AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gangubai Kathiawadi: ರಾಜಮೌಳಿಗೆ ಸೆಡ್ಡು ಹೊಡೆಯುವ ಪ್ಲ್ಯಾನ್​ ಕೈಬಿಟ್ಟ ಬನ್ಸಾಲಿ; ರೇಸ್​ನಿಂದ ಹಿಂದೆ ಸರಿದ ‘ಗಂಗೂಬಾಯಿ ಕಾಠಿಯಾವಾಡಿ’

ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾಠಿಯಾವಾಡಿ’ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಪ್ರೇಕ್ಷಕರು. ಕಮಾಟಿಪುರದ ಡಾನ್​ ಆಗಿ ಮೆರೆದಿದ್ದ ಗಂಗೂಬಾಯಿ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ.

Gangubai Kathiawadi: ರಾಜಮೌಳಿಗೆ ಸೆಡ್ಡು ಹೊಡೆಯುವ ಪ್ಲ್ಯಾನ್​ ಕೈಬಿಟ್ಟ ಬನ್ಸಾಲಿ; ರೇಸ್​ನಿಂದ ಹಿಂದೆ ಸರಿದ ‘ಗಂಗೂಬಾಯಿ ಕಾಠಿಯಾವಾಡಿ’
ಆಲಿಯಾ ಭಟ್
TV9 Web
| Edited By: |

Updated on: Nov 15, 2021 | 2:34 PM

Share

ಕೊವಿಡ್​ ಎರಡನೇ ಅಲೆ (Covid Second Wave) ತಣ್ಣಗಾಗುತ್ತಿದ್ದಂತೆ ಸ್ಟಾರ್​ ಸಿನಿಮಾಗಳು ರಿಲೀಸ್​ ಡೇಟ್​ ಅನೌನ್ಸ್​ ಮಾಡುತ್ತಿವೆ. ಸ್ಟಾರ್​ ಸಿನಿಮಾಗಳು ಒಟ್ಟೊಟ್ಟಿಗೆ ಬಿಡುಗಡೆ​ ಆಗುತ್ತಿರುವುದರಿಂದ ಬಾಕ್ಸ್​ ಆಫೀಸ್​ನಲ್ಲಿ ಕ್ಲ್ಯಾಶ್​ ಏರ್ಪಡುತ್ತಿದೆ. ಸಾಲುಸಾಲು ಸಿನಿಮಾಗಳು ರಿಲೀಸ್​ ಆಗುತ್ತಿರುವುದರಿಂದ ವೀಕ್ಷಕರಿಗೆ ಯಾವ ಸಿನಿಮಾ ವೀಕ್ಷಿಸಬೇಕು ಎನ್ನುವ ಗೊಂದಲ ಏರ್ಪಡುತ್ತಿದೆ. ಈ ಮಧ್ಯೆ ಕೆಲ ಸಿನಿಮಾಗಳು ರಿಲೀಸ್​ ದಿನಾಂಕವನ್ನು ಮುಂದೂಡುತ್ತಿವೆ. ಸಿನಿಮಾ ಕೆಲಸಗಳು ಪೂರ್ಣಗೊಳ್ಳದೇ ಇರೋದು ಒಂದು ಕಾರಣವಾದರೆ, ಒಟ್ಟೊಟ್ಟಿಗೆ ಹಲವು ಸಿನಿಮಾಗಳು ರಿಲೀಸ್​ ಆಗುತ್ತಿರುವುದರಿಂದ ಚಿತ್ರಮಂದಿರದ ಅಭಾವದಿಂದಲೂ ಕೆಲವರು ರೇಸ್​​ನಿಂದ ಹಿಂದೆ ಸರಿದಿದ್ದಾರೆ. ಈಗ ಆಲಿಯಾ ಭಟ್​ (Alia Bhat) ನಟನೆಯ ‘ಗಂಗೂಬಾಯಿ ಕಾಠಿಯಾವಾಡಿ’ (Gangubai Kathiawadi) ಸಿನಿಮಾ ತಂಡ ಕೂಡ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಿದೆ.

ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾಠಿಯಾವಾಡಿ’ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಪ್ರೇಕ್ಷಕರು. ಕಮಾಟಿಪುರದ ಡಾನ್​ ಆಗಿ ಮೆರೆದಿದ್ದ ಗಂಗೂಬಾಯಿ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಈ ಮೊದಲು ಬಿಡುಗಡೆ ಆದ ಚಿತ್ರದ ಟೀಸರ್​ ಸಾಕಷ್ಟು ಚರ್ಚೆ ಹುಟ್ಟು ಹಾಕಿತ್ತು. ಬನ್ಸಾಲಿ ಸಿನಿಮಾ ಕೆಲಸದ ಬಗ್ಗೆ ಗೊತ್ತಿದ್ದವರು ಖಂಡಿತವಾಗಿಯೂ ಸಿನಿಮಾ ನೋಡೋಕೆ ತೆರಳುತ್ತಾರೆ. ಸಿನಿಮಾ ಜನವರಿ 6ರಂದು ತೆರೆಗೆ ಬರಬೇಕಿತ್ತು. ಆದರೆ, ಈಗ ರಿಲೀಸ್​ ದಿನಾಂಕ ಫೆಬ್ರವರಿ 18, 2022ಕ್ಕೆ ಮುಂದೂಡಲ್ಪಟ್ಟಿದೆ.

‘ಗಂಗೂಬಾಯಿ ಕಾಠಿಯಾವಾಡಿ’ ಕೆಲಸಗಳು ಪೂರ್ಣಗೊಂಡು ಹಲವು ತಿಂಗಳೇ ಆಗಿದೆ. ಕೊವಿಡ್​ ಕಾರಣದಿಂದ ರಿಲೀಸ್​ ದಿನಾಂಕ ಈಗಾಗಲೇ ಸಾಕಷ್ಟು ಬಾರಿ ಮುಂದೂಡಲ್ಪಟ್ಟಿದೆ. ಚಿತ್ರತಂಡ ಮತ್ತೆ ಬಿಡುಗಡೆ​ ದಿನಾಂಕ ಮುಂದೂಡ್ಡಿದ್ದೇಕೆ ಎಂಬುದಕ್ಕೆ ಕಾರಣ ನೀಡಿಲ್ಲ. ಎಸ್​.ಎಸ್​. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾದಲ್ಲಿ ಆಲಿಯಾ ಭಟ್​ ನಟಿಸುತ್ತಿದ್ದಾರೆ. ಈ ಸಿನಿಮಾ ಜನವರಿ 7ರಂದು ತೆರೆಗೆ ಬರುತ್ತಿದೆ. ಈ ಕಾರಣಕ್ಕೂ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ತಂಡ ರಿಲೀಸ್​ ದಿನಾಂಕ ಮುಂದೂಡಿರಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ: Nykaa IPO: ಅಬ್ಬಬ್ಬಾ.. ನೈಕಾ ಕಂಪನಿಯಲ್ಲಿ ಹೂಡಿಕೆ ಮಾಡಿ ಕತ್ರಿನಾ ಕೈಫ್​ ಮತ್ತು ಆಲಿಯಾ ಭಟ್​ ಗಳಿಸಿದ್ದು ಇಷ್ಟೊಂದಾ?

ಗಂಗೂಬಾಯಿ ಕಾಠಿಯಾವಾಡಿ ಸಿನಿಮಾಗೆ ಸಂಕಷ್ಟ; ಆಲಿಯಾ, ಬನ್ಸಾಲಿಗೆ ಸಮನ್ಸ್​ ​

Follow Us
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ