ಮ ಎಲ್ಲ ಶತ್ರುಗಳನ್ನೂ ನಾವು ಕೊಲ್ಲುತ್ತೇವೆ’ ಎಂದು ಗೋಲ್ಡಿ ಬ್ರಾರ್​ ಹೇಳಿದ್ದಾನೆ. ಈ ಹಿನ್ನೆಲೆಯಲ್ಲಿ ಸಲ್ಮಾನ್​ ಖಾನ್​ ಅವರು ಭದ್ರತೆ ಹೆಚ್ಚಿಕೊಳ್ಳುವ ಸಾಧ್ಯತೆ ಇದೆ.

ಇದನ್ನೂ ಓದಿ: ‘ಆ ವಿಚಾರ ಮಾತಾಡೋದ್ರಲ್ಲಿ ಅರ್ಥವೇ ಇಲ್ಲ’: ಸಲ್ಮಾನ್​ ಖಾನ್​ ಬಾಡಿ ಗಾರ್ಡ್​ ವರ್ತನೆ ಬಗ್ಗೆ ವಿಕ್ಕಿ ಕೌಶಲ್​ ಪ್ರತಿಕ್ರಿಯೆ

ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಕೊಂದಿರುವುದು ತಾನೇ ಎಂದು ಗೋಲ್ಡಿ ಬ್ರಾರ್​ ಒಪ್ಪಿಕೊಂಡಿದ್ದಾನೆ. ಆ ಕೊಲೆಗೆ ವೈಯಕ್ತಿಕ ವಿಚಾರವೇ ಕಾರಣ ಎಂದು ಆತ ಹೇಳಿದ್ದಾನೆ. ಈಗ ಆತನ ಟಾರ್ಗೆಟ್​ ಸಲ್ಮಾನ್​ ಖಾನ್​. ಸದ್ಯಕ್ಕೆ ಗೋಲ್ಡಿ ಬ್ರಾರ್ ಎಲ್ಲಿದ್ದಾನೆ ಎಂಬುದು ತಿಳಿದಿಲ್ಲ. ಭಾರತದಿಂದ ಎಸ್ಕೇಪ್​ ಆಗಿದ್ದ ಆತ ಕೆನಡಾದಲ್ಲಿ ತಲೆ ಮರೆಸಿಕೊಂಡಿದ್ದ. ಅಲ್ಲಿಯೂ ಮೋಸ್ಟ್​ ವಾಂಟೆಡ್​ ಕ್ರಿಮಿನಲ್​ಗಳ ಪಟ್ಟಿಯಲ್ಲಿ ಆತನ ಹೆಸರು ಸೇರ್ಪಡೆ ಆಗಿದೆ. ಹಾಗಾಗಿ ಅಲ್ಲಿಂದಲೂ ಗೋಲ್ಡಿ ಬ್ರಾರ್ ಕಾಲ್ಕಿತ್ತಿದ್ದಾನೆ ಎನ್ನಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್