AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gangubai Kathiawadi: ರಾಜಮೌಳಿಗೆ ಸೆಡ್ಡು ಹೊಡೆಯುವ ಪ್ಲ್ಯಾನ್​ ಕೈಬಿಟ್ಟ ಬನ್ಸಾಲಿ; ರೇಸ್​ನಿಂದ ಹಿಂದೆ ಸರಿದ ‘ಗಂಗೂಬಾಯಿ ಕಾಠಿಯಾವಾಡಿ’

ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾಠಿಯಾವಾಡಿ’ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಪ್ರೇಕ್ಷಕರು. ಕಮಾಟಿಪುರದ ಡಾನ್​ ಆಗಿ ಮೆರೆದಿದ್ದ ಗಂಗೂಬಾಯಿ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ.

Gangubai Kathiawadi: ರಾಜಮೌಳಿಗೆ ಸೆಡ್ಡು ಹೊಡೆಯುವ ಪ್ಲ್ಯಾನ್​ ಕೈಬಿಟ್ಟ ಬನ್ಸಾಲಿ; ರೇಸ್​ನಿಂದ ಹಿಂದೆ ಸರಿದ ‘ಗಂಗೂಬಾಯಿ ಕಾಠಿಯಾವಾಡಿ’
ಆಲಿಯಾ ಭಟ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Nov 15, 2021 | 2:34 PM

Share

ಕೊವಿಡ್​ ಎರಡನೇ ಅಲೆ (Covid Second Wave) ತಣ್ಣಗಾಗುತ್ತಿದ್ದಂತೆ ಸ್ಟಾರ್​ ಸಿನಿಮಾಗಳು ರಿಲೀಸ್​ ಡೇಟ್​ ಅನೌನ್ಸ್​ ಮಾಡುತ್ತಿವೆ. ಸ್ಟಾರ್​ ಸಿನಿಮಾಗಳು ಒಟ್ಟೊಟ್ಟಿಗೆ ಬಿಡುಗಡೆ​ ಆಗುತ್ತಿರುವುದರಿಂದ ಬಾಕ್ಸ್​ ಆಫೀಸ್​ನಲ್ಲಿ ಕ್ಲ್ಯಾಶ್​ ಏರ್ಪಡುತ್ತಿದೆ. ಸಾಲುಸಾಲು ಸಿನಿಮಾಗಳು ರಿಲೀಸ್​ ಆಗುತ್ತಿರುವುದರಿಂದ ವೀಕ್ಷಕರಿಗೆ ಯಾವ ಸಿನಿಮಾ ವೀಕ್ಷಿಸಬೇಕು ಎನ್ನುವ ಗೊಂದಲ ಏರ್ಪಡುತ್ತಿದೆ. ಈ ಮಧ್ಯೆ ಕೆಲ ಸಿನಿಮಾಗಳು ರಿಲೀಸ್​ ದಿನಾಂಕವನ್ನು ಮುಂದೂಡುತ್ತಿವೆ. ಸಿನಿಮಾ ಕೆಲಸಗಳು ಪೂರ್ಣಗೊಳ್ಳದೇ ಇರೋದು ಒಂದು ಕಾರಣವಾದರೆ, ಒಟ್ಟೊಟ್ಟಿಗೆ ಹಲವು ಸಿನಿಮಾಗಳು ರಿಲೀಸ್​ ಆಗುತ್ತಿರುವುದರಿಂದ ಚಿತ್ರಮಂದಿರದ ಅಭಾವದಿಂದಲೂ ಕೆಲವರು ರೇಸ್​​ನಿಂದ ಹಿಂದೆ ಸರಿದಿದ್ದಾರೆ. ಈಗ ಆಲಿಯಾ ಭಟ್​ (Alia Bhat) ನಟನೆಯ ‘ಗಂಗೂಬಾಯಿ ಕಾಠಿಯಾವಾಡಿ’ (Gangubai Kathiawadi) ಸಿನಿಮಾ ತಂಡ ಕೂಡ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಿದೆ.

ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾಠಿಯಾವಾಡಿ’ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಪ್ರೇಕ್ಷಕರು. ಕಮಾಟಿಪುರದ ಡಾನ್​ ಆಗಿ ಮೆರೆದಿದ್ದ ಗಂಗೂಬಾಯಿ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಈ ಮೊದಲು ಬಿಡುಗಡೆ ಆದ ಚಿತ್ರದ ಟೀಸರ್​ ಸಾಕಷ್ಟು ಚರ್ಚೆ ಹುಟ್ಟು ಹಾಕಿತ್ತು. ಬನ್ಸಾಲಿ ಸಿನಿಮಾ ಕೆಲಸದ ಬಗ್ಗೆ ಗೊತ್ತಿದ್ದವರು ಖಂಡಿತವಾಗಿಯೂ ಸಿನಿಮಾ ನೋಡೋಕೆ ತೆರಳುತ್ತಾರೆ. ಸಿನಿಮಾ ಜನವರಿ 6ರಂದು ತೆರೆಗೆ ಬರಬೇಕಿತ್ತು. ಆದರೆ, ಈಗ ರಿಲೀಸ್​ ದಿನಾಂಕ ಫೆಬ್ರವರಿ 18, 2022ಕ್ಕೆ ಮುಂದೂಡಲ್ಪಟ್ಟಿದೆ.

‘ಗಂಗೂಬಾಯಿ ಕಾಠಿಯಾವಾಡಿ’ ಕೆಲಸಗಳು ಪೂರ್ಣಗೊಂಡು ಹಲವು ತಿಂಗಳೇ ಆಗಿದೆ. ಕೊವಿಡ್​ ಕಾರಣದಿಂದ ರಿಲೀಸ್​ ದಿನಾಂಕ ಈಗಾಗಲೇ ಸಾಕಷ್ಟು ಬಾರಿ ಮುಂದೂಡಲ್ಪಟ್ಟಿದೆ. ಚಿತ್ರತಂಡ ಮತ್ತೆ ಬಿಡುಗಡೆ​ ದಿನಾಂಕ ಮುಂದೂಡ್ಡಿದ್ದೇಕೆ ಎಂಬುದಕ್ಕೆ ಕಾರಣ ನೀಡಿಲ್ಲ. ಎಸ್​.ಎಸ್​. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾದಲ್ಲಿ ಆಲಿಯಾ ಭಟ್​ ನಟಿಸುತ್ತಿದ್ದಾರೆ. ಈ ಸಿನಿಮಾ ಜನವರಿ 7ರಂದು ತೆರೆಗೆ ಬರುತ್ತಿದೆ. ಈ ಕಾರಣಕ್ಕೂ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ತಂಡ ರಿಲೀಸ್​ ದಿನಾಂಕ ಮುಂದೂಡಿರಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ: Nykaa IPO: ಅಬ್ಬಬ್ಬಾ.. ನೈಕಾ ಕಂಪನಿಯಲ್ಲಿ ಹೂಡಿಕೆ ಮಾಡಿ ಕತ್ರಿನಾ ಕೈಫ್​ ಮತ್ತು ಆಲಿಯಾ ಭಟ್​ ಗಳಿಸಿದ್ದು ಇಷ್ಟೊಂದಾ?

ಗಂಗೂಬಾಯಿ ಕಾಠಿಯಾವಾಡಿ ಸಿನಿಮಾಗೆ ಸಂಕಷ್ಟ; ಆಲಿಯಾ, ಬನ್ಸಾಲಿಗೆ ಸಮನ್ಸ್​ ​

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ