AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gangubai Kathiawadi: ರಾಜಮೌಳಿಗೆ ಸೆಡ್ಡು ಹೊಡೆಯುವ ಪ್ಲ್ಯಾನ್​ ಕೈಬಿಟ್ಟ ಬನ್ಸಾಲಿ; ರೇಸ್​ನಿಂದ ಹಿಂದೆ ಸರಿದ ‘ಗಂಗೂಬಾಯಿ ಕಾಠಿಯಾವಾಡಿ’

ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾಠಿಯಾವಾಡಿ’ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಪ್ರೇಕ್ಷಕರು. ಕಮಾಟಿಪುರದ ಡಾನ್​ ಆಗಿ ಮೆರೆದಿದ್ದ ಗಂಗೂಬಾಯಿ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ.

Gangubai Kathiawadi: ರಾಜಮೌಳಿಗೆ ಸೆಡ್ಡು ಹೊಡೆಯುವ ಪ್ಲ್ಯಾನ್​ ಕೈಬಿಟ್ಟ ಬನ್ಸಾಲಿ; ರೇಸ್​ನಿಂದ ಹಿಂದೆ ಸರಿದ ‘ಗಂಗೂಬಾಯಿ ಕಾಠಿಯಾವಾಡಿ’
ಆಲಿಯಾ ಭಟ್
TV9 Web
| Edited By: |

Updated on: Nov 15, 2021 | 2:34 PM

Share

ಕೊವಿಡ್​ ಎರಡನೇ ಅಲೆ (Covid Second Wave) ತಣ್ಣಗಾಗುತ್ತಿದ್ದಂತೆ ಸ್ಟಾರ್​ ಸಿನಿಮಾಗಳು ರಿಲೀಸ್​ ಡೇಟ್​ ಅನೌನ್ಸ್​ ಮಾಡುತ್ತಿವೆ. ಸ್ಟಾರ್​ ಸಿನಿಮಾಗಳು ಒಟ್ಟೊಟ್ಟಿಗೆ ಬಿಡುಗಡೆ​ ಆಗುತ್ತಿರುವುದರಿಂದ ಬಾಕ್ಸ್​ ಆಫೀಸ್​ನಲ್ಲಿ ಕ್ಲ್ಯಾಶ್​ ಏರ್ಪಡುತ್ತಿದೆ. ಸಾಲುಸಾಲು ಸಿನಿಮಾಗಳು ರಿಲೀಸ್​ ಆಗುತ್ತಿರುವುದರಿಂದ ವೀಕ್ಷಕರಿಗೆ ಯಾವ ಸಿನಿಮಾ ವೀಕ್ಷಿಸಬೇಕು ಎನ್ನುವ ಗೊಂದಲ ಏರ್ಪಡುತ್ತಿದೆ. ಈ ಮಧ್ಯೆ ಕೆಲ ಸಿನಿಮಾಗಳು ರಿಲೀಸ್​ ದಿನಾಂಕವನ್ನು ಮುಂದೂಡುತ್ತಿವೆ. ಸಿನಿಮಾ ಕೆಲಸಗಳು ಪೂರ್ಣಗೊಳ್ಳದೇ ಇರೋದು ಒಂದು ಕಾರಣವಾದರೆ, ಒಟ್ಟೊಟ್ಟಿಗೆ ಹಲವು ಸಿನಿಮಾಗಳು ರಿಲೀಸ್​ ಆಗುತ್ತಿರುವುದರಿಂದ ಚಿತ್ರಮಂದಿರದ ಅಭಾವದಿಂದಲೂ ಕೆಲವರು ರೇಸ್​​ನಿಂದ ಹಿಂದೆ ಸರಿದಿದ್ದಾರೆ. ಈಗ ಆಲಿಯಾ ಭಟ್​ (Alia Bhat) ನಟನೆಯ ‘ಗಂಗೂಬಾಯಿ ಕಾಠಿಯಾವಾಡಿ’ (Gangubai Kathiawadi) ಸಿನಿಮಾ ತಂಡ ಕೂಡ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಿದೆ.

ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾಠಿಯಾವಾಡಿ’ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಪ್ರೇಕ್ಷಕರು. ಕಮಾಟಿಪುರದ ಡಾನ್​ ಆಗಿ ಮೆರೆದಿದ್ದ ಗಂಗೂಬಾಯಿ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಈ ಮೊದಲು ಬಿಡುಗಡೆ ಆದ ಚಿತ್ರದ ಟೀಸರ್​ ಸಾಕಷ್ಟು ಚರ್ಚೆ ಹುಟ್ಟು ಹಾಕಿತ್ತು. ಬನ್ಸಾಲಿ ಸಿನಿಮಾ ಕೆಲಸದ ಬಗ್ಗೆ ಗೊತ್ತಿದ್ದವರು ಖಂಡಿತವಾಗಿಯೂ ಸಿನಿಮಾ ನೋಡೋಕೆ ತೆರಳುತ್ತಾರೆ. ಸಿನಿಮಾ ಜನವರಿ 6ರಂದು ತೆರೆಗೆ ಬರಬೇಕಿತ್ತು. ಆದರೆ, ಈಗ ರಿಲೀಸ್​ ದಿನಾಂಕ ಫೆಬ್ರವರಿ 18, 2022ಕ್ಕೆ ಮುಂದೂಡಲ್ಪಟ್ಟಿದೆ.

‘ಗಂಗೂಬಾಯಿ ಕಾಠಿಯಾವಾಡಿ’ ಕೆಲಸಗಳು ಪೂರ್ಣಗೊಂಡು ಹಲವು ತಿಂಗಳೇ ಆಗಿದೆ. ಕೊವಿಡ್​ ಕಾರಣದಿಂದ ರಿಲೀಸ್​ ದಿನಾಂಕ ಈಗಾಗಲೇ ಸಾಕಷ್ಟು ಬಾರಿ ಮುಂದೂಡಲ್ಪಟ್ಟಿದೆ. ಚಿತ್ರತಂಡ ಮತ್ತೆ ಬಿಡುಗಡೆ​ ದಿನಾಂಕ ಮುಂದೂಡ್ಡಿದ್ದೇಕೆ ಎಂಬುದಕ್ಕೆ ಕಾರಣ ನೀಡಿಲ್ಲ. ಎಸ್​.ಎಸ್​. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾದಲ್ಲಿ ಆಲಿಯಾ ಭಟ್​ ನಟಿಸುತ್ತಿದ್ದಾರೆ. ಈ ಸಿನಿಮಾ ಜನವರಿ 7ರಂದು ತೆರೆಗೆ ಬರುತ್ತಿದೆ. ಈ ಕಾರಣಕ್ಕೂ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ತಂಡ ರಿಲೀಸ್​ ದಿನಾಂಕ ಮುಂದೂಡಿರಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ: Nykaa IPO: ಅಬ್ಬಬ್ಬಾ.. ನೈಕಾ ಕಂಪನಿಯಲ್ಲಿ ಹೂಡಿಕೆ ಮಾಡಿ ಕತ್ರಿನಾ ಕೈಫ್​ ಮತ್ತು ಆಲಿಯಾ ಭಟ್​ ಗಳಿಸಿದ್ದು ಇಷ್ಟೊಂದಾ?

ಗಂಗೂಬಾಯಿ ಕಾಠಿಯಾವಾಡಿ ಸಿನಿಮಾಗೆ ಸಂಕಷ್ಟ; ಆಲಿಯಾ, ಬನ್ಸಾಲಿಗೆ ಸಮನ್ಸ್​ ​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ