AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gangubai Kathiawadi: ರಾಜಮೌಳಿಗೆ ಸೆಡ್ಡು ಹೊಡೆಯುವ ಪ್ಲ್ಯಾನ್​ ಕೈಬಿಟ್ಟ ಬನ್ಸಾಲಿ; ರೇಸ್​ನಿಂದ ಹಿಂದೆ ಸರಿದ ‘ಗಂಗೂಬಾಯಿ ಕಾಠಿಯಾವಾಡಿ’

ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾಠಿಯಾವಾಡಿ’ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಪ್ರೇಕ್ಷಕರು. ಕಮಾಟಿಪುರದ ಡಾನ್​ ಆಗಿ ಮೆರೆದಿದ್ದ ಗಂಗೂಬಾಯಿ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ.

Gangubai Kathiawadi: ರಾಜಮೌಳಿಗೆ ಸೆಡ್ಡು ಹೊಡೆಯುವ ಪ್ಲ್ಯಾನ್​ ಕೈಬಿಟ್ಟ ಬನ್ಸಾಲಿ; ರೇಸ್​ನಿಂದ ಹಿಂದೆ ಸರಿದ ‘ಗಂಗೂಬಾಯಿ ಕಾಠಿಯಾವಾಡಿ’
ಆಲಿಯಾ ಭಟ್
TV9 Web
| Edited By: |

Updated on: Nov 15, 2021 | 2:34 PM

Share

ಕೊವಿಡ್​ ಎರಡನೇ ಅಲೆ (Covid Second Wave) ತಣ್ಣಗಾಗುತ್ತಿದ್ದಂತೆ ಸ್ಟಾರ್​ ಸಿನಿಮಾಗಳು ರಿಲೀಸ್​ ಡೇಟ್​ ಅನೌನ್ಸ್​ ಮಾಡುತ್ತಿವೆ. ಸ್ಟಾರ್​ ಸಿನಿಮಾಗಳು ಒಟ್ಟೊಟ್ಟಿಗೆ ಬಿಡುಗಡೆ​ ಆಗುತ್ತಿರುವುದರಿಂದ ಬಾಕ್ಸ್​ ಆಫೀಸ್​ನಲ್ಲಿ ಕ್ಲ್ಯಾಶ್​ ಏರ್ಪಡುತ್ತಿದೆ. ಸಾಲುಸಾಲು ಸಿನಿಮಾಗಳು ರಿಲೀಸ್​ ಆಗುತ್ತಿರುವುದರಿಂದ ವೀಕ್ಷಕರಿಗೆ ಯಾವ ಸಿನಿಮಾ ವೀಕ್ಷಿಸಬೇಕು ಎನ್ನುವ ಗೊಂದಲ ಏರ್ಪಡುತ್ತಿದೆ. ಈ ಮಧ್ಯೆ ಕೆಲ ಸಿನಿಮಾಗಳು ರಿಲೀಸ್​ ದಿನಾಂಕವನ್ನು ಮುಂದೂಡುತ್ತಿವೆ. ಸಿನಿಮಾ ಕೆಲಸಗಳು ಪೂರ್ಣಗೊಳ್ಳದೇ ಇರೋದು ಒಂದು ಕಾರಣವಾದರೆ, ಒಟ್ಟೊಟ್ಟಿಗೆ ಹಲವು ಸಿನಿಮಾಗಳು ರಿಲೀಸ್​ ಆಗುತ್ತಿರುವುದರಿಂದ ಚಿತ್ರಮಂದಿರದ ಅಭಾವದಿಂದಲೂ ಕೆಲವರು ರೇಸ್​​ನಿಂದ ಹಿಂದೆ ಸರಿದಿದ್ದಾರೆ. ಈಗ ಆಲಿಯಾ ಭಟ್​ (Alia Bhat) ನಟನೆಯ ‘ಗಂಗೂಬಾಯಿ ಕಾಠಿಯಾವಾಡಿ’ (Gangubai Kathiawadi) ಸಿನಿಮಾ ತಂಡ ಕೂಡ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಿದೆ.

ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾಠಿಯಾವಾಡಿ’ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಪ್ರೇಕ್ಷಕರು. ಕಮಾಟಿಪುರದ ಡಾನ್​ ಆಗಿ ಮೆರೆದಿದ್ದ ಗಂಗೂಬಾಯಿ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಈ ಮೊದಲು ಬಿಡುಗಡೆ ಆದ ಚಿತ್ರದ ಟೀಸರ್​ ಸಾಕಷ್ಟು ಚರ್ಚೆ ಹುಟ್ಟು ಹಾಕಿತ್ತು. ಬನ್ಸಾಲಿ ಸಿನಿಮಾ ಕೆಲಸದ ಬಗ್ಗೆ ಗೊತ್ತಿದ್ದವರು ಖಂಡಿತವಾಗಿಯೂ ಸಿನಿಮಾ ನೋಡೋಕೆ ತೆರಳುತ್ತಾರೆ. ಸಿನಿಮಾ ಜನವರಿ 6ರಂದು ತೆರೆಗೆ ಬರಬೇಕಿತ್ತು. ಆದರೆ, ಈಗ ರಿಲೀಸ್​ ದಿನಾಂಕ ಫೆಬ್ರವರಿ 18, 2022ಕ್ಕೆ ಮುಂದೂಡಲ್ಪಟ್ಟಿದೆ.

‘ಗಂಗೂಬಾಯಿ ಕಾಠಿಯಾವಾಡಿ’ ಕೆಲಸಗಳು ಪೂರ್ಣಗೊಂಡು ಹಲವು ತಿಂಗಳೇ ಆಗಿದೆ. ಕೊವಿಡ್​ ಕಾರಣದಿಂದ ರಿಲೀಸ್​ ದಿನಾಂಕ ಈಗಾಗಲೇ ಸಾಕಷ್ಟು ಬಾರಿ ಮುಂದೂಡಲ್ಪಟ್ಟಿದೆ. ಚಿತ್ರತಂಡ ಮತ್ತೆ ಬಿಡುಗಡೆ​ ದಿನಾಂಕ ಮುಂದೂಡ್ಡಿದ್ದೇಕೆ ಎಂಬುದಕ್ಕೆ ಕಾರಣ ನೀಡಿಲ್ಲ. ಎಸ್​.ಎಸ್​. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾದಲ್ಲಿ ಆಲಿಯಾ ಭಟ್​ ನಟಿಸುತ್ತಿದ್ದಾರೆ. ಈ ಸಿನಿಮಾ ಜನವರಿ 7ರಂದು ತೆರೆಗೆ ಬರುತ್ತಿದೆ. ಈ ಕಾರಣಕ್ಕೂ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ತಂಡ ರಿಲೀಸ್​ ದಿನಾಂಕ ಮುಂದೂಡಿರಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ: Nykaa IPO: ಅಬ್ಬಬ್ಬಾ.. ನೈಕಾ ಕಂಪನಿಯಲ್ಲಿ ಹೂಡಿಕೆ ಮಾಡಿ ಕತ್ರಿನಾ ಕೈಫ್​ ಮತ್ತು ಆಲಿಯಾ ಭಟ್​ ಗಳಿಸಿದ್ದು ಇಷ್ಟೊಂದಾ?

ಗಂಗೂಬಾಯಿ ಕಾಠಿಯಾವಾಡಿ ಸಿನಿಮಾಗೆ ಸಂಕಷ್ಟ; ಆಲಿಯಾ, ಬನ್ಸಾಲಿಗೆ ಸಮನ್ಸ್​ ​

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?