AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದದಲ್ಲಿ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರ; ಕನ್ನಡದ ಖ್ಯಾತ ಗಾಯಕಿಗೆ ಅಪಮಾನ ಆರೋಪ

ಕಾಮಾಟಿಪುರದ ಡಾನ್​ ಆಗುವುದಕ್ಕೂ ಮೊದಲು ಗಂಗೂಬಾಯಿ ವೇಶ್ಯೆ ಆಗಿರುತ್ತಾರೆ. ಇದನ್ನು ಸಂಜಯ್​ ಲೀಲಾ​ ಬನ್ಸಾಲಿ ಹೇಗೆ ಕಟ್ಟಿಕೊಟ್ಟಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳ ವಲಯದಲ್ಲಿದೆ. ಈಗ ಚಿತ್ರ ವಿವಾದದ ಹಾದಿ ಹಿಡಿಯುವ ಸಾಧ್ಯತೆ ಇದೆ.

ವಿವಾದದಲ್ಲಿ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರ; ಕನ್ನಡದ ಖ್ಯಾತ ಗಾಯಕಿಗೆ ಅಪಮಾನ ಆರೋಪ
ಆಲಿಯಾ ಭಟ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Feb 04, 2022 | 3:50 PM

ಖ್ಯಾತ ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ (Sanjay Leela Bhansali) ಆ್ಯಕ್ಷನ್​ ಕಟ್​ ಹೇಳಿದ್ದ ‘ಪದ್ಮಾವತ್​’ ಚಿತ್ರ ಸಾಕಷ್ಟು ವಿವಾದ ಸೃಷ್ಟಿಸಿತ್ತು. ಆರಂಭದಲ್ಲಿ ಈ ಸಿನಿಮಾದ ಹೆಸರು ‘ಪದ್ಮಾವತಿ’ ಎಂದಿತ್ತು. ಆದರೆ, ಈ ಟೈಟಲ್​ಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸಿನಿಮಾದ ಟೈಟಲ್​ ಅನ್ನು ‘ಪದ್ಮಾವತ್​’ ಎಂದು ಬದಲಿಸಲಾಗಿತ್ತು. ಖಿಲ್ಜಿ ಹಾಗೂ ಪದ್ಮಾವತಿ ನಡುವೆ ರೊಮ್ಯಾಂಟಿಕ್​ ದೃಶ್ಯಗಳನ್ನು ಇಡಲಾಗಿದೆ ಎಂಬ ಊಹೆಯೇ ಈ ವಿವಾದ ಹೊತ್ತಿಕೊಳ್ಳಲು ಪ್ರಮುಖ ಕಾರಣವಾಗಿತ್ತು. ಸಿನಿಮಾ ತೆರೆಕಂಡು ದೊಡ್ಡಮಟ್ಟದಲ್ಲಿ ಹಿಟ್​ ಆಗಿದ್ದು ಈಗ ಇತಿಹಾಸ. ಈ ಚಿತ್ರ ತೆರೆಕಂಡು ನಾಲ್ಕು ವರ್ಷಗಳ ಬಳಿಕ ಬನ್ಸಾಲಿ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದ (Gangubai Kathiawadi Movie) ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಈ ಸಿನಿಮಾ ತೆರೆಗೆ ಬರುವುದಕ್ಕೂ ಮೊದಲೇ ವಿವಾದ ಸೃಷ್ಟಿಸುವ ಸೂಚನೆ ಸಿಕ್ಕಿದೆ. ಅದೂ ಟೈಟಲ್​ ವಿಚಾರಕ್ಕೆ ಅನ್ನೋದು ಇಲ್ಲಿ ಗಮನಿಸಬೇಕಾದ ವಿಚಾರ.

ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾಠಿಯಾವಾಡಿ’ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಪ್ರೇಕ್ಷಕರು. ಕಾಮಾಟಿಪುರದ ಡಾನ್​ ಆಗಿ ಮೆರೆದಿದ್ದ ಗಂಗೂಬಾಯಿ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಕಾಮಾಟಿಪುರದ ಡಾನ್​ ಆಗುವುದಕ್ಕೂ ಮೊದಲು ಗಂಗೂಬಾಯಿ ವೇಶ್ಯೆ ಆಗಿರುತ್ತಾರೆ. ಇದನ್ನು ಸಂಜಯ್​ ಲೀಲಾ​ ಬನ್ಸಾಲಿ ಹೇಗೆ ಕಟ್ಟಿಕೊಟ್ಟಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳ ವಲಯದಲ್ಲಿದೆ. ಈಗ ಚಿತ್ರ ವಿವಾದದ ಹಾದಿ ಹಿಡಿಯುವ ಸಾಧ್ಯತೆ ಇದೆ.

ಕರ್ನಾಟಕದ ಹಿರಿಯ ಗಾಯಕಿ ಗಂಗೂಬಾಯಿ ಹಾನ​ಗಲ್​ ಕನ್ನಡದ ಕೀರ್ತಿ. ಸಂಗೀತ ಕ್ಷೇತ್ರದಲ್ಲಿ ಅವರದ್ದು ದೊಡ್ಡ ಹೆಸರು. ಈಗ ಚಿತ್ರದ ಟೈಟಲ್​ ಬಗ್ಗೆ ವಿವಾದ ಆಗುವುದಕ್ಕೂ ಕಾರಣವಾಗಿದ್ದು, ಗಂಗೂಬಾಯಿ ಹೆಸರು. ‘ಸಿನಿಮಾ ಟೈಟಲ್‌ನಿಂದ ಗಂಗೂಬಾಯಿ ಹಾನಗಲ್ ಅವರಿಗೆ ಅಪಮಾನ ಆಗಿದೆ. ಗಂಗೂಬಾಯಿ‌ ಹಾನ್​​ಗಲ್ ಕನ್ನಡದ ಕೀರ್ತಿ. ಸಿನಿಮಾ‌ ಹೆಸರು ಬದಲಿಸಬೇಕು’ ಎಂದು ಕನ್ನಡ ಜಾಗೃತಿ ವೇದಿಕೆ ಆಗ್ರಹಿಸಿದೆ. ಒಂದೊಮ್ಮೆ ಈ ಪ್ರತಿಭಟನೆ ಜೋರಾದರೆ ಕರ್ನಾಟಕದಲ್ಲಿ ಸಿನಿಮಾ ರಿಲೀಸ್​ಗೆ ಅಡ್ಡಿ ಉಂಟಾಗಬಹುದು.

‘ಗಂಗೂಬಾಯಿ ಕಾಠಿಯಾವಾಡಿ’ ಟ್ರೇಲರ್​ ರಿಲೀಸ್​: 

‘ಗಂಗೂಬಾಯಿ ಕಾಠಿಯಾವಾಡಿ’  ಸಿನಿಮಾದಲ್ಲಿ ಏನೆಲ್ಲ ಇದೆ ಎಂಬುದರ ಝಲಕ್ ಇಂದು (ಫೆಬ್ರವರಿ 4) ರಿಲೀಸ್​ ಆದ​ ಟ್ರೇಲರ್​ನಲ್ಲಿದೆ. ಇಡೀ ಟ್ರೇಲರ್​ನಲ್ಲಿ ಆಲಿಯಾ ಭಟ್​ ಅವರ ನಟನೆ, ಬನ್ಸಾಲಿ ಸಿನಿಮಾ ಮೇಕಿಂಗ್​ ಗಮನ ಸೆಳೆಯುತ್ತಿದೆ. ಅಜಯ್​ ದೇವಗನ್​ ಪಾತ್ರ ಕೂಡ ಟ್ರೇಲರ್​ನಲ್ಲಿ ಬಂದು ಹೋಗುತ್ತದೆ. ಅವರ ಪಾತ್ರ ಏನು ಎಂಬ ರಹಸ್ಯವನ್ನು ನಿರ್ದೇಶಕರು ಬಿಟ್ಟುಕೊಟ್ಟಿಲ್ಲ. ಇಡೀ ಚಿತ್ರ ರೆಟ್ರೋ ಶೈಲಿಯಲ್ಲಿ ಮೂಡಿ ಬಂದಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷ್ಯ ಸಿಕ್ಕಿದೆ. ಟ್ರೇಲರ್​ ರಿಲೀಸ್​ ಆದ ಗಂಟೆಗಳಲ್ಲಿ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.

ಇದನ್ನೂ ಓದಿ: Alia Bhatt: ವಿಭಿನ್ನ ಗೆಟಪ್​ಗಳಲ್ಲಿ ಆಲಿಯಾ ಭಟ್​; ಇಲ್ಲಿವೆ ಫೋಟೋಗಳು

‘ಗಂಗೂಬಾಯಿ ಕಾಠಿಯಾವಾಡಿ’ ರಿಲೀಸ್​ ದಿನಾಂಕ ಘೋಷಣೆ; ಕೊವಿಡ್​ ಮಧ್ಯೆ ಗೆಲ್ಲಲಿದೆಯೇ ಆಲಿಯಾ ಚಿತ್ರ?

ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್